Homeಚಳವಳಿಮಾನವಹಕ್ಕು ರಕ್ಷಕರ ಮೇಲಿನ NIA ದಾಳಿ ನಿಲ್ಲಿಸಲು CPI(ML) ಆಗ್ರಹ

ಮಾನವಹಕ್ಕು ರಕ್ಷಕರ ಮೇಲಿನ NIA ದಾಳಿ ನಿಲ್ಲಿಸಲು CPI(ML) ಆಗ್ರಹ

ಮುಂಗೆರ್, ತೂತುಕುಡಿ ಅಥವಾ ಕಾಶ್ಮೀರ ಕಣಿವೆ ಯಾವುದೇ ಇರಲಿ, ಸತ್ಯವನ್ನು ಬಹಿರಂಗಪಡಿಸುವ ಪತ್ರಕರ್ತರು, ಮಾನವ ಹಕ್ಕುಗಳ ರಕ್ಷಕರ ಮೇಲೆ ಎನ್ಐಎ ದಾಳಿ ನಡೆಸಿ, ಬಂಧಿಸುತ್ತಿರುವುದು ಸಂವಿಧಾನ ಬಾಹಿರವಾಗಿದೆ.

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರ, ಬೆಂಗಳೂರು ಮತ್ತು ದೆಹಲಿಯ ನಾಗರಿಕ ಸಮಾಜ ಗುಂಪುಗಳು ಮತ್ತು ವ್ಯಕ್ತಿಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ನಡೆಸಿದ ದಾಳಿಯನ್ನು ಖಂಡಿಸಿ ಸಿಪಿಐಎಂಎಲ್ ಕೇಂದ್ರ ಸಮಿತಿ (CPIML) ಬಹಿರಂಗ ಪತ್ರ ಬರೆದಿದೆ.

ಈ ದಾಳಿಗಳನ್ನು “ಭಯೋತ್ಪಾದಕ ಚಟುವಟಿಕೆಗಳಿಗೆ ನಿಧಿ” ನಿಗ್ರಹಿಸುವುದಾಗಿ ಎಂದು ಎನ್ಐಎ ಹೇಳಿಕೊಂಡಿದೆ. ಆದರೆ ಇದು ಜಮ್ಮು ಮತ್ತು ಕಾಶ್ಮೀರದ ಜನರ ಹಕ್ಕುಗಳು ಮತ್ತು ಯೋಗಕ್ಷೇಮದ ಬಗ್ಗೆ ಕಳವಳ ವ್ಯಕ್ತಪಡಿಸುವ, ಎಲ್ಲರನ್ನು ಕಿರುಕುಳ ನೀಡಿ ಮೌನಗೊಳಿಸಲು ಮಾಡುತ್ತಿರುವ ತಂತ್ರ ಎಂಬುದು ತಿಳಿಯುತ್ತಿದೆ ಎಂದಿದೆ.

ಮಾನವ ಹಕ್ಕುಗಳ ರಕ್ಷಕರು, ಮಾನವೀಯ ಗುಂಪುಗಳು, ಪತ್ರಕರ್ತರು ಮತ್ತು ನಾಗರಿಕರನ್ನು ಮೌನವಾಗಿಸಲು ಎನ್ಐಎಯನ್ನು ಬಳಸುವ ಮೂಲಕ, ಮೋದಿ ಆಡಳಿತವು ಜಮ್ಮು ಕಾಶ್ಮೀರ ಜನರ ವಿರುದ್ಧದ ಯಾವುದೇ ಸಾಕ್ಷಿಗಳಿಲ್ಲದೆ ಅಪರಾಧ ಹೊರಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಎನ್ಐಎ ಗುರಿಯಿಟ್ಟಿರುವ ಗುಂಪುಗಳು ಮತ್ತು ವ್ಯಕ್ತಿಗಳು ಮಾನವ ಹಕ್ಕುಗಳು ಮತ್ತು ಮಾನವೀಯ ಕಾರ್ಯಗಳ ಸುದೀರ್ಘ ಮತ್ತು ಪ್ರಭಾವಶಾಲಿ ಕೆಲಸಗಳನ್ನು ಮಾಡಿದ್ದಾರೆ. ಉದಾಹರಣೆಗೆ ಜಮ್ಮು ಕಾಶ್ಮೀರ ಒಕ್ಕೂಟದ ಸಿವಿಲ್ ಸೊಸೈಟಿ (ಜೆಕೆಸಿಸಿಎಸ್) ನಕಲಿ ಎನ್‌ಕೌಂಟರ್‌ಗಳು, ಲಾಕಪ್ ಡೆತ್, ಲೈಂಗಿಕ ದೌರ್ಜನ್ಯ ಮತ್ತು ಜೆ & ಕೆ ಮಕ್ಕಳ ಮೇಲಿನ ದೌರ್ಜನ್ಯದ ಪರಿಣಾಮಗಳ ಕುರಿತು ಸುದೀರ್ಘ ವರದಿಗಳನ್ನು ದಾಖಲಿಸಿದೆ ಎಂದು CPIML ಹೇಳಿದೆ.

ಇದನ್ನೂ ಓದಿ: ಎನ್‌ಜಿಒ ಮೇಲೆ NIA ದಾಳಿ: ಮಾನವಹಕ್ಕು ರಕ್ಷಕರ ಮೇಲಿನ ದೌರ್ಜನ್ಯ ಎಂದ ಹೋರಾಟಗಾರರು

ಎನ್ಐಎ ದಾಳಿಯ ಮತ್ತೊಂದು ಗುರಿ ದೆಹಲಿಯ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಮತ್ತು ಚಾರಿಟಿ ಅಲೈಯನ್ಸ್ ಎಂಬ ಎನ್‌ಜಿಒ ನಡೆಸುತ್ತಿರುವ ಮಿಲ್ಲಿ ಗೆಜೆಟ್ ಪತ್ರಿಕೆಯ ಸ್ಥಾಪಕ ಸಂಪಾದಕ ಜಫರುಲ್ ಇಸ್ಲಾಂ ಖಾನ್.  ಖಾನ್ ನೇತೃತ್ವದಲ್ಲಿ, ದೆಹಲಿ ಅಲ್ಪಸಂಖ್ಯಾತ ಆಯೋಗವು ಫೆಬ್ರವರಿ 2020 ರ ದೆಹಲಿ ಹಿಂಸಾಚಾರದ ಬಗ್ಗೆ ಭೀಕರವಾದ ವರದಿಯನ್ನು ಪ್ರಕಟಿಸಿತ್ತು. ಮುಸ್ಲಿಮರ ವಿರುದ್ಧದ ಉದ್ದೇಶಿತ ಹಿಂಸಾಚಾರದಲ್ಲಿ ದೆಹಲಿ ಪೊಲೀಸರು ಭಾಗಿಯಾಗಿರುವುದಕ್ಕೆ ಪುರಾವೆಗಳನ್ನು ದಾಖಲಿಸಿದ್ದಾರೆ. ದೆಹಲಿ ಹಿಂಸಾಚಾರಕ್ಕೆ ಒಳಗಾದವರಿಗೆ ಚಾರಿಟಿ ಅಲೈಯನ್ಸ್ ಪರಿಹಾರ ನೀಡಿತ್ತು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಗ್ರೇಟರ್ ಕಾಶ್ಮೀರ ಪತ್ರಿಕೆಯ ಕಚೇರಿಗಳ ಮೇಲೆ ಎನ್ಐಎ ದಾಳಿ ನಡೆಸಿದೆ. ಈ ಪತ್ರಿಕೆ ಯಾವುದೇ ಕೆಟ್ಟ ವರದಿಗಳು ಪ್ರಕಟವಾಗಿಲ್ಲ ಮತ್ತು ಧೈರ್ಯಶಾಲಿ ಪತ್ರಿಕೋದ್ಯಮಕ್ಕೆ ಹೆಸರುವಾಸಿಯಾಗಿದೆ. ಇಂತಹ ಪತ್ರಿಕೆಯ ಮೇಲೂ ಮೋದಿ ಸರ್ಕಾರ ದಾಳಿ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

ತಮ್ಮ ನಗರದಲ್ಲಿ ಮತ್ತು ಭಾರತದ ಇತರ ಭಾಗಗಳಲ್ಲಿ ನಿರಂತರವಾಗಿ ಮಾನವ ಹಕ್ಕುಗಳ ಬಗ್ಗೆ ಕಾಳಜಿ ವಹಿಸುತ್ತಾ, ದನಿ ಎತ್ತಿರುವ ಸ್ವಾತಿ ಶೇಷಾದ್ರಿಯವರ ಮನೆಯ ಮೇಲೆ ಬೆಂಗಳೂರಿನಲ್ಲಿಯೂ ಎನ್ಐಎ ದಾಳಿ ನಡೆಸಿದೆ. ಲಾಕ್ ಡೌನ್ ಸಮಯದಲ್ಲಿ, ಸ್ವಾತಿ ಶೇಷಾದ್ರಿ “ವಲಸಿಗರೊಂದಿಗೆ ಬೆಂಗಳೂರು” ಎಂಬ ಅಭಿಯಾನದ ಭಾಗವಾಗಿ ಕೆಲಸ ಮಾಡಿದರು, ಆಹಾರ, ಆಶ್ರಯವಿಲ್ಲದೆ ಬೆಂಗಳೂರಿನಲ್ಲಿ ಸಿಲುಕಿರುವ ವಲಸೆ ಕಾರ್ಮಿಕರಿಗೆ ಪರಿಹಾರ ನೀಡಲು ಸಹಾಯ ಮಾಡಿದರು ಇಂತವರ ವಿರುದ್ಧವು ಸಂಚು ನಡೆದಿದೆ ಎಂದಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಹೋರಾಟದಲ್ಲಿ ಮಹಿಳೆಯ ಪಾತ್ರ ಬಿಂಬಿಸುವ ಚಿತ್ರ ‘ಆಕ್ಟ್- 1978’

ಮೋದಿ ಆಡಳಿತದಲ್ಲಿ ಎನ್ಐಎ, ಇತರ ಅನೇಕ ಸಂಸ್ಥೆಗಳಂತೆ, “ಪಂಜರದ ಗಿಳಿ” ಆಗಿ ಮಾರ್ಪಟ್ಟಿದೆ. ಈಗ ಜಮ್ಮು ಕಾಶ್ಮೀರ ವಿಷಯವನ್ನಿಟ್ಟುಕೊಂಡು ಮಾನವ ಹಕ್ಕುಗಳ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದ್ದಾರೆ.  ಬಾಂಬ್ ಸ್ಫೋಟದ ಆರೋಪಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧದ ಪ್ರಕರಣವನ್ನು ದುರ್ಬಲಗೊಳಿಸಿದ ಎನ್‌ಐಎ, ಜೆ & ಕೆ ಪೊಲೀಸ್ ಅಧಿಕಾರಿ ದಾವಿಂದರ್ ಸಿಂಗ್ ಅವರಿಗೆ ಜಾಮೀನು ದೊರೆಯುವಲ್ಲಿಯೂ ಪ್ರಮುಖ ಪಾತ್ರ ವಹಿಸಿದೆ ಎಂದಿದ್ದಾರೆ.

ತೂತುಕುಡಿಯಲ್ಲಿ ಜಯರಾಜ್ ಮತ್ತು ಬೆನ್ನಿಕ್ಸ್‌ರನ್ನು ತಮಿಳುನಾಡು ಪೊಲೀಸರು ಹತ್ಯೆಗೈದಿದ್ದು, ಭಾರತದ ಅತಿರೇಕದ ಹಿಂಸೆ ಮತ್ತು ಲಾಕಪ್ ಡೆತ್‌ಗಳ ಮೇಲೆ ಈ ಎನ್‌ಜಿಒಗಳು ಬೆಳಕು ಚೆಲ್ಲಿವೆ. ತೀರಾ ಇತ್ತೀಚೆಗೆ, ಬಿಹಾರದ ಮುಂಗೆರ್‌ನಲ್ಲಿ ದುರ್ಗಾ ವಿಗ್ರಹ ವಿಸರ್ಜನೆ ವೇಳೆ ಭಕ್ತರ ಮೇಲೆ ಪೊಲೀಸರು ಲಾಠಿಚಾರ್ಜ್ ಮತ್ತು ಗುಂಡಿನ ದಾಳಿ ನಡೆಸಿದ್ದಾರೆ. ಇವೆಲ್ಲಾ ಪೊಲೀಸರು ಜನಸಾಮಾನ್ಯರ ಮೇಲೆ ಮಾಡುವ ದೌರ್ಜನ್ಯ. ಇವರುಗಳ ವಿರುದ್ಧ ಹೊರಾಡುವವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ಮುಂಗೆರ್, ತೂತುಕುಡಿ ಅಥವಾ ಕಾಶ್ಮೀರ ಕಣಿವೆ ಯಾವುದೇ ಇರಲಿ, ಸತ್ಯವನ್ನು ಬಹಿರಂಗಪಡಿಸುವ ಪತ್ರಕರ್ತರು, ಮಾನವ ಹಕ್ಕುಗಳ ರಕ್ಷಕರ ಮೇಲೆ ಎನ್ಐಎ ದಾಳಿ ನಡೆಸಿ, ಬಂಧಿಸುತ್ತಿರುವುದು ಸಂವಿಧಾನ ಬಾಹಿರವಾಗಿದೆ. ಭಾರತದ ಪ್ರಜೆಗಳಾದ ನಾವು ನಮ್ಮ ಹಕ್ಕುಗಳ ರಕ್ಷಣೆ, ಸ್ವಾತಂತ್ರ್ಯಕ್ಕಾಗಿ ನಮ್ಮ ಪರ ಹೋರಾಟ ನಡೆಸಲು ಪ್ರಯತ್ನಿಸುವವರ ಪರ ನಿಲ್ಲಬೇಕು” ಎಂದು ಪತ್ರದಲ್ಲಿ ಬರೆಯಲಾಗಿದೆ.


ಇದನ್ನೂ ಓದಿ: ಗುಡ್ ನ್ಯೂಸ್: ಬೊಲಿವಿಯಾದಲ್ಲಿ ಮಹಿಳಾ ಜನಪ್ರತಿನಿಧಿಗಳ ಸಂಖ್ಯೆ ಶೇ.50ಕ್ಕಿಂತಲೂ ಹೆಚ್ಚು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...