Homeಮುಖಪುಟ'ಬಾಬಾ ಕಾ ಧಾಬಾ' ವೀಡಿಯೋ ವೈರಲ್: ಸಂಗ್ರಹಿಸಿದ ದೇಣಿಗೆ ಹಣ ದುರುಪಯೋಗ; ದೂರು!

‘ಬಾಬಾ ಕಾ ಧಾಬಾ’ ವೀಡಿಯೋ ವೈರಲ್: ಸಂಗ್ರಹಿಸಿದ ದೇಣಿಗೆ ಹಣ ದುರುಪಯೋಗ; ದೂರು!

ಗೌರವ್ ವಾಸನ್ ತನ್ನ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಈ ದಂಪತಿಗಳ ಸಂಕಷ್ಟದ ವೀಡಿಯೋವನ್ನು ಹಂಚಿಕೊಂಡಿದ್ದು, ಈ ದಂಪತಿಗೆ ಸಹಾಯ ಮಾಡುವಂತೆ ವಾಸನ್ ಜನರನ್ನು ಕೇಳಿದ್ದರು.

- Advertisement -
- Advertisement -

ಯೂಟ್ಯೂಬರ್ ಗೌರವ್ ವಾಸನ್ ದೇಣಿಗೆ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ದೆಹಲಿಯ ಮಾಲ್ವಿಯಾ ನಗರದ ಜನಪ್ರಿಯ ಉಪಾಹಾರ ಗೃಹ “ಬಾಬಾ ಕಾ ಧಾಬಾ”ದ ಮಾಲೀಕರು ಆರೋಪಿಸಿದ್ದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

“ಮಾಲ್ವಿಯಾ ನಗರ ಪೊಲೀಸ್ ಠಾಣೆಯಲ್ಲಿ ನಾವು ನಿನ್ನೆ ದೂರು ಸ್ವೀಕರಿಸಿದ್ದೇವೆ ಮತ್ತು ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಪ್ರಕರಣದಲ್ಲಿ ಇನ್ನೂ ಯಾವುದೇ ಎಫ್ಐಆರ್ ದಾಖಲಾಗಿಲ್ಲ” ಎಂದು ಉಪ ಪೊಲೀಸ್ ಆಯುಕ್ತ ಅತುಲ್ ಕುಮಾರ್ ಠಾಕೂರ್ ಹೇಳಿದ್ದಾರೆ.

ಲಾಕ್‌ಡೌನ್ ನಂತರ ತನ್ನ ವ್ಯವಹಾರದಲ್ಲಿನ ಕುಸಿತದ ಬಗ್ಗೆ ಕಾಂತಾ ಪ್ರಸಾದ್ ಮತ್ತು ಅವರ ಪತ್ನಿ ಮಾತನಾಡುತ್ತಿರುವ ವೀಡಿಯೋವನ್ನು   ಚಿತ್ರೀಕರಿಸಿದ ನಂತರ, ಗ್ರಾಹಕರ ಕೊರತೆಯಿಂದಾಗಿ ದಂಪತಿಗಳು ತಮ್ಮ ರೆಸ್ಟೋರೆಂಟ್ ನಡೆಸಲು ಕಷ್ಟಪಡುತ್ತಿದ್ದಾರೆ ಎಂಬ ಕಾರಣಕ್ಕೆ ಚಾಲ್ತಿಯಲ್ಲಿದ್ದರು.

ಇದನ್ನೂ ಓದಿ: ಸ್ಟಾರ್ಟ್‌‌ಅಪ್‍: ಮೈಸೂರಿನಲ್ಲಿ ಬಯೋಪಾಲಿಮರ್‌ ಉದ್ಯಮ ಆರಂಭಿಸಿದ ಚೀನಾ ರಿಟರ್ನ್‌ ಗುರುಪ್ರಸಾದ್!

ಗೌರವ್ ವಾಸನ್ ತನ್ನ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಈ ವೀಡಿಯೋವನ್ನು ಹಂಚಿಕೊಂಡ ನಂತರ ಇದು ವೈರಲ್ ಆಗಿದೆ. ದಂಪತಿಗೆ ಸಹಾಯ ಮಾಡುವಂತೆ ವಾಸನ್ ಜನರನ್ನು ಕೇಳಿದ್ದರು. ವೈರಲ್ ವೀಡಿಯೊದ ಒಂದು ದಿನದ ನಂತರ, # ಬಾಬಾ ಕಾ ಧಾಬಾ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗಿತ್ತು.

ಇದನ್ನೂ ಓದಿ: ’ಕನ್ನಡ ಕಂಕಣ ದಿನ’; ಕರ್ನಾಟಕ ರಣಧೀರ ಪಡೆಯಿಂದ ವಿಭಿನ್ನ ರಾಜ್ಯೋತ್ಸವ!

ಕಾಂತಾ ಪ್ರಸಾದ್ ಪೊಲೀಸರಿಗೆ ನೀಡಿದ ದೂರಿನಲ್ಲಿ, “ಉದ್ದೇಶಪೂರ್ವಕವಾಗಿ ಗೌರವ್ ವಾಸನ್ ತನ್ನ ಮತ್ತು ತನ್ನ ಕುಟುಂಬ ಅಥವಾ ತನ್ನ ಸ್ನೇಹಿತರ ಬ್ಯಾಂಕ್ ವಿವರಗಳು ಮತ್ತು ಮೊಬೈಲ್ ಸಂಖ್ಯೆಗಳನ್ನು ದಾನಿಗಳೊಂದಿಗೆ ಹಂಚಿಕೊಂಡಿದ್ದಾನೆ. ಇದರಿಂದ ವಿವಿಧ ರೀತಿಯಲ್ಲಿ ಅಪಾರ ಪ್ರಮಾಣದ ದೇಣಿಗೆ ಸಂಗ್ರಹಿಸಿದ್ದು, ಇದರ ಬಗ್ಗೆ ನನಗೆ ಮಾಹಿತಿ ನೀಡಿಲ್ಲ. ಜೊತೆಗೆ ಹನಕಾಸು ವಹಿವಾಟಿನ ವಿವರಗಳನ್ನು ನೀಡುತ್ತಿಲ್ಲ”  ಎಂದು ಆರೋಪಿಸಿದರು.

“ವಾಸನ್‌ನಿಂದ ಕೇವಲ 2 ಲಕ್ಷ ರೂ.ಗಳ ಚೆಕ್ ಪಡೆದುಕೊಂಡಿದ್ದೇನೆ. ಈಗ ಹೆಚ್ಚಿನ ಗ್ರಾಹಕರು ಬರುತ್ತಿಲ್ಲ. ಬರುವವರೂ ಸೆಲ್ಫಿ ತೆಗೆದುಕೊಳ್ಳಲು ಇಲ್ಲಿಗೆ ಬರುತ್ತಾರೆ. ಈ ಮೊದಲು ನಾನು ದಿನಕ್ಕೆ 10,000 ರೂ. ಗಳಿಸುತ್ತಿದ್ದೆ. ಈಗ ಅದು 3,000 ರೂ. 5,000 ರೂಗಳಿಗೆ ಇಳಿದಿದೆ” ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದರು.

ಈ ಆರೋಪಗಳನ್ನು ನಿರಾಕರಿಸಿದ ವಾಸನ್, “ನಾನು ಚಿತ್ರೀಕರಿಸಿದ ಈ ವೀಡಿಯೋ ಇಷ್ಟುಮಟ್ಟಿಗೆ ವೈರಲ್ ಆಗುತ್ತದೆ ಎಂದು ಭಾವಿಸಿರಲಿಲ್ಲ. ಜನರು ಬಾಬಾಗೆ ತೊಂದರೆ ನೀಡಬಾರದು ಎಂಬ ಕಾರಣಕ್ಕೆ ನನ್ನ ಬ್ಯಾಂಕ್ ವಿವರಗಳನ್ನು ಹಂಚಿಕೊಂಡಿದ್ದೆ” ಎಂದು ತಿಳಿಸಿದರು.


ಇದನ್ನೂ ಓದಿ: ’ಕೈ’ಗೆ ಮತ ನೀಡಿ ಎಂದು ಬಿಜೆಪಿ ರ್‍ಯಾಲಿಯಲ್ಲಿ ಸಿಂಧಿಯಾ ಮತ ಯಾಚನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...