Homeಮುಖಪುಟರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಶುಭಾಶಯ ತಿಳಿಸಿದ ಮೋದಿ: ಜಾಲತಾಣಿಗರ ಪ್ರತಿಕ್ರಿಯೆ ಏನು?

ರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಶುಭಾಶಯ ತಿಳಿಸಿದ ಮೋದಿ: ಜಾಲತಾಣಿಗರ ಪ್ರತಿಕ್ರಿಯೆ ಏನು?

ನೀವು ಪ್ರಾಥಿಸುವುದನ್ನು ಬಿಟ್ಟು, ನಮ್ಮ ತೆರಿಗೆ ನಮಗೆ ನೀಡಿ, ನೆರೆ ಪರಿಹಾರ ನೀಡಿ, ಮಹಾದಾಯಿ, ಕಾವೇರಿ ವಿಚಾರದಲ್ಲಿ ನಮಗೆ ನ್ಯಾಯ ಒದಗಿಸಿದರೆ ಸಾಕು ಎಂದು ಕಬ್ಬಿನಕೆರೆ ಅಶ್ವಿನ್ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಇಂದು ಕನ್ನಡ ರಾಜ್ಯೋತ್ಸವ. ಕನ್ನಡಿಗರ ಪಾಲಿನ ಹಬ್ಬ. ಕೊರೊನಾ ಕಾರಣದಿಂದ ಬೀದಿ-ಬೀದಿಯಲ್ಲಿ ಕೆಂಪು-ಹಳದಿ ಬಣ್ಣದೋಕುಳಿ, ಆಳೆತ್ತೆರದ ಬಾವುಟಗಳು ಹಾರದಿದ್ದರೂ ಕನ್ನಡಿಗರ ಮನದಲ್ಲಿ ಕನ್ನಡತನಕ್ಕೇನು ಕೊರತೆಯಿಲ್ಲ. ಇಂತಹ ಸಂದರ್ಭದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದಲ್ಲಿಯೇ ಟ್ವೀಟ್‌ ಮಾಡಿ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣಿಗರ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

“ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ” ಎಂದು ಇಂದು ಬೆಳಿಗ್ಗೆ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಹನುಮನಗೌಡ ಪೊಲೀಸ್ ಪಾಟೀಲ್ “ನಮ್ಮ ನಾಡ ಜನರಿಗೆ ಕನ್ನಡ ನಾಡೊಸಗೆಯ ಕುರಿತು ಹಾರೈಸಿದ ನಮ್ಮ ಭಾರತ ಒಕ್ಕೂಟದ ಪ್ರಧಾನಿಗಳಿಗೆ ನಮಸ್ಕಾರಗಳು. GST ಬಾಕಿ ಪಾವತಿ, IBPS ಮೋಸ ನೆರೆ ಪ್ರವಾಹದ ದುಡ್ಡು ಪಾವತಿ, ರಾಜ್ಯದ ಜಲ ಮತ್ತು ಗಡಿ ವಿವಾದ ಪರಿಹಾರ, ಕೇಂದ್ರ ಮಟ್ಟದ ಪ್ರತಿ ಪರೀಕ್ಷೆಗಳನ್ನು ನಮ್ಮ ನಾಡ ಭಾಷೆಯಲ್ಲಿ ಸಹ ನಡೆಸುವುದು ಇತ್ಯಾದಿ ಸಮಸ್ಯೆಗಳನ್ನು ಸಹ ಪರಿಹರಿಸಿ…!” ಎಂದು ಟ್ವೀಟ್ ಮಾಡಿದ್ದಾರೆ.

ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ಎಲ್ಲಾ ಭಾಷೆಗಳಲ್ಲಿಯೂ ಬರೆಯುವ ಅವಕಾಶ ಮೊದಲು ನೀಡಿ. ಈ ನಿಮ್ಮ ಒಂದು ದಿನದ ಶುಭ ಕೋರಿಕೆಯ ಬದಲು ನಮಗೆ ನೀಡಬೇಕಾದ ಜಿ ಎಸ್ ಟಿ ಬಾಕಿಯನ್ನು ನೀಡಿ. ಪರಿಸರ ಕರಡು ನೀತಿಯನ್ನು ಸ್ಥಳೀಯ ಭಾಷೆಗಳಲ್ಲಿ ಪ್ರಕಟಿಸಿ. ಎಲ್ಲಾ ಭಾಷೆಗಳಿಗೂ ಪ್ರಾಮುಖ್ಯತೆ ಭಾಷಾ ವೈವಿಧ್ಯತೆಯನ್ನು ಗೌರವಿಸಿ. ಜೈ ಕರ್ನಾಟಕ ಜೈ ಕನ್ನಡ ಎಂದು ಆದರ್ಶ್ ಎಚ್ ಎಂ ಆಗ್ರಹಿಸಿದ್ದಾರೆ.

ನೆರೆ ಪರಿಹಾರ ಕೊಡ್ಲಿಲ್ಲ, GST ಬಾಕಿ ಕೊಡ್ಲಿಲ್ಲ, IBPS ನಿಯಮ ತಿದ್ದುಪಡಿ ಮಾಡಿ ಕನ್ನಡಿಗರ ಉದ್ಯೋಗವನ್ನು ಕಿತ್ತು ಕೊಂಡ್ರಿ, ಕೇಂದ್ರ ಸರಕಾರದ ಸೇವೆಗಳು ಕನ್ನಡದಲ್ಲಿ ಸಿಗುತ್ತಿಲ್ಲ. ರಾಜ್ಯೋತ್ಸವದಂದು ಕನ್ನಡದಲ್ಲಿ ಶುಭ ಕೋರಿದ್ದು ಬಿಟ್ಟರೆ ನಿಮ್ಮಿಂದ ರಾಜ್ಯಕ್ಕೆ ಇನ್ನೇನು ಸಿಕ್ಕಿಲ್ಲ ಎಂದು ಹರೀಶ್ ಎಂಬುವವರು ಕಿಡಿಕಾರಿದ್ದಾರೆ.

ಧನ್ಯವಾದಗಳು ಮಾನ್ಯ ಪ್ರಧಾನ ಮಂತ್ರಿಗಳೇ. ನಿಮ್ಮ ನಿಷ್ಕಲ್ಮಶ ಭಾಷಾಭಿಮಾನ ಜಗತ್ತಿಗೆ ಗೊತ್ತು. ಭವ್ಯ ಇತಿಹಾಸದ, ಶ್ರೀಮಂತ ಪರಂಪರೆಯ, ಸಾಂಸ್ಕೃತಿಕ ವೈವಿಧ್ಯದ, ಗಂಧದ ಗುಡಿಯ ನುಡಿ ಕನ್ನಡವನ್ನ ಉಳಿಸಿ ಬೆಳೆಸುವುದಕ್ಕಿಂತಲೂ ಹೆಚ್ಚಾಗಿ ಎಲ್ಲೆಡೆ ಕನ್ನಡವನ್ನೇ ಬಳಸಿ. ಕನ್ನಡ ಕುಲದ ನನ್ನೆಲ್ಲ ಬಂಧುಗಳಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದು ಪ್ರಶಾಂತ್ ವಿಪಿ ಸಂತಸ ವ್ಯಕ್ತಪಡಿಸಿದ್ದಾರೆ.

ನೀವು ಪ್ರಾಥಿಸುವುದನ್ನು ಬಿಟ್ಟು, ನಮ್ಮ ತೆರಿಗೆ ನಮಗೆ ನೀಡಿ, ನೆರೆ ಪರಿಹಾರ ನೀಡಿ, ಮಹಾದಾಯಿ, ಕಾವೇರಿ ವಿಚಾರದಲ್ಲಿ ನಮಗೆ ನ್ಯಾಯ ಒದಗಿಸಿದರೆ ಸಾಕು ಎಂದು ಕಬ್ಬಿನಕೆರೆ ಅಶ್ವಿನ್ ಟ್ವೀಟ್ ಮಾಡಿದ್ದಾರೆ.

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡದಲ್ಲೇ ಟ್ವೀಟ್ ಮಾಡಿದ ದೇಶದ ಪ್ರಧಾನ ಸೇವಕರಿಗೆ ಧನ್ಯವಾದಗಳು ಎಂದು ಎಚ್.ಎಸ್ ನವೀನ್ ತಿಳಿಸಿದ್ದಾರೆ.

ನಮ್ಮ ಜಿಎಸ್ಟಿ ದುಡ್ಡು ಕೊಟ್ಟು ಮಾತಾಡಿ ಸ್ವಾಮಿ. ನವೆಂಬರ್ 1 ರಂದು ಕನ್ನಡದಲ್ಲಿ ಶುಭಾಶಯ ಹೇಳಿ, ಆಗಾಗ ಎರಡು ಮಾತು ಕನ್ನಡದಲ್ಲಿ ಆಡಿದ್ರೆ ಕರ್ನಾಟಕ ಪ್ರಗತಿ ಕಾಣಲ್ಲ. ಇವೆಲ್ಲ ಡವ್ ಮಾಡೋದ್ ನಿಲ್ಸಿ, #GST, #FloodRelief ಕೊಡಿ. #IBPSMosa ಸರಿಪಡಿಸಿ. #StopHindiImposition ಎಂದು ಶ್ರುತಿ ಎಚ್.ಎಂ ಕಿಡಿಕಾರಿದ್ದಾರೆ.


ಇದನ್ನೂ ಓದಿ: ಇಂದಿನ ಪ್ರಧಾನಿ ಮೋದಿ ಭಾಷಣಕ್ಕೆ ಡಿಸ್‌ಲೈಕ್‌ಗಳ ಸುರಿಮಳೆ: ಸಂಖ್ಯೆ ಮರೆಮಾಚಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...