Homeಮುಖಪುಟಪುಲ್ವಾಮಾ ದಾಳಿಯ ಹಿಂದಿನ ಸತ್ಯ ಬಹಿರಂಗಗೊಂಡಿದೆ: ಪ್ರಧಾನಿ ಮೋದಿ

ಪುಲ್ವಾಮಾ ದಾಳಿಯ ಹಿಂದಿನ ಸತ್ಯ ಬಹಿರಂಗಗೊಂಡಿದೆ: ಪ್ರಧಾನಿ ಮೋದಿ

ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮವಾರ್ಷಿಕೋತ್ಸವದ ಹಿನ್ನೆಲೆ, ಗುಜರಾತ್‌ನ ಕೆವಾಡಿಯಾದಲ್ಲಿನ ಏಕತಾ ಪ್ರತಿಮೆಗೆ ನಮನ ಸಲ್ಲಿಸಿದರು.

- Advertisement -
- Advertisement -

ಪಾಕಿಸ್ತಾನದ ಸಂಸತ್ತಿನ ಹೇಳಿಕೆಗಳ ನಂತರ ಪುಲ್ವಾಮಾ ಭಯೋತ್ಪಾದಕ ದಾಳಿಯ ಹಿಂದಿನ ಸತ್ಯ ಬಹಿರಂಗಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. ಕಳೆದ ವರ್ಷ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) 40 ಸೈನಿಕರನ್ನು ಪುಲ್ವಾಮಾದಲ್ಲಿ ಹತ್ಯೆಗೈಯಲಾಗಿತ್ತು.

“ಪುಲ್ವಾಮಾ ದಾಳಿಯ ಸಮಯದಲ್ಲಿ ಭದ್ರತಾ ಸಿಬ್ಬಂದಿಯ ತ್ಯಾಗದ ಬಗ್ಗೆ ಕೆಲವರು ದುಃಖಿತರಾಗಿರಲಿಲ್ಲ ಎಂಬುದನ್ನು ದೇಶ ಎಂದಿಗೂ ಮರೆಯಲು ಸಾಧ್ಯವಿಲ್ಲ. ವಿರೋಧ ಪಕ್ಷದವರು ಪುಲ್ವಾಮಾ ದಾಳಿಯಲ್ಲೂ ರಾಜಕೀಯ ಲಾಭವನ್ನು ಹುಡುಕುತ್ತಿದ್ದಾರೆಂದು ನನಗೆ ತಿಳಿದಿತ್ತು. ಹಾಗಾಗೀ ನಾನು ಎಲ್ಲಾ ವಿವಾದಗಳಿಂದ ದೂರವಿದ್ದು, ಎಲ್ಲಾ ಆರೋಪಗಳನ್ನು ಮೌನವಾಗಿ ಸಹಿಸಿಕೊಂಡಿದೆ”ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

’ನೆರೆಯ ದೇಶವು ತನ್ನ ಸಂಸತ್ತಿನಲ್ಲಿ ಪುಲ್ವಾಮಾ ದಾಳಿಯ ಜವಾಬ್ದಾರಿಯನ್ನು ಒಪ್ಪಿಕೊಂಡ ನಂತರ, ನಮ್ಮ ಕಷ್ಟದ ಸಮಯದಲ್ಲಿ ಕೊಳಕು ರಾಜಕೀಯವನ್ನು ಮಾಡಿದವರ ನಿಜ ಸ್ವರೂಪ ಬಹಿರಂಗವಾಗಿದೆ. ರಾಷ್ಟ್ರದ ಹಿತದೃಷ್ಟಿಯಿಂದ ಇಂತಹ ರಾಜಕೀಯ ಮಾಡದಂತೆ ನಾನು ವಿರೋಧ ಪಕ್ಷಗಳಿಗೆ ವಿನಂತಿಸುತ್ತೇನೆ, ”ಎಂದು ಪ್ರಧಾನಿ ಹೇಳಿದರು.

ಇದನ್ನೂ ಓದಿ: ಪ್ರಧಾನಿ ಮೋದಿ, ಅಂಬಾನಿ, ಅದಾನಿ ಪ್ರತಿಮೆ ಸುಟ್ಟು ಕೃಷಿ ಮಸೂದೆಗಳಿಗೆ ರೈತರ ವಿರೋಧ!

“ಈ ಪಕ್ಷಗಳು ತಮ್ಮ ಗುರಿಗಳನ್ನು ಸಾಧಿಸುವಲ್ಲಿ ಭಾರತ ವಿರೋಧಿ ಶಕ್ತಿಗಳಿಗೆ ಸಹಾಯ ಮಾಡುತ್ತಿವೆ. ವಿರೋಧ ಪಕ್ಷಗಳು ದೇಶಕ್ಕೆ ಅಥವಾ ಅವರ ಪಕ್ಷಕ್ಕೆ ಯಾವುದೇ ಒಳ್ಳೆಯದನ್ನು ಮಾಡುವುದಿಲ್ಲ” ಎಂದು ಆಕ್ರೊಶ ಹೊರಹಾಕಿದ್ದಾರೆ.

“ನಾವು ಇತರರಿಗೆ ಒಳ್ಳೆಯದನ್ನು ಮಾಡಿದಾಗ ಮಾತ್ರ ನಮಗೆ ಒಳ್ಳೆಯದಾಗುತ್ತದೆ ಎಂಬುದನ್ನು ನಾವು ನೆನಪಿಟ್ಟುಕೊಳ್ಳಬೇಕು. ಸರ್ದಾರ್ ಪಟೇಲ್ ಕಲ್ಪಿಸಿದಂತೆಯೇ ಭಾರತವನ್ನು ಸದೃ , ಸ್ವತಂತ್ರ ಮತ್ತು ಸ್ವಾವಲಂಬಿಗಳನ್ನಾಗಿ ಮಾಡಲು ನಾವೆಲ್ಲರೂ ಕೆಲಸ ಮಾಡಬೇಕು ”ಎಂದು ಪ್ರಧಾನಿ ಮೋದಿ ಹೇಳಿದರು.

‘ಇಂದು ವಿಶ್ವದ ಎಲ್ಲಾ ದೇಶಗಳು ಭಯೋತ್ಪಾದನೆ ವಿರುದ್ಧ ಹೋರಾಡಲು ಒಂದಾಗಬೇಕಿದೆ. ಭಯೋತ್ಪಾದನೆ ಮತ್ತು ಹಿಂಸಾಚಾರದಿಂದ ಯಾರಿಗೂ ಪ್ರಯೋಜನವಿಲ್ಲ. ಭಾರತ ನಿರಂತರವಾಗಿ ಭಯೋತ್ಪಾದನೆ ವಿರುದ್ಧ ಹೋರಾಡುತ್ತಿದೆ’ ಎಂದರು.

ಇದಕ್ಕೂ ಮುನ್ನ, ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮವಾರ್ಷಿಕೋತ್ಸವದ ಹಿನ್ನೆಲೆ, ಗುಜರಾತ್‌ನ ಕೆವಾಡಿಯಾದಲ್ಲಿನ ಏಕತಾ ಪ್ರತಿಮೆಗೆ ನಮನ ಸಲ್ಲಿಸಿದರು. ಬಳಿಕ ‘ರಾಷ್ಟ್ರೀಯ ಏಕತಾ ದಿವಸ’ ಅಂಗವಾಗಿ ನಡೆದ ಸೇನಾಪಡೆಗಳ ಪಥಸಂಚಲನವನ್ನು ವೀಕ್ಷಿಸಿದರು.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕ್ ಸದನದಲ್ಲಿ ’ಮೋದಿ ಮೋದಿ’ ಎಂದು ಘೋಷಣೆ ಹಾಕಲಾಗುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...