Homeಕರೋನಾ ತಲ್ಲಣಬಿಹಾರ; ಕೊರೊನಾ ಸೋಂಕಿತರ ಪ್ರಮಾಣದಲ್ಲಿ ಇಳಿಕೆ, ತಜ್ಞರ ಅನುಮಾನ!

ಬಿಹಾರ; ಕೊರೊನಾ ಸೋಂಕಿತರ ಪ್ರಮಾಣದಲ್ಲಿ ಇಳಿಕೆ, ತಜ್ಞರ ಅನುಮಾನ!

ವೈದ್ಯಕೀಯ ಸಂಪನ್ಮೂಲಗಳ ಕೊರತೆ ಇರುವ ರಾಜ್ಯದಲ್ಲಿ, ಇಂತಹ ಅಂಕಿ-ಅಂಶಗಳು ಸತ್ಯವಾಗಿವೆಯೇ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರ ರಿಜೊ ಜಾನ್ ಪ್ರಶ್ನಿಸಿದ್ದಾರೆ.

- Advertisement -
- Advertisement -

ಬಿಹಾರದಲ್ಲಿ ಚುನಾವಣಾ ಪ್ರಚಾರಗಳಲ್ಲಿ ಸಮಾವೇಶಗೊಳ್ಳುತ್ತಿರುವ ಜನಸಮೂಹ ಯಾವ ಕೊರೊನಾ ನಿಬಂಧನೆಗಳನ್ನು ಅನುಸರಿಸುತ್ತಿಲ್ಲ. ಇದು ಚುನಾವಣಾ ಆಯೋಗದ ಗಮನಕ್ಕೂ ಬಂದಿದ್ದು, ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿದೆ. ಆದರೆ ಕೊರೊನಾ ಪ್ರಕರಣಗಳ ಸಂಖ್ಯೆ ಮಾತ್ರ ಇಳಿಮುಖವಾಗುತ್ತಿದೆ.

ಆದರೆ, ಇಷ್ಟೊಂದು ಮಟ್ಟದಲ್ಲಿ ಜನ ಸೇರುತ್ತಿದ್ದರೂ, ಮಾಸ್ಕ್‌ ಧರಿಸುವುದರಲ್ಲಿ, ದೈಹಿಕ ಅಂತರ ಪಾಲಿಸುವುದರಲ್ಲಿ ಕಾಳಜಿ ವಹಿಸದ, ಅತಿರೇಕದ ವರ್ತನೆ ತೋರುತ್ತಿದ್ದರೂ, ಕೊರೊನಾ ಪ್ರಕರಣಗಳು ಕಡಿಮೆ ಸಂಖ್ಯೆಯಲ್ಲಿ ವರದಿಯಾಗುತ್ತಿದೆ. ಇದು ಆರೋಗ್ಯ ತಜ್ಞರ ಅನುಮಾನಕ್ಕೆ ಕಾರಣವಾಗಿದೆ. ಬಿಹಾರದಲ್ಲಿ ವೈದ್ಯಕೀಯ ಸೌಕರ್ಯಗಳ ಕೊರತೆ ಹೆಚ್ಚಾಗಿದೆ.

ಬಿಹಾರದಲ್ಲೇ ಒಂದು ಕೋಟಿ ಜನರಿಗೆ ಕೋವಿಡ್‌ ಪರೀಕ್ಷೆಗಳನ್ನು ಮಾಡಲಾಗಿದೆ. ಪ್ರತಿದಿನ 1.5 ಲಕ್ಷ ಮಾದರಿಗಳನ್ನು ಪರೀಕ್ಷಿಸುತ್ತಿದೆ. ಆದರೆ, ಕಳೆದೆರಡು ತಿಂಗಳಲ್ಲಿ ಶೇ. 5ರಷ್ಟು ಕೊರೊನಾ ಪಾಸಿಟಿವ್‌ ಪ್ರಕರಣಗಳು ಮಾತ್ರ ವರದಿ ಆಗಿವೆ.

ರಾಜ್ಯದಲ್ಲಿ ನಿರಂತರವಾಗಿ ಪಾಸಿಟಿವ್ ಪ್ರಕರಣಗಳು ಕುಸಿತಗೊಂಡಿವೆ. ವೈದ್ಯಕೀಯ ಸಂಪನ್ಮೂಲಗಳ ಕೊರತೆ ಇರುವ ರಾಜ್ಯದಲ್ಲಿ, ಇಂತಹ ಅಂಕಿ-ಅಂಶಗಳು ಸತ್ಯವಾಗಿವೆಯೇ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರ ರಿಜೊ ಜಾನ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಉಚಿತ ಕೊರೊನಾ ಲಸಿಕೆ: ಬಿಹಾರದ ನಂತರ ಇದೀಗ ಮಧ್ಯಪ್ರದೇಶ!

ಸಾವಿರಾರು ಮಂದಿ ವಲಸೆ ಕಾರ್ಮಿಕರು ರಾಜ್ಯಕ್ಕೆ ಮರಳಿದ ನಂತರ ಆಗಸ್ಟ್‌ನಲ್ಲಿ ಕೊರೊನಾ‌ ಪ್ರಕರಣಗಳು ಹೆಚ್ಚಾಳದವಾದರೂ, ನಂತರದ ದಿನಗಳಲ್ಲಿ  ಸೋಂಕಿತರ ಸಂಖ್ಯೆಯಲ್ಲಿ ನಿರಂತರ ಕುಸಿತ ಕಾಣುತ್ತಿದೆ. ಸದ್ಯ ಬಿಹಾರದಲ್ಲಿ ಒಟ್ಟಾರೆ 2,14,946 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, 1076 ಮಂದಿ ಮೃತಪಟ್ಟಿದ್ದಾರೆ.

ಕೆಲವು ಸಮಯದಿಂದ ಮೈಕ್ರೊ-ಲೆವೆಲ್ ಕೋವಿಡ್ ಡೇಟಾವನ್ನು ಟ್ರ್ಯಾಕ್ ಮಾಡುತ್ತಿರುವ ಹಿರಿಯ ಆರೋಗ್ಯ ಸಂಶೋಧಕರು ಹೇಳುವಂತೆ, “ಭಾರತದ ಬಡ ರಾಜ್ಯಗಳಲ್ಲಿ ಒಂದಾದ ಬಿಹಾರದ ಮಾಹಿತಿಯು ಕಾಗದದ ಮೇಲೆ ತುಂಬಾ ಚೆನ್ನಾಗಿ ಕಾಣುತ್ತದೆ, ಅದು ನಂಬಲಾಗದ ಮಟ್ಟಿಗೆ. ಆದರೆ ಯಾವುದೇ ಕ್ರಮ ಕೈಗೊಳ್ಳುವ ಮುನ್ನ ನಮಗೆ ಹೆಚ್ಚಿನ ಮಾಹಿತಿ ಬೇಕು” ಎಂದು ತಿಳಿಸಿದ್ದಾರೆ.

“ಉದಾಹರಣೆಗೆ, ಸ್ಯಾಂಪಲ್ಸ್,  ಪರೀಕ್ಷಾ ಪ್ರಕಾರಗಳು, ಪರೀಕ್ಷೆಗಳನ್ನು ಮಾಡಿರುವ ಪ್ರದೇಶಗಳು ಇತ್ಯಾದಿಗಳ ಮೂಲಕ ಪರೀಕ್ಷಿಸುವುದು ನಮಗೆ ಸಹಾಯ ಮಾಡುತ್ತದೆ. ಈಗಿನಿಂದ ಸುಮಾರು ಎರಡು ವಾರಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗದಿದ್ದರೆ, ಅದು ಪವಾಡ ಅಥವಾ ವರದಿಯ ಅಡಿಯಲ್ಲಿ ವ್ಯವಸ್ಥಿತವಾಗಿರುತ್ತದೆ” ಎಂದು ತಿಳಿಸಿದ್ದಾರೆ.

ಬಿಹಾರವು ದೇಶದಲ್ಲಿ ಅತಿ ಕಡಿಮೆ ಸಾವಿನ ಪ್ರಮಾಣವನ್ನು ಹೊಂದಿದೆ. ಸಾವಿನ ಪ್ರಮಾಣ ಶೇಕಡಾ 0.52 ರಷ್ಟಿದ್ದು, ಇದು ರಾಷ್ಟ್ರೀಯ ಸರಾಸರಿ ಶೇಕಡಾ 1.51 ಕ್ಕಿಂತ ಕಡಿಮೆಯಾಗಿದೆ. ರಾಷ್ಟ್ರೀಯ ಆರೋಗ್ಯ ವಿವರ 2018 ರ ಮಾಹಿತಿಯ ಪ್ರಕಾರ, ಬಿಹಾರದಲ್ಲಿ ಒಟ್ಟು 40,649 ಅಲೋಪತಿ ವೈದ್ಯರಿದ್ದಾರೆ. ರಾಜ್ಯದ ಪ್ರತಿ 2,435 ಜನರಿಗೆ ಒಬ್ಬ ವೈದ್ಯ ಲಭ್ಯವಿದ್ದಾರೆ.


ಇದನ್ನೂ ಓದಿ : ಬಿಹಾರ ದುರ್ಗಾ ಮೂರ್ತಿ ವಿಸರ್ಜನೆಯಲ್ಲಿ ಗಲಾಟೆ, ಪೊಲೀಸರಿಂದ ಅಮಾನವೀಯ ದಾಳಿ: ಓರ್ವ ಬಲಿ, 27 ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...