Homeಅಂತರಾಷ್ಟ್ರೀಯಫ್ರಾನ್ಸ್ ಚರ್ಚ್‌ ದಾಳಿಯಲ್ಲಿ 3 ಸಾವು: ’ಅಲ್ಲಾಹು ಅಕ್ಬರ್‌’ ಎನ್ನುತ್ತಾ ಮಹಿಳೆಯ ಶಿರಚ್ಚೇದ!

ಫ್ರಾನ್ಸ್ ಚರ್ಚ್‌ ದಾಳಿಯಲ್ಲಿ 3 ಸಾವು: ’ಅಲ್ಲಾಹು ಅಕ್ಬರ್‌’ ಎನ್ನುತ್ತಾ ಮಹಿಳೆಯ ಶಿರಚ್ಚೇದ!

- Advertisement -
- Advertisement -

ಇಂದು ಫ್ರಾನ್ಸ್‌ನ‌ ಚರ್ಚ್‌‌ನಲ್ಲಿ ಭಯಾನಕ ಘಟನೆಯೊಂದು ನಡೆದಿದ್ದು, ಚಾಕು ಹಿಡಿದ ದಾಳಿಕೋರನೊಬ್ಬ ”ಅಲ್ಲಾಹು ಅಕ್ಬರ್‌” ಎಂದು ಕೂಗುತ್ತಾ ಅಲ್ಲಿದ್ದವರ ಮೇಲೆ ಹಲ್ಲೆ ಮಾಡಿದ್ದಾನೆ. ಇದರಿಂದ 3 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಮೆಡಿಟರೇನಿಯನ್ ನಗರದ ಚರ್ಚ್‌ನಲ್ಲಿ ನಡೆದ ಚಾಕು ದಾಳಿಯ ಬಗ್ಗೆ ’ಫ್ರೆಂಚ್ ಭಯೋತ್ಪಾದನಾ ವಿರೋಧಿ ಪ್ರಾಸಿಕ್ಯೂಟ‍ರ್‌’ ತನಿಖೆ ನಡೆಸುತ್ತಿದ್ದಾರೆ. ಭಯೋತ್ಪಾದನಾ ಪ್ರೇರಿತ ದಾಳಿಯ ಬಗ್ಗೆ ತನಿಖೆಯನ್ನು ಆರಂಭಿಸಲಾಗಿದೆ ಎಂದು ಪ್ರಾಸಿಕ್ಯೂಟರ್ ಕಚೇರಿ ಮತ್ತು ರಾಷ್ಟ್ರೀಯ ಪೊಲೀಸರು ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ನಡೆದ ದಾಳಿಯ ನಂತರ ಹಲ್ಲೆಕೋರನನ್ನು ಬಂಧಿಸಲಾಗಿದ್ದು, ಬಂಧನದ ಸಮಯದಲ್ಲಿ ಗಾಯಗೊಂಡಿದ್ದ ಆರೋಪಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆತ ಏಕಾಂಗಿಯಾಗಿ ಇಂತಹ ಕೆಲಸ ಮಾಡಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೈಸ್ ‌ನಗರದ ಚರ್ಚ್‌ನಲ್ಲಿ ನಡೆದ ಈ ಭಯೋತ್ಪಾದಕ ಘಟನೆಯಲ್ಲಿ “ಅಲ್ಲಾಹು ಅಕ್ಬರ್‌” ಎಂದು ಕೂಗುತ್ತಿರುವ ದಾಳಿಕೋರನೊಬ್ಬ ಚಾಕುವಿನಿಂದ ಮಹಿಳೆಯೊಬ್ಬಳ ಶಿರಚ್ಚೇದನ ಮಾಡಿದ್ದಾನೆ. ಜೊತೆಗೆ ಇತರ ಇಬ್ಬರು ಕೊಲ್ಲಲ್ಪಟ್ಟಿದ್ದಾರೆ.

ಪೊಲೀಸರಿಂದ ಬಂಧನಕ್ಕೊಳಗಾದ ನಂತರವೂ ದಾಳಿಕೋರನು “ಅಲ್ಲಾಹು ಅಕ್ಬರ್‌” ಎಂಬ ಪದವನ್ನು ಪದೇ ಪದೇ ಕೂಗಿದ್ದಾನೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕೊರೊನಾ ಉಲ್ಬಣ: ರಾಷ್ಟ್ರೀಯ ತುರ್ತು ಪರಿಸ್ಥಿತಿ ಹೇರಿದ ಸ್ಪೇನ್

ಈ ದಾಳಿಯನ್ನು ಭಯೋತ್ಪಾದಕತೆ ಎಂದು ಬಣ್ಣಿಸಿದ ನೈಸ್‌ ನಗರದ ಮೇಯರ್ ಕ್ರಿಶ್ಚಿಯನ್ ಎಸ್ಟ್ರೋಸಿ ತಮ್ಮ ಟ್ವಿಟರ್‌ನಲ್ಲಿ, “ಇದು ನಗರದ ನೊಟ್ರೆಡೇಮ್ ಚರ್ಚ್‌ನಲ್ಲಿ ಸಂಭವಿಸಿದೆ. ಚರ್ಚ್ ಒಳಗೆ ಕೊಲ್ಲಲ್ಪಟ್ಟ ಜನರಲ್ಲಿ ಒಬ್ಬರು ಚರ್ಚ್ ವಾರ್ಡನ್ ಎಂದು ತಿಳಿದುಬಂದಿದೆ. ಮಹಿಳೆಯೊಬ್ಬರು ಚರ್ಚ್ ಒಳಗಿನಿಂದ ತಪ್ಪಿಸಿಕೊಳ್ಳಲು ಯತ್ನಿಸಿ, ಕಟ್ಟಡದ ಎದುರಿನ ಬಾರ್‌ಗೆ ಓಡಿಹೋದರು. ಚಾಕು ದಾಳಿಕೋರನನ್ನು ವಶಕ್ಕೆ ತೆಗೆದುಕೊಳ್ಳುವಾಗ ಪೊಲೀಸರು ಗುಂಡು ಹಾರಿಸಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Explainer: ಜೀನೋಮ್ ಎಡಿಟಿಂಗ್‌ಗೆ ರಸಾಯನಶಾಸ್ತ್ರದ ನೊಬೆಲ್ ಮತ್ತು ವಿವಾದ

“ಸಾಕು, ಇನ್ನು ಸಾಕು. ನಮ್ಮ ಪ್ರದೇಶದಿಂದ ಇಸ್ಲಾಮೋ-ಫ್ಯಾಸಿಸಂ ಅನ್ನು ಖಚಿತವಾಗಿ ತೊಡೆದುಹಾಕಲು ಮತ್ತು ಹಿಂಸೆಯಿಂದ ಫ್ರಾನ್ಸ್ ಮುಕ್ತವಾಗಲು ಈಗ ಸಮಯ ಬಂದಿದೆ” ಎಂದು ಮೇಯರ್‌ ಆಕ್ರೋಶ ವ್ಯಕ್ತಪಡಿಸಿದರು.

ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರೋನ್ ನೈಸ್‌ ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ಮೇಯರ್‌ ಎಸ್ಟ್ರೋಸಿ ಹೇಳಿದ್ದಾರೆ. ಪ್ಯಾರಿಸ್‌ನಲ್ಲಿ ರಾಷ್ಟ್ರೀಯ ಅಸೆಂಬ್ಲಿಯ ಶಾಸಕರು ಸಂತ್ರಸ್ತರಿಗೆ ಒಗ್ಗಟ್ಟಿನಿಂದ ಒಂದು ನಿಮಿಷದ ಮೌನವನ್ನು ಆಚರಿಸಿದರು.

ಈ ತಿಂಗಳ ಆರಂಭದಲ್ಲಿ ಇಂತಹದ್ದೇ ಘಟನೆಯೊಂದು ಪ್ಯಾರಿಸ್ ಉಪನಗರದಲ್ಲಿ ವರದಿಯಾಗಿದ್ದು, ವಿದ್ಯಾರ್ಥಿಯಿಂದಲೇ ಶಿಕ್ಷಕನ ಮೇಲಿನ ಹಲ್ಲೆ ಮತ್ತು ಶಿರಚ್ಚೇದನ ನಡೆದಿತ್ತು. ಇಂದಿನ ಈ ದಾಳಿ ಇದಕ್ಕೆ ಸಂಪೂರ್ಣ ‌‌‌‌‌‌‌‌‌‌‌‌‌‌‌‌‌‌‌‌ಹೊಂ‌‌‌‌‌‌‌‌‌‌‌ದಿಕೆಯಾಗುತ್ತದೆ.


ಇದನ್ನೂ ಓದಿ: ಭಾರತವು ವಿಶ್ವದ ಆರ್ಥಿಕತೆಯಲ್ಲಿ 3ನೇ ಸ್ಥಾನಕ್ಕೆ ಬರಲು ಇನ್ನೂ 30 ವರ್ಷ ಬೇಕು: ಅಧ್ಯಯನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಲ್ಲಾಹನ ಹೆಸರಲ್ಲಿ ಮಹಿಳೆಯರ ಕೊಲೆ.
    ಇದನ್ನು ಯಾವುದೇ ಕಾರಣಕ್ಕೂ ಇಸ್ಲಾಮ್ ಧರ್ಮ ಒಪ್ಪುವುದಿಲ್ಲ.
    ಇದರ ಹಿಂದೆ ಯಾವುದೋ ಪಿತೂರಿ ಇರಬಹುದು ಸರಿಯಾದ ತನಿಖೆ ನಡೆದು ಅಪರಾಧಿ ಗೆ ಕಠಿಣವಾದ ಶಿಕ್ಷೆಯಾಗಬೇಕು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...