Homeಮುಖಪುಟಭಾರತ ಕೇವಲ ಹಿಂದಿವಾಲಾಗಳ ದೇಶವೇ? ದ್ರಾವಿಡ ಚಳವಳಿ ನೆನಪಿದೆಯೇ?: ಟಿ.ಎ.ನಾರಾಯಣಗೌಡ

ಭಾರತ ಕೇವಲ ಹಿಂದಿವಾಲಾಗಳ ದೇಶವೇ? ದ್ರಾವಿಡ ಚಳವಳಿ ನೆನಪಿದೆಯೇ?: ಟಿ.ಎ.ನಾರಾಯಣಗೌಡ

ಕೇಂದ್ರ ಸರ್ಕಾರದ ನಡವಳಿಕೆ ನೋಡಿದರೆ ದಕ್ಷಿಣ ಭಾರತೀಯರನ್ನು ಅವರು ದೇಶದ ನಾಗರಿಕರೆಂದು ಪರಿಗಣಿಸಿಯೇ ಇಲ್ಲವೆಂದು ತೋರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

- Advertisement -
- Advertisement -

ಕರ್ನಾಟಕ ರಕ್ಷಣಾ ವೇದಿಕೆ ಕಚೇರಿ ಮುಂಭಾಗ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣದ ನಂತರ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ ಮಾತನಾಡಿ, “ಭಾರತವೇನು ಕೇವಲ ಹಿಂದಿವಾಲಾಗಳ ದೇಶವೇ? ದ್ರಾವಿಡ ಚಳವಳಿ ನೆನಪಿದೆಯೇ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೇಂದ್ರ ಸರ್ಕಾರದ ನಡವಳಿಕೆ ನೋಡಿದರೆ ದಕ್ಷಿಣ ಭಾರತೀಯರನ್ನು ಅವರು ದೇಶದ ನಾಗರಿಕರೆಂದು ಪರಿಗಣಿಸಿಯೇ ಇಲ್ಲವೆಂದು ತೋರುತ್ತದೆ. ಭಾರತವೇನು ಕೇವಲ ಹಿಂದಿವಾಲಾಗಳ ದೇಶವೇ? ದ್ರಾವಿಡ ಚಳವಳಿ ನೆನಪಿದೆಯೇ? ಅಂಥ ಚಳವಳಿ ಮತ್ತೆ ಮರುಕಳಿಸಿದರೆ ಆಶ್ವರ್ಯವಿಲ್ಲ. ಪ್ರಧಾನಿ ನರೇಂದ್ರ ಮೋದಿಯವರಿಗೆ ಕರ್ನಾಟಕ ನೆನಪಿಲ್ಲವೇ? ಯಾಕೆ ಅವರು ಕರ್ನಾಟಕದ ನೆರೆ ಸಂತ್ರಸ್ಥ ಜಿಲ್ಲೆಗಳಿಗೆ ಭೇಟಿ ನೀಡುತ್ತಿಲ್ಲ. ಅವರ ದೃಷ್ಟಿಯಲ್ಲಿ ಉತ್ತರ ಭಾರತ ಮಾತ್ರ ಭಾರತವೇ? ದಕ್ಷಿಣ ಭಾರತವು ಭಾರತಕ್ಕೆ ಸೇರಿಲ್ಲವೇ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಕೇಂದ್ರದಿಂದ ರಾಜ್ಯಕ್ಕಾಗುತ್ತಿರುವ ಅನ್ಯಾಯಗಳ ಪಟ್ಟಿ: ರಾಜ್ಯೋತ್ಸವದಂದು ಸಿದ್ದರಾಮಯ್ಯ ಆಕ್ರೋಶ

“ಜಿಎಸ್ ಟಿ ಬಾಕಿ ಹಣ ಕೊಡಿ ಎಂದು ಕರ್ನಾಟಕ‌ ಬೇಡುವ ಸ್ಥಿತಿ ತಲುಪಿದೆ. ನಾವು ಯಾರ ಹಣವನ್ನು ಕೇಳುತ್ತಿದ್ದೇವೆ? ಅದು ನಮ್ಮದೇ ಹಣ. ನಾವೇ ಕೊಟ್ಟ ತೆರಿಗೆಯ ಒಂದು ಭಾಗವನ್ನಷ್ಟೇ ಕೇಳುತ್ತಿದ್ದೇವೆ. ಕೇಂದ್ರ ಸರ್ಕಾರ ನಮ್ಮ ಹಣವನ್ನು ನಮಗೆ ಕೊಡದೆ ನಮ್ಮನ್ನು ಸಾಲಗಾರರನ್ನಾಗಿ ಮಾಡುತ್ತಿದೆ. ಕರ್ನಾಟಕಕ್ಕೆ ನ್ಯಾಯಯುತವಾಗಿ ದಕ್ಕಬೇಕಿರುವ ಅನುದಾನಗಳನ್ನು ಕೇಳಲು, ಕರ್ನಾಟಕದ ಸಮಸ್ಯೆಗಳ ಬಗ್ಗೆ ಪ್ರಧಾನಿ ಜತೆ ಮಾತನಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಭಯ ಪಡುತ್ತಿದ್ದಾರೆ. ಒಬ್ಬ ಪ್ರಧಾನಿ ಜತೆ ಮಾತಾಡಲು ಒಬ್ಬ ಮುಖ್ಯಮಂತ್ರಿ ಭಯ ಪಡುವ ಸ್ಥಿತಿ ತಲುಪಿದರೆ ಏನರ್ಥ? ಇದನ್ನು ಒಕ್ಕೂಟವೆಂದು ಕರೆಯಲು ಸಾಧ್ಯವೇ? ಒಕ್ಕೂಟದ ಮೂಲತತ್ತ್ವಗಳು‌ ಉಳಿದುಕೊಂಡಿವೆಯೇ?” ಎಂದು ಟಿ.ಎ.ನಾರಾಯಣಗೌಡ ಕಿಡಿಕಾರಿದರು.

“ರಾಜ್ಯೋತ್ಸವವನ್ನು ಸಂಘಸಂಸ್ಥೆಗಳು ಸರಳವಾಗಿ ಆಚರಿಸಬೇಕು ಎಂದು ಸರ್ಕಾರ ಹೇಳುತ್ತದೆ. ಆದರೆ ಸರ್ಕಾರ ನಡೆಸುವ‌ ಪಕ್ಷ, ಉಪಚುನಾವಣೆಗಳಲ್ಲಿ ಹತ್ತಾರು ಸಾವಿರ ಜನರನ್ನು ಸೇರಿಸಿ, ಸಿನಿಮಾ ಕಲಾವಿದರನ್ನು‌ ಕರೆಯಿಸಿ ರ್‍ಯಾಲಿಗಳನ್ನು ನಡೆಸುತ್ತದೆ. ನೀವು ಹೇಳುವ ನಿಯಮಗಳು ನಿಮಗೆ ಅನ್ವಯಿಸುವುದಿಲ್ಲವೇ?” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: ಗುಡ್ ನ್ಯೂಸ್: ಸುಡು ಬಿಸಿಲಿನಲ್ಲಿ ಗಿಡ ಮಾರುತ್ತಿದ್ದ ಅಜ್ಜನ ಮುಖದಲ್ಲಿ ಮಂದಹಾಸ ಮೂಡಿಸಿದ ಫೇಸ್‌ಬುಕ್…

“ಕರೋನಾ ಮತ್ತು ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹದ ಹಿನ್ನೆಲೆಯಲ್ಲಿ ಈ ವರ್ಷ ಸರಳವಾಗಿ ರಾಜ್ಯೋತ್ಸವ ಆಚರಿಸಲು‌ ನಾವು ಮೊದಲೇ ತೀರ್ಮಾನಿಸಿದ್ದೆವು. ಆದರೆ ರಾಜಕೀಯ ಪಕ್ಷಗಳು ಚುನಾವಣೆ ಹೆಸರಲ್ಲಿ‌ ತಾವೇ ಮಾಡಿದ ನಿಯಮಗಳನ್ನು ತಾವೇ ಮುರಿಯುತ್ತಿವೆ. ರಾಜ್ಯೋತ್ಸವವೆಂದರೆ ಕೇವಲ ಸಂಭ್ರಮ, ಸಡಗರವಲ್ಲ. ಅಖಂಡ ಕರ್ನಾಟಕದ ಕನಸು ಕಂಡ ನಮ್ಮ ಹಿರಿಯರ ಶ್ರೇಯೋಭಿಲಾಷೆಯನ್ನು ಕಾಪಾಡುವ ಹೊಣೆಗಾರಿಕೆ ಮತ್ತು ಸವಾಲು. ನಾವು ನಮ್ಮ ಹಕ್ಕುಗಳಿಗೆ ಯಾರನ್ನು ಬೇಕಾದರೂ ಪ್ರಶ್ನಿಸುವ ಅವಕಾಶವನ್ನು ಸಂವಿಧಾನ ನಮಗೆ ನೀಡಿದೆ. ಕನ್ನಡಿಗರ ಹಕ್ಕೊತ್ತಾಯಗಳಿಗೆ ಕೇಂದ್ರ, ರಾಜ್ಯ ಸರ್ಕಾರಗಳನ್ನು ಪ್ರಶ್ನಿಸುತ್ತಿರೋಣ, ಹೋರಾಟ ನಡೆಸೋಣ” ಎಂದು ಟಿ.ಎ.ನಾರಾಯಣಗೌಡ ಕರೆನೀಡಿದರು.

ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡಲು ರಾಷ್ಟ್ರೀಯ ಪಕ್ಷಗಳು ವಿಫಲವಾಗಿವೆ ಎಂದ ಟಿ.ಎ.ನಾರಾಯಣಗೌಡ, “ನಾವು ಈಗ ಪ್ರಾದೇಶಿಕ ಚಿಂತನೆಗಳನ್ನು ಬಿತ್ತಬೇಕಿದೆ. ಕೇಂದ್ರ ಸರ್ಕಾರ ಏನೇ ಸಮಸ್ಯೆ ಬಂದರೂ‌ ಒಮ್ಮೆ ಚೀನಾ ಕಡೆ ಮತ್ತೊಮ್ಮೆ ಪಾಕಿಸ್ತಾನದ ಕಡೆ ತೋರಿಸಿ ನುಣುಚಿಕೊಳ್ಳುತ್ತದೆ. ಈ‌ ಆಟ ಹೆಚ್ಚು‌ ದಿನ‌ ನಡೆಯದು. ಕನ್ನಡಿಗರು ಜಾಗ್ರತರಾಗಿದ್ದಾರೆ” ಎಂದು ಹೇಳಿದರು.


ಇದನ್ನೂ ಓದಿ: ಬೆಂಗಳೂರಿನಲ್ಲಿ ಆಪ್‌ನಿಂದ ‘ಆಮ್ ಆದ್ಮಿ ಕ್ಲಿನಿಕ್’ ಉದ್ಘಾಟನೆ: ಪೂರ್ತಿ ಉಚಿತ ಚಿಕಿತ್ಸೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....