Homeಚಳವಳಿರಾಜ್ಯೋತ್ಸವದಂದು ಕನ್ನಡ ಧ್ವಜ ಹಾರಿಸದ ಸರ್ಕಾರದ ನಡೆಗೆ ಕನ್ನಡಿಗರ ಆಕ್ರೋಶ: ಟ್ವಿಟರ್ ಆಂದೋಲನಕ್ಕೆ ಕರೆ

ರಾಜ್ಯೋತ್ಸವದಂದು ಕನ್ನಡ ಧ್ವಜ ಹಾರಿಸದ ಸರ್ಕಾರದ ನಡೆಗೆ ಕನ್ನಡಿಗರ ಆಕ್ರೋಶ: ಟ್ವಿಟರ್ ಆಂದೋಲನಕ್ಕೆ ಕರೆ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ಕನ್ನಡ ಧ್ವಜ ಹಾರಿಸಿರುವಾಗ ಜಿಲ್ಲಾ ಉಸ್ತುವಾರಿ ಸಚಿವರು ಬಾವುಟ ಹಾರಿಸದಂತೆ ತಡೆದ ಶಕ್ತಿ ಯಾವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರಶ್ನಿಸಿದೆ.

- Advertisement -
- Advertisement -

ನಿನ್ನೆ 65ನೇ ಕನ್ನಡ ರಾಜ್ಯೋತ್ಸವ ಜರುಗಿದೆ. ಪ್ರತಿ ವರ್ಷವು ಕನ್ನಡದ ಹಬ್ಬದಂತೆ ವಿಜೃಂಭಣೆಯಿಂದ ಆಚರಿಸುತ್ತಿದ್ದ ಕನ್ನಡಿಗರ ಪಾಲಿಗೆ ಈ ವರ್ಷ ಕೊರೊನಾ ಸಣ್ಣ ತಡೆಯಾದರೆ ಬಿಜೆಪಿ ಸರ್ಕಾರ ದೊಡ್ಡ ಬಂಡೆಯಂತೆ ಅಡ್ಡನಿಂತಿದೆ. ರಾಜ್ಯೋತ್ಸವದಂದೇ ಜಿಲ್ಲಾಕೇಂದ್ರಗಳಲ್ಲಿ ಕನ್ನಡ ಧ್ವಜ ಹಾರಿಸದೆ ಕೇವಲ ರಾಷ್ಟ್ರಧ್ವಜ ಮಾತ್ರ ಹಾರಿಸಿದ ಸರ್ಕಾರದ ನಡೆಗೆ ಕನ್ನಡಿಗರು ಕೆಂಡಾಮಂಡಲವಾಗಿದ್ದಾರೆ.

ಮೊದಲಿಗೆ ಕೊರೊನಾ ಮಾರ್ಗಸೂಚಿಗಳ ಅನ್ವಯ 100 ಜನಕ್ಕಿಂತ ಹೆಚ್ಚು ಸೇರಬಾರದು, ಮೆರವಣಿಗೆ ಮಾಡಬಾರದು, ಕಾರ್ಯಕ್ರಮಕ್ಕೆ ಅನುಮತಿ ಪಡೆಯಬೇಕೆಂದು ನಿಯಮಗಳನ್ನು ಹೇರಿದ ಸರ್ಕಾರ, ಉಪಚುನಾವಣೆಯ ಪ್ರಚಾರಕ್ಕೆ ಮಾತ್ರ ನಿಷೇಧ ಹೇರಿಲ್ಲ ಎಂದು ಹಲವು ಕನ್ನಡಿಗರು ಕಿಡಿಕಾರಿದ್ದಾರೆ.

ಮಂಡ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇವಲ ರಾಷ್ಟ್ರ ಧ್ವಜ ಮಾತ್ರ ಹಾರಿಸಿರುವುದು.

ಇನ್ನು ಕನ್ನಡ ರಾಜ್ಯೋತ್ಸವದ ದಿನವಾದ ನಿನ್ನೆ ಹಲವಾರು ಜಿಲ್ಲಾಕೇಂದ್ರಗಳಲ್ಲಿ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಕನ್ನಡ ಧ್ವಜ ಹಾರಿಸದೇ ಕನ್ನಡಿಗರ ಸ್ವಾಭಿಮಾನವನ್ನು ಕೆಣಕಲಾಗಿದೆ. ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ಕನ್ನಡ ಧ್ವಜ ಹಾರಿಸಿರುವಾಗ ಜಿಲ್ಲಾ ಉಸ್ತುವಾರಿ ಸಚಿವರು ಬಾವುಟ ಹಾರಿಸದಂತೆ ತಡೆದ ಶಕ್ತಿ ಯಾವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರಶ್ನಿಸಿದೆ.

ಸರ್ಕಾರದ, ಸಚಿವರುಗಳ ಉದ್ಧಟತನದ, ಅಭಿಮಾನಶೂನ್ಯ ನಡೆಯನ್ನು ಖಂಡಿಸಲು ಇಂದು ಸಂಜೆ 5 ಗಂಟೆಯಿಂದ #ನಮ್ಮಧ್ವಜ_ನಮ್ಮಹೆಮ್ಮೆ ಹೆಸರಿನಲ್ಲಿ ಟ್ವಿಟರ್ ಆಂದೋಲನಕ್ಕೆ ಕರೆ ನೀಡಿದೆ.

ಕರ್ನಾಟಕ ಏಕೀಕರಣದ 65 ವರ್ಷಗಳ ಇತಿಹಾಸದಲ್ಲಿ ರಾಜ್ಯೋತ್ಸವದಂದು ಕನ್ನಡ ಧ್ವಜ ರಾರಾಜಿಸುತ್ತಿತ್ತು. ಆದರೆ 2017 ರಿಂದ ಬಿಜೆಪಿ ಪಕ್ಷ ಮತ್ತು ಸಂಘಪರಿವಾರ ಒಂದು ದೇಶ- ಒಂದು ಧ್ವಜ ಎಂಬ ಹೆಸರಿನಲ್ಲಿ ಕೇವಲ ರಾಷ್ಟ್ರಧ್ವಜ ಮಾತ್ರ ಹಾರಿಸಬೇಕು ಎಂಬ ಪ್ರಚಾರ ಆರಂಭಿಸಿತು. ಅಲ್ಲಿಂದ ಆರಂಭವಾಗಿ ದೇಶಕ್ಕೆ ಒಂದೇ ಧ್ವಜ ಸಾಕು, ಕನ್ನಡ ಧ್ವಜದ ಅವಶ್ಯಕತೆಯಿಲ್ಲ ಎನ್ನುವಷ್ಟರ ಮಟ್ಟಿಗೆ ಚರ್ಚೆಗಳು ನಡೆದಿವೆ. ದೇಶದ ಏಕತೆ, ಏಕ ರಾಷ್ಟ್ರ-ಏಕ ಸಂಸ್ಕೃತಿ ಎಂಬಂತೆ ರಾಷ್ಟ್ರಧ್ವಜವೇ ಸಾಕು ಎಂಬುದು ಸಂಘಪರಿವಾರದ ಅಭಿಪ್ರಾಯ.

ಇದಕ್ಕೆ ವಿರುದ್ಧವಾಗಿ ನಮಗೆ ರಾಷ್ಟ್ರಧ್ವಜ ಮತ್ತು ನಾಡಧ್ವಜ ಎರಡೂ ಬೇಕು. ಕನ್ನಡ ಧ್ವಜ ನಮ್ಮ ಸ್ವಾಭಿಮಾನದ ಸಂಕೇತ. ಕನ್ನಡ ರಾಜ್ಯೋತ್ಸವದಂದು ನಾಡಧ್ವಜ ಹಾರಬೇಕು ಎಂದು ಕನ್ನಡಿಗರು ಮತ್ತು ಪ್ರಗತಿಪರರು ಒತ್ತಾಯಿಸಿದ್ದರು.

ಕಳೆದ ವರ್ಷ ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೆಲ ತಹಶೀಲ್ದಾರ್‌ಗಳು ಕನ್ನಡ ಧ್ವಜ ಹಾರಿಸದಂತೆ ಸುತ್ತೋಲೆ ಹೊರಡಿಸಿದ್ದರು. ಇದರಿಂದ ಹಲವು ಜಿಲ್ಲಾಕೇಂದ್ರಗಳಲ್ಲಿ ಕೇವಲ ರಾಷ್ಟ್ರಧ್ವಜ ಹಾರಿಸಿ ರಾಜ್ಯೋತ್ಸವ ಮಾಡಲಾಗಿತ್ತು. ಇದರಿಂದ ಸಿಡಿದೆದ್ದ ಕನ್ನಡಿಗರು ರಾಜ್ಯದ್ಯಂತ ಪ್ರತಿಭಟನೆ ನಡೆಸಿದ್ದರು. ಅಷ್ಟು ಮಾತ್ರವಲ್ಲದೇ ಸ್ವಾತಂತ್ರ್ಯ ದಿನಾಚರಣೆಯಂದು ಕೇವಲ ಕನ್ನಡ ಬಾವುಟ ಹಾರಿಸಿ ತಮ್ಮ ಪ್ರತಿರೋಧ ವ್ಯಕ್ತಪಡಿಸಿದ್ದರು.

ಈ ವರ್ಷವೂ ಸಹ ಬಿಜೆಪಿ ಸರ್ಕಾರ ಜಿಲ್ಲಾ ಕೇಂದ್ರಗಳಲ್ಲಿ ಕೇವಲ ರಾಷ್ಟ್ರಧ್ವಜ ಹಾರಿಸಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ಇದು ಕೇವಲ ಧ್ವಜದ ವಿಷಯ ಮಾತ್ರವಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕನ್ನಡಿಗರ ಅಸ್ಮಿತೆಯನ್ನು ಪ್ರಶ್ನಿಸುವ ಕೆಲಸದಲ್ಲಿ ನಿರತವಾಗಿವೆ ಎಂದು ಕನ್ನಡಿಗರು ಸಿಡಿದೆದ್ದಿದ್ದಾರೆ.


ಇದನ್ನೂ ಓದಿ: ಕನ್ನಡ ಧ್ವಜಾರೋಹಣವಿಲ್ಲದೇ ಕನ್ನಡ ರಾಜ್ಯೋತ್ಸವ: ಸರ್ಕಾರದ ವಿರುದ್ಧ ಕಿಡಿ ಕಾರಿದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...