Homeಮುಖಪುಟರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಶುಭಾಶಯ ತಿಳಿಸಿದ ಮೋದಿ: ಜಾಲತಾಣಿಗರ ಪ್ರತಿಕ್ರಿಯೆ ಏನು?

ರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಶುಭಾಶಯ ತಿಳಿಸಿದ ಮೋದಿ: ಜಾಲತಾಣಿಗರ ಪ್ರತಿಕ್ರಿಯೆ ಏನು?

ನೀವು ಪ್ರಾಥಿಸುವುದನ್ನು ಬಿಟ್ಟು, ನಮ್ಮ ತೆರಿಗೆ ನಮಗೆ ನೀಡಿ, ನೆರೆ ಪರಿಹಾರ ನೀಡಿ, ಮಹಾದಾಯಿ, ಕಾವೇರಿ ವಿಚಾರದಲ್ಲಿ ನಮಗೆ ನ್ಯಾಯ ಒದಗಿಸಿದರೆ ಸಾಕು ಎಂದು ಕಬ್ಬಿನಕೆರೆ ಅಶ್ವಿನ್ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಇಂದು ಕನ್ನಡ ರಾಜ್ಯೋತ್ಸವ. ಕನ್ನಡಿಗರ ಪಾಲಿನ ಹಬ್ಬ. ಕೊರೊನಾ ಕಾರಣದಿಂದ ಬೀದಿ-ಬೀದಿಯಲ್ಲಿ ಕೆಂಪು-ಹಳದಿ ಬಣ್ಣದೋಕುಳಿ, ಆಳೆತ್ತೆರದ ಬಾವುಟಗಳು ಹಾರದಿದ್ದರೂ ಕನ್ನಡಿಗರ ಮನದಲ್ಲಿ ಕನ್ನಡತನಕ್ಕೇನು ಕೊರತೆಯಿಲ್ಲ. ಇಂತಹ ಸಂದರ್ಭದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದಲ್ಲಿಯೇ ಟ್ವೀಟ್‌ ಮಾಡಿ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣಿಗರ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

“ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ” ಎಂದು ಇಂದು ಬೆಳಿಗ್ಗೆ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಹನುಮನಗೌಡ ಪೊಲೀಸ್ ಪಾಟೀಲ್ “ನಮ್ಮ ನಾಡ ಜನರಿಗೆ ಕನ್ನಡ ನಾಡೊಸಗೆಯ ಕುರಿತು ಹಾರೈಸಿದ ನಮ್ಮ ಭಾರತ ಒಕ್ಕೂಟದ ಪ್ರಧಾನಿಗಳಿಗೆ ನಮಸ್ಕಾರಗಳು. GST ಬಾಕಿ ಪಾವತಿ, IBPS ಮೋಸ ನೆರೆ ಪ್ರವಾಹದ ದುಡ್ಡು ಪಾವತಿ, ರಾಜ್ಯದ ಜಲ ಮತ್ತು ಗಡಿ ವಿವಾದ ಪರಿಹಾರ, ಕೇಂದ್ರ ಮಟ್ಟದ ಪ್ರತಿ ಪರೀಕ್ಷೆಗಳನ್ನು ನಮ್ಮ ನಾಡ ಭಾಷೆಯಲ್ಲಿ ಸಹ ನಡೆಸುವುದು ಇತ್ಯಾದಿ ಸಮಸ್ಯೆಗಳನ್ನು ಸಹ ಪರಿಹರಿಸಿ…!” ಎಂದು ಟ್ವೀಟ್ ಮಾಡಿದ್ದಾರೆ.

ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ಎಲ್ಲಾ ಭಾಷೆಗಳಲ್ಲಿಯೂ ಬರೆಯುವ ಅವಕಾಶ ಮೊದಲು ನೀಡಿ. ಈ ನಿಮ್ಮ ಒಂದು ದಿನದ ಶುಭ ಕೋರಿಕೆಯ ಬದಲು ನಮಗೆ ನೀಡಬೇಕಾದ ಜಿ ಎಸ್ ಟಿ ಬಾಕಿಯನ್ನು ನೀಡಿ. ಪರಿಸರ ಕರಡು ನೀತಿಯನ್ನು ಸ್ಥಳೀಯ ಭಾಷೆಗಳಲ್ಲಿ ಪ್ರಕಟಿಸಿ. ಎಲ್ಲಾ ಭಾಷೆಗಳಿಗೂ ಪ್ರಾಮುಖ್ಯತೆ ಭಾಷಾ ವೈವಿಧ್ಯತೆಯನ್ನು ಗೌರವಿಸಿ. ಜೈ ಕರ್ನಾಟಕ ಜೈ ಕನ್ನಡ ಎಂದು ಆದರ್ಶ್ ಎಚ್ ಎಂ ಆಗ್ರಹಿಸಿದ್ದಾರೆ.

ನೆರೆ ಪರಿಹಾರ ಕೊಡ್ಲಿಲ್ಲ, GST ಬಾಕಿ ಕೊಡ್ಲಿಲ್ಲ, IBPS ನಿಯಮ ತಿದ್ದುಪಡಿ ಮಾಡಿ ಕನ್ನಡಿಗರ ಉದ್ಯೋಗವನ್ನು ಕಿತ್ತು ಕೊಂಡ್ರಿ, ಕೇಂದ್ರ ಸರಕಾರದ ಸೇವೆಗಳು ಕನ್ನಡದಲ್ಲಿ ಸಿಗುತ್ತಿಲ್ಲ. ರಾಜ್ಯೋತ್ಸವದಂದು ಕನ್ನಡದಲ್ಲಿ ಶುಭ ಕೋರಿದ್ದು ಬಿಟ್ಟರೆ ನಿಮ್ಮಿಂದ ರಾಜ್ಯಕ್ಕೆ ಇನ್ನೇನು ಸಿಕ್ಕಿಲ್ಲ ಎಂದು ಹರೀಶ್ ಎಂಬುವವರು ಕಿಡಿಕಾರಿದ್ದಾರೆ.

ಧನ್ಯವಾದಗಳು ಮಾನ್ಯ ಪ್ರಧಾನ ಮಂತ್ರಿಗಳೇ. ನಿಮ್ಮ ನಿಷ್ಕಲ್ಮಶ ಭಾಷಾಭಿಮಾನ ಜಗತ್ತಿಗೆ ಗೊತ್ತು. ಭವ್ಯ ಇತಿಹಾಸದ, ಶ್ರೀಮಂತ ಪರಂಪರೆಯ, ಸಾಂಸ್ಕೃತಿಕ ವೈವಿಧ್ಯದ, ಗಂಧದ ಗುಡಿಯ ನುಡಿ ಕನ್ನಡವನ್ನ ಉಳಿಸಿ ಬೆಳೆಸುವುದಕ್ಕಿಂತಲೂ ಹೆಚ್ಚಾಗಿ ಎಲ್ಲೆಡೆ ಕನ್ನಡವನ್ನೇ ಬಳಸಿ. ಕನ್ನಡ ಕುಲದ ನನ್ನೆಲ್ಲ ಬಂಧುಗಳಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದು ಪ್ರಶಾಂತ್ ವಿಪಿ ಸಂತಸ ವ್ಯಕ್ತಪಡಿಸಿದ್ದಾರೆ.

ನೀವು ಪ್ರಾಥಿಸುವುದನ್ನು ಬಿಟ್ಟು, ನಮ್ಮ ತೆರಿಗೆ ನಮಗೆ ನೀಡಿ, ನೆರೆ ಪರಿಹಾರ ನೀಡಿ, ಮಹಾದಾಯಿ, ಕಾವೇರಿ ವಿಚಾರದಲ್ಲಿ ನಮಗೆ ನ್ಯಾಯ ಒದಗಿಸಿದರೆ ಸಾಕು ಎಂದು ಕಬ್ಬಿನಕೆರೆ ಅಶ್ವಿನ್ ಟ್ವೀಟ್ ಮಾಡಿದ್ದಾರೆ.

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡದಲ್ಲೇ ಟ್ವೀಟ್ ಮಾಡಿದ ದೇಶದ ಪ್ರಧಾನ ಸೇವಕರಿಗೆ ಧನ್ಯವಾದಗಳು ಎಂದು ಎಚ್.ಎಸ್ ನವೀನ್ ತಿಳಿಸಿದ್ದಾರೆ.

ನಮ್ಮ ಜಿಎಸ್ಟಿ ದುಡ್ಡು ಕೊಟ್ಟು ಮಾತಾಡಿ ಸ್ವಾಮಿ. ನವೆಂಬರ್ 1 ರಂದು ಕನ್ನಡದಲ್ಲಿ ಶುಭಾಶಯ ಹೇಳಿ, ಆಗಾಗ ಎರಡು ಮಾತು ಕನ್ನಡದಲ್ಲಿ ಆಡಿದ್ರೆ ಕರ್ನಾಟಕ ಪ್ರಗತಿ ಕಾಣಲ್ಲ. ಇವೆಲ್ಲ ಡವ್ ಮಾಡೋದ್ ನಿಲ್ಸಿ, #GST, #FloodRelief ಕೊಡಿ. #IBPSMosa ಸರಿಪಡಿಸಿ. #StopHindiImposition ಎಂದು ಶ್ರುತಿ ಎಚ್.ಎಂ ಕಿಡಿಕಾರಿದ್ದಾರೆ.


ಇದನ್ನೂ ಓದಿ: ಇಂದಿನ ಪ್ರಧಾನಿ ಮೋದಿ ಭಾಷಣಕ್ಕೆ ಡಿಸ್‌ಲೈಕ್‌ಗಳ ಸುರಿಮಳೆ: ಸಂಖ್ಯೆ ಮರೆಮಾಚಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...