Homeಮುಖಪುಟರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಶುಭಾಶಯ ತಿಳಿಸಿದ ಮೋದಿ: ಜಾಲತಾಣಿಗರ ಪ್ರತಿಕ್ರಿಯೆ ಏನು?

ರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಶುಭಾಶಯ ತಿಳಿಸಿದ ಮೋದಿ: ಜಾಲತಾಣಿಗರ ಪ್ರತಿಕ್ರಿಯೆ ಏನು?

ನೀವು ಪ್ರಾಥಿಸುವುದನ್ನು ಬಿಟ್ಟು, ನಮ್ಮ ತೆರಿಗೆ ನಮಗೆ ನೀಡಿ, ನೆರೆ ಪರಿಹಾರ ನೀಡಿ, ಮಹಾದಾಯಿ, ಕಾವೇರಿ ವಿಚಾರದಲ್ಲಿ ನಮಗೆ ನ್ಯಾಯ ಒದಗಿಸಿದರೆ ಸಾಕು ಎಂದು ಕಬ್ಬಿನಕೆರೆ ಅಶ್ವಿನ್ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಇಂದು ಕನ್ನಡ ರಾಜ್ಯೋತ್ಸವ. ಕನ್ನಡಿಗರ ಪಾಲಿನ ಹಬ್ಬ. ಕೊರೊನಾ ಕಾರಣದಿಂದ ಬೀದಿ-ಬೀದಿಯಲ್ಲಿ ಕೆಂಪು-ಹಳದಿ ಬಣ್ಣದೋಕುಳಿ, ಆಳೆತ್ತೆರದ ಬಾವುಟಗಳು ಹಾರದಿದ್ದರೂ ಕನ್ನಡಿಗರ ಮನದಲ್ಲಿ ಕನ್ನಡತನಕ್ಕೇನು ಕೊರತೆಯಿಲ್ಲ. ಇಂತಹ ಸಂದರ್ಭದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದಲ್ಲಿಯೇ ಟ್ವೀಟ್‌ ಮಾಡಿ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣಿಗರ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

“ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ” ಎಂದು ಇಂದು ಬೆಳಿಗ್ಗೆ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಹನುಮನಗೌಡ ಪೊಲೀಸ್ ಪಾಟೀಲ್ “ನಮ್ಮ ನಾಡ ಜನರಿಗೆ ಕನ್ನಡ ನಾಡೊಸಗೆಯ ಕುರಿತು ಹಾರೈಸಿದ ನಮ್ಮ ಭಾರತ ಒಕ್ಕೂಟದ ಪ್ರಧಾನಿಗಳಿಗೆ ನಮಸ್ಕಾರಗಳು. GST ಬಾಕಿ ಪಾವತಿ, IBPS ಮೋಸ ನೆರೆ ಪ್ರವಾಹದ ದುಡ್ಡು ಪಾವತಿ, ರಾಜ್ಯದ ಜಲ ಮತ್ತು ಗಡಿ ವಿವಾದ ಪರಿಹಾರ, ಕೇಂದ್ರ ಮಟ್ಟದ ಪ್ರತಿ ಪರೀಕ್ಷೆಗಳನ್ನು ನಮ್ಮ ನಾಡ ಭಾಷೆಯಲ್ಲಿ ಸಹ ನಡೆಸುವುದು ಇತ್ಯಾದಿ ಸಮಸ್ಯೆಗಳನ್ನು ಸಹ ಪರಿಹರಿಸಿ…!” ಎಂದು ಟ್ವೀಟ್ ಮಾಡಿದ್ದಾರೆ.

ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ಎಲ್ಲಾ ಭಾಷೆಗಳಲ್ಲಿಯೂ ಬರೆಯುವ ಅವಕಾಶ ಮೊದಲು ನೀಡಿ. ಈ ನಿಮ್ಮ ಒಂದು ದಿನದ ಶುಭ ಕೋರಿಕೆಯ ಬದಲು ನಮಗೆ ನೀಡಬೇಕಾದ ಜಿ ಎಸ್ ಟಿ ಬಾಕಿಯನ್ನು ನೀಡಿ. ಪರಿಸರ ಕರಡು ನೀತಿಯನ್ನು ಸ್ಥಳೀಯ ಭಾಷೆಗಳಲ್ಲಿ ಪ್ರಕಟಿಸಿ. ಎಲ್ಲಾ ಭಾಷೆಗಳಿಗೂ ಪ್ರಾಮುಖ್ಯತೆ ಭಾಷಾ ವೈವಿಧ್ಯತೆಯನ್ನು ಗೌರವಿಸಿ. ಜೈ ಕರ್ನಾಟಕ ಜೈ ಕನ್ನಡ ಎಂದು ಆದರ್ಶ್ ಎಚ್ ಎಂ ಆಗ್ರಹಿಸಿದ್ದಾರೆ.

ನೆರೆ ಪರಿಹಾರ ಕೊಡ್ಲಿಲ್ಲ, GST ಬಾಕಿ ಕೊಡ್ಲಿಲ್ಲ, IBPS ನಿಯಮ ತಿದ್ದುಪಡಿ ಮಾಡಿ ಕನ್ನಡಿಗರ ಉದ್ಯೋಗವನ್ನು ಕಿತ್ತು ಕೊಂಡ್ರಿ, ಕೇಂದ್ರ ಸರಕಾರದ ಸೇವೆಗಳು ಕನ್ನಡದಲ್ಲಿ ಸಿಗುತ್ತಿಲ್ಲ. ರಾಜ್ಯೋತ್ಸವದಂದು ಕನ್ನಡದಲ್ಲಿ ಶುಭ ಕೋರಿದ್ದು ಬಿಟ್ಟರೆ ನಿಮ್ಮಿಂದ ರಾಜ್ಯಕ್ಕೆ ಇನ್ನೇನು ಸಿಕ್ಕಿಲ್ಲ ಎಂದು ಹರೀಶ್ ಎಂಬುವವರು ಕಿಡಿಕಾರಿದ್ದಾರೆ.

ಧನ್ಯವಾದಗಳು ಮಾನ್ಯ ಪ್ರಧಾನ ಮಂತ್ರಿಗಳೇ. ನಿಮ್ಮ ನಿಷ್ಕಲ್ಮಶ ಭಾಷಾಭಿಮಾನ ಜಗತ್ತಿಗೆ ಗೊತ್ತು. ಭವ್ಯ ಇತಿಹಾಸದ, ಶ್ರೀಮಂತ ಪರಂಪರೆಯ, ಸಾಂಸ್ಕೃತಿಕ ವೈವಿಧ್ಯದ, ಗಂಧದ ಗುಡಿಯ ನುಡಿ ಕನ್ನಡವನ್ನ ಉಳಿಸಿ ಬೆಳೆಸುವುದಕ್ಕಿಂತಲೂ ಹೆಚ್ಚಾಗಿ ಎಲ್ಲೆಡೆ ಕನ್ನಡವನ್ನೇ ಬಳಸಿ. ಕನ್ನಡ ಕುಲದ ನನ್ನೆಲ್ಲ ಬಂಧುಗಳಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದು ಪ್ರಶಾಂತ್ ವಿಪಿ ಸಂತಸ ವ್ಯಕ್ತಪಡಿಸಿದ್ದಾರೆ.

ನೀವು ಪ್ರಾಥಿಸುವುದನ್ನು ಬಿಟ್ಟು, ನಮ್ಮ ತೆರಿಗೆ ನಮಗೆ ನೀಡಿ, ನೆರೆ ಪರಿಹಾರ ನೀಡಿ, ಮಹಾದಾಯಿ, ಕಾವೇರಿ ವಿಚಾರದಲ್ಲಿ ನಮಗೆ ನ್ಯಾಯ ಒದಗಿಸಿದರೆ ಸಾಕು ಎಂದು ಕಬ್ಬಿನಕೆರೆ ಅಶ್ವಿನ್ ಟ್ವೀಟ್ ಮಾಡಿದ್ದಾರೆ.

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡದಲ್ಲೇ ಟ್ವೀಟ್ ಮಾಡಿದ ದೇಶದ ಪ್ರಧಾನ ಸೇವಕರಿಗೆ ಧನ್ಯವಾದಗಳು ಎಂದು ಎಚ್.ಎಸ್ ನವೀನ್ ತಿಳಿಸಿದ್ದಾರೆ.

ನಮ್ಮ ಜಿಎಸ್ಟಿ ದುಡ್ಡು ಕೊಟ್ಟು ಮಾತಾಡಿ ಸ್ವಾಮಿ. ನವೆಂಬರ್ 1 ರಂದು ಕನ್ನಡದಲ್ಲಿ ಶುಭಾಶಯ ಹೇಳಿ, ಆಗಾಗ ಎರಡು ಮಾತು ಕನ್ನಡದಲ್ಲಿ ಆಡಿದ್ರೆ ಕರ್ನಾಟಕ ಪ್ರಗತಿ ಕಾಣಲ್ಲ. ಇವೆಲ್ಲ ಡವ್ ಮಾಡೋದ್ ನಿಲ್ಸಿ, #GST, #FloodRelief ಕೊಡಿ. #IBPSMosa ಸರಿಪಡಿಸಿ. #StopHindiImposition ಎಂದು ಶ್ರುತಿ ಎಚ್.ಎಂ ಕಿಡಿಕಾರಿದ್ದಾರೆ.


ಇದನ್ನೂ ಓದಿ: ಇಂದಿನ ಪ್ರಧಾನಿ ಮೋದಿ ಭಾಷಣಕ್ಕೆ ಡಿಸ್‌ಲೈಕ್‌ಗಳ ಸುರಿಮಳೆ: ಸಂಖ್ಯೆ ಮರೆಮಾಚಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...