Homeಮುಖಪುಟ'ಬಾಬಾ ಕಾ ಧಾಬಾ' ವೀಡಿಯೋ ವೈರಲ್: ಸಂಗ್ರಹಿಸಿದ ದೇಣಿಗೆ ಹಣ ದುರುಪಯೋಗ; ದೂರು!

‘ಬಾಬಾ ಕಾ ಧಾಬಾ’ ವೀಡಿಯೋ ವೈರಲ್: ಸಂಗ್ರಹಿಸಿದ ದೇಣಿಗೆ ಹಣ ದುರುಪಯೋಗ; ದೂರು!

ಗೌರವ್ ವಾಸನ್ ತನ್ನ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಈ ದಂಪತಿಗಳ ಸಂಕಷ್ಟದ ವೀಡಿಯೋವನ್ನು ಹಂಚಿಕೊಂಡಿದ್ದು, ಈ ದಂಪತಿಗೆ ಸಹಾಯ ಮಾಡುವಂತೆ ವಾಸನ್ ಜನರನ್ನು ಕೇಳಿದ್ದರು.

- Advertisement -
- Advertisement -

ಯೂಟ್ಯೂಬರ್ ಗೌರವ್ ವಾಸನ್ ದೇಣಿಗೆ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ದೆಹಲಿಯ ಮಾಲ್ವಿಯಾ ನಗರದ ಜನಪ್ರಿಯ ಉಪಾಹಾರ ಗೃಹ “ಬಾಬಾ ಕಾ ಧಾಬಾ”ದ ಮಾಲೀಕರು ಆರೋಪಿಸಿದ್ದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

“ಮಾಲ್ವಿಯಾ ನಗರ ಪೊಲೀಸ್ ಠಾಣೆಯಲ್ಲಿ ನಾವು ನಿನ್ನೆ ದೂರು ಸ್ವೀಕರಿಸಿದ್ದೇವೆ ಮತ್ತು ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಪ್ರಕರಣದಲ್ಲಿ ಇನ್ನೂ ಯಾವುದೇ ಎಫ್ಐಆರ್ ದಾಖಲಾಗಿಲ್ಲ” ಎಂದು ಉಪ ಪೊಲೀಸ್ ಆಯುಕ್ತ ಅತುಲ್ ಕುಮಾರ್ ಠಾಕೂರ್ ಹೇಳಿದ್ದಾರೆ.

ಲಾಕ್‌ಡೌನ್ ನಂತರ ತನ್ನ ವ್ಯವಹಾರದಲ್ಲಿನ ಕುಸಿತದ ಬಗ್ಗೆ ಕಾಂತಾ ಪ್ರಸಾದ್ ಮತ್ತು ಅವರ ಪತ್ನಿ ಮಾತನಾಡುತ್ತಿರುವ ವೀಡಿಯೋವನ್ನು   ಚಿತ್ರೀಕರಿಸಿದ ನಂತರ, ಗ್ರಾಹಕರ ಕೊರತೆಯಿಂದಾಗಿ ದಂಪತಿಗಳು ತಮ್ಮ ರೆಸ್ಟೋರೆಂಟ್ ನಡೆಸಲು ಕಷ್ಟಪಡುತ್ತಿದ್ದಾರೆ ಎಂಬ ಕಾರಣಕ್ಕೆ ಚಾಲ್ತಿಯಲ್ಲಿದ್ದರು.

ಇದನ್ನೂ ಓದಿ: ಸ್ಟಾರ್ಟ್‌‌ಅಪ್‍: ಮೈಸೂರಿನಲ್ಲಿ ಬಯೋಪಾಲಿಮರ್‌ ಉದ್ಯಮ ಆರಂಭಿಸಿದ ಚೀನಾ ರಿಟರ್ನ್‌ ಗುರುಪ್ರಸಾದ್!

ಗೌರವ್ ವಾಸನ್ ತನ್ನ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಈ ವೀಡಿಯೋವನ್ನು ಹಂಚಿಕೊಂಡ ನಂತರ ಇದು ವೈರಲ್ ಆಗಿದೆ. ದಂಪತಿಗೆ ಸಹಾಯ ಮಾಡುವಂತೆ ವಾಸನ್ ಜನರನ್ನು ಕೇಳಿದ್ದರು. ವೈರಲ್ ವೀಡಿಯೊದ ಒಂದು ದಿನದ ನಂತರ, # ಬಾಬಾ ಕಾ ಧಾಬಾ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗಿತ್ತು.

ಇದನ್ನೂ ಓದಿ: ’ಕನ್ನಡ ಕಂಕಣ ದಿನ’; ಕರ್ನಾಟಕ ರಣಧೀರ ಪಡೆಯಿಂದ ವಿಭಿನ್ನ ರಾಜ್ಯೋತ್ಸವ!

ಕಾಂತಾ ಪ್ರಸಾದ್ ಪೊಲೀಸರಿಗೆ ನೀಡಿದ ದೂರಿನಲ್ಲಿ, “ಉದ್ದೇಶಪೂರ್ವಕವಾಗಿ ಗೌರವ್ ವಾಸನ್ ತನ್ನ ಮತ್ತು ತನ್ನ ಕುಟುಂಬ ಅಥವಾ ತನ್ನ ಸ್ನೇಹಿತರ ಬ್ಯಾಂಕ್ ವಿವರಗಳು ಮತ್ತು ಮೊಬೈಲ್ ಸಂಖ್ಯೆಗಳನ್ನು ದಾನಿಗಳೊಂದಿಗೆ ಹಂಚಿಕೊಂಡಿದ್ದಾನೆ. ಇದರಿಂದ ವಿವಿಧ ರೀತಿಯಲ್ಲಿ ಅಪಾರ ಪ್ರಮಾಣದ ದೇಣಿಗೆ ಸಂಗ್ರಹಿಸಿದ್ದು, ಇದರ ಬಗ್ಗೆ ನನಗೆ ಮಾಹಿತಿ ನೀಡಿಲ್ಲ. ಜೊತೆಗೆ ಹನಕಾಸು ವಹಿವಾಟಿನ ವಿವರಗಳನ್ನು ನೀಡುತ್ತಿಲ್ಲ”  ಎಂದು ಆರೋಪಿಸಿದರು.

“ವಾಸನ್‌ನಿಂದ ಕೇವಲ 2 ಲಕ್ಷ ರೂ.ಗಳ ಚೆಕ್ ಪಡೆದುಕೊಂಡಿದ್ದೇನೆ. ಈಗ ಹೆಚ್ಚಿನ ಗ್ರಾಹಕರು ಬರುತ್ತಿಲ್ಲ. ಬರುವವರೂ ಸೆಲ್ಫಿ ತೆಗೆದುಕೊಳ್ಳಲು ಇಲ್ಲಿಗೆ ಬರುತ್ತಾರೆ. ಈ ಮೊದಲು ನಾನು ದಿನಕ್ಕೆ 10,000 ರೂ. ಗಳಿಸುತ್ತಿದ್ದೆ. ಈಗ ಅದು 3,000 ರೂ. 5,000 ರೂಗಳಿಗೆ ಇಳಿದಿದೆ” ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದರು.

ಈ ಆರೋಪಗಳನ್ನು ನಿರಾಕರಿಸಿದ ವಾಸನ್, “ನಾನು ಚಿತ್ರೀಕರಿಸಿದ ಈ ವೀಡಿಯೋ ಇಷ್ಟುಮಟ್ಟಿಗೆ ವೈರಲ್ ಆಗುತ್ತದೆ ಎಂದು ಭಾವಿಸಿರಲಿಲ್ಲ. ಜನರು ಬಾಬಾಗೆ ತೊಂದರೆ ನೀಡಬಾರದು ಎಂಬ ಕಾರಣಕ್ಕೆ ನನ್ನ ಬ್ಯಾಂಕ್ ವಿವರಗಳನ್ನು ಹಂಚಿಕೊಂಡಿದ್ದೆ” ಎಂದು ತಿಳಿಸಿದರು.


ಇದನ್ನೂ ಓದಿ: ’ಕೈ’ಗೆ ಮತ ನೀಡಿ ಎಂದು ಬಿಜೆಪಿ ರ್‍ಯಾಲಿಯಲ್ಲಿ ಸಿಂಧಿಯಾ ಮತ ಯಾಚನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...