Homeಅಂತರಾಷ್ಟ್ರೀಯಗುಡ್ ನ್ಯೂಸ್: ಬೊಲಿವಿಯಾದಲ್ಲಿ ಮಹಿಳಾ ಜನಪ್ರತಿನಿಧಿಗಳ ಸಂಖ್ಯೆ ಶೇ.50ಕ್ಕಿಂತಲೂ ಹೆಚ್ಚು!

ಗುಡ್ ನ್ಯೂಸ್: ಬೊಲಿವಿಯಾದಲ್ಲಿ ಮಹಿಳಾ ಜನಪ್ರತಿನಿಧಿಗಳ ಸಂಖ್ಯೆ ಶೇ.50ಕ್ಕಿಂತಲೂ ಹೆಚ್ಚು!

ರುವಾಂಡಾ ಸಂಸತ್ತಿನಲ್ಲಿ ಮಹಿಳಾ ಪ್ರಾತಿನಿಧ್ಯವು ಅತ್ಯುತ್ತಮ ದಾಖಲೆಯನ್ನು ಹೊಂದಿದೆ. ಅಲ್ಲಿ ಪ್ರಸ್ತುತ ಸುಮಾರು ಮೂರನೇ ಎರಡರಷ್ಟು ಸ್ಥಾನಗಳನ್ನು ಮಹಿಳೆಯರು ಹೊಂದಿದ್ದಾರೆ.

- Advertisement -
- Advertisement -

‘ಆಕಾಶದ ಅರ್ಧ ನಕ್ಷತ್ರಗಳು ನಾವು. ಸಿಡಿದರೆ ಅಗ್ನಿಯ ಕಿಡಿಗಳಾಗುವೆವು’ ಎಂಬುದು ಮಹಿಳಾ ಚಳವಳಿಯ ಘೋಷವಾಕ್ಯಗಳಲ್ಲೊಂದು. ಪ್ರಪಂಚದ ಜನಸಂಖ್ಯೆಯಲ್ಲಿ ಅರ್ಧದಷ್ಟಿರುವ ಮಹಿಳೆಯರು ಸಮಾಜಕ್ಕೆ ಸಮಾನ ಕೊಡುಗೆ ನೀಡಿದರೂ ಸಹ ಬಹುತೇಕ ಕ್ಷೇತ್ರಗಳಲ್ಲಿ ಅವರ ಪಾತ್ರಿನಿಧ್ಯ ತೀರಾ ಕಡಿಮೆ ಇದೆ. ಸಮಾಜ, ಸಂಪತ್ತು ಮತ್ತು ಸರ್ಕಾರಗಳಲ್ಲಿ ಸಮಪಾಲಿನ ಬೇಡಿಕೆಗೆ ಶತಮಾನದ ಇತಿಹಾಸವಿದ್ದರೂ ಸಹ ಅದು ಕನಸಾಗಿಯೇ ಉಳಿದಿದೆ. ಇಂತಹ ಸಂಕಷ್ಟದ ದಿನಗಳಲ್ಲಿಯು ಸಹ ಕೆಲ ಬೆಳಕಿನ ಕಿರಣಗಳು ಗೋಚರಿಸುತ್ತಿವೆ. ಅಂತಹ ಒಂದು ವಿಶೇಷ ವರದಿ ಇಲ್ಲಿದೆ.

ಬೊಲಿವಿಯಾದಲ್ಲಿ ನಡೆದ ಇತ್ತೀಚಿನ ಚುನಾವಣೆಗಳಲ್ಲಿ ಸಮಾಜವಾದಿ ಪಕ್ಷಗಳನ್ನು ಮತ್ತೆ ಅಧಿಕಾರಕ್ಕೆ ತಂದಿರುವುದು ಮಾತ್ರವಲ್ಲದೆ ಅಲ್ಲಿನ ಎರಡೂ ಸದನಗಳಲ್ಲಿ ಪುರುಷರಿಗಿಂತ ಮಹಿಳೆಯರೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಬೊಲಿವಿಯಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಇವೊ ಮೊರೇಲ್ಸ್ ರವರ ಮೂವ್‌ಮೆಂಟ್ ಫಾರ್ ಸೋಷಿಯಲಿಸಂ (ಎಂಎಎಸ್) ಪಕ್ಷ ಭರ್ಜರಿ ಗೆಲುವು ಸಾಧಿಸಿದೆ. ಟೆಲಿಸೂರ್ ವರದಿ ಪ್ರಕಾರ, ಸೆನೆಟ್‌ನಲ್ಲಿ 21 ಸ್ಥಾನಗಳೊಂದಿಗೆ MAS ಬಹುಮತ ಸಾಧಿಸಿದೆ, ಅದರಲ್ಲಿ 10 ಸ್ಥಾನಗಳನ್ನು ಮಹಿಳೆಯರು ಆಕ್ರಮಿಸಿಕೊಂಡಿದ್ದಾರೆ. ಅದೇ ರೀತಿ ಸಿವಿಕ್ ಕಮ್ಯೂನಿಟಿ ಪಕ್ಷವು 11 ಸ್ಥಾನಗಳನ್ನು ಗೆದ್ದರೆ, ಅದರಲ್ಲಿ 07 ಮಹಿಳೆಯರು ಸೇರಿದ್ದಾರೆ. ಕ್ರಿಮೋಸ್ (ವಿ ಬಿಲೀವ್) ಪಕ್ಷವು ನಾಲ್ಕು ಸ್ಥಾನಗಳನ್ನು ಗೆದ್ದಿದ್ದು, ಅವರಲ್ಲಿ ಇಬ್ಬರು ಮಹಿಳೆಯಾಗಿದ್ದಾರೆ.

ಅಲ್ಲಿಗೆ ಸೆನಟ್ ನಲ್ಲಿ ಒಟ್ಟು 36 ಸ್ಥಾನಗಳಲ್ಲಿ 19 ಸ್ಥಾನಗಳು ಮಹಿಳೆಯರ ಪಾಲಾಗಿವೆ. ಮತ್ತೊಂದು ವಿಧಾನಸಭಾ ಚೆಂಬರ್‌ನಲ್ಲಿ ಶೇ.48.33 ರಷ್ಟು ಸ್ಥಾನಗಳಲ್ಲಿ ಪುರುಷರು ಜಯಗಳಿಸಿದರೆ, ಶೇ. 51.6 ರಷ್ಟು ಸೀಟುಗಳನ್ನು ಮಹಿಳೆಯರು ಹೊಂದಿದ್ದಾರೆ. ಸೆನೆಟ್ ಮತ್ತು ಚೇಂಬರ್ ಎರಡೂ ಸೇರಿದರೆ ಬೊಲಿವಿಯಾ ಮಹಿಳಾ ಪ್ರತಿನಿಧಿಗಳ ಸಂಖ್ಯೆ ಶೇ.53.1%.

ಇದು ಹೇಗಾಯಿತು?

ಬೊಲಿವಿಯನ್ ರಾಜಕೀಯದಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಿರುವುದು ಹೊಸ ವಿದ್ಯಮಾನವಲ್ಲ. 2014 ರ ಚುನಾವಣೆಗಳು ಐತಿಹಾಸಿಕವಾಗಿದ್ದು, ಆಗಲೇ ವಿಧಾನಸಭೆಯಲ್ಲಿ 51% ಮಹಿಳಾ ಪ್ರಾತಿನಿಧ್ಯವಿದ್ದಿತು.

ಬೊಲಿವಿಯಾದ ರಾಜಕೀಯ ಸಂವಿಧಾನದ (2009) ಅನುಮೋದನೆ, ವಿವಿಧ ಮಹಿಳಾ ಚಳುವಳಿಗಳ ವ್ಯಾಪಕ ಮತ್ತು ನಿರಂತರ ಭಾಗವಹಿಸುವಿಕೆ, ಸಮಾನತೆ ಮತ್ತು ಪರ್ಯಾಯ ತತ್ವಗಳಿಗೆ ಹೆಚ್ಚಿನ ಮಾನ್ಯತೆಯು  ಮಹಿಳೆಯರು ಮತ್ತು ಪುರುಷರ ನಡುವೆ ಸಮಾನ ಭಾಗವಹಿಸುವಿಕೆಯನ್ನು ಬಲಪಡಿಸಲು ದಾರಿ ಮಾಡಿಕೊಟ್ಟವು. 32 ವರ್ಷಗಳ ಪ್ರಜಾಪ್ರಭುತ್ವದ ನಂತರ 166 ವಿಧಾನಸಭಾ ಸದಸ್ಯರಲ್ಲಿ 82 ಮಹಿಳೆಯರ ಆಯ್ಕೆ ಬೊಲಿವಿಯನ್ ಇತಿಹಾಸದಲ್ಲಿಯೇ ಅತಿ ಹೆಚ್ಚು. 1982 ರಲ್ಲಿ ದೇಶದ ಶಾಸಕಾಂಗದಲ್ಲಿ ಶೇಕಡಾ 2 ರಷ್ಟು ಮಹಿಳಾ ಪ್ರತಿನಿಧಿಗಳನ್ನು ಹೊಂದಿರಲಿಲ್ಲ ಎಂದರೆ ನೀವು ನಂಬಲೇಬೇಕು.

ಅತಿ ಹೆಚ್ಚು ಮಹಿಳಾ ಪ್ರಾತಿನಿದ್ಯ ಹೊಂದಿರುವ ಇತರ ದೇಶಗಳು

ಅಂತರ-ಸಂಸದೀಯ ಒಕ್ಕೂಟ ಮತ್ತು ವಿಶ್ವಸಂಸ್ಥೆಯ ರಾಜಕೀಯದಲ್ಲಿ ಮಹಿಳೆಯರು- 2020 ನಕ್ಷೆಯ ಪ್ರಕಾರ, ಅತಿ ಹೆಚ್ಚು ಮಹಿಳಾ ಜನಪ್ರತಿನಿಧ್ಯದ ದೃಷ್ಟಿಯಿಂದ ಬೊಲಿವಿಯಾವು ರುವಾಂಡಾ ಮತ್ತು ಕ್ಯೂಬಾ ದೇಶಗಳ ನಂತರ ವಿಶ್ವದ ಮೂರನೇ ಸ್ಥಾನದಲ್ಲಿದೆ.

ರುವಾಂಡಾ ಸಂಸತ್ತಿನಲ್ಲಿ ಮಹಿಳಾ ಪ್ರಾತಿನಿಧ್ಯವು ಅತ್ಯುತ್ತಮ ದಾಖಲೆಯನ್ನು ಹೊಂದಿದೆ. ಅಲ್ಲಿ ಪ್ರಸ್ತುತ ಸುಮಾರು ಮೂರನೇ ಎರಡರಷ್ಟು ಸ್ಥಾನಗಳನ್ನು ಮಹಿಳೆಯರು ಹೊಂದಿದ್ದಾರೆ.

ಕ್ಯೂಬಾದಲ್ಲಿಯೂ ಸಹ 53.2% ಮಹಿಳಾ ಪ್ರತಿನಿಧಿಗಳಿದ್ದಾರೆ. ಮೂರನೇ ಸ್ಥಾನದಲ್ಲಿ ಬೊಲಿವಿಯಾ (53.1%) ಇದೆ. ನಂತರದ ಸ್ಥಾನಗಳಲ್ಲಿ ಮೆಕ್ಸಿಕೊ (48.2%), ಗ್ರೆನಡಾ (46.7%), ನಿಕರಾಗುವಾ (45.7%), ಕೋಸ್ಟರಿಕಾ (45.6%), ನಮೀಬಿಯಾ (46.2%), ದಕ್ಷಿಣ ಆಫ್ರಿಕಾ (42.7%) ಮತ್ತು ಸ್ವೀಡನ್ (46.1%) ಇವೆ.

ನಾರ್ಡಿಕ್ ದೇಶಗಳ ಗುಂಪು 42.3% ಸ್ಥಾನಗಳೊಂದಿಗೆ ಮಹಿಳೆಯರ ಪ್ರಾತಿನಿಧ್ಯದಲ್ಲಿ ಮುಂಚೂಣಿಯಲ್ಲಿದೆ. ಅಮೆರಿಕ (30.3%), ಯುರೋಪ್ (26.5%), ಮತ್ತು ಆಫ್ರಿಕಾ ದೇಶಗಳಲ್ಲಿ (23.8%) ಮಹಿಳಾ ಪ್ರಾತಿನಿಧ್ಯವಿದೆ. ಮಹಿಳೆಯರ ಪ್ರಾತಿನಿಧ್ಯದಲ್ಲಿ ಏಷ್ಯಾ (19.7%) ಮತ್ತು ಅರಬ್ ರಾಜ್ಯಗಳು (18.7%) ಜಾಗತಿಕ ಸರಾಸರಿಗಿಂತ ಹಿಂದುಳಿದಿವೆ. ಆದರೆ ಪೆಸಿಫಿಕ್ ರಾಷ್ಟ್ರಗಳು (15.5%) ಅತ್ಯಂತ ಕೆಟ್ಟ ದಾಖಲೆಯನ್ನು ಹೊಂದಿವೆ.

ರೈತರು, ಮಹಿಳೆಯರು, ಆದಿವಾಸಿಗಳು, ವಿವಿಧ ಸಮುದಾಯದ ಮುಖಂಡರು, ಶಿಕ್ಷಣ ತಜ್ಞರಂತಹ ವೈವಿಧ್ಯಮಯ ಕ್ಷೇತ್ರಗಳ ವ್ಯಕ್ತಿಗಳ ಪ್ರಾತಿನಿಧ್ಯವು ಹೆಚ್ಚು ಸಮಾನ ಸಮಾಜದ ಅಭಿವೃದ್ಧಿಯನ್ನು ಖಾತ್ರಿಗೊಳಿಸುತ್ತದೆ. ಮಹಿಳೆಯರ ಮೇಲಿನ ದಬ್ಬಾಳಿಕೆ ಮತ್ತು ಲಿಂಗ ಆಧಾರಿತ ಹಿಂಸಾಚಾರವನ್ನು ತಡೆಯಲು ನಿಯಮಗಳನ್ನು ರೂಪಿಸಲು ಮಹಿಳೆಯರ ಪ್ರಾತಿನಿಧ್ಯ ಅಗತ್ಯವಾಗಿದೆ.


ಇದನ್ನೂ ಓದಿ: ಸ್ವಿಟ್ಜರ್ ಲೆಂಡ್ ನ ಲಕ್ಷಾಂತರ ಮಹಿಳೆಯರು ಒಮ್ಮೆಗೆ ಬೀದಿಗಿಳಿದಿದ್ದು ಏಕೆ ಗೊತ್ತಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...