Homeಚಳವಳಿಹತ್ರಾಸ್ ಪ್ರಕರಣ:’ಸೇಡು ತೀರಿಸಿಕೊಳ್ಳುವುದಲ್ಲ, ಬದಲಾವಣೆ ಬೇಕು’; ಮಹಿಳಾ ಸಂಘಟನೆಗಳು

ಹತ್ರಾಸ್ ಪ್ರಕರಣ:’ಸೇಡು ತೀರಿಸಿಕೊಳ್ಳುವುದಲ್ಲ, ಬದಲಾವಣೆ ಬೇಕು’; ಮಹಿಳಾ ಸಂಘಟನೆಗಳು

ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋದ ಇತ್ತೀಚಿನ ಕ್ರೈಮ್ ಇನ್ ಇಂಡಿಯಾ ವರದಿಯು 2019 ರಲ್ಲಿ ಪ್ರತಿದಿನ 88 ಅತ್ಯಾಚಾರ ಪ್ರಕರಣಗಳು ನಡೆದಿವೆ ಎಂದು ವರದಿ ಮಾಡಿದೆ.

- Advertisement -
- Advertisement -

ಉತ್ತರಪ್ರದೇಶದ ಹತ್ರಾಸ್‌ನಲ್ಲಿ 19 ವರ್ಷದ ದಲಿತ ಯುವತಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ, ತೀವ್ರವಾಗಿ ಗಾಯಗೊಂಡು ಗಾಯಗೊಂಡು ಮೃತರಾಗಿ ಸೆಪ್ಟೆಂಬರ್ 29ಕ್ಕೆ ಒಂದು ತಿಂಗಳು ತುಂಬಿದೆ. ಈ ಘಟನೆ ಹಿನ್ನೆಲೆ  29 ರಂದು ರಾಷ್ಟ್ರ ರಾಜಧಾನಿಯಲ್ಲಿ ವಿವಿಧ ಮಹಿಳಾ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಪ್ರತಿಭಟನಾ ನಿರತ ಮಹಿಳೆಯರು ದೇಶಾದ್ಯಂತದ ಮಹಿಳೆಯರಿಗೆ ಸುರಕ್ಷಿತ ವಾತಾವರಣ ನಿರ್ಮಿಸಬೇಕು, ಹತ್ರಾಸ್‌  ದಲಿತ ಸಂತ್ರಸ್ತೆಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು. ದೆಹಲಿಯ ಇನ್ನೊಂದೆಡೆ ದಲಿತ ಸಂಘಟನೆ ಆಯೋಜಿಸಿದ್ದ ಪ್ರತ್ಯೇಕ ಪ್ರತಿಭಟನೆಯಲ್ಲಿಯೂ ಇದೇ ರೀತಿಯ ಬೇಡಿಕೆಗಳನ್ನು ಇಡಲಾಗಿದೆ.

ಹತ್ರಾಸ್‌ನ 19 ವರ್ಷದ ದಲಿತ ಯುವತಿ ಮೇಲೆ ಸೆ.14 ರಂದು ನಾಲ್ವರು ಮೇಲ್ಜಾತಿಯ ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಸೆ.29 ರಂದು ಯುವತಿ ಸಾವನ್ನಪ್ಪಿದರು. ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ.

ಅಖಿಲ ಭಾರತ ಪ್ರಜಾಸತ್ಮಾತ್ಮಕ ಮಹಿಳಾ ಸಂಘ, ರಾಷ್ಟ್ರೀಯ ಮಹಿಳಾ ಒಕ್ಕೂಟ, ಅಖಿಲ ಭಾರತ ಪ್ರಗತಿಶೀಲ ಮಹಿಳಾ ಸಂಘ, ಪ್ರಗತಿಶೀಲ್ ಮಹಿಳಾ ಸಂಘಟನೆ, ಸತಾರ್ಕ್ ನಾಗರಿಕ್ ಸಂಘಟನ್ ಮತ್ತು ಇತರ ಸಂಘ ಸಂಸ್ಥೆಗಳು ಹಮ್ ಅಗರ್‌ ಊಟೆ ನಹೀ ತೋ(ನಾವೆದ್ದು ನಿಲ್ಲದಿದ್ದರೆ) ಬ್ಯಾನರ್‌ ಅಡಿಯಲ್ಲಿ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ಹತ್ರಾಸ್ ಕೇಸ್: ಅ.29ಕ್ಕೆ ದೇಶಾದ್ಯಂತ ಪ್ರತಿಭಟನೆಗೆ ಮಹಿಳಾ ಸಂಘಟನೆಗಳ ಕರೆ

“ನಾವೆದ್ದು ನಿಲ್ಲದಿದ್ದರೆ” ಎಂಬ ಆಂದೋಲನವನ್ನು ಪತ್ರಕರ್ತೆ, ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಅವರ ಹತ್ಯೆಯ ಮೂರನೇ ವರ್ಷದ ಹುತಾತ್ಮ ದಿನದಂದು ಪ್ರಾರಂಭಿಸಲಾಗಿದೆ. ಈ ಆಂದೋಲನ ಈಗ ದೇಶಾದ್ಯಂತ 400 ಕ್ಕೂ ಹೆಚ್ಚು ಮಹಿಳಾ ಗುಂಪುಗಳನ್ನು ಹೊಂದಿದೆ. ಇದರಲ್ಲಿ LGBTQI ಸಂಘಟನೆಗಳು ಮತ್ತು ಮಾನವ ಹಕ್ಕುಗಳ ಸಂಘಟನೆಗಳನ್ನು ಒಳಗೊಂಡಿದೆ.

ದೆಹಲಿಯ ಮಂಗೋಲ್ಪುರಿ, ದಕ್ಷಿಣ ದೆಹಲಿಯ ಜಗದಾಂಬಾ ಕ್ಯಾಂಪ್, ಈಶಾನ್ಯ ದೆಹಲಿಯ ಗುರ್ಮಂಡಿ, ನಿಜಾಮುದ್ದೀನ್ ಮತ್ತು ಕೈಗಾರಿಕಾ ಪಟ್ಟಣಗಳಾದ ನರೇಲಾ ಮತ್ತು ಬವಾನಾದಲ್ಲಿ ಸೇರಿದಂತೆ ದಿನವಿಡೀ ಪ್ರತಿಭಟನೆಗಳು ನಡೆದವು. ಪ್ರತಿಭಟನೆಯಲ್ಲಿ ಭಾಗವಹಿಸಿದವರಲ್ಲಿ ಬಹುತೇಕ ಮಂದಿ ಆರ್ಥಿಕವಾಗಿ ದುರ್ಬಲರಾಗಿದ್ದು, ಕಟ್ಟಡ ನಿರ್ಮಾಣ ಮತ್ತು ಗೃಹೋಪಯೋಗಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ.

“ಹತ್ರಾಸ್‌ನಲ್ಲಿ ಆ ಹುಡುಗಿಗೆ ಏನಾಯಿತೋ ಅದು ಯಾವುದೇ ದಿನವಾದರೂ ನಮಗೆ ಸಂಭವಿಸಬಹುದು. ಇಲ್ಲಿ ನಾನಿರುವ ಪ್ರದೇಶದಲ್ಲಿ ಬೀದಿ ದೀಪಗಳಿಲ್ಲ, ಗಂಡಸರು ಕುಡಿದು, ಅಸಭ್ಯವಾಗಿ ವರ್ತಿಸುತ್ತಾ, ನಮ್ಮೆಡೆ ನೋಡುತ್ತಾರೆ. ಇದು ನಾವು ದಿನನಿತ್ಯ ಅನುಭವಿಸುವ ಯಾತನೆಯಾಗಿದೆ” ಎಂದು ಪ್ರತಿಭಟನಾ ನಿರತ ಮಹಿಳೆ ಗೋಳು ತೋಡಿಕೊಂಡಿದ್ದಾರೆ.

PC:News Click

ಇದನ್ನೂ ಓದಿ: ಹೈಕೋರ್ಟ್ ಮೇಲ್ವಿಚಾರಣೆ ಮಾಡಲಿ: ಹತ್ರಾಸ್ CBI ತನಿಖೆ ಮೇಲ್ವಿಚಾರಣೆಗೆ ಸುಪ್ರೀಂ ನಕಾರ

2019 ರ ಸಮೀಕ್ಷೆಯ ಪ್ರಕಾರ, 40% ಕ್ಕೂ ಹೆಚ್ಚು ಮಹಿಳೆಯರು ಮನೆಯ ಹೊರಗಡೆ ಸುರಕ್ಷಿತರಾಗಿಲ್ಲ ಎಂದು  ವರದಿ ಮಾಡಿದೆ. ಜೊತೆಗೆ ಸಮೀಕ್ಷೆಯಲ್ಲಿ ಸುಮಾರು 80% ಜನರು ದೇಶದ ಮಹಿಳೆಯರಿಗೆ ಸುರಕ್ಷಿತ ವಾತಾವರಣವನ್ನು ಒದಗಿಸಲು ಅಧಿಕಾರಿಗಳು ಹೆಚ್ಚಿನದನ್ನು ಮಾಡಿಲ್ಲ ಎಂದು ತಿಳಿಸಿದ್ದಾರೆ. ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ (ಎನ್‌ಸಿಆರ್‌ಬಿ) ಯ ಇತ್ತೀಚಿನ ಕ್ರೈಮ್ ಇನ್ ಇಂಡಿಯಾ ವರದಿಯು 2019 ರಲ್ಲಿ ಪ್ರತಿದಿನ 88 ಅತ್ಯಾಚಾರ ಪ್ರಕರಣಗಳು ನಡೆದಿವೆ ಎಂದು ವರದಿ ಮಾಡಿದೆ.

ಆದ್ದರಿಂದ, “ಬದ್ಲಾವ್ ಚೈಹಿಯೆ, ಬದ್ಲಾ ನಹಿನ್” (ಬದಲಾವಣೆ ಬೇಕು, ಸೇಡು ತೀರಿಸಿಕೊಳ್ಳುವುದಲ್ಲ) ಎಂದು ಪ್ರತಿಭಟನೆಯ ಸಮಯದಲ್ಲಿ ಮಹಿಳೆಯರು ಘೋಷಣೆಗಳನ್ನು ಕೂಗಿದ್ದಾರೆ.

ಎಸ್‌ಎನ್‌ಎಸ್‌ನ ಸ್ಥಾಪಕರಾದ ಅಂಜಲಿ ಭಾರದ್ವಾಜ್ ಅವರು ದೇಶದಲ್ಲಿ ಮಹಿಳೆಯರ ಸುರಕ್ಷತೆಯ ನಿಟ್ಟಿನಲ್ಲಿ  ರಾಜ್ಯದ ವಿವಿಧ ಆಯೋಗಗಳ ಮಹತ್ವವನ್ನು ತಿಳಿಸಿದ್ದಾರೆ. “ಎಸ್‌ಸಿ, ಎಸ್‌ಟಿಗಳು ಮತ್ತು ಮಹಿಳೆಯರ ಆಯೋಗಗಳ ಜೊತೆಗೆ ನ್ಯಾಯಾಂಗ, ಪೊಲೀಸರು ಸರಿಯಾಗಿ ಕಾರ್ಯನಿರ್ವಹಿಸಬೇಕು. ಅವುಗಳು ವಿಫಲವಾದಾಗ ಜನರು ಕಾನೂನು ಮತ್ತು ಸುವ್ಯವಸ್ಥೆ ಪ್ರಕ್ರಿಯೆ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುತ್ತಾರೆ” ಎಂದಿದ್ದಾರೆ.


ಇದನ್ನೂ ಓದಿ: ಹತ್ರಾಸ್: ಪ್ರಕರಣವನ್ನು ಶಾಶ್ವತವಾಗಿ ಮುಗಿಸಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿತ್ತು-ಸತ್ಯಶೋಧನಾ ಸಮಿತಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...