Homeಅಂತರಾಷ್ಟ್ರೀಯಫ್ರಾನ್ಸ್‌ ಚರ್ಚ್‌ ದಾಳಿ: ಲಕ್ಷಾಂತರ ಜನರನ್ನು ಕೊಲ್ಲುವ ಹಕ್ಕು ಮುಸ್ಲಿಮರಿಗಿದೆ; ಮಲೇಷ್ಯಾ ಮಾಜಿ ಪ್ರಧಾನಿ!

ಫ್ರಾನ್ಸ್‌ ಚರ್ಚ್‌ ದಾಳಿ: ಲಕ್ಷಾಂತರ ಜನರನ್ನು ಕೊಲ್ಲುವ ಹಕ್ಕು ಮುಸ್ಲಿಮರಿಗಿದೆ; ಮಲೇಷ್ಯಾ ಮಾಜಿ ಪ್ರಧಾನಿ!

ಮಹತೀರ್‍ ಮಹಮ್ಮದ್ ಮಾಡಿರುವ ಟ್ವೀಟ್‌ಗಳನ್ನು ಟ್ವಿಟ್ಟರ್‌ ಕಂಪನಿಯು ತೆಗೆದುಹಾಕಿದೆ. ಅವರ ಖಾತೆಯನ್ನು ನಿಷ್ಕ್ರಿಯಗೊಳಿಸಿ ಎಂದು ಫ್ರಾನ್ಸ್‌ನ ಡಿಜಿಟಲ್ ಸಚಿವರು ಒತ್ತಾಯಿಸಿದ್ದಾರೆ.

- Advertisement -
- Advertisement -

ಫ್ರಾನ್ಸ್‌ನ ಚರ್ಚ್‌‌ನಲ್ಲಿ ನಿನ್ನೆ ನಡೆದ ಹಿಂಸಾಚಾರವನ್ನು ವೈಭವೀಕರಿಸಿದ್ದಕ್ಕಾಗಿ ಮಲೇಷ್ಯಾ ಮಾಜಿ ಪ್ರಧಾನಿ ಮಹತೀರ್ ಮೊಹಮದ್ ಅವರ ಟ್ವೀಟ್ ಅನ್ನು ಟ್ವಿಟ್ಟರ್ ತೆಗೆದುಹಾಕಿದ್ದು, ಟ್ವಿಟ್ಟರ್ ಕಂಪನಿಯು ಅವರನ್ನು ತನ್ನ ವೇದಿಕೆಯಿಂದ ನಿಷೇಧಿಸಬೇಕು ಎಂದು ಫ್ರಾನ್ಸ್‌ನ ಡಿಜಿಟಲ್ ಸಚಿವರು ಒತ್ತಾಯಿಸಿದ್ದಾರೆ.

“ಮಹತೀರ್ ಮೊಹಮದ್ ಅವರ ಖಾತೆಯನ್ನು ತಕ್ಷಣವೇ ನಿಷ್ಕ್ರಿಯಗೊಳಿಸಬೇಕು ಎಂದು ಫ್ರಾನ್ಸ್‌ನ ಟ್ವಿಟರ್‌ನ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ. ತೆಗೆದುಹಾಕದಿದ್ದರೆ, ಟ್ವಿಟ್ಟರ್ ಕಂಪನಿ ಈ ಕೊಲೆಗೆ ಔಪಚಾರಿಕ ಕರೆ ನೀಡಿದಂತಾಗುತ್ತದೆ” ಎಂದು ಸೆಡ್ರಿಕ್ ಒ ಹೇಳಿದ್ದಾರೆ.

“ಮುಸ್ಲಿಂ ಉಗ್ರಗಾಮಿಗಳ ದಾಳಿಗೆ ಫ್ರೆಂಚ್ ಅಧಿಕಾರಿಗಳು ಕಾರಣ. ಫ್ರೆಂಚ್ ಜನರ ಸಾವು ಸಮರ್ಥನೀಯ” ಎಂದು 95 ವರ್ಷದ ಮಲೇಷ್ಯಾ ಮಾಜಿ ಪ್ರಧಾನ ಮಂತ್ರಿ ಮಹತೀರ್ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಭಯೋತ್ಪಾದನೆಯೆಂಬ ಜಾಗತಿಕ ಸಂಕಟ: ಶ್ರೀಲಂಕಾ ದಾಳಿಯ ಹಿನ್ನೆಲೆಯಲ್ಲಿ

ಈ ತಿಂಗಳ ಆರಂಭದಲ್ಲಿ ಪ್ರವಾದಿ ಮುಹಮ್ಮದ್ ವ್ಯಂಗ್ಯಚಿತ್ರಗಳನ್ನು ತರಗತಿಗಳಲ್ಲಿ ತೋರಿಸಿದ ಮಾಧ್ಯಮಿಕ ಶಾಲಾ ಶಿಕ್ಷಕನ ಶಿರಚ್ಚೇಧದ ಕುರಿತು ಹೇಳುತ್ತಾ “ಕೋಪಗೊಳ್ಳಲು ಮತ್ತು ಹಿಂದಿನ ಹತ್ಯಾಕಾಂಡಗಳಿಗಾಗಿ ಲಕ್ಷಾಂತರ ಜನರನ್ನು ಕೊಲ್ಲುವ ಹಕ್ಕು ಮುಸ್ಲಿಮರಿಗಿದೆ” ಎಂದು ಅವರು ಗುರುವಾರ ಟ್ವೀಟ್‌ಗಳ ಸರಣಿಯಲ್ಲಿ ಹೇಳಿದ್ದರು ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರಸ್ ವರದಿ ಮಾಡಿದೆ.

ಈ ಟ್ವೀಟ್ ಹಿಂಸೆಯನ್ನು ಪ್ರಚೋದಿಸುತ್ತದೆ ಎಂದು ಕಂಪನಿಯು ಇದನ್ನು ತೆಗೆದುಹಾಕಿದೆ. ಮಹಾತಿರ್ ಎರಡು ಬಾರಿ ಪ್ರಧಾನಿಯಾಗಿದ್ದರು.

ನಿನ್ನೆ ಫ್ರಾನ್ಸ್‌ನ‌ ಚರ್ಚ್‌‌ನಲ್ಲಿ ಭಯಾನಕ ಘಟನೆಯೊಂದು ನಡೆದಿದ್ದು, ಚಾಕು ಹಿಡಿದ ದಾಳಿಕೋರನೊಬ್ಬ ”ಅಲ್ಲಾಹು ಅಕ್ಬರ್‌” ಎಂದು ಕೂಗುತ್ತಾ ಅಲ್ಲಿದ್ದವರ ಮೇಲೆ ಹಲ್ಲೆ ಮಾಡಿದ್ದಾನೆ. ಇದರಿಂದ 3 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು.

ಇದನ್ನೂ ಓದಿ: ಸಾಧ್ವಿ ಪ್ರಗ್ಯಾ ಭಯೋತ್ಪಾದನೆ ಮತ್ತು ದ್ವಂದ್ವಗಳು

ನಿನ್ನೆ ಬೆಳಿಗ್ಗೆ ನಡೆದ ದಾಳಿಯ ನಂತರ ಹಲ್ಲೆಕೋರನನ್ನು ಬಂಧಿಸಲಾಗಿದ್ದು, ಬಂಧನದ ಸಮಯದಲ್ಲಿ ಗಾಯಗೊಂಡಿದ್ದ ಆರೋಪಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆತ ಏಕಾಂಗಿಯಾಗಿ ಇಂತಹ ಕೆಲಸ ಮಾಡಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೈಸ್ ‌ನಗರದ ಚರ್ಚ್‌ನಲ್ಲಿ ನಡೆದ ಈ ಭಯೋತ್ಪಾದಕ ಘಟನೆಯಲ್ಲಿ “ಅಲ್ಲಾಹು ಅಕ್ಬರ್‌” ಎಂದು ಕೂಗುತ್ತಿರುವ ದಾಳಿಕೋರನೊಬ್ಬ ಚಾಕುವಿನಿಂದ ಮಹಿಳೆಯೊಬ್ಬಳ ಶಿರಚ್ಚೇದನ ಮಾಡಿದ್ದಾನೆ. ಜೊತೆಗೆ ಇತರ ಇಬ್ಬರು ಕೊಲ್ಲಲ್ಪಟ್ಟಿದ್ದಾರೆ.

ಪೊಲೀಸರಿಂದ ಬಂಧನಕ್ಕೊಳಗಾದ ನಂತರವೂ ದಾಳಿಕೋರನು “ಅಲ್ಲಾಹು ಅಕ್ಬರ್‌” ಎಂಬ ಪದವನ್ನು ಪದೇ ಪದೇ ಕೂಗಿದ್ದಾನೆ.

ಇದನ್ನೂ ಓದಿ: ಅಚ್ಛೇ ದಿನ್ ಮರೆಯಿರಿ: ಭಯೋತ್ಪಾದನೆ, ಪಾಕ್, ಮುಸ್ಲಿಮರ ಬಗ್ಗೆ ಭೀತರಾಗಿರಿ.. – ಮೋದಿಯ ಹೊಸ ಮಂತ್ರ

ಈ ದಾಳಿಯನ್ನು ಭಯೋತ್ಪಾದಕತೆ ಎಂದು ಬಣ್ಣಿಸಿದ ನೈಸ್‌ ನಗರದ ಮೇಯರ್ ಕ್ರಿಶ್ಚಿಯನ್ ಎಸ್ಟ್ರೋಸಿ ತಮ್ಮ ಟ್ವಿಟರ್‌ನಲ್ಲಿ, “ಇದು ನಗರದ ನೊಟ್ರೆಡೇಮ್ ಚರ್ಚ್‌ನಲ್ಲಿ ಸಂಭವಿಸಿದೆ. ಚರ್ಚ್ ಒಳಗೆ ಕೊಲ್ಲಲ್ಪಟ್ಟ ಜನರಲ್ಲಿ ಒಬ್ಬರು ಚರ್ಚ್ ವಾರ್ಡನ್ ಎಂದು ತಿಳಿದುಬಂದಿದೆ. ಮಹಿಳೆಯೊಬ್ಬರು ಚರ್ಚ್ ಒಳಗಿನಿಂದ ತಪ್ಪಿಸಿಕೊಳ್ಳಲು ಯತ್ನಿಸಿ, ಕಟ್ಟಡದ ಎದುರಿನ ಬಾರ್‌ಗೆ ಓಡಿಹೋದರು. ಚಾಕು ದಾಳಿಕೋರನನ್ನು ವಶಕ್ಕೆ ತೆಗೆದುಕೊಳ್ಳುವಾಗ ಪೊಲೀಸರು ಗುಂಡು ಹಾರಿಸಿದ್ದಾರೆ” ಎಂದು ಹೇಳಿದ್ದಾರೆ.

“ಸಾಕು, ಇನ್ನು ಸಾಕು. ನಮ್ಮ ಪ್ರದೇಶದಿಂದ ಇಸ್ಲಾಮೋ-ಫ್ಯಾಸಿಸಂ ಅನ್ನು ಖಚಿತವಾಗಿ ತೊಡೆದುಹಾಕಲು ಮತ್ತು ಹಿಂಸೆಯಿಂದ ಫ್ರಾನ್ಸ್ ಮುಕ್ತವಾಗಲು ಈಗ ಸಮಯ ಬಂದಿದೆ” ಎಂದು ಮೇಯರ್‌ ಆಕ್ರೋಶ ವ್ಯಕ್ತಪಡಿಸಿದರು.

ಈ ತಿಂಗಳ ಆರಂಭದಲ್ಲಿ ಇಂತಹದ್ದೇ ಘಟನೆಯೊಂದು ಪ್ಯಾರಿಸ್ ಉಪನಗರದಲ್ಲಿ ವರದಿಯಾಗಿದ್ದು, ವಿದ್ಯಾರ್ಥಿಯಿಂದಲೇ ಶಿಕ್ಷಕನ ಮೇಲಿನ ಹಲ್ಲೆ ಮತ್ತು ಶಿರಚ್ಚೇದನ ನಡೆದಿತ್ತು. ಇಂದಿನ ಈ ದಾಳಿ ಇದಕ್ಕೆ ಸಂಪೂರ್ಣ ‌‌‌‌‌‌‌‌‌‌‌‌‌‌‌‌‌‌‌‌ಹೊಂ‌‌‌‌‌‌‌‌‌‌‌ದಿಕೆಯಾಗುತ್ತದೆ.


ಇದನ್ನೂ ಓದಿ: ಬಲಪಂಥೀಯ ಭಯೋತ್ಪಾದನೆಯ ಬೇರುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...