Homeಮುಖಪುಟಟೀಕೆಗೆ ಬೆದರಿದ ಚಿತ್ರತಂಡ: ಲಕ್ಷ್ಮೀ ಬಾಂಬ್ ಚಿತ್ರದ ಟೈಟಲ್‌ನಲ್ಲಿ 'ಬಾಂಬ್' ನಿಷ್ಕ್ರಿಯ!

ಟೀಕೆಗೆ ಬೆದರಿದ ಚಿತ್ರತಂಡ: ಲಕ್ಷ್ಮೀ ಬಾಂಬ್ ಚಿತ್ರದ ಟೈಟಲ್‌ನಲ್ಲಿ ‘ಬಾಂಬ್’ ನಿಷ್ಕ್ರಿಯ!

ಲಕ್ಷ್ಮೀ ಬಾಂಬ್ ಚಿತ್ರದ ಹೆಸರು ಹಿಂದೂ ದೇವತೆ ಲಕ್ಷ್ಮಿಗೆ ಸಾಕಷ್ಟು ಅವಹೇಳನಕಾರಿ ಎಂದು ರಜಪೂತ್ ಕರ್ಣಿ ಸೇನಾದ ಲೀಗಲ್ ನೋಟಿಸ್‌ನಲ್ಲಿ ಹೇಳಲಾಗಿದೆ.

- Advertisement -
- Advertisement -

ಬಾಲಿವುಡ್‌ನ ಬಹು ನಿರೀಕ್ಷಿತ ಚಿತ್ರ ಲಕ್ಷ್ಮೀ ಬಾಂಬ್ ಟ್ರೈಲರ್ ಮತ್ತು ಬುರ್ಜ್ ಖಲೀಫಾ ಹಾಡುಗಳು ಸಾಕಷ್ಟು  ಹವಾ ಕ್ರಿಯೇಟ್ ಮಾಡಿವೆ. ಇದು ಚಿತ್ರತಂಡಕ್ಕೆ ಖುಷಿಯ ವಿಚಾವಾದರೆ, ಇತ್ತ ಕೆಲ ಸಂಘಟನೆಗಳು ಚಿತ್ರವನ್ನು ಬ್ಯಾನ್ ಮಾಡಬೇಕು ಎಂದು ಒತ್ತಾಯಿಸಿವೆ.

ಲಕ್ಷ್ಮೀ ಬಾಂಬ್‌ನ ಟ್ರೈಲರ್‌ ತಮಾಷೆಯ ಮತ್ತು ಭಯಾನಕ ದೃಶ್ಯಗಳಿಂದ ಪ್ರೇಕ್ಷಕರನ್ನು ಮೆಚ್ಚಿಸುವಲ್ಲಿ ಯಶಸ್ವಿಯಾಯಿತು. ಲೈಂಗಿಕ ಅಲ್ಪಸಂಖ್ಯಾತರಾಗಿ ನಟ ಅಕ್ಷಯ್ ಕುಮಾರ್ ಪಾತ್ರವು ಈಗಾಗಲೇ ಸಾಕಷ್ಟು ಸಂಚಲನವನ್ನು ಸೃಷ್ಟಿಸುತ್ತಿದೆ.

ಆದರೆ ಇಂದು(ಅ.29) ರಾಘವ ಲಾರೆನ್ಸ್ ನಿರ್ದೇಶಿಸಿದ ಚಿತ್ರವು ತನ್ನ ಸೆನ್ಸಾರ್ ಪ್ರಮಾಣಪತ್ರಕ್ಕಾಗಿ ಹೋಗಿ ಸ್ಕ್ರೀನಿಂಗ್ ಅನ್ನು ಪೋಸ್ಟ್ ಮಾಡಿದೆ. ಜೊತೆಗೆ ಚಿತ್ರ ತಯಾರಕರು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್‌ಸಿ) ಯೊಂದಿಗೆ ಚರ್ಚಿಸಿ, ಚಿತ್ರದ ಶೀರ್ಷಿಕೆಯನ್ನು ಬದಲಾಯಿಸಲು ನಿರ್ಧರಿಸಿದ್ದಾರೆ.

ಚಿತ್ರದ ಶೀರ್ಷಿಕೆಗೆ ವಿರೋಧಗಳು ಬಂದ ಹಿನ್ನೆಲೆ, ಚಿತ್ರ ವೀಕ್ಷಕರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು, ಚಿತ್ರದ ನಿರ್ಮಾಪಕರಾದ ಶಬಿನಾ ಖಾನ್, ತುಷಾರ್ ಕಪೂರ್ ಮತ್ತು ಅಕ್ಷಯ್ ಕುಮಾರ್ ಈಗ ತಮ್ಮ ಚಿತ್ರದ ಹೆಸರನ್ನು ಲಕ್ಷ್ಮೀ ಬಾಂಬ್ ಬದಲು ಲಕ್ಷ್ಮೀ ಎಂದು ಬದಲಾಯಿಸಲಿದ್ದಾರೆ.

ಇದನ್ನೂ ಓದಿ: ದ್ವೇಷಕಾರುವ ಚಾನೆಲ್‌ಗಳಿಗೆ ಜಾಹೀರಾತು ನಿಷೇಧ; ಬಜಾಜ್ & ಪಾರ್ಲೆಯನ್ನು ಶ್ಲಾಘಿಸಿದ ಬಾಲಿವುಡ್

ನವೆಂಬರ್ 9 ರಂದು ತೆರೆಗೆ ಬರಲಿರುವ ಚಿತ್ರಕ್ಕೆ ಅಖಿಲ ಭಾರತ ಹಿಂದೂ ಮಹಾಸಭಾ ವಿರೋಧ ವ್ಯಕ್ತಪಡಿಸಿತ್ತು. ಈ ಚಿತ್ರ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುತ್ತದೆ ಎಂದು ರಾಜ್ಯ ಕಾರ್ಯಕಾರಿ ಅಧ್ಯಕ್ಷ ರಾಜೇಶ್ ಪವಿತ್ರನ್ ಹೇಳಿದ್ದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದೂಗಳ ಭಾವನೆಗಳನ್ನು ಈ ಚಿತ್ರ ಅವಮಾನಿಸಿದೆ. ಈ ಚಿತ್ರದಲ್ಲಿ ನಾಯಕನ ಹೆಸರು ಆಸಿಫ್, ನಾಯಕಿಯ ಹೆಸರು ಪ್ರಿಯಾ ಯಾದವ್ ಆಗಿದೆ. ಚಿತ್ರ “ಲವ್ ಜಿಹಾದ್” ಅನ್ನು ಪ್ರಚಾರ ಪಡಿಸುತ್ತದೆ ಹಾಗಾಗಿ ಚಲನಚಿತ್ರವನ್ನು ನಿಷೇಧಿಸುವಂತೆ ಸರ್ಕಾರಕ್ಕೆ ಕರೆ ನೀಡಿದ್ದರು.

“ಚಲನಚಿತ್ರ ನಿರ್ಮಾಪಕರು ಕೋಮು ಗಲಭೆಗಳನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ. ದೀಪಾವಳಿ ಸಂದರ್ಭದಲ್ಲಿ ಲಕ್ಷ್ಮೀ ಬಾಂಬ್ ಎಂಬ ಚಲನಚಿತ್ರವನ್ನು ನಿರ್ಮಿಸುವವರು ಎಂದಾದರೂ ತಸ್ಲೀಮಾ ಬಾಂಬ್ ಎಂಬ ಚಿತ್ರ ಮಾಡಲು ಧೈರ್ಯ ಮಾಡುತ್ತಾರೆಯೇ?” ಎಂದು ಪ್ರಶ್ನಿಸಿದ್ದರು.

ಇನ್ನು ಈ ಚಿತ್ರವನ್ನು ಬಹಿಷ್ಕರಿಸುವಂತೆ ಅನೇಕ ಜನರು ಒತ್ತಾಯಿಸಿದ್ದಾರೆ. ಚಿತ್ರದ ಹೆಸರು ಹಿಂದು ದೇವತೆಗೆ ಅವಮಾನ ಮಾಡುತ್ತದೆ. ಇದರಿಂದ ಹಿಂದೂಗಳ ಭಾವನೆಗೆ ಪೆಟ್ಟು ಬೀಳುತ್ತದೆ ಎಂದು ಹೇಳಲಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲೂ #bycottlaxmibomb ಟ್ರೆಂಡಿಂಗ್ ಆಗಿದೆ.

ಇದನ್ನೂ ಓದಿ: PUBG ನಿಷೇಧದ ಬೆನ್ನಿಗೆ FAU-G ಅನಾವರಣಗೊಳಿಸಿದ ನಟ ಅಕ್ಷಯ್ ಕುಮಾರ್‌

 

ಹೀಗಾಗಿ ಚಿತ್ರದ ಹೆಸರನ್ನು ಬದಲಾಯಿಸುವಂತೆ ಒತ್ತಾಯಿಸಿ ರಜಪೂತ್ ಕರ್ಣಿ ಸೇನಾ ಪರವಾಗಿ ವಕೀಲ ರಾಘವೇಂದ್ರ ಮೆಹ್ರೋತ್ರಾ ಚಿತ್ರದ ನಿರ್ಮಾಪಕರಿಗೆ ನಿನ್ನೆ(ಅ.28) ಲೀಗಲ್ ನೋಟಿಸ್ ಕಳುಹಿಸಿದ್ದರು. ಲಕ್ಷ್ಮೀ ಬಾಂಬ್ ಚಿತ್ರದ ಹೆಸರು ಹಿಂದೂ ದೇವತೆ ಲಕ್ಷ್ಮಿಗೆ ಸಾಕಷ್ಟು ಅವಹೇಳನಕಾರಿ ಎಂದು ಲೀಗಲ್ ನೋಟಿಸ್‌ನಲ್ಲಿ ಹೇಳಲಾಗಿದೆ. ಲಕ್ಷ್ಮಿ ದೇವಿಯನ್ನು ಅವಮಾನಿಸಲು ತಯಾರಕರು ಉದ್ದೇಶಪೂರ್ವಕವಾಗಿ ಚಿತ್ರದ ಶೀರ್ಷಿಕೆಯನ್ನು ಇಟ್ಟುಕೊಂಡಿದ್ದಾರೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿತ್ತು.

ಅಕ್ಷಯ್ ಕುಮಾರ್ ಮತ್ತು ಕಿಯಾರಾ ಅಡ್ವಾಣಿ ಅಭಿನಯದ ಥ್ರಿಲ್ಲರ್ ಮತ್ತು ಹಾಸ್ಯ ತುಂಬಿರುವ ಚಿತ್ರ ಈಗ ಲಕ್ಷ್ಮಿ ಎಂದು ಹೆಸರು ಬದಲಾಗಿದೆ. ಈ ಚಿತ್ರವು ಲಾರೆನ್ಸ್ ನಿರ್ದೇಶನದ 2011 ರ ತಮಿಳು ಚಿತ್ರ ಕಾಂಚನ ರೀಮೇಕ್ ಆಗಿದೆ. ಇದು ಕನ್ನಡದಲ್ಲಿ ಕಲ್ಪನ ಹೆಸರಿನಲ್ಲಿಯಲ್ಲಿಯೂ ಸಹ ರೀಮೇಕ್ ಆಗಿತ್ತು. ‘ಲಕ್ಷ್ಮಿ’ ಲಾರೆನ್ಸ್  ಅವರ ನಿರ್ದೇಶನದ ಚೊಚ್ಚಲ ಹಿಂದಿ ಚಿತ್ರವಾಗಿದೆ.

ಚಿತ್ರದಲ್ಲಿ ಬರುವ ಕೆಲ ಪಾತ್ರಗಳ ಹೆಸರುಗಳನ್ನು ಇಟ್ಟುಕೊಂಡು ಚಿತ್ರ ಬಹಿಷ್ಕರಣೆಗೆ ಕರೆ ನೀಡುವುದು, ಚಿತ್ರದ ಹೆಸರು ಬದಲಾವಣೆಗೆ ಒತ್ತಾಯಿಸುವುದು ಇತ್ತಿಚೆಗೆ ಹೆಚ್ಚಾಗುತ್ತಿದೆ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿಂದೆ 2016 ರಲ್ಲಿ ತೆಲುಗಿನಲ್ಲಿ ಲಕ್ಷ್ಮಿ ಬಾಂಬ್ ಎಂಬ ಹೆಸರಿನ ಚಿತ್ರ ಬಿಡುಗಡೆಯಾಗಿತ್ತು.


ಇದನ್ನೂ ಓದಿ: ತನಿಷ್ಕ್ ಜಾಹೀರಾತಿಗೆ ಟ್ವಿಟ್ಟರ್‌ನಲ್ಲಿ ಭಾರಿ ಬೆಂಬಲ: ಅಂತರ್‌ಧರ್ಮೀಯ ವಿವಾಹಿತರ ಮನದಾಳದ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...