Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ತನ್ನ ರಿಕ್ಷಾ ಕಸಿದುಕೊಂಡಿದ್ದಕ್ಕೆ ಚಾಲಕನೊಬ್ಬ ಅಳುತ್ತಿರುವ ವೀಡಿಯೋ ಭಾರತದ್ದೇ?

ಫ್ಯಾಕ್ಟ್‌ಚೆಕ್: ತನ್ನ ರಿಕ್ಷಾ ಕಸಿದುಕೊಂಡಿದ್ದಕ್ಕೆ ಚಾಲಕನೊಬ್ಬ ಅಳುತ್ತಿರುವ ವೀಡಿಯೋ ಭಾರತದ್ದೇ?

ಸಾಮಾಜಿಕ ಮಾಧ್ಯಮ ಬಳಕೆದಾರರು, “ನಮ್ಮ ದೇಶದಲ್ಲಿ ಕಾನೂನು ಬಡ ಜನರಿಗೆ ಮಾತ್ರ, ಈ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ” ಎಂದು ಬರೆದುಕೊಂಡಿದ್ದಾರೆ.

- Advertisement -
- Advertisement -

ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ವ್ಯಾಪಕವಾಗಿ ಹರಿದಾಡುತ್ತಿದ್ದು, ಸರ್ಕಾರಿ ಅಧಿಕಾರಿಗಳು ವ್ಯಕ್ತಿಯೊಬ್ಬನ ರಿಕ್ಷಾವನ್ನು ವಶಪಡಿಸಿಕೊಂಡಿದ್ದರಿಂದ ರಿಕ್ಷಾ ಎಳೆಯುವವನು ಅಳುತ್ತಿರುವ ವೀಡಿಯೊವನ್ನು ಹಂಚಿಕೊಂಡಿರುವ ಸಾಮಾಜಿಕ ಮಾಧ್ಯಮ ಬಳಕೆದಾರರು, “ನಮ್ಮ ದೇಶದಲ್ಲಿ ಕಾನೂನು ಬಡ ಜನರಿಗೆ ಮಾತ್ರ, ಈ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ” ಎಂದು ಬರೆದುಕೊಂಡಿದ್ದಾರೆ.

ತನ್ನ ರಿಕ್ಷಾವನ್ನು ಸರ್ಕಾರಿ ಅಧಿಕಾರಿಗಳು ವಶಪಡಿಸಿಕೊಳ್ಳುತ್ತಿರುವಾಗ ಭಾರತದ ರಿಕ್ಷಾ ಚಾಲಕನೊಬ್ಬ ಅಳುತ್ತಿರುವ ವಿಡಿಯೋ.

ರಿಕ್ಷಾ ಚಾಲಕ ಅಳುತ್ತಿರುವ ವೀಡಿಯೋ

ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿಯನ್ನು ಇಲ್ಲಿ ನೋಡಬಹುದು. ಈ ವೀಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಬಳಕೆದಾರರು ಈ ಮೇಲಿನ ಹೇಳಿಕೆಯನ್ನೇ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೇಹಕ್ಕೆ ಕಬ್ಬಿಣದ ಮುಳ್ಳುತಂತಿ ಸುತ್ತಿಕೊಂಡು ಅತ್ಯಾಚಾರದ ವಿರುದ್ಧ ಪ್ರತಿಭಟನೆ?- ವಾಸ್ತವವೇನು?

ಫ್ಯಾಕ್ಟ್‌ಚೆಕ್:

ಈ ವೀಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ವೀಡಿಯೊದಲ್ಲಿ ಕಂಡುಬರುವ ಕೆಲವು ಪಠ್ಯವು ಬಂಗಾಳಿ ಭಾಷೆಯಲ್ಲಿದೆ ಎಂದು ತಿಳಿದುಬಂದಿದೆ. ಅಲ್ಲದೆ, ವೀಡಿಯೊದ 0.25 ನಿಮಿಷದ  ಅವಧಿಯಲ್ಲಿ ವ್ಯಕ್ತಿಯು ಅಳುತ್ತಿರುವಾಗ ‘ಜಮುನಾ ಟಿವಿ’ಯ ಲೋಗೋ ಇರುವ ಮೈಕ್‌ನಲ್ಲಿ ಮಾತನಾಡುತ್ತಿರುವುದು ಕಂಡುಬಂದಿದೆ. ‘ಜಮುನಾ ಟಿವಿ’ ಬಾಂಗ್ಲಾದೇಶ ಮೂಲದ ಸುದ್ದಿ ವಾಹಿನಿಯಾಗಿದೆ.

ಈ ಕೀವರ್ಡ್‌ಗಳನ್ನು ಬಳಸಿಕೊಂಡು ವೀಡಿಯೊ ಕುರಿತ ಮಾಹಿತಿಗಾಗಿ ಹುಡುಕಿದಾಗ, 06 ಅಕ್ಟೋಬರ್ 2020 ರಂದು ಜಮುನಾ ಟಿವಿ ಅಧಿಕೃತ ಯೂಟ್ಯೂಬ್ ಚಾನೆಲ್ ಪೋಸ್ಟ್ ಮಾಡಿದ ವೀಡಿಯೊದಲ್ಲಿಯೂ ಇದೇ ದೃಶ್ಯಗಳು ಕಂಡುಬಂದಿದೆ. ವೀಡಿಯೊದಲ್ಲಿ, ಇದನ್ನು ರಿಕ್ಷಾ-ಎಳೆಯುವವರ ಕಿರುಚಾಟ ಎಂದು ವಿವರಿಸಲಾಗಿದೆ. ಯೂಟ್ಯೂಬ್‌ನಲ್ಲಿ ಬಾಂಗ್ಲಾದೇಶದ ನ್ಯೂಸ್ ಪೋರ್ಟಲ್ ‘bdnews24.com’ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಇದೇ ರೀತಿಯ ದೃಶ್ಯಗಳು ಕಂಡುಬಂದಿವೆ. ಈ ವೀಡಿಯೊದ ವಿವರಣೆಯಲ್ಲಿ, ರಿಕ್ಷಾ ಚಾಲಕ ಫಜ್ಲೂರ್ ರಹಮಾನ್ ‘05 ಅಕ್ಟೋಬರ್ 2020 ರಂದು ಡಿಎಸ್‌ಸಿಸಿಯ ರಿಕ್ಷಾ ತೆರವುಗೊಳಿಸುವ ಪ್ರಕ್ರಿಯೆಯಲ್ಲಿ ವಾಹನವನ್ನು ವಶಪಡಿಸಿಕೊಂಡ ನಂತರ ಡಾಕಾದ ಜಿಗತಲಾ ಪ್ರದೇಶದಲ್ಲಿ ಅಳುತ್ತಿರುವುದು ಕಂಡುಬಂದಿದೆ ಎಂದು ಉಲ್ಲೇಖಿಸಲಾಗಿದೆ. ಈ ಘಟನೆಯ ಬಗ್ಗೆ ‘bdnews24.com’ ಸುದ್ದಿ ವೆಬ್‌ಸೈಟ್ ಪ್ರಕಟಿಸಿದ ಲೇಖನವನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ವಿಶ್ವದ ಏಳನೇ ಹೆಚ್ಚು ವಿದ್ಯಾವಂತ ನಾಯಕ ಎಂಬುದು ನಿಜವೇ?

ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಫಜ್ಲೂರ್ ರೆಹಮಾನ್ ತನ್ನ ಕೆಲಸವನ್ನು ಕಳೆದುಕೊಂಡಿದ್ದು, ಆತ ಬಾಂಗ್ಲಾದೇಶದಲ್ಲಿ ತನ್ನ ಜೀವನೋಪಾಯಕ್ಕಾಗಿ 80,000 ರೂಗಳ ಟಕಾ ಸಾಲವನ್ನು ತೆಗೆದುಕೊಂಡು ಬ್ಯಾಟರಿ ಚಾಲಿತ ರಿಕ್ಷಾವನ್ನು ಖರೀದಿಸಿದ್ದನು. ಇತ್ತೀಚೆಗೆ, ಡಾಕಾ ಸೌತ್ ಸಿಟಿ ಕಾರ್ಪೊರೇಷನ್ (ಡಿಎಸ್‌ಸಿಸಿ) ಯಾಂತ್ರಿಕೃತ, ಎಂಜಿನ್ ಚಾಲಿತ ಮತ್ತು ಬ್ಯಾಟರಿ ಚಾಲಿತ ರಿಕ್ಷಾ ಮತ್ತು ವ್ಯಾನ್‌ಗಳ ಚಲನೆಯನ್ನು ನಿಷೇಧಿಸಿತು. ‘05 ಅಕ್ಟೋಬರ್ 2020 ’ರಂದು ಡಿಎಸ್‌ಸಿಸಿ ನಡೆಸಿದ ತೆರವುಗೊಳಿಸುವ ಪ್ರಕ್ರಿಯೆಯಲ್ಲಿ ಫಜ್ಲೂರ್ ರೆಹಮಾನ್‌ರ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಘಟನೆಯನ್ನು ವರದಿ ಮಾಡುವ ಹೆಚ್ಚಿನ ಲೇಖನಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಹತ್ರಾಸ್‌ ಭೇಟಿಯ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಯಾರು?

ಫಜ್ಲೂರ್ ರಹಮಾನ್ ಅಳುವ ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದಾಗ, ಕೆಲವು ದಾನಿಗಳು ಫಜ್ಲೂರ್ ರಹಮಾನ್‌ರನ್ನು ಬೆಂಬಲಿಸುವುದಾಗಿ ಮುಂದೆ ಬಂದರು. ‘ಡಾಕಾ ಟ್ರಿಬ್ಯೂನ್’ ಪ್ರಕಟಿಸಿದ ಲೇಖನದ ಪ್ರಕಾರ, ಬಾಂಗ್ಲಾದೇಶ ಮೂಲದ ಇ-ಕಾಮರ್ಸ್ ಕಂಪನಿ ಶ್ವಾಪ್ನೋ ಎರಡು ರಿಕ್ಷಾಗಳನ್ನು ಫಜ್ಲೂರ್ ರಹಮಾನ್‌ಗೆ ದಾನ ಮಾಡಿದರು ಎಂದು ತಿಳಿದುಬಂದಿದೆ. ಅಪರಿಚಿತರೊಬ್ಬರು, ಫಜ್ಲೂರ್ ರಹಮಾನ್ ಜೊತೆಗೆ ಇತರ ಇಬ್ಬರು ರಿಕ್ಷಾ ಚಾಲಕರಿಗೆ 2 ರಿಕ್ಷಾಗಳನ್ನು ದಾನ ಮಾಡಿದ್ದಾರೆ ಎಂದು ‘ಟೈಮ್ಸ್ ನೌ’ ಸುದ್ದಿ ಲೇಖನದಲ್ಲಿ ವರದಿಯಾಗಿದೆ.

ಒಟ್ಟಾರೆ ಹೇಳುವುದಾದರೆ, ವೀಡಿಯೊದಲ್ಲಿ ಅಳುತ್ತಿರುವ ವ್ಯಕ್ತಿ ಬಾಂಗ್ಲಾದೇಶದ ಡಾಕಾದಲ್ಲಿ ರಿಕ್ಷಾ ಎಳೆಯುವ ಫಜ್ಲೂರ್ ರಹಮಾನ್. ‘05 ಅಕ್ಟೋಬರ್ 2020 ’ರಂದು ಡಾಕಾ ಮುನ್ಸಿಪಲ್ ಕಾರ್ಪೊರೇಷನ್ ಆತನ ರಿಕ್ಷಾವನ್ನು ವಶಪಡಿಸಿಕೊಳ್ಳುತ್ತಿದ್ದಂತೆ ಫಜ್ಲೂರ್ ರಹಮಾನ್ ಅಳತೊಡಗಿದ್ದಾನೆ. ಹಾಗಾಗಿ ಈ ಘಟನೆ ಭಾರತಕ್ಕೆ ಸಂಬಂಧಿಸಿಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ಸ್ಪಷ್ಟವಾಗಿ ಸುಳ್ಳಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...