Homeಮುಖಪುಟ‘ಸಾಮಾಜಿಕ ನ್ಯಾಯದ ಸಾಧನ ಇಂಗ್ಲಿಷ್ ಕಲಿಕೆ': ವಿ.ಎಲ್.ನರಸಿಂಹಮೂರ್ತಿ

‘ಸಾಮಾಜಿಕ ನ್ಯಾಯದ ಸಾಧನ ಇಂಗ್ಲಿಷ್ ಕಲಿಕೆ’: ವಿ.ಎಲ್.ನರಸಿಂಹಮೂರ್ತಿ

ಎಲ್ಲಿಯವರೆಗೂ ಸಮಾನ ಶಿಕ್ಷಣ ಜಾರಿಯಾಗುವುದಿಲ್ಲವೋ ಅಲ್ಲಿವರೆಗೆ ಎಲ್ಲ ಶಾಲೆಗಳಲ್ಲಿ ಇಂಗ್ಲಿಷ್ ಕಲಿಕೆಯನ್ನು ಜಾರಿಗೊಳಿಸಲಿ.

- Advertisement -
- Advertisement -

ಯಾವುದೇ ಭಾಷೆಯು ಆ ಭಾಷೆಯನ್ನಾಡುವ ಸಮುದಾಯದ ಅಭಿವೃದ್ಧಿಯ ಸಾಧನವಾಗಬೇಕೇ ಹೊರತು ಕೇವಲ ಸಮುದಾಯದ ಭಾವನಾತ್ಮಕವಾದ ಅಂಗವಾಗಿ ಉಳಿಯಬಾರದು. ನಮ್ಮ ರಾಜ್ಯದಲ್ಲಿ ಕನ್ನಡದ ಬಗೆಗಿನ ಭಾವನಾತ್ಮಕ ಒಲವಿನಿಂದಾಗಿ ಶಾಲಾ ಶಿಕ್ಷಣದಲ್ಲಿ ಇಂಗ್ಲಿಷ್ ಕಲಿಸುವುದರ ಕುರಿತು ಇವತ್ತಿಗೂ ಅಪಾರ ಗೊಂದಲವಿದೆ. ಕಳೆದ ಕೆಲವು ವರ್ಷಗಳಲ್ಲಿ ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಇಂಗ್ಲಿಷನ್ನು ಒಂದು ಭಾಷೆಯಾಗಿ ಕಲಿಸುವ ಮತ್ತು ಒಂದು ಸಾವಿರ ಇಂಗ್ಲಿಷ್ ಮಾಧ್ಯಮದ ಶಾಲೆಗಳನ್ನು ಪ್ರಾರಂಭಿಸುವ ನಿರ್ಧಾರಗಳನ್ನು ಸರ್ಕಾರಗಳು ಕೈಗೊಂಡ ತಕ್ಷಣ ಕನ್ನಡಪರ ಸಂಘಟನೆಗಳು ಮತ್ತು ಕನ್ನಡದ ಸಾಹಿತಿಗಳು ತೀವ್ರವಾದ ವಿರೋಧವನ್ನು ವ್ಯಕ್ತಪಡಿಸಿದರು. ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಕಲಿಸುವುದನ್ನು ಶುರುಮಾಡಿದರೆ ಕನ್ನಡವು ಒಂದು ಭಾಷೆಯಾಗಿ ಅಳಿಯುತ್ತದೆ ಎನ್ನುವುದು ಇವರ ವಾದ. ನಮ್ಮ ರಾಜ್ಯದಲ್ಲಿ ಗಣನೀಯ ಮಕ್ಕಳು ವ್ಯಾಸಂಗ ಮಾಡುತ್ತಿರುವ ಖಾಸಗಿ ಶಾಲೆಗಳು ಅಧಿಕೃತವಾಗಿ, ಕೆಲವು ಕಡೆ ಅನಧಿಕೃತವಾಗಿ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ನೀಡುತ್ತಿರುವುದನ್ನು ಇವರು ಗಂಭೀರವಾಗಿ ತೆಗೆದುಕೊಂಡ ಹಾಗೆ ಕಾಣುವುದಿಲ್ಲ.

ಸರ್ಕಾರಿ ಶಾಲೆಗಳನ್ನ ಕಬಳಿಸುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕಡಿವಾಣ ಹಾಕುವುದಕ್ಕಾಗಲೀ, ಕಡಿಮೆ ವಿದ್ಯಾರ್ಥಿಗಳಿದ್ದಾರೆ ಎನ್ನುವ ಕಾರಣ ನೀಡಿ ಸರ್ಕಾರಿ ಶಾಲೆಗಳನ್ನು ಮುಚ್ಚುವ, ವಿಲೀನಗೊಳಿಸುವ ಪ್ರಕ್ರಿಯೆಯನ್ನು ತಡೆಗಟ್ಟುವುದಕ್ಕಾಗಲೀ, ಅಷ್ಟೇ ಏಕೆ ಇರುವ ಸರ್ಕಾರಿ ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿ, ಗುಣಮಟ್ಟ ಸುಧಾರಣೆಯ ಬಗ್ಗೆಯಾಗಲೀ ಯಾವತ್ತೂ ಧ್ವನಿ ಎತ್ತದವರು ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಕಲಿಸುವುದಕ್ಕೆ ಮಾತ್ರ ವಿರೋಧ ವ್ಯಕ್ತಪಡಿಸುತ್ತಾರೆ.

ಬಾಲ್ಯದಲ್ಲಿ ಮಕ್ಕಳಲ್ಲಿ ಸಹಜವಾಗಿರುವ ‘ಲಿಂಗ್ವಿಸ್ಟಿಕ್ ಪ್ಲಾಸಿಸಿಟಿ'(ಭಾಷಾ ಕಲಿಕೆಯ ಸಾಮರ್ಥ್ಯ)ದಿಂದಾಗಿ ಮಕ್ಕಳು ನಾಲ್ಕು ಭಾಷೆಗಳನ್ನು ಸುಲಭವಾಗಿ ಕಲಿಯುತ್ತವೆ ಎನ್ನುವ ಅಂಶ ಸಂಶೋಧನೆಗಳಿಂದ ತಿಳಿದುಬಂದಿದ್ದರೂ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಕಲಿಕೆಯನ್ನು ಇವರು ವಿರೋಧಿಸುವುದರಲ್ಲಿ ಯಾವುದೇ ಅರ್ಥವಿಲ್ಲ.

ಇವತ್ತು ಇಂಗ್ಲಿಷ್ ಕಲಿಕೆಯನ್ನು ಕೇವಲ ನಮ್ಮ ಭಾಷೆಯ ಅಳಿವು ಉಳಿವಿನ ಪ್ರಶ್ನೆಯಾಗಿ ಮಾತ್ರ ನೋಡದೆ ಅದಕ್ಕಿರುವ ಸಾಮಾಜಿಕ ಮುಖವನ್ನು ಗಮನಿಸಿದರೆ ಇಂಗ್ಲಿಷ್ ಕಲಿಕೆಯನ್ನು ವಿರೋಧಿಸುವವರ ಹಿಫೊಕ್ರಸಿಯನ್ನು ಸುಲಭವಾಗಿ ಅರ್ಥಮಾಡಿಕೊಳ್ಳಬಹುದು. ಏಕೆಂದರೆ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಲ್ಲಿ ಬಹುತೇಕ ಮಕ್ಕಳು ದಲಿತ, ಹಿಂದುಳಿದ, ಅಲ್ಪಸಂಖ್ಯಾತರು ಮತ್ತು ಆದಿವಾಸಿ ಸಮುದಾಯಗಳ ಬಡ ಮಕ್ಕಳು. ಬಹುತೇಕ ಬಡತನ ರೇಖೆಗಿಂತ ಕೆಳಗಿರುವ ಈ ಜನ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಲ್ಲಿ ಓದಿಸುವಷ್ಟು ಆರ್ಥಿಕವಾಗಿ ಶಕ್ತರಾಗಿರುವುದಿಲ್ಲ ಮತ್ತು ಮುಕ್ಕಾಲು ಭಾಗ ಖಾಸಗಿ ಶಾಲೆಗಳು ಕಳಪೆಯಾಗಿರುವುದರಿಂದ ಅಂತಹ ಶಾಲೆಗಳಗೆ ಅಪಾರ ಶುಲ್ಕ ತೆತ್ತು ಓದುವುದು ಕೂಡ ನಿರರ್ಥಕ. ಹಾಗಾಗಿ ಆರ್ಥಿಕವಾಗಿ ಹಿಂದುಳಿದ ಸಮುದಾಯಗಳ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲೆ ಇಂಗ್ಲಿಷ್ ಕಲಿಸುವುದು ಸೂಕ್ತ. ರಾಜ್ಯದ ಖಾಸಗಿ ಶಾಲೆಗಳಲ್ಲಿ ಓದುವ ಉಳ್ಳವರ ಮಕ್ಕಳು ಇಂಗ್ಲಿಷ್ ಮಾಧ್ಯಮದಲ್ಲಿ ಓದಿದರೆ ನಾಶವಾಗದ ಕನ್ನಡ ಈ ಬಡವರ ಮಕ್ಕಳು ಇಂಗ್ಲಿಷ್ ಓದಿದರೆ ಅದು ಹೇಗೆ ನಾಶವಾಗುತ್ತದೆ ಎನ್ನುವುದನ್ನ ತಮ್ಮ ಮಕ್ಕಳನ್ನು ಇಂಗ್ಲಿಷ್ ಮಾಧ್ಯಮದ ಶಾಲೆಗಳಿಗೆ ಸೇರಿಸಿ ತಾವು ಕನ್ನಡ ಶಾಲೆಗಳ ಉಳಿವಿಗೆ ಹೋರಾಡುವ ಹೋರಾಟಗಾರರು, ಸಾಹಿತಿಗಳನ್ನು ಕೇಳಬೇಕು! ಅಥವಾ ನಾಡು, ನುಡಿಯನ್ನು ಉಳಿಸುವ ಜವಾಬ್ದಾರಿಯನ್ನು ಸಮಾಜದ ದುರ್ಬಲ ವರ್ಗಗಳು ಮಾತ್ರ ಹೊರಬೇಕು ಎನ್ನುವುದು ಇವರ ವಾದವಿರಬಹುದೇ?

ಇನ್ನು ನಮ್ಮ ಇತಿಹಾಸವನ್ನು ನೋಡಿದರೆ ಶತಮಾನಗಳ ಕಾಲ ಈ ದೇಶದ ತಳ ಸಮುದಾಯಗಳು ಅಕ್ಷರ ಕಲಿಯುವಿಕೆಯಿಂದಲೇ ವಂಚಿತವಾಗಿದ್ದವು. ಇತಿಹಾಸದುದ್ದಕ್ಕೂ ತಾವು ಮಾತ್ರ ಅಕ್ಷರ ಕಲಿತು ದಲಿತರು, ಹಿಂದುಳಿದವರು, ಆದಿವಾಸಿಗಳನ್ನು ಶಿಕ್ಷಣ ವ್ಯವಸ್ಥೆಯಿಂದ ಸಂಪೂರ್ಣವಾಗಿ ದೂರ ಇಟ್ಟವರ ವ್ಯವಸ್ಥಿತವಾದ ಸಂಚಿಗೆ ಇವತ್ತು ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಕಲಿಸುವ ಪ್ರಕ್ರಿಯೆ ಬಲಿಯಾಗುತ್ತಿದೆ. ಆಯಾ ಕಾಲಕ್ಕೆ ತಕ್ಕಂತೆ ಆಯಾ ಕಾಲದ ‘ಅಧಿಕಾರದ ಭಾಷೆ’ಯನ್ನು ವಶಪಡಿಸಿಕೊಳ್ಳುವ ವಿದ್ಯೆಯನ್ನು ಕರಗತಮಾಡಿಕೊಂಡಿರುವ ಈ ದೇಶದ ಮೇಲ್ವರ್ಗ ಮೊದಲು ಸಂಸ್ಕೃತ, ಆಮೇಲೆ ಪರ್ಷಿಯನ್, ಈಗ ಇಂಗ್ಲಿಷನ್ನು ತನ್ನ ಸ್ವತ್ತಾಗಿಸಿಕೊಂಡಿದೆ. ದಲಿತ, ಹಿಂದುಳಿದ ಮತ್ತು ಆದಿವಾಸಿ ಸಮುದಾಯಗಳ ಮಕ್ಕಳು ಇಂಗ್ಲಿಷ್ ಶಿಕ್ಷಣ ಪಡೆದರೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿರುವ ತಮ್ಮ ಪ್ರಾಬಲ್ಯವನ್ನು ಕಳೆದುಕೊಳ್ಳುವ ಭಯದಿಂದ ಈ ಮೇಲ್ವರ್ಗ ಸರ್ಕಾರಿ ಶಾಲೆಗಳು ಹಿಂದುಳಿದಿರುವಂತೆ ನೋಡಿಕೊಂಡು ಖಾಸಗಿ ಶಾಲೆಗಳನ್ನ ಬಲಪಡಿಸುತ್ತಿದೆ. ಆ ಮೂಲಕ ಸಮಾಜದ ಬಹುಸಂಖ್ಯಾತರಾಗಿರುವ ದಲಿತ, ಹಿಂದುಳಿದ, ಆದಿವಾಸಿ ಸಮುದಾಯಗಳು ಸೇರಿದಂತೆ ಎಲ್ಲ ಬಡವರನ್ನು ಅಭಿವೃದ್ಧಿಯಿಂದ ವಂಚಿತರನ್ನಾಗಿಸಲಾಗುತ್ತಿದೆ.

ಇವತ್ತು ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು, ವೃತ್ತಿಪರ ಶಿಕ್ಷಣ ಪಡೆಯಲು ಇಂಗ್ಲಿಷ್ ಅನಿವಾರ್ಯವಾಗಿದೆ. ಖಾಸಗೀ ಶಾಲೆಗಳಲ್ಲಿ ಓದಿಸುವ ಶಕ್ತಿಯಿಲ್ಲದ ಬಡವರ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಓದಿ ಖಾಸಗೀ ಶಾಲೆಗಳಲ್ಲಿ ಓದಿದ ಮಕ್ಕಳ ಜೊತೆ ಸ್ಪರ್ಧಿಸಲಾರದೆ ಎಷ್ಟೋ ಅವಕಾಶಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಇಂಗ್ಲಿಷ್ ಭಾಷೆಯಲ್ಲಿ ಮಾತಾಡಲು ಬಾರದ ಎಷ್ಟೋ ಬುದ್ಧಿವಂತ ವಿದ್ಯಾರ್ಥಿಗಳು ಕೀಳರಿಮೆ ಅನುಭವಿಸುತ್ತಿದ್ದಾರೆ, ಖಿನ್ನತೆಗೆ ಒಳಗಾಗಿ ಜೀವ ಕಳೆದುಕೊಳ್ಳುತ್ತಿದ್ದಾರೆ. ದೇಶದ ಪ್ರತಿಷ್ಠಿತ ಸಂಸ್ಥೆಗಳಲ್ಲಿನ ವಿಜ್ಞಾನ-ತಂತ್ರಜ್ಞಾನಕ್ಕೆ ಸಂಬಂಧಪಟ್ಟ ಕೋರ್ಸ್‍ಗಳನ್ನು ಓದುತ್ತಿರುವ ದಲಿತ, ಹಿಂದುಳಿದ, ಆದಿವಾಸಿ ಮಕ್ಕಳ ಸಂಖ್ಯೆ ತೀರಾ ಕಡಿಮೆ ಇದೆ ಮತ್ತು ಇಂತಹ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ತಳ ಸಮುದಾಯದ ಪ್ರತಿಭಾವಂತರನ್ನು ಆತ್ಮಹತ್ಯೆ ಮಾಡಿಕೊಳ್ಳುವಂತಹ ಸನ್ನಿವೇಶವನ್ನು ಸೃಷ್ಟಿಸಲಾಗುತ್ತಿದೆ. ಇವತ್ತಿಗೂ ಮೇಲುಜಾತಿಗಳ ಹಿಡಿತದಲ್ಲಿರುವ ಸರ್ಕಾರದ ಉನ್ನತ ಹುದ್ದೆಗಳು, ಖಾಸಗಿ ವಲಯದ ಉದ್ಯೋಗಗಳನ್ನು ಪಡೆಯಬೇಕಾದರೆ ತಳ ಸಮುದಾಯಗಳಿಗೆ ಇಂಗ್ಲಿಷ್ ಶಿಕ್ಷಣದ ಅಗತ್ಯವಿದೆ. ಬರೀ ಉದ್ಯೋಗದ ದೃಷ್ಟಿಯಿಂದ ಮಾತ್ರವಲ್ಲದೆ ಜಗತ್ತಿನ ಜ್ಞಾನ ಪಡೆಯುವುದಕ್ಕೆ ಕೂಡ ಈ ಸಮುದಾಯಗಳ ಮಕ್ಕಳು ಇಂಗ್ಲಿಷ್ ಶಿಕ್ಷಣ ಪಡೆಯುವಂತಾಗಬೇಕಿದೆ. ಇಂಗ್ಲಿಷ್ ಕಲಿಯುವುದರ ಮೂಲಕ ಆತ್ಮವಿಶ್ವಾಸ ಬೆಳಿಸಿಕೊಳ್ಳಬೇಕಾಗಿದೆ. ಅದಕ್ಕಾಗಿ ಸರ್ಕಾರಿ ಶಾಲೆಗಳಲ್ಲಿ ಸೂಕ್ತ ತರಬೇತಿ ಪಡೆದ ಶಿಕ್ಷಕರು ಸಮರ್ಪಕವಾಗಿ ಇಂಗ್ಲಿಷ್ ಕಲಿಸುವುದನ್ನ ಬೆಂಬಲಿಸಬೇಕಿದೆ.

ಒಂದು ಭಾಷೆಯನ್ನು ಉಳಿಸಿಕೊಳ್ಳುವುದು ಎಷ್ಟು ಮುಖ್ಯವೋ ಆ ಭಾಷೆಯನ್ನಾಡುವ ಜನರು ಉಳಿಯುವುದು ಕೂಡ ಅಷ್ಟೇ ಮುಖ್ಯ. ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಕಲಿಸುವುದರಿಂದ ಕನ್ನಡ ಅಳಿಯುವುದಾದರೆ ಖಾಸಗಿ ಶಾಲೆಗಳು ಸೇರಿದಂತೆ ನಮ್ಮ ಇಡೀ ಶಿಕ್ಷಣ ವ್ಯವಸ್ಥೆ ಏಕರೂಪವಾದ ಸಮಾನ ಶಿಕ್ಷಣ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಿ. ಅದಾಗದಿದ್ದರೇ ಎಲ್ಲಿಯವರೆಗೂ ಸಮಾನ ಶಿಕ್ಷಣ ಜಾರಿಯಾಗುವುದಿಲ್ಲವೋ ಅಲ್ಲಿವರೆಗೆ ಎಲ್ಲ ಶಾಲೆಗಳಲ್ಲಿ ಇಂಗ್ಲಿಷ್ ಕಲಿಕೆಯನ್ನು ಜಾರಿಗೊಳಿಸಲಿ. ಈ ದೇಶದಲ್ಲಿ ಇಂಗ್ಲಿಷ್ ಕೇವಲ ಒಂದು ಜ್ಞಾನದ ಭಾಷೆಯಾಗಿ ಅಷ್ಟೇ ಅಲ್ಲದೆ ಸಾಮಾಜಿಕ ಅಸಮಾನತೆಯ ವಿಮೋಚನೆಯ ಅಸ್ತ್ರವಾಗಿ ಕೂಡ ದಲಿತ, ಹಿಂದುಳಿದ, ಆದಿವಾಸಿಗಳಿಗೆ ನೆರವಾಗಬಲ್ಲದು ಎನ್ನುವುದನ್ನ ಮಾತೃಭಾಷಾ ರಕ್ಷಕರು ಅರ್ಥಮಾಡಿಕೊಳ್ಳಲಿ.

  • ವಿ.ಎಲ್.ನರಸಿಂಹಮೂರ್ತಿ

(ಹೊಸ ತಲೆಮಾರಿನ ಚಿಂತಕ, ಖಾಸಗಿ ಪದವಿ ಪೂರ್ವ ಕಾಲೇಜೊಂದರಲ್ಲಿ ಇಂಗ್ಲಿಷ್ ಉಪನ್ಯಾಸಕರು)


ಇದನ್ನೂ ಓದಿ: ಮಗು ಕನಸು ಕಾಣುವ-ಚಿಂತಿಸುವ ಭಾಷೆಯಲ್ಲಿ ಶಿಕ್ಷಣ ನೀಡಬೇಕು ಎಂಬ ಹೋರಾಟದ ಸುತ್ತ..
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತಾಯಿನುಡಿಯ/ ಮಾತೃಭಾಷೆಯ ಮಹತ್ವವನ್ನು ಅರಿತಿರುವ ರಾಜಕಾರಣಿಗಳು ಮತ್ತು ರಾಜಕಾರಣಿಗಳು ಹಾಗೂ ಖಾಸಗಿ ಶಾಲಾ ಕಾಲೇಜುಗಳ ಶಿಕ್ಷಣ ಸಂಸ್ಥೆಗಳ ಮಾಲೀಕರು ದುಡ್ಡು ಮಾಡುವ ದಂದೆಗಾಗಿ ಪರಭಾಷಾ ಇಂಗ್ಲೀಷ್ಗೆ ಆಡಳಿತ ಭಾಷೆ ಹಿಂದಿಗೆ ಶರಣಾಗಿದ್ದಾರೆ.

    ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...