Homeಅಂತರಾಷ್ಟ್ರೀಯಫ್ಯಾಕ್ಟ್‌ಚೆಕ್: ಪಾಕ್ ಸದನದಲ್ಲಿ ’ಮೋದಿ ಮೋದಿ’ ಎಂದು ಘೋಷಣೆ ಹಾಕಲಾಗುತ್ತಿದೆಯೇ?

ಫ್ಯಾಕ್ಟ್‌ಚೆಕ್: ಪಾಕ್ ಸದನದಲ್ಲಿ ’ಮೋದಿ ಮೋದಿ’ ಎಂದು ಘೋಷಣೆ ಹಾಕಲಾಗುತ್ತಿದೆಯೇ?

ಇಂಡಿಯಾ ಟಿವಿ, ಟೈಮ್ಸ್‌ ನೌ ಮತ್ತು ಸುಳ್ಳು ಸುದ್ದಿ ಹರಡುವುದರಲ್ಲಿ ಕುಖ್ಯಾತಿ ಪಡೆದಿರುವ ಒಪಿಇಂಡಿಯಾ ಇದೇ ಹೇಳಿಕೆಯೊಂದಿಗೆ ಈ ವೀಡಿಯೋವನ್ನು ಹಂಚಿಕೊಂಡಿದೆ.

- Advertisement -
- Advertisement -

ಪಾಕಿಸ್ತಾನದ ಸಂಸತ್ತಿನಲ್ಲಿ ಮೋದಿ ಪರ ಘೋಷಣೆ ಕೂಗುತ್ತಿದ್ದಾರೆ ಎನ್ನುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ಪಾಕಿಸ್ತಾನದ ಸಂಸತ್ತಿನಲ್ಲಿನ ಚರ್ಚೆಯ ವಿಡಿಯೋ ತುಣುಕಿನಲ್ಲಿ ಸದಸ್ಯರು “ಮೋದಿ, ಮೋದಿ” ಎಂದು ಕೂಗುತ್ತಿದ್ದಾರೆ ಎಂದು ಹಲವರು ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ.

ಈ ವೀಡಿಯೋವನ್ನ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ, “ಪ್ರಧಾನಿ ನರೇಂದ್ರ ಮೋದಿ ಜಿ ಅವರು ಭಾರತಕ್ಕೆ ಮಾತ್ರವಲ್ಲದೆ ಇಡೀ ಜಗತ್ತಿಗೆ ಸ್ಫೂರ್ತಿ ನೀಡಿದ್ದಾರೆ! ಪಾಕಿಸ್ತಾನ ಸಂಸತ್ತಿನಲ್ಲಿ ಆಡಳಿತಾರೂಢ ಸರಕಾರದ ವಿರುದ್ಧ “ಮೋದಿ ಮೋದಿ” ಎಂದು ಘೋಷಣೆ ಹಾಕುತ್ತಿರುವುದನ್ನು ನೋಡಿ. # ಇಮ್ರಾನ್ ಖಾನ್‌ಗೆ ಭಾರಿ ಮುಜುಗರವಾಗಿದೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ವಿಶ್ವದ ಏಳನೇ ಹೆಚ್ಚು ವಿದ್ಯಾವಂತ ನಾಯಕ ಎಂಬುದು ನಿಜವೇ?

ಇಂಡಿಯಾ ಟಿವಿ, ಟೈಮ್ಸ್‌ ನೌ ಮತ್ತು ಸುಳ್ಳು ಸುದ್ದಿ ಹರಡುವುದರಲ್ಲಿ ಕುಖ್ಯಾತಿ ಪಡೆದಿರುವ ಒಪಿಇಂಡಿಯಾ ಸೇರಿದಂತೆ ಅನೇಕ ಮುಖ್ಯವಾಹಿನಿಯ ಸುದ್ದಿ ಮಾಧ್ಯಮಗಳು ಇದೇ ಹೇಳಿಕೆಯೊಂದಿಗೆ ಈ ವೀಡಿಯೋವನ್ನು ಹಂಚಿಕೊಂಡಿದೆ. ಜೊತೆಗೆ ಹತ್ತಾರು ಬಿಜೆಪಿ ನಾಯಕರೂ ಕೂಡ ರಾಷ್ಟ್ರವ್ಯಾಪಿ ಈ ವೀಡಿಯೋವನ್ನು ಇದೇ ಹೇಳಿಕೆಯೊಂದಿಗೆ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ಫ್ಯಾಕ್ಟ್‌ಚೆಕ್: 

ಇಂಡಿಯಾ ಟಿವಿ ಅಪ್‌ಲೋಡ್ ಮಾಡಿದ ಕ್ಲಿಪ್‌ನಲ್ಲಿ, ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವ ಷಾ ಮಹಮೂದ್ ಖುರೇಷಿ ದೇಶದ ಸಂಸತ್ತಿನಲ್ಲಿ ಮಾತನಾಡುವುದನ್ನು ಕಾಣಬಹುದು. ಹಾಗಾಗಿ “ಷಾ ಮಹಮೂದ್ ಖುರೇಷಿಯವರ ಸಂಸತ್ತಿನ ಭಾಷಣ”ಕ್ಕಾಗಿ ಗೂಗಲ್‌ನಲ್ಲಿ ಹುಡುಕಿದಾಗ ಪಾಕಿಸ್ತಾನದ ಸುದ್ದಿ ವಾಹಿನಿಯಾದ 92 ನ್ಯೂಸ್ ಎಚ್‌ಡಿ ಅಪ್‌ಲೋಡ್ ಮಾಡಿದ ವೀಡಿಯೊ ಕಂಡಬಂದಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: 13 ವರ್ಷದ ಬಾಲಕಿಯನ್ನು ಮುಸ್ಲಿಂ ವ್ಯಕ್ತಿ ಅತ್ಯಾಚಾರ ಮಾಡಿ ಸುಟ್ಟಿದ್ದು ಸುಳ್ಳು!

ಸುಮಾರು 10 ನಿಮಿಷಗಳ ಸುದೀರ್ಘ ಭಾಷಣದ ಕೆಲವು ಭಾಗಗಳನ್ನು ಮೇಲೆ ತಿಳಿಸಿದ ಕೆಲವು ಸಾಮಾಜಿಕ ಮಾಧ್ಯಮ ಬಳಕೆದಾರರು ಮತ್ತು ಭಾರತೀಯ ಚಾನೆಲ್‌ಗಳು ಬಳಸುತ್ತಿರುವುದು ತಿಳಿದುಬಂದಿದೆ. ಇದರಲ್ಲಿ ’ಮೋದಿ ಮೋದಿ ಎಂದು ಕೂಗುತ್ತಿರುವಂತೆಯೇ ಕಂಡುಬಂದಿದೆ.

ಆದರೂ ವೀಡಿಯೋವನ್ನು ಸೂಕ್ಷ್ಮವಾಗಿ ಮತ್ತು ನಿಧಾನಗೊಳಿಸಿ ಆಲಿಸಿದಾಗ, ವಾಸ್ತವದಲ್ಲಿ ವಿರೋಧ ಪಕ್ಷದ ಸಂಸದರು “ವೋಟಿಂಗ್ ವೋಟಿಂಗ್” ಎಂದು ಕೂಗುತ್ತಿರುವುದನ್ನು ಕೇಳಬಹುದು.

ವೀಡಿಯೊದಲ್ಲಿ 0.15 ನಿಮಿಷದಲ್ಲಿ, ಸ್ಪೀಕರ್ ಸಂಸದರನ್ನುದ್ದೇಶಿಸಿ ಅವರನ್ನು ಶಾಂತಗೊಳಿಸುವ ಪ್ರಯತ್ನದಲ್ಲಿ “वोटिंग सबकुछ होगा… सबकुछ होगा” (ಮತದಾನ ನಡೆಯಲಿದೆ) ಎಂದು ಹೇಳುವುದನ್ನು ಕೇಳಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪ್ರಧಾನಿ ಉದ್ಘಾಟಿಸಿದ ಅಟಲ್ ಸುರಂಗ ಎಂದು ಅಮೇರಿಕಾ ಸುರಂಗದ ಚಿತ್ರ ಹಂಚಿಕೊಂಡ ಮಾಧ್ಯಮಗಳು!

ಇಷ್ಟೇ ಅಲ್ಲದೇ, ಇಂಡಿಯಾ ಟುಡೆ ಆಂಟಿ ಫೇಕ್ ನ್ಯೂಸ್ ವಾರ್ ರೂಮ್ (ಎಎಫ್‌ಡಬ್ಲ್ಯೂಎ) ಈ ಸುದ್ದಿಯನ್ನು ಸುಳ್ಳು ಎಂದು ಕಂಡುಹಿಡಿದಿದೆ. ಪಾಕಿಸ್ತಾನದ ಅಸೆಂಬ್ಲಿಯಲ್ಲಿ ಸದಸ್ಯರು ಮಂಡಿಸಿದ ನಿರ್ಣಯವನ್ನು ಅಂಗೀಕರಿಸಿದ್ದಕ್ಕಾಗಿ ವಿರೋಧ ವ್ಯಕ್ತವಾಯಿತು. ಈ ವೇಳೆ ಸದಸ್ಯರು  “ಮತದಾನ, ಮತದಾನ” (ಓಟಿಂಗ್.. ಓಟಿಂಗ್) ಎಂದು ಕೂಗುತ್ತಿದ್ದಾರೆ. ಗಮನ ಹರಿಸದೇ ಕೇಳಿದರೆ ಅದು “ಮೋದಿ, ಮೋದಿ” ಅಂತಲೇ ಕೇಳುತ್ತದೆ. ಆದರೆ ಅದು “ಮೋದಿ.. ಮೋದಿ” ಅಂತ ಕೂಗಿದ್ದಲ್ಲ “ಓಟಿಂಗ್.. ಓಟಿಂಗ್..” ಎಂದು ಕೂಗಲಾಗಿದೆ.

ಅಕ್ಟೋಬರ್ 27 ರಂದು ಪಾಕಿಸ್ತಾನದ ದಿನಪತ್ರಿಕೆ ಡಾನ್ ನೀಡಿದ ವರದಿಯು ಸದನದಲ್ಲಿ ಉಂಟಾದ ಅವ್ಯವಸ್ಥೆಯನ್ನು ಸಹ ವಿವರಿಸಿದ್ದು, ವಿರೋಧ ಪಕ್ಷದ ಸದಸ್ಯರು ‘ಮತದಾನ ಮತದಾನ’ ಘೋಷಣೆಗಳನ್ನು ಎತ್ತಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಆದ್ದರಿಂದ, ಪಾಕಿಸ್ತಾನದ ಸಂಸತ್ತಿನ ಸಂಸದರು “ಮತದಾನ, ಮತದಾನ” ಎಂದು ಕೂಗುತ್ತಿದ್ದರು. ಹಾಗಾಗಿ “ಮೋದಿ, ಮೋದಿ” ಎಂದು ಕೂಗುತ್ತಿರುವುದಲ್ಲ ಎಂದು ಸ್ಪಷ್ಟವಾಗಿದೆ.


ಇದನ್ನೂ ಓದಿ: ನರೇಂದ್ರ ಮೋದಿ ಗುಜರಾತ್‌ನಲ್ಲಿ ಕ್ರೂಸ್ ಹಡಗು ಸೇವೆಯನ್ನು ಪ್ರಾರಂಭಿಸಿದ್ದಾರೆಯೇ? ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...