Homeಚಳವಳಿಹತ್ರಾಸ್ ಪ್ರಕರಣ:’ಸೇಡು ತೀರಿಸಿಕೊಳ್ಳುವುದಲ್ಲ, ಬದಲಾವಣೆ ಬೇಕು’; ಮಹಿಳಾ ಸಂಘಟನೆಗಳು

ಹತ್ರಾಸ್ ಪ್ರಕರಣ:’ಸೇಡು ತೀರಿಸಿಕೊಳ್ಳುವುದಲ್ಲ, ಬದಲಾವಣೆ ಬೇಕು’; ಮಹಿಳಾ ಸಂಘಟನೆಗಳು

ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋದ ಇತ್ತೀಚಿನ ಕ್ರೈಮ್ ಇನ್ ಇಂಡಿಯಾ ವರದಿಯು 2019 ರಲ್ಲಿ ಪ್ರತಿದಿನ 88 ಅತ್ಯಾಚಾರ ಪ್ರಕರಣಗಳು ನಡೆದಿವೆ ಎಂದು ವರದಿ ಮಾಡಿದೆ.

- Advertisement -
- Advertisement -

ಉತ್ತರಪ್ರದೇಶದ ಹತ್ರಾಸ್‌ನಲ್ಲಿ 19 ವರ್ಷದ ದಲಿತ ಯುವತಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ, ತೀವ್ರವಾಗಿ ಗಾಯಗೊಂಡು ಗಾಯಗೊಂಡು ಮೃತರಾಗಿ ಸೆಪ್ಟೆಂಬರ್ 29ಕ್ಕೆ ಒಂದು ತಿಂಗಳು ತುಂಬಿದೆ. ಈ ಘಟನೆ ಹಿನ್ನೆಲೆ  29 ರಂದು ರಾಷ್ಟ್ರ ರಾಜಧಾನಿಯಲ್ಲಿ ವಿವಿಧ ಮಹಿಳಾ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಪ್ರತಿಭಟನಾ ನಿರತ ಮಹಿಳೆಯರು ದೇಶಾದ್ಯಂತದ ಮಹಿಳೆಯರಿಗೆ ಸುರಕ್ಷಿತ ವಾತಾವರಣ ನಿರ್ಮಿಸಬೇಕು, ಹತ್ರಾಸ್‌  ದಲಿತ ಸಂತ್ರಸ್ತೆಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು. ದೆಹಲಿಯ ಇನ್ನೊಂದೆಡೆ ದಲಿತ ಸಂಘಟನೆ ಆಯೋಜಿಸಿದ್ದ ಪ್ರತ್ಯೇಕ ಪ್ರತಿಭಟನೆಯಲ್ಲಿಯೂ ಇದೇ ರೀತಿಯ ಬೇಡಿಕೆಗಳನ್ನು ಇಡಲಾಗಿದೆ.

ಹತ್ರಾಸ್‌ನ 19 ವರ್ಷದ ದಲಿತ ಯುವತಿ ಮೇಲೆ ಸೆ.14 ರಂದು ನಾಲ್ವರು ಮೇಲ್ಜಾತಿಯ ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಸೆ.29 ರಂದು ಯುವತಿ ಸಾವನ್ನಪ್ಪಿದರು. ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ.

ಅಖಿಲ ಭಾರತ ಪ್ರಜಾಸತ್ಮಾತ್ಮಕ ಮಹಿಳಾ ಸಂಘ, ರಾಷ್ಟ್ರೀಯ ಮಹಿಳಾ ಒಕ್ಕೂಟ, ಅಖಿಲ ಭಾರತ ಪ್ರಗತಿಶೀಲ ಮಹಿಳಾ ಸಂಘ, ಪ್ರಗತಿಶೀಲ್ ಮಹಿಳಾ ಸಂಘಟನೆ, ಸತಾರ್ಕ್ ನಾಗರಿಕ್ ಸಂಘಟನ್ ಮತ್ತು ಇತರ ಸಂಘ ಸಂಸ್ಥೆಗಳು ಹಮ್ ಅಗರ್‌ ಊಟೆ ನಹೀ ತೋ(ನಾವೆದ್ದು ನಿಲ್ಲದಿದ್ದರೆ) ಬ್ಯಾನರ್‌ ಅಡಿಯಲ್ಲಿ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ಹತ್ರಾಸ್ ಕೇಸ್: ಅ.29ಕ್ಕೆ ದೇಶಾದ್ಯಂತ ಪ್ರತಿಭಟನೆಗೆ ಮಹಿಳಾ ಸಂಘಟನೆಗಳ ಕರೆ

“ನಾವೆದ್ದು ನಿಲ್ಲದಿದ್ದರೆ” ಎಂಬ ಆಂದೋಲನವನ್ನು ಪತ್ರಕರ್ತೆ, ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಅವರ ಹತ್ಯೆಯ ಮೂರನೇ ವರ್ಷದ ಹುತಾತ್ಮ ದಿನದಂದು ಪ್ರಾರಂಭಿಸಲಾಗಿದೆ. ಈ ಆಂದೋಲನ ಈಗ ದೇಶಾದ್ಯಂತ 400 ಕ್ಕೂ ಹೆಚ್ಚು ಮಹಿಳಾ ಗುಂಪುಗಳನ್ನು ಹೊಂದಿದೆ. ಇದರಲ್ಲಿ LGBTQI ಸಂಘಟನೆಗಳು ಮತ್ತು ಮಾನವ ಹಕ್ಕುಗಳ ಸಂಘಟನೆಗಳನ್ನು ಒಳಗೊಂಡಿದೆ.

ದೆಹಲಿಯ ಮಂಗೋಲ್ಪುರಿ, ದಕ್ಷಿಣ ದೆಹಲಿಯ ಜಗದಾಂಬಾ ಕ್ಯಾಂಪ್, ಈಶಾನ್ಯ ದೆಹಲಿಯ ಗುರ್ಮಂಡಿ, ನಿಜಾಮುದ್ದೀನ್ ಮತ್ತು ಕೈಗಾರಿಕಾ ಪಟ್ಟಣಗಳಾದ ನರೇಲಾ ಮತ್ತು ಬವಾನಾದಲ್ಲಿ ಸೇರಿದಂತೆ ದಿನವಿಡೀ ಪ್ರತಿಭಟನೆಗಳು ನಡೆದವು. ಪ್ರತಿಭಟನೆಯಲ್ಲಿ ಭಾಗವಹಿಸಿದವರಲ್ಲಿ ಬಹುತೇಕ ಮಂದಿ ಆರ್ಥಿಕವಾಗಿ ದುರ್ಬಲರಾಗಿದ್ದು, ಕಟ್ಟಡ ನಿರ್ಮಾಣ ಮತ್ತು ಗೃಹೋಪಯೋಗಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ.

“ಹತ್ರಾಸ್‌ನಲ್ಲಿ ಆ ಹುಡುಗಿಗೆ ಏನಾಯಿತೋ ಅದು ಯಾವುದೇ ದಿನವಾದರೂ ನಮಗೆ ಸಂಭವಿಸಬಹುದು. ಇಲ್ಲಿ ನಾನಿರುವ ಪ್ರದೇಶದಲ್ಲಿ ಬೀದಿ ದೀಪಗಳಿಲ್ಲ, ಗಂಡಸರು ಕುಡಿದು, ಅಸಭ್ಯವಾಗಿ ವರ್ತಿಸುತ್ತಾ, ನಮ್ಮೆಡೆ ನೋಡುತ್ತಾರೆ. ಇದು ನಾವು ದಿನನಿತ್ಯ ಅನುಭವಿಸುವ ಯಾತನೆಯಾಗಿದೆ” ಎಂದು ಪ್ರತಿಭಟನಾ ನಿರತ ಮಹಿಳೆ ಗೋಳು ತೋಡಿಕೊಂಡಿದ್ದಾರೆ.

PC:News Click

ಇದನ್ನೂ ಓದಿ: ಹೈಕೋರ್ಟ್ ಮೇಲ್ವಿಚಾರಣೆ ಮಾಡಲಿ: ಹತ್ರಾಸ್ CBI ತನಿಖೆ ಮೇಲ್ವಿಚಾರಣೆಗೆ ಸುಪ್ರೀಂ ನಕಾರ

2019 ರ ಸಮೀಕ್ಷೆಯ ಪ್ರಕಾರ, 40% ಕ್ಕೂ ಹೆಚ್ಚು ಮಹಿಳೆಯರು ಮನೆಯ ಹೊರಗಡೆ ಸುರಕ್ಷಿತರಾಗಿಲ್ಲ ಎಂದು  ವರದಿ ಮಾಡಿದೆ. ಜೊತೆಗೆ ಸಮೀಕ್ಷೆಯಲ್ಲಿ ಸುಮಾರು 80% ಜನರು ದೇಶದ ಮಹಿಳೆಯರಿಗೆ ಸುರಕ್ಷಿತ ವಾತಾವರಣವನ್ನು ಒದಗಿಸಲು ಅಧಿಕಾರಿಗಳು ಹೆಚ್ಚಿನದನ್ನು ಮಾಡಿಲ್ಲ ಎಂದು ತಿಳಿಸಿದ್ದಾರೆ. ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ (ಎನ್‌ಸಿಆರ್‌ಬಿ) ಯ ಇತ್ತೀಚಿನ ಕ್ರೈಮ್ ಇನ್ ಇಂಡಿಯಾ ವರದಿಯು 2019 ರಲ್ಲಿ ಪ್ರತಿದಿನ 88 ಅತ್ಯಾಚಾರ ಪ್ರಕರಣಗಳು ನಡೆದಿವೆ ಎಂದು ವರದಿ ಮಾಡಿದೆ.

ಆದ್ದರಿಂದ, “ಬದ್ಲಾವ್ ಚೈಹಿಯೆ, ಬದ್ಲಾ ನಹಿನ್” (ಬದಲಾವಣೆ ಬೇಕು, ಸೇಡು ತೀರಿಸಿಕೊಳ್ಳುವುದಲ್ಲ) ಎಂದು ಪ್ರತಿಭಟನೆಯ ಸಮಯದಲ್ಲಿ ಮಹಿಳೆಯರು ಘೋಷಣೆಗಳನ್ನು ಕೂಗಿದ್ದಾರೆ.

ಎಸ್‌ಎನ್‌ಎಸ್‌ನ ಸ್ಥಾಪಕರಾದ ಅಂಜಲಿ ಭಾರದ್ವಾಜ್ ಅವರು ದೇಶದಲ್ಲಿ ಮಹಿಳೆಯರ ಸುರಕ್ಷತೆಯ ನಿಟ್ಟಿನಲ್ಲಿ  ರಾಜ್ಯದ ವಿವಿಧ ಆಯೋಗಗಳ ಮಹತ್ವವನ್ನು ತಿಳಿಸಿದ್ದಾರೆ. “ಎಸ್‌ಸಿ, ಎಸ್‌ಟಿಗಳು ಮತ್ತು ಮಹಿಳೆಯರ ಆಯೋಗಗಳ ಜೊತೆಗೆ ನ್ಯಾಯಾಂಗ, ಪೊಲೀಸರು ಸರಿಯಾಗಿ ಕಾರ್ಯನಿರ್ವಹಿಸಬೇಕು. ಅವುಗಳು ವಿಫಲವಾದಾಗ ಜನರು ಕಾನೂನು ಮತ್ತು ಸುವ್ಯವಸ್ಥೆ ಪ್ರಕ್ರಿಯೆ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುತ್ತಾರೆ” ಎಂದಿದ್ದಾರೆ.


ಇದನ್ನೂ ಓದಿ: ಹತ್ರಾಸ್: ಪ್ರಕರಣವನ್ನು ಶಾಶ್ವತವಾಗಿ ಮುಗಿಸಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿತ್ತು-ಸತ್ಯಶೋಧನಾ ಸಮಿತಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...