Homeಚಳವಳಿರಾಜ್ಯೋತ್ಸವದಂದು ಕನ್ನಡ ಧ್ವಜ ಹಾರಿಸದ ಸರ್ಕಾರದ ನಡೆಗೆ ಕನ್ನಡಿಗರ ಆಕ್ರೋಶ: ಟ್ವಿಟರ್ ಆಂದೋಲನಕ್ಕೆ ಕರೆ

ರಾಜ್ಯೋತ್ಸವದಂದು ಕನ್ನಡ ಧ್ವಜ ಹಾರಿಸದ ಸರ್ಕಾರದ ನಡೆಗೆ ಕನ್ನಡಿಗರ ಆಕ್ರೋಶ: ಟ್ವಿಟರ್ ಆಂದೋಲನಕ್ಕೆ ಕರೆ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ಕನ್ನಡ ಧ್ವಜ ಹಾರಿಸಿರುವಾಗ ಜಿಲ್ಲಾ ಉಸ್ತುವಾರಿ ಸಚಿವರು ಬಾವುಟ ಹಾರಿಸದಂತೆ ತಡೆದ ಶಕ್ತಿ ಯಾವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರಶ್ನಿಸಿದೆ.

- Advertisement -
- Advertisement -

ನಿನ್ನೆ 65ನೇ ಕನ್ನಡ ರಾಜ್ಯೋತ್ಸವ ಜರುಗಿದೆ. ಪ್ರತಿ ವರ್ಷವು ಕನ್ನಡದ ಹಬ್ಬದಂತೆ ವಿಜೃಂಭಣೆಯಿಂದ ಆಚರಿಸುತ್ತಿದ್ದ ಕನ್ನಡಿಗರ ಪಾಲಿಗೆ ಈ ವರ್ಷ ಕೊರೊನಾ ಸಣ್ಣ ತಡೆಯಾದರೆ ಬಿಜೆಪಿ ಸರ್ಕಾರ ದೊಡ್ಡ ಬಂಡೆಯಂತೆ ಅಡ್ಡನಿಂತಿದೆ. ರಾಜ್ಯೋತ್ಸವದಂದೇ ಜಿಲ್ಲಾಕೇಂದ್ರಗಳಲ್ಲಿ ಕನ್ನಡ ಧ್ವಜ ಹಾರಿಸದೆ ಕೇವಲ ರಾಷ್ಟ್ರಧ್ವಜ ಮಾತ್ರ ಹಾರಿಸಿದ ಸರ್ಕಾರದ ನಡೆಗೆ ಕನ್ನಡಿಗರು ಕೆಂಡಾಮಂಡಲವಾಗಿದ್ದಾರೆ.

ಮೊದಲಿಗೆ ಕೊರೊನಾ ಮಾರ್ಗಸೂಚಿಗಳ ಅನ್ವಯ 100 ಜನಕ್ಕಿಂತ ಹೆಚ್ಚು ಸೇರಬಾರದು, ಮೆರವಣಿಗೆ ಮಾಡಬಾರದು, ಕಾರ್ಯಕ್ರಮಕ್ಕೆ ಅನುಮತಿ ಪಡೆಯಬೇಕೆಂದು ನಿಯಮಗಳನ್ನು ಹೇರಿದ ಸರ್ಕಾರ, ಉಪಚುನಾವಣೆಯ ಪ್ರಚಾರಕ್ಕೆ ಮಾತ್ರ ನಿಷೇಧ ಹೇರಿಲ್ಲ ಎಂದು ಹಲವು ಕನ್ನಡಿಗರು ಕಿಡಿಕಾರಿದ್ದಾರೆ.

ಮಂಡ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇವಲ ರಾಷ್ಟ್ರ ಧ್ವಜ ಮಾತ್ರ ಹಾರಿಸಿರುವುದು.

ಇನ್ನು ಕನ್ನಡ ರಾಜ್ಯೋತ್ಸವದ ದಿನವಾದ ನಿನ್ನೆ ಹಲವಾರು ಜಿಲ್ಲಾಕೇಂದ್ರಗಳಲ್ಲಿ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಕನ್ನಡ ಧ್ವಜ ಹಾರಿಸದೇ ಕನ್ನಡಿಗರ ಸ್ವಾಭಿಮಾನವನ್ನು ಕೆಣಕಲಾಗಿದೆ. ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ಕನ್ನಡ ಧ್ವಜ ಹಾರಿಸಿರುವಾಗ ಜಿಲ್ಲಾ ಉಸ್ತುವಾರಿ ಸಚಿವರು ಬಾವುಟ ಹಾರಿಸದಂತೆ ತಡೆದ ಶಕ್ತಿ ಯಾವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರಶ್ನಿಸಿದೆ.

ಸರ್ಕಾರದ, ಸಚಿವರುಗಳ ಉದ್ಧಟತನದ, ಅಭಿಮಾನಶೂನ್ಯ ನಡೆಯನ್ನು ಖಂಡಿಸಲು ಇಂದು ಸಂಜೆ 5 ಗಂಟೆಯಿಂದ #ನಮ್ಮಧ್ವಜ_ನಮ್ಮಹೆಮ್ಮೆ ಹೆಸರಿನಲ್ಲಿ ಟ್ವಿಟರ್ ಆಂದೋಲನಕ್ಕೆ ಕರೆ ನೀಡಿದೆ.

ಕರ್ನಾಟಕ ಏಕೀಕರಣದ 65 ವರ್ಷಗಳ ಇತಿಹಾಸದಲ್ಲಿ ರಾಜ್ಯೋತ್ಸವದಂದು ಕನ್ನಡ ಧ್ವಜ ರಾರಾಜಿಸುತ್ತಿತ್ತು. ಆದರೆ 2017 ರಿಂದ ಬಿಜೆಪಿ ಪಕ್ಷ ಮತ್ತು ಸಂಘಪರಿವಾರ ಒಂದು ದೇಶ- ಒಂದು ಧ್ವಜ ಎಂಬ ಹೆಸರಿನಲ್ಲಿ ಕೇವಲ ರಾಷ್ಟ್ರಧ್ವಜ ಮಾತ್ರ ಹಾರಿಸಬೇಕು ಎಂಬ ಪ್ರಚಾರ ಆರಂಭಿಸಿತು. ಅಲ್ಲಿಂದ ಆರಂಭವಾಗಿ ದೇಶಕ್ಕೆ ಒಂದೇ ಧ್ವಜ ಸಾಕು, ಕನ್ನಡ ಧ್ವಜದ ಅವಶ್ಯಕತೆಯಿಲ್ಲ ಎನ್ನುವಷ್ಟರ ಮಟ್ಟಿಗೆ ಚರ್ಚೆಗಳು ನಡೆದಿವೆ. ದೇಶದ ಏಕತೆ, ಏಕ ರಾಷ್ಟ್ರ-ಏಕ ಸಂಸ್ಕೃತಿ ಎಂಬಂತೆ ರಾಷ್ಟ್ರಧ್ವಜವೇ ಸಾಕು ಎಂಬುದು ಸಂಘಪರಿವಾರದ ಅಭಿಪ್ರಾಯ.

ಇದಕ್ಕೆ ವಿರುದ್ಧವಾಗಿ ನಮಗೆ ರಾಷ್ಟ್ರಧ್ವಜ ಮತ್ತು ನಾಡಧ್ವಜ ಎರಡೂ ಬೇಕು. ಕನ್ನಡ ಧ್ವಜ ನಮ್ಮ ಸ್ವಾಭಿಮಾನದ ಸಂಕೇತ. ಕನ್ನಡ ರಾಜ್ಯೋತ್ಸವದಂದು ನಾಡಧ್ವಜ ಹಾರಬೇಕು ಎಂದು ಕನ್ನಡಿಗರು ಮತ್ತು ಪ್ರಗತಿಪರರು ಒತ್ತಾಯಿಸಿದ್ದರು.

ಕಳೆದ ವರ್ಷ ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೆಲ ತಹಶೀಲ್ದಾರ್‌ಗಳು ಕನ್ನಡ ಧ್ವಜ ಹಾರಿಸದಂತೆ ಸುತ್ತೋಲೆ ಹೊರಡಿಸಿದ್ದರು. ಇದರಿಂದ ಹಲವು ಜಿಲ್ಲಾಕೇಂದ್ರಗಳಲ್ಲಿ ಕೇವಲ ರಾಷ್ಟ್ರಧ್ವಜ ಹಾರಿಸಿ ರಾಜ್ಯೋತ್ಸವ ಮಾಡಲಾಗಿತ್ತು. ಇದರಿಂದ ಸಿಡಿದೆದ್ದ ಕನ್ನಡಿಗರು ರಾಜ್ಯದ್ಯಂತ ಪ್ರತಿಭಟನೆ ನಡೆಸಿದ್ದರು. ಅಷ್ಟು ಮಾತ್ರವಲ್ಲದೇ ಸ್ವಾತಂತ್ರ್ಯ ದಿನಾಚರಣೆಯಂದು ಕೇವಲ ಕನ್ನಡ ಬಾವುಟ ಹಾರಿಸಿ ತಮ್ಮ ಪ್ರತಿರೋಧ ವ್ಯಕ್ತಪಡಿಸಿದ್ದರು.

ಈ ವರ್ಷವೂ ಸಹ ಬಿಜೆಪಿ ಸರ್ಕಾರ ಜಿಲ್ಲಾ ಕೇಂದ್ರಗಳಲ್ಲಿ ಕೇವಲ ರಾಷ್ಟ್ರಧ್ವಜ ಹಾರಿಸಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ಇದು ಕೇವಲ ಧ್ವಜದ ವಿಷಯ ಮಾತ್ರವಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕನ್ನಡಿಗರ ಅಸ್ಮಿತೆಯನ್ನು ಪ್ರಶ್ನಿಸುವ ಕೆಲಸದಲ್ಲಿ ನಿರತವಾಗಿವೆ ಎಂದು ಕನ್ನಡಿಗರು ಸಿಡಿದೆದ್ದಿದ್ದಾರೆ.


ಇದನ್ನೂ ಓದಿ: ಕನ್ನಡ ಧ್ವಜಾರೋಹಣವಿಲ್ಲದೇ ಕನ್ನಡ ರಾಜ್ಯೋತ್ಸವ: ಸರ್ಕಾರದ ವಿರುದ್ಧ ಕಿಡಿ ಕಾರಿದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...