Homeಅಂತರಾಷ್ಟ್ರೀಯಫ್ಯಾಕ್ಟ್‌ಚೆಕ್: ಫ್ರಾನ್ಸ್‌ನ ಮಸೀದಿಯಲ್ಲಿ ಮುಸ್ಲಿಮರ ಮೇಲೆ ದಾಳಿ ನಡೆದಿದೆಯೇ?

ಫ್ಯಾಕ್ಟ್‌ಚೆಕ್: ಫ್ರಾನ್ಸ್‌ನ ಮಸೀದಿಯಲ್ಲಿ ಮುಸ್ಲಿಮರ ಮೇಲೆ ದಾಳಿ ನಡೆದಿದೆಯೇ?

ಅರೇಬಿಕ್ ಶೀರ್ಷಿಕೆ ಹೊಂದಿರುವ ಬಳಕೆದಾರರು ವೀಡಿಯೊವನ್ನು ಹಂಚಿಕೊಂಡಿದ್ದು, "ಫ್ರಾನ್ಸ್ ಮುಸ್ಲಿಮರ ವಿರುದ್ಧ ಯುದ್ಧ ಘೋಷಿಸಿದೆ" ಎಂದು ಬರೆದುಕೊಂಡಿದ್ದಾರೆ.

- Advertisement -
- Advertisement -

ಫ್ರಾನ್ಸ್‌ನ ಮಸೀದಿಯಲ್ಲಿ ಮುಸ್ಲಿಮರ ಮೇಲೆ ದಾಳಿಯಾಗಿದೆ ಎನ್ನುವ ವೀಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಅಕ್ಟೋಬರ್ 29 ರಂದು ಫ್ರಾನ್ಸ್‌ನ ಚರ್ಚ್‌ನಲ್ಲಿ ನಡೆದ ದಾಳಿಯ ಅಕ್ರೋಶದ ನಡುವೆ ಈ ವೀಡಿಯೋ ಹರಿದಾಡುತ್ತಿದೆ.

“ಮ್ಯಾಕ್ರಾನ್ 100 ಕ್ಕೂ ಹೆಚ್ಚು ಮಸೀದಿಗಳನ್ನು ಫ್ರಾನ್ಸ್‌ನಾದ್ಯಂತ ಮುಚ್ಚುತ್ತಲೇ ಇದೆ” ಎಂಬ ಶೀರ್ಷಿಕೆಯೊಂದಿಗೆ ಈ ವೀಡಿಯೊವನ್ನು ಹಂಚಿಕೊಳ್ಳಲಾಗಿದ್ದು, ಈ ಲೇಖನವನ್ನು ಬರೆಯುವ ಸಮಯದಲ್ಲಿ 48,700 ಕ್ಕೂ ಹೆಚ್ಚು ವೀಕ್ಷಣೆಗಳು ಮತ್ತು 1,100 ಲೈಕ್‌ಗಳು ದಾಖಲಾಗಿವೆ.

ಇದನ್ನೂ ಓದಿ: ಫ್ರಾನ್ಸ್ ಚರ್ಚ್‌ ದಾಳಿಯಲ್ಲಿ 3 ಸಾವು: ’ಅಲ್ಲಾಹು ಅಕ್ಬರ್‌’ ಎನ್ನುತ್ತಾ ಮಹಿಳೆಯ ಶಿರಚ್ಚೇದ!

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ತನಿಷ್ಕ್ ಜಾಹೀರಾತಿನ ವಿರುದ್ಧ ದೆಹಲಿಯ ಜಾಮಾ ಮಸೀದಿ ಫತ್ವಾ ಹೊರಡಿಸಿದೆಯೇ?

ಇದರ ಆರ್ಕೈವ್ ಆವತ್ತಿಯನ್ನು ಇಲ್ಲಿ ನೋಡಬಹುದು.

ಅರೇಬಿಕ್ ಶೀರ್ಷಿಕೆ ಹೊಂದಿರುವ ಬಳಕೆದಾರರು ಈ ವೀಡಿಯೊವನ್ನು ಹಂಚಿಕೊಂಡಿದ್ದು, “ಫ್ರಾನ್ಸ್ ಮುಸ್ಲಿಮರ ವಿರುದ್ಧ ಯುದ್ಧ ಘೋಷಿಸಿದೆ” ಎಂದು ಬರೆದುಕೊಂಡಿದ್ದಾರೆ.

ಇದರ ಆರ್ಕೈವ್ ಆವತ್ತಿಯನ್ನು ಇಲ್ಲಿ ನೋಡಬಹುದು. ಇದೇ ಹೆಳಿಕೆಯೊಂದಿಗೆ ನೂರಾರು ಜನ ಸಾಮಾಜಿಕ ಮಾಧ್ಯಮ ಬಳಕೆದಾರರು ಈ ವೀಡಿಯೋವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಬಿಹಾರ ಚುನಾವಣೆಗಾಗಿ ಪ್ರಿಯಾಂಕಾ ಇಂದಿರಾ ಗಾಂಧಿಯವರ ಸೀರೆ ಧರಿಸಿದ್ದಾರೆಯೇ?

ಫ್ಯಾಕ್ಟ್‌ಚೆಕ್: 

ಪ್ಯಾರಿಸ್ ಉಪನಗರ ಕ್ಲಿಚಿಯಲ್ಲಿನ ಮಸೀದಿಯ ಮೇಲೆ ‘ದಾಳಿ ಮಾಡಲಾಗಿದೆ’ ಎಂಬ ಪದವನ್ನು ಬಳಸಿ ಫ್ರೆಂಚ್‌ನಲ್ಲಿ ಕೀವರ್ಡ್ ಹುಡುಕಾಟವನ್ನು ಮಾಡಲಾಯಿತು. ಆಗ ಮಾರ್ಚ್ 2017 ರಲ್ಲಿ ಅಪ್‌ಲೋಡ್ ಮಾಡಲಾದ ಹಲವಾರು ಯೂಟ್ಯೂಬ್ ವೀಡಿಯೊಗಳು ಕಂಡುಬಂದವು. ಈ ವೀಡಿಯೋದಲ್ಲಿ “ಡೌನ್‌ಟೌನ್‌ ಕ್ಲಿಚಿ-ಲಾ-ಗರೆನ್ನೆಯಲ್ಲಿರುವ ಮಸೀದಿಯನ್ನು ಸ್ಥಳಾಂತರಿಸುವುದು” ಮತ್ತು “ಸಿಆರ್‌ಎಸ್ ಪ್ಯಾರಿಸ್‌ ಮುಚ್ಚಿದ ಕ್ಲಿಚಿ ಮಸೀದಿ” ಎಂದು ವಿವರಿಸಲಾಗಿದೆ.

ಪೊಲೀಸ್ ಅಧಿಕಾರಿಗಳು ಎಳೆದಾಡುತ್ತಿರುವ ಕೆಂಪು ಬಣ್ಣದ ಉಡುಪಿನ ವ್ಯಕ್ತಿಯಿರುವ ದೃಶ್ಯಗಳು ಕಂಡುಬಂದಿದೆ.

ಇದನ್ನೂ ಓದಿ: ಬಿಜೆಪಿ ಸೇರಿರುವ ಈ ಶೂಟರ್‌‌ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಪುತ್ರಿ ಅಲ್ಲ; ಯಾರಿವರು?

ಇಷ್ಟೆ ಅಲ್ಲದೆ ಫ್ರೆಂಚ್ ದೈನಂದಿನ ಸುದ್ದಿ ಪತ್ರಿಕೆ ‘20 ಮಿನಿಟ್ಸ್‌’ ಇದೇ ರೀತಿಯ ದೃಶ್ಯಗಳನ್ನು ಹೊಂದಿದೆ.

ಇದರಲ್ಲಿ, ಫ್ರೆಂಚ್ ರಾಷ್ಟ್ರೀಯ ಪೊಲೀಸರ ಸಾಮಾನ್ಯ ಮೀಸಲು “ಕಂಪ್ಯಾಗ್ನೀಸ್ ರಿಪಬ್ಲಿಕನ್ಸ್ ಡಿ ಸೆಕುರಿಟಾ(CRS)” ಕ್ಲಿಚಿಯ ಟೌನ್ ಹಾಲ್‌ನಲ್ಲಿರುವ ‘ಪ್ರಾರ್ಥನಾ ಕೊಠಡಿಯಿಂದ’ ಮುಸ್ಲಿಮರನ್ನು ಸ್ಥಳಾಂತರಿಸಿದೆ ಎಂದು ವರದಿಯಾಗಿದೆ. ಟೌನ್ ಹಾಲ್ ಬದಲಿಗೆ ಮುಸ್ಲಿಂ ಸಮುದಾಯವು ತಮ್ಮ ಪ್ರಾರ್ಥನೆಗಾಗಿ ಆಕ್ರಮಿಸಿಕೊಂಡಿರುವ ಕೋಣೆಯಲ್ಲಿ ಮಾಧ್ಯಮ ಗ್ರಂಥಾಲಯವನ್ನು ಸ್ಥಾಪಿಸಲು ಉದ್ದೇಶಿಸಿದೆ ಎಂದೂ ವರದಿಯಲ್ಲಿ ಹೇಳಲಾಗಿದೆ.

ಹಾಗಾಗಿ ಈ ವರದಿಗಳಿಂದ ತಿಳಿದುಬರುವುದೇನೆಂದರೆ, “2017ರ ಹಳೆಯ ವೀಡಿಯೋವನ್ನು ಇತ್ತೀಚಿನದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ” ಎಂಬುದು ಸ್ಪಷ್ಟವಾಗಿದೆ. ಆದಾಗ್ಯೂ ಕೆಲವು ವರದಿಗಳ ಪ್ರಕಾರ ಪೊಲೀಸರು ಪ್ರಾರ್ಥನಾ ಕೊಠಡಿಯನ್ನಷ್ಟೆ ಸ್ಥಳಾಂತರಿಸಿದ್ದಾರೆ ಎಂಬುದು ತಿಳಿದುಬಂದಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...