Homeಚಳವಳಿಮಹಿಳೆಯರು ಕೆಲಸಕ್ಕೆ ಹೋಗಿದ್ದರಿಂದ METOO ಆರಂಭ: ಮುಖೇಶ್ ಖನ್ನಾ ಹೇಳಿಕೆಗೆ ತೀವ್ರ ವಿರೋಧ

ಮಹಿಳೆಯರು ಕೆಲಸಕ್ಕೆ ಹೋಗಿದ್ದರಿಂದ METOO ಆರಂಭ: ಮುಖೇಶ್ ಖನ್ನಾ ಹೇಳಿಕೆಗೆ ತೀವ್ರ ವಿರೋಧ

ಪುರುಷ ಮಾಡಿದ್ದನ್ನೆಲ್ಲಾ ನಾನೂ ಮಾಡುತ್ತೇನೆ ಎಂದು ಮಹಿಳೆ ಹೇಳಲು ಶುರು ಮಾಡಿದ್ದರಿಂದಲೇ ಸಮಸ್ಯೆ ಶುರುವಾಗಿದೆ. ಆದರೆ ಹಾಗಾಗಲ್ಲ. ಮಹಿಳೆ ಮಹಿಳೆಯೇ, ಪುರುಷ ಪುರುಷನೇ - ಮುಖೇಶ್​ ಖನ್ನಾ

- Advertisement -
- Advertisement -

ಹಿಂದಿ ಕಿರುತೆರೆಯ ಶಕ್ತಿಮಾನ್ ಮತ್ತು ಮಹಾಭಾರತ ಧಾರವಾಹಿಗಳಿಂದ ಹೆಸರುವಾಸಿಯಾದ ನಟ ಮುಖೇಶ್ ಖನ್ನಾ, ಮಹಿಳೆಯರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆಗೆ ಗುರಿಯಾಗುತ್ತಿದ್ದಾರೆ.

“#MeToo ಚಳುವಳಿ ಪ್ರಾರಂಭವಾಗಲು ಕಾರಣ ಮಹಿಳೆಯರು ತಮ್ಮನ್ನು ಪುರುಷರಿಗೆ ಸಮಾನರು ಎಂದು ಭಾವಿಸಲು ಪ್ರಾರಂಭಿಸಿ ಕೆಲಸಕ್ಕೆ ಹೋಗಲು ಶುರು ಮಾಡಿದ್ದು ಎಂದಿದ್ದಾರೆ. ಮಹಿಳೆಯ ಕೆಲಸ ಮನೆ ನಿಭಾಯಿಸುವುದು. ಮಹಿಳೆಯೇ ಬೇರೆ, ಪುರುಷರೇ ಬೇರೆ ಎಂದಿದ್ದಾರೆ.

ಫಿಲ್ಮಿ ಚಾರ್ಚಾಗೆ ನೀಡಿದ ಇತ್ತೀಚಿನ ಸಂದರ್ಶನವೊಂದರ ಅವರ ಮಾತುಗಳಿರುವ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವೀಡಿಯೊದಲ್ಲಿ, “ಮಹಿಳೆಯರು ಕೆಲಸ ಮಾಡಲು ಪ್ರಾರಂಭಿಸಿದಾಗ #MeToo ಸಮಸ್ಯೆ ಪ್ರಾರಂಭವಾಯಿತು” ಎಂದು ನಟ ಮುಖೇಶ್ ಖನ್ನಾ ಹೇಳುತ್ತಾರೆ.

ಇದನ್ನೂ ಓದಿ: ತನ್ನ ಮೇಲಿನ METOO ಆರೋಪ ಸುಳ್ಳು ಮತ್ತು ದುರುದ್ದೇಶಪೂರಿತ ಎಂದ ಅನುರಾಗ್ ಕಶ್ಯಪ್

“ಮನೆಯಲ್ಲಿ ತಾಯಿ ಇಲ್ಲದೆ ಮಕ್ಕಳು ಕಷ್ಟಪಡುತ್ತಾರೆ. ಪುರುಷ ಮಾಡಿದ್ದನ್ನೆಲ್ಲಾ ನಾನೂ ಮಾಡುತ್ತೇನೆ ಎಂದು ಮಹಿಳೆ ಹೇಳಲು ಶುರು ಮಾಡಿದ್ದರಿಂದಲೇ ಸಮಸ್ಯೆ ಶುರುವಾಗಿದೆ. ಆದರೆ ಹಾಗಾಗಲ್ಲ. ಮಹಿಳೆ ಮಹಿಳೆಯೇ, ಪುರುಷ ಪುರುಷನೇ ಎಂದು ಮುಖೇಶ್​ ಖನ್ನಾ ಮಾತಾಡಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆ ವ್ಯಕ್ತವಾಗಿದೆ.

ಟ್ವಿಟರ್ ಬಳಕೆದಾರರೊಬ್ಬರು, “ಶಕ್ತಿಮಾನ್‌ನ ದೊಡ್ಡ ದೌರ್ಬಲ್ಯ ಅವನ ಮನೋಧರ್ಮ ಎಂದು ತಿಳಿದಿರಲಿಲ್ಲ” ಎಂದಿದ್ದಾರೆ.

ಬಾಲ್ಯದಲ್ಲಿ ಆರಾಧಿಸುತ್ತಿದ್ದ ಸೂಪರ್​ಹೀರೋ ಮುಖೇಶ್ ಖನ್ನಾ ಈ ರೀತಿಯ ಆಲೋಚನೆಗಳನ್ನ ಹೊಂದಿದ್ದಾರಾ? ಅಂತ ಕಮೆಂಟ್​ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನೊಬ್ಬ ನೆಟ್ಟಿಗರು ’ ನನ್ನ ಬಾಲ್ಯದ ಅನೇಕ ಅಮೂಲ್ಯ ಸಮಯಗಳು ಶಕ್ತಿಮಾನ್ ವೀಕ್ಷಣೆಯಲ್ಲಿ ವ್ಯರ್ಥವಾಯಿತು ಎಂಬ ಅಂಶವನ್ನು ಈಗ ನೋವಿನಿಂದ ಅರಿತುಕೊಂಡೆ” ಎಂದಿದ್ದಾರೆ.

ಇದನ್ನೂ ಓದಿ: #Metoo ಅಭಿಯಾನ: ದಿಟ್ಟದನಿಗಳಿಗೆ ಬೆಂಬಲ ಇನ್ನಷ್ಟು ಆಳ, ಅಗಲ ವಿಸ್ತಾರಗೊಳ್ಳಲಿ ಎಂಬ ಆಶಯ!

ಮುಖೇಶ್ ಖನ್ನಾ ವಿವಾದಾತ್ಮಕ ಹೇಳಿಕೆಗೆ ಹಲವು ಮಂದಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ಮಹಿಳೆಯರು ತಮ್ಮ ಮೇಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ಬಹಿರಂಗವಾಗಿ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಳ್ಳುವ ಮೂಲಕ ಮೀ ಟೂ ಅಭಿಯಾನದ ಬಗ್ಗೆ ಇಂತಹ ಹೇಳಿಕೆ ನೀಡಿರುವ ನಟನ ಹೇಳಿಕೆ ವ್ಯಾಪಕ ಖಂಡನೆಗೆ ಗುರಿಯಾಗಿದೆ.

ಇತ್ತೀಚೆಗೆ, ಮುಖೇಶ್ ಖನ್ನಾ ಕಪಿಲ್ ಶರ್ಮಾ ಶೋ ಬಗ್ಗೆ ಟೀಕೆ ಮಾಡಿ ವಿವಾದದ ಕೇಂದ್ರ ಬಿಂದುವಾಗಿದ್ದರು. ಶೋನಲ್ಲಿ ಭಾಗವಹಿಸಲು ನಿರಾಕರಿಸಿ, ಶೋ ಡಬಲ್ ಮೀನಿಂಗ್ ಪದಗಳಿಂದ ಕೂಡಿದೆ, ಪ್ರತಿ ಕ್ಷಣದಲ್ಲೂ ಅಶ್ಲೀಲತೆಯತ್ತ ತಿರುಗುತ್ತದೆ ಎಂದೆಲ್ಲಾ ಹೇಳಿಕೆ ನೀಡಿದ್ದರು.


ಇದನ್ನೂ ಓದಿ: ಸಾಮಾಜಿಕ ಹೋರಾಟದಲ್ಲಿ ಮಹಿಳೆಯ ಪಾತ್ರ ಬಿಂಬಿಸುವ ಚಿತ್ರ ‘ಆಕ್ಟ್- 1978’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...