Homeಕರೋನಾ ತಲ್ಲಣಬಿಹಾರ; ಕೊರೊನಾ ಸೋಂಕಿತರ ಪ್ರಮಾಣದಲ್ಲಿ ಇಳಿಕೆ, ತಜ್ಞರ ಅನುಮಾನ!

ಬಿಹಾರ; ಕೊರೊನಾ ಸೋಂಕಿತರ ಪ್ರಮಾಣದಲ್ಲಿ ಇಳಿಕೆ, ತಜ್ಞರ ಅನುಮಾನ!

ವೈದ್ಯಕೀಯ ಸಂಪನ್ಮೂಲಗಳ ಕೊರತೆ ಇರುವ ರಾಜ್ಯದಲ್ಲಿ, ಇಂತಹ ಅಂಕಿ-ಅಂಶಗಳು ಸತ್ಯವಾಗಿವೆಯೇ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರ ರಿಜೊ ಜಾನ್ ಪ್ರಶ್ನಿಸಿದ್ದಾರೆ.

- Advertisement -
- Advertisement -

ಬಿಹಾರದಲ್ಲಿ ಚುನಾವಣಾ ಪ್ರಚಾರಗಳಲ್ಲಿ ಸಮಾವೇಶಗೊಳ್ಳುತ್ತಿರುವ ಜನಸಮೂಹ ಯಾವ ಕೊರೊನಾ ನಿಬಂಧನೆಗಳನ್ನು ಅನುಸರಿಸುತ್ತಿಲ್ಲ. ಇದು ಚುನಾವಣಾ ಆಯೋಗದ ಗಮನಕ್ಕೂ ಬಂದಿದ್ದು, ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿದೆ. ಆದರೆ ಕೊರೊನಾ ಪ್ರಕರಣಗಳ ಸಂಖ್ಯೆ ಮಾತ್ರ ಇಳಿಮುಖವಾಗುತ್ತಿದೆ.

ಆದರೆ, ಇಷ್ಟೊಂದು ಮಟ್ಟದಲ್ಲಿ ಜನ ಸೇರುತ್ತಿದ್ದರೂ, ಮಾಸ್ಕ್‌ ಧರಿಸುವುದರಲ್ಲಿ, ದೈಹಿಕ ಅಂತರ ಪಾಲಿಸುವುದರಲ್ಲಿ ಕಾಳಜಿ ವಹಿಸದ, ಅತಿರೇಕದ ವರ್ತನೆ ತೋರುತ್ತಿದ್ದರೂ, ಕೊರೊನಾ ಪ್ರಕರಣಗಳು ಕಡಿಮೆ ಸಂಖ್ಯೆಯಲ್ಲಿ ವರದಿಯಾಗುತ್ತಿದೆ. ಇದು ಆರೋಗ್ಯ ತಜ್ಞರ ಅನುಮಾನಕ್ಕೆ ಕಾರಣವಾಗಿದೆ. ಬಿಹಾರದಲ್ಲಿ ವೈದ್ಯಕೀಯ ಸೌಕರ್ಯಗಳ ಕೊರತೆ ಹೆಚ್ಚಾಗಿದೆ.

ಬಿಹಾರದಲ್ಲೇ ಒಂದು ಕೋಟಿ ಜನರಿಗೆ ಕೋವಿಡ್‌ ಪರೀಕ್ಷೆಗಳನ್ನು ಮಾಡಲಾಗಿದೆ. ಪ್ರತಿದಿನ 1.5 ಲಕ್ಷ ಮಾದರಿಗಳನ್ನು ಪರೀಕ್ಷಿಸುತ್ತಿದೆ. ಆದರೆ, ಕಳೆದೆರಡು ತಿಂಗಳಲ್ಲಿ ಶೇ. 5ರಷ್ಟು ಕೊರೊನಾ ಪಾಸಿಟಿವ್‌ ಪ್ರಕರಣಗಳು ಮಾತ್ರ ವರದಿ ಆಗಿವೆ.

ರಾಜ್ಯದಲ್ಲಿ ನಿರಂತರವಾಗಿ ಪಾಸಿಟಿವ್ ಪ್ರಕರಣಗಳು ಕುಸಿತಗೊಂಡಿವೆ. ವೈದ್ಯಕೀಯ ಸಂಪನ್ಮೂಲಗಳ ಕೊರತೆ ಇರುವ ರಾಜ್ಯದಲ್ಲಿ, ಇಂತಹ ಅಂಕಿ-ಅಂಶಗಳು ಸತ್ಯವಾಗಿವೆಯೇ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರ ರಿಜೊ ಜಾನ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಉಚಿತ ಕೊರೊನಾ ಲಸಿಕೆ: ಬಿಹಾರದ ನಂತರ ಇದೀಗ ಮಧ್ಯಪ್ರದೇಶ!

ಸಾವಿರಾರು ಮಂದಿ ವಲಸೆ ಕಾರ್ಮಿಕರು ರಾಜ್ಯಕ್ಕೆ ಮರಳಿದ ನಂತರ ಆಗಸ್ಟ್‌ನಲ್ಲಿ ಕೊರೊನಾ‌ ಪ್ರಕರಣಗಳು ಹೆಚ್ಚಾಳದವಾದರೂ, ನಂತರದ ದಿನಗಳಲ್ಲಿ  ಸೋಂಕಿತರ ಸಂಖ್ಯೆಯಲ್ಲಿ ನಿರಂತರ ಕುಸಿತ ಕಾಣುತ್ತಿದೆ. ಸದ್ಯ ಬಿಹಾರದಲ್ಲಿ ಒಟ್ಟಾರೆ 2,14,946 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, 1076 ಮಂದಿ ಮೃತಪಟ್ಟಿದ್ದಾರೆ.

ಕೆಲವು ಸಮಯದಿಂದ ಮೈಕ್ರೊ-ಲೆವೆಲ್ ಕೋವಿಡ್ ಡೇಟಾವನ್ನು ಟ್ರ್ಯಾಕ್ ಮಾಡುತ್ತಿರುವ ಹಿರಿಯ ಆರೋಗ್ಯ ಸಂಶೋಧಕರು ಹೇಳುವಂತೆ, “ಭಾರತದ ಬಡ ರಾಜ್ಯಗಳಲ್ಲಿ ಒಂದಾದ ಬಿಹಾರದ ಮಾಹಿತಿಯು ಕಾಗದದ ಮೇಲೆ ತುಂಬಾ ಚೆನ್ನಾಗಿ ಕಾಣುತ್ತದೆ, ಅದು ನಂಬಲಾಗದ ಮಟ್ಟಿಗೆ. ಆದರೆ ಯಾವುದೇ ಕ್ರಮ ಕೈಗೊಳ್ಳುವ ಮುನ್ನ ನಮಗೆ ಹೆಚ್ಚಿನ ಮಾಹಿತಿ ಬೇಕು” ಎಂದು ತಿಳಿಸಿದ್ದಾರೆ.

“ಉದಾಹರಣೆಗೆ, ಸ್ಯಾಂಪಲ್ಸ್,  ಪರೀಕ್ಷಾ ಪ್ರಕಾರಗಳು, ಪರೀಕ್ಷೆಗಳನ್ನು ಮಾಡಿರುವ ಪ್ರದೇಶಗಳು ಇತ್ಯಾದಿಗಳ ಮೂಲಕ ಪರೀಕ್ಷಿಸುವುದು ನಮಗೆ ಸಹಾಯ ಮಾಡುತ್ತದೆ. ಈಗಿನಿಂದ ಸುಮಾರು ಎರಡು ವಾರಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗದಿದ್ದರೆ, ಅದು ಪವಾಡ ಅಥವಾ ವರದಿಯ ಅಡಿಯಲ್ಲಿ ವ್ಯವಸ್ಥಿತವಾಗಿರುತ್ತದೆ” ಎಂದು ತಿಳಿಸಿದ್ದಾರೆ.

ಬಿಹಾರವು ದೇಶದಲ್ಲಿ ಅತಿ ಕಡಿಮೆ ಸಾವಿನ ಪ್ರಮಾಣವನ್ನು ಹೊಂದಿದೆ. ಸಾವಿನ ಪ್ರಮಾಣ ಶೇಕಡಾ 0.52 ರಷ್ಟಿದ್ದು, ಇದು ರಾಷ್ಟ್ರೀಯ ಸರಾಸರಿ ಶೇಕಡಾ 1.51 ಕ್ಕಿಂತ ಕಡಿಮೆಯಾಗಿದೆ. ರಾಷ್ಟ್ರೀಯ ಆರೋಗ್ಯ ವಿವರ 2018 ರ ಮಾಹಿತಿಯ ಪ್ರಕಾರ, ಬಿಹಾರದಲ್ಲಿ ಒಟ್ಟು 40,649 ಅಲೋಪತಿ ವೈದ್ಯರಿದ್ದಾರೆ. ರಾಜ್ಯದ ಪ್ರತಿ 2,435 ಜನರಿಗೆ ಒಬ್ಬ ವೈದ್ಯ ಲಭ್ಯವಿದ್ದಾರೆ.


ಇದನ್ನೂ ಓದಿ : ಬಿಹಾರ ದುರ್ಗಾ ಮೂರ್ತಿ ವಿಸರ್ಜನೆಯಲ್ಲಿ ಗಲಾಟೆ, ಪೊಲೀಸರಿಂದ ಅಮಾನವೀಯ ದಾಳಿ: ಓರ್ವ ಬಲಿ, 27 ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...