Homeಅಂತರಾಷ್ಟ್ರೀಯಫ್ಯಾಕ್ಟ್‌ಚೆಕ್: ಫ್ರಾನ್ಸ್‌ನ ಮಸೀದಿಯಲ್ಲಿ ಮುಸ್ಲಿಮರ ಮೇಲೆ ದಾಳಿ ನಡೆದಿದೆಯೇ?

ಫ್ಯಾಕ್ಟ್‌ಚೆಕ್: ಫ್ರಾನ್ಸ್‌ನ ಮಸೀದಿಯಲ್ಲಿ ಮುಸ್ಲಿಮರ ಮೇಲೆ ದಾಳಿ ನಡೆದಿದೆಯೇ?

ಅರೇಬಿಕ್ ಶೀರ್ಷಿಕೆ ಹೊಂದಿರುವ ಬಳಕೆದಾರರು ವೀಡಿಯೊವನ್ನು ಹಂಚಿಕೊಂಡಿದ್ದು, "ಫ್ರಾನ್ಸ್ ಮುಸ್ಲಿಮರ ವಿರುದ್ಧ ಯುದ್ಧ ಘೋಷಿಸಿದೆ" ಎಂದು ಬರೆದುಕೊಂಡಿದ್ದಾರೆ.

- Advertisement -
- Advertisement -

ಫ್ರಾನ್ಸ್‌ನ ಮಸೀದಿಯಲ್ಲಿ ಮುಸ್ಲಿಮರ ಮೇಲೆ ದಾಳಿಯಾಗಿದೆ ಎನ್ನುವ ವೀಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಅಕ್ಟೋಬರ್ 29 ರಂದು ಫ್ರಾನ್ಸ್‌ನ ಚರ್ಚ್‌ನಲ್ಲಿ ನಡೆದ ದಾಳಿಯ ಅಕ್ರೋಶದ ನಡುವೆ ಈ ವೀಡಿಯೋ ಹರಿದಾಡುತ್ತಿದೆ.

“ಮ್ಯಾಕ್ರಾನ್ 100 ಕ್ಕೂ ಹೆಚ್ಚು ಮಸೀದಿಗಳನ್ನು ಫ್ರಾನ್ಸ್‌ನಾದ್ಯಂತ ಮುಚ್ಚುತ್ತಲೇ ಇದೆ” ಎಂಬ ಶೀರ್ಷಿಕೆಯೊಂದಿಗೆ ಈ ವೀಡಿಯೊವನ್ನು ಹಂಚಿಕೊಳ್ಳಲಾಗಿದ್ದು, ಈ ಲೇಖನವನ್ನು ಬರೆಯುವ ಸಮಯದಲ್ಲಿ 48,700 ಕ್ಕೂ ಹೆಚ್ಚು ವೀಕ್ಷಣೆಗಳು ಮತ್ತು 1,100 ಲೈಕ್‌ಗಳು ದಾಖಲಾಗಿವೆ.

ಇದನ್ನೂ ಓದಿ: ಫ್ರಾನ್ಸ್ ಚರ್ಚ್‌ ದಾಳಿಯಲ್ಲಿ 3 ಸಾವು: ’ಅಲ್ಲಾಹು ಅಕ್ಬರ್‌’ ಎನ್ನುತ್ತಾ ಮಹಿಳೆಯ ಶಿರಚ್ಚೇದ!

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ತನಿಷ್ಕ್ ಜಾಹೀರಾತಿನ ವಿರುದ್ಧ ದೆಹಲಿಯ ಜಾಮಾ ಮಸೀದಿ ಫತ್ವಾ ಹೊರಡಿಸಿದೆಯೇ?

ಇದರ ಆರ್ಕೈವ್ ಆವತ್ತಿಯನ್ನು ಇಲ್ಲಿ ನೋಡಬಹುದು.

ಅರೇಬಿಕ್ ಶೀರ್ಷಿಕೆ ಹೊಂದಿರುವ ಬಳಕೆದಾರರು ಈ ವೀಡಿಯೊವನ್ನು ಹಂಚಿಕೊಂಡಿದ್ದು, “ಫ್ರಾನ್ಸ್ ಮುಸ್ಲಿಮರ ವಿರುದ್ಧ ಯುದ್ಧ ಘೋಷಿಸಿದೆ” ಎಂದು ಬರೆದುಕೊಂಡಿದ್ದಾರೆ.

ಇದರ ಆರ್ಕೈವ್ ಆವತ್ತಿಯನ್ನು ಇಲ್ಲಿ ನೋಡಬಹುದು. ಇದೇ ಹೆಳಿಕೆಯೊಂದಿಗೆ ನೂರಾರು ಜನ ಸಾಮಾಜಿಕ ಮಾಧ್ಯಮ ಬಳಕೆದಾರರು ಈ ವೀಡಿಯೋವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಬಿಹಾರ ಚುನಾವಣೆಗಾಗಿ ಪ್ರಿಯಾಂಕಾ ಇಂದಿರಾ ಗಾಂಧಿಯವರ ಸೀರೆ ಧರಿಸಿದ್ದಾರೆಯೇ?

ಫ್ಯಾಕ್ಟ್‌ಚೆಕ್: 

ಪ್ಯಾರಿಸ್ ಉಪನಗರ ಕ್ಲಿಚಿಯಲ್ಲಿನ ಮಸೀದಿಯ ಮೇಲೆ ‘ದಾಳಿ ಮಾಡಲಾಗಿದೆ’ ಎಂಬ ಪದವನ್ನು ಬಳಸಿ ಫ್ರೆಂಚ್‌ನಲ್ಲಿ ಕೀವರ್ಡ್ ಹುಡುಕಾಟವನ್ನು ಮಾಡಲಾಯಿತು. ಆಗ ಮಾರ್ಚ್ 2017 ರಲ್ಲಿ ಅಪ್‌ಲೋಡ್ ಮಾಡಲಾದ ಹಲವಾರು ಯೂಟ್ಯೂಬ್ ವೀಡಿಯೊಗಳು ಕಂಡುಬಂದವು. ಈ ವೀಡಿಯೋದಲ್ಲಿ “ಡೌನ್‌ಟೌನ್‌ ಕ್ಲಿಚಿ-ಲಾ-ಗರೆನ್ನೆಯಲ್ಲಿರುವ ಮಸೀದಿಯನ್ನು ಸ್ಥಳಾಂತರಿಸುವುದು” ಮತ್ತು “ಸಿಆರ್‌ಎಸ್ ಪ್ಯಾರಿಸ್‌ ಮುಚ್ಚಿದ ಕ್ಲಿಚಿ ಮಸೀದಿ” ಎಂದು ವಿವರಿಸಲಾಗಿದೆ.

ಪೊಲೀಸ್ ಅಧಿಕಾರಿಗಳು ಎಳೆದಾಡುತ್ತಿರುವ ಕೆಂಪು ಬಣ್ಣದ ಉಡುಪಿನ ವ್ಯಕ್ತಿಯಿರುವ ದೃಶ್ಯಗಳು ಕಂಡುಬಂದಿದೆ.

ಇದನ್ನೂ ಓದಿ: ಬಿಜೆಪಿ ಸೇರಿರುವ ಈ ಶೂಟರ್‌‌ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಪುತ್ರಿ ಅಲ್ಲ; ಯಾರಿವರು?

ಇಷ್ಟೆ ಅಲ್ಲದೆ ಫ್ರೆಂಚ್ ದೈನಂದಿನ ಸುದ್ದಿ ಪತ್ರಿಕೆ ‘20 ಮಿನಿಟ್ಸ್‌’ ಇದೇ ರೀತಿಯ ದೃಶ್ಯಗಳನ್ನು ಹೊಂದಿದೆ.

ಇದರಲ್ಲಿ, ಫ್ರೆಂಚ್ ರಾಷ್ಟ್ರೀಯ ಪೊಲೀಸರ ಸಾಮಾನ್ಯ ಮೀಸಲು “ಕಂಪ್ಯಾಗ್ನೀಸ್ ರಿಪಬ್ಲಿಕನ್ಸ್ ಡಿ ಸೆಕುರಿಟಾ(CRS)” ಕ್ಲಿಚಿಯ ಟೌನ್ ಹಾಲ್‌ನಲ್ಲಿರುವ ‘ಪ್ರಾರ್ಥನಾ ಕೊಠಡಿಯಿಂದ’ ಮುಸ್ಲಿಮರನ್ನು ಸ್ಥಳಾಂತರಿಸಿದೆ ಎಂದು ವರದಿಯಾಗಿದೆ. ಟೌನ್ ಹಾಲ್ ಬದಲಿಗೆ ಮುಸ್ಲಿಂ ಸಮುದಾಯವು ತಮ್ಮ ಪ್ರಾರ್ಥನೆಗಾಗಿ ಆಕ್ರಮಿಸಿಕೊಂಡಿರುವ ಕೋಣೆಯಲ್ಲಿ ಮಾಧ್ಯಮ ಗ್ರಂಥಾಲಯವನ್ನು ಸ್ಥಾಪಿಸಲು ಉದ್ದೇಶಿಸಿದೆ ಎಂದೂ ವರದಿಯಲ್ಲಿ ಹೇಳಲಾಗಿದೆ.

ಹಾಗಾಗಿ ಈ ವರದಿಗಳಿಂದ ತಿಳಿದುಬರುವುದೇನೆಂದರೆ, “2017ರ ಹಳೆಯ ವೀಡಿಯೋವನ್ನು ಇತ್ತೀಚಿನದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ” ಎಂಬುದು ಸ್ಪಷ್ಟವಾಗಿದೆ. ಆದಾಗ್ಯೂ ಕೆಲವು ವರದಿಗಳ ಪ್ರಕಾರ ಪೊಲೀಸರು ಪ್ರಾರ್ಥನಾ ಕೊಠಡಿಯನ್ನಷ್ಟೆ ಸ್ಥಳಾಂತರಿಸಿದ್ದಾರೆ ಎಂಬುದು ತಿಳಿದುಬಂದಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...