Homeಮುಖಪುಟಸಾಹಿತ್ಯ, ಸಾಂಸ್ಕೃತಿಕ ಹೆಗ್ಗುರುತಾಗಿದ್ದ ಶಿವಮೊಗ್ಗ ಕರ್ನಾಟಕ ಸಂಘದ ಮಾನ ಬೀದಿಗೆ ಬಂದಿದ್ದೇಕೆ!

ಸಾಹಿತ್ಯ, ಸಾಂಸ್ಕೃತಿಕ ಹೆಗ್ಗುರುತಾಗಿದ್ದ ಶಿವಮೊಗ್ಗ ಕರ್ನಾಟಕ ಸಂಘದ ಮಾನ ಬೀದಿಗೆ ಬಂದಿದ್ದೇಕೆ!

ಕರ್ನಾಟಕ ಸಂಘದ ನಿರಂತರ ಕಾರ್ಯಕ್ರಮಗಳ ಮೂಲಕ ಶಿವಮೊಗ್ಗೆಯಲ್ಲಿ ಸಾಹಿತ್ಯ, ಸಾಂಸ್ಕೃತಿಕ ವಾತಾವರಣ ಗಟ್ಟಿಯಾಗಿ ಬೆಳದಿರುವುದಂತೂ ಸತ್ಯ. ಶಿವಮೊಗ್ಗೆಯ ಬಹುಪಾಲು ರಂಗತಂಡಗಳಿಗೆ, ಸಾಮಾಜಿಕ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಇದು ಆಸರೆಯಾಗಿತ್ತು.

- Advertisement -
- Advertisement -

ರಾಜ್ಯದಾದ್ಯಂತ 65ನೇ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಿಂದ ಅಚರಿಸಲಾಗುತ್ತಿದೆ. ಕರೋನಾ ನಡುವೆಯೂ ಎಲ್ಲೆಡೆ ಕನ್ನಡದ ವಾತಾವರಣ ಸಂಭ್ರಮಿಸುತ್ತಿದೆ. ಆದರೆ, ಕನ್ನಡ ನುಡಿ ಸೇವೆ. ಸಾಂಸ್ಕೃತಿಕ ಹೆಗ್ಗಳಿಕೆಯಾಗಿ 90 ವರ್ಷಗಳ ಇತಿಹಾಸವಿರುವ ನಾಡಿನ ಪ್ರತಿಷ್ಟಿತ ಶಿವಮೊಗ್ಗೆಯ ಕರ್ನಾಟಕ ಸಂಘದ ಘನತೆ ಈಗ ಆಡಳಿತ ಮಂಡಳಿಯೊಳಗಿನ ಕಿತ್ತಾಟದಿಂದ ಬೀದಿಗೆ ಬಂದಿದೆ.

ನಾಡಿನ ಸಾಹಿತ್ಯ, ಸಾಂಸ್ಕೃತಿಕ ವಲಯಕ್ಕೆ ಶಿವಮೊಗ್ಗ ಜಿಲ್ಲೆಯ ಕೊಡುಗೆ ಅನನ್ಯ. ಸಾಮಾಜಿಕ ಚಳವಳಿಯ ಜೊತೆಗೆ ಸಾಹಿತ್ಯ ಚಳವಳಿಯ ಧ್ಯೋತಕ ಈ ಜಿಲ್ಲೆ. ಈ ಹಿನ್ನಲೆಯಲ್ಲೇ ನಾಡಿನ ಆಸ್ತಿಯೆಂದೆ ಕರೆಯಲ್ಪಡುವ ಮಾಸ್ತಿ ವೆಂಕಟೇಶ ಅಯ್ಯಂಗಾರ್, ದ. ರಾ. ಬೇಂದ್ರೆಯವರ ಸಲಹೆಯಂತೆ 8 ನೇ ನವೆಂಬರ್ 1930 ರಲ್ಲಿ ಶಿವಮೊಗ್ಗದಲ್ಲಿ ಕರ್ನಾಟಕ ಸಂಘವನ್ನು ಸ್ಥಾಪಿಸಲಾಯಿತು. ಇದೇ ನವೆಂಬರ್ 08 ಕ್ಕೆ ಬರೋಬ್ಬರಿ 90 ವರ್ಷಗಳು ತುಂಬಲಿದ್ದು, ನಾಡಿನ ಗಮನ ಸೆಳೆಯುವಂತೆ ಶತಮಾನೋತ್ಸವದ ಸಡಗರ, ಸಂಭ್ರಮ ಮನೆ ಮಾಡಬೇಕಿತ್ತು. ಆದರೀಗ ಇದೇ ಕರ್ನಾಟಕ ಸಂಘ, ಸ್ವಾರ್ಥ, ಜಾತಿ ಪಿತೂರಿಗಳಿಗೆ ತುತ್ತಾಗಿ ಸೂತಕದ ಛಾಯೆ ಆವರಿಸಿದೆ.

1936 ರವರೆಗೆ ಬಾಡಿಗೆ ಕಟ್ಟಡಗಳಲ್ಲಿ ನುಡಿ ಸೇವೆಯ ಕಾರ್ಯನಿರ್ವಹಿಸುತ್ತಿದ್ದ ಈ ಕರ್ನಾಟಕ ಸಂಘಕ್ಕೆ ಒಂದು ಸುಸಜ್ಜಿತವಾದ ಕಟ್ಟಡವನ್ನು ಒದಗಿಸಿಕೊಟ್ಟವರು ಹಸೂಡಿ ವೆಂಕಟ ಶಾಸ್ತ್ರಿಯವರು.

ಅಂದಿನ ಪುರಸಭೆ ಒದಗಿಸಿದ ಜಾಗದಲ್ಲಿ, 40 ರ ದಶಕದಲ್ಲಿ, 30 ಸಾವಿರ ರೂಪಾಯಿಗಳನ್ನು ವ್ಯಯಿಸಿ, ಈ ಕಟ್ಟಡವನ್ನು ಕಟ್ಟಿಸಿಕೊಟ್ಟಿದ್ದರು. ಈ ಕಟ್ಟಡಕ್ಕೆ ಬಿ. ಎಂ. ಶ್ರೀಕಂಠಯ್ಯರವರು 1942 ರಲ್ಲಿ ಶಿಲಾನ್ಯಾಸ ಮಾಡಿದ್ದರು. 11 ನೇ ಡಿಸೆಂಬರ್ 1943 ರಂದು ಅಂದಿನ ಮೈಸೂರು ಸಂಸ್ಥಾನದ ಮಹಾರಾಜರಾಗಿದ್ದ ಶ್ರೀ ಜಯಚಾಮರಾಜ ಒಡೆಯರ್ ಕಟ್ಟಡವನ್ನು ಲೋಕಾರ್ಪಣೆಗೊಳಿಸಿದ್ದರು.

ದ. ರಾ. ಬೇಂದ್ರೆಯವರು ಸಲಹೆಯಂತೆ, ಈ ಕಟ್ಟಡಕ್ಕೆ ದಾನಿಗಳಾದ ‘ಹಸೂಡಿ ವೆಂಕಟ ಶಾಸ್ತ್ರಿ ಸಾಹಿತ್ಯ ಭವನ’ ಎಂದು ಹೆಸರಿಡಲಾಗಿದ್ದರೂ, ಕರ್ನಾಟಕ ಸಂಘ ಎಂದೇ ಜನಜನಿತ.

ಈ ಕರ್ನಾಟಕ ಸಂಘಕ್ಕೆ 1942 ರಲ್ಲಿ ದ. ರಾ. ಬೇಂದ್ರೆಯವರ ಅಧ್ಯಕ್ಷತೆಯಲ್ಲಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, ಮುಂದೆ 1979 ರಲ್ಲಿ ಡಾ. ಎಸ್. ವಿ. ರಂಗಣ್ಣರವರ ಅಧ್ಯಕ್ಷತೆಯಲ್ಲಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ 1989 ರಲ್ಲಿ ಡಾ. ಎಸ್. ತಿಪ್ಪೇರುದ್ರ ಸ್ವಾಮಿಯವರ ಅಧ್ಯಕ್ಷತೆಯಲ್ಲಿನ ಮೂರನೇ ಶಿವಮೊಗ್ಗ ಜಿಲ್ಲಾ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಿದ ಹೆಗ್ಗಳಿಕೆಯೂ ಇದೆ.

ಕರ್ನಾಟಕ ಸಂಘದ ನಿರಂತರ ಕಾರ್ಯಕ್ರಮಗಳ ಮೂಲಕ ಶಿವಮೊಗ್ಗೆಯಲ್ಲಿ ಸಾಹಿತ್ಯ, ಸಾಂಸ್ಕೃತಿಕ ವಾತಾವರಣ ಗಟ್ಟಿಯಾಗಿ ಬೆಳದಿರುವುದಂತೂ ಸತ್ಯ. ಶಿವಮೊಗ್ಗೆಯ ಬಹುಪಾಲು ರಂಗತಂಡಗಳಿಗೆ, ಸಾಮಾಜಿಕ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಈ ಕರ್ನಾಟಕ ಸಂಘವೇ ಆಸರೆಯಾಗಿತ್ತು.

ಈ ನಾಡಿನ ಸಾಹಿತ್ಯ ದಿಗ್ಗಜರ, ಉದಯೋನ್ಮುಖ ಕವಿ, ಕತೆಗಾರರ ಗ್ರಂಥ ಪ್ರಕಟಣೆ, ಗೌರವ ಸದಸ್ಯತ್ವ ಪ್ರದಾನ, ಪುಸ್ತಕ ಬಹುಮಾನ, ತಿಂಗಳ ಅತಿಥಿ, ನನ್ನ ಪ್ರೀತಿಯ ಪುಸ್ತಕ, ಸುಸಜ್ಜಿತ ಗ್ರಂಥಾಲಯ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುತ್ತಾ, ಕರ್ನಾಟಕ ಸಂಘವು ಇಡೀ ಮಲೆನಾಡು ಅಷ್ಟೇ ಅಲ್ಲ, ರಾಜ್ಯದಲ್ಲಿಯೇ ವಿಶಿಷ್ಟ ಸ್ಥಾನವನ್ನು ಪಡೆದಿದೆ ಎಂದರೆ, ಖಂಡಿತಾ ಉತ್ಪ್ರೇಕ್ಷೆಯಲ್ಲ.

ಇಂತಹ ಕನ್ನಡ ಸೇವೆಯ ಘನತೆಯಾಗಿದ್ದ ಕರ್ನಾಟಕ ಸಂಘ ಇಂದು ವಿವಾದಕ್ಕೆ ತುತ್ತಾಗಿ ಹಿರಿಯ ಚೇತನಗಳ ಆಶಯಗಳನ್ನು ಮಣ್ಣುಪಾಲು ಮಾಡುವತ್ತಾ ಸಾಗಿದೆ. ಕರ್ನಾಟಕ ಸಂಘದ ಆಡಳಿತ ಹಿಡಿತಕ್ಕೆ ನಡೆದ ಹುನ್ನಾರ ದ ಫಲವಾಗಿ ಕರ್ನಾಟಕ ಸಂಘದ ಕಾರ್ಯಕಾರಿ ಸಮಿತಿಯಲ್ಲೇ ಭುಗಿಲೆದ್ದ ಅಸಮಾಧಾನ ಅಧ್ಯಕ್ಷರೂ ಸೇರಿದಂತೆ ಮೂವರು ಪದಾಧಿಕಾರಿಗಳು ಹಾಗೂ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಮೂರು ಸಿಬ್ಬಂದಿಯ ರಾಜೀನಾಮೆಯೊಂದಿಗೆ ಒಳಗೊಳಗೆ ಕುದಿಯುತ್ತಿದ್ದ ಹಗೆ ಸ್ಫೋಟಗೊಂಡಿದೆ.

ಹಿರಿಯ ಸಜ್ಜನ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಕೆ.ಓಂಕಾರಪ್ಪ ನೇತೃತ್ವದಲ್ಲಿ ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದಿದ್ದ ಸಮಿತಿ ನಿಜಕ್ಕೂ ಕೂಡಾ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲೇ, ನಡೆದಿರುವ ಈ ಅನಿರೀಕ್ಷಿತ ಬೆಳವಣಿಗೆ ಕರ್ನಾಟಕ ಸಂಘದ ಅಭಿವೃದ್ಧಿಗೆ ಇದುವರೆಗೆ ಬೆವರು ಹರಿಸಿದವರಿಗೆ ಬೇಸರ ಉಂಟು ಮಾಡಿದೆ. ಕರ್ನಾಟಕ ಸಂಘ ಉಪಾಧ್ಯಕ್ಷ ಉದಯಶಂಕರ ಶಾಸ್ತ್ರಿ ಮತ್ತವರ ಪಟಾಲಂನ ಹಿತಾಸಕ್ತಿ ಈಗ ಕರ್ನಾಟಕ ಸಂಘವನ್ನು ಮನಸ್ಸೋಃಇಚ್ಛೆ ಆಡಳಿತಕ್ಕೆ ಅಡ್ಡೆಯನ್ನಾಗಿಸಿಕೊಳ್ಳುವ ಸಂಚು ನಡೆಸಿರುವುದು ಸಾಹಿತ್ಯ ವಲಯದ ಅಸಮಾಧಾನಕ್ಕೆ ಕಾರಣವಾಗಿದೆ.

ಮಳೆಗಾಲದ ಸಂದರ್ಭದಲ್ಲಿ ಸೋರುತ್ತಿದ್ದ ಕರ್ನಾಟಕ ಸಂಘದ ಮೇಲ್ಚಾವಣಿಯ ನವೀಕರಣ ಕಾಮಗಾರಿಯೇ ಸಮಿತಿಯೊಳಗೆ ಭಿನ್ನಾಭಿಪ್ರಾಯ ಸೃಷ್ಟಿಯಾಗಲು ಕಾರಣ ಎನ್ನಲಾಗುತ್ತಿದೆ. ಕರ್ನಾಟಕ ಸಂಘದ ಮೇಲ್ಚಾವಣಿ ಅಷ್ಟೇ ಸೋರುತ್ತಿಲ್ಲ. ಬದಲಾಗಿ ಪಟ್ಟಭದ್ರ ಹಿತಾಸಕ್ತಿಗಳ ಮನಸ್ಸೂ ಕೂಡಾ ಸೋರಲಾರಂಭಿಸಿರುವುದು ನಿಜಕ್ಕೂ ಕೂಡಾ ವಿಪರ್ಯಾಸದ ಸಂಗತಿ. ಈ ನವೀಕರಣ ಕಾಮಗಾರಿಯಲ್ಲಿ ಮಿತಿಮೀರಿದ ಹಣದ ಅಪವ್ಯಯ ತಡೆಗಟ್ಟಲು ಅಧ್ಯಕ್ಷ ಪ್ರೊ.ಕೆ.ಓಂಕಾರಪ್ಪ, ಖಚಾಂಚಿ ಕೆ.ಜಿ.ವೆಂಕಟೇಶ್, ಗೌರವ ಕಾರ್ಯದರ್ಶಿ ಪ್ರೊ.ಎಚ್.ಎಸ್.ನಾಗಭೂಷಣ ಮುಂದಾಗಿದ್ದು, ಇದು ಉಪಾಧ್ಯಕ್ಷ ಉದಯಶಂಕರ ಶಾಸ್ತ್ರಿ ಮತ್ತವರ ಟೀಮ್ ಗೆ ಅಪಥ್ಯವಾಗಿತ್ತು.

ಆರ್ಥಿಕ ಶಿಸ್ತನ್ನು ಸಹಿಸದ ಗುಂಪು ಸಿಬ್ಬಂದಿ ಹಾಗೂ ಪದಾಧಿಕಾರಿಗಳ ನಡುವೆ ವೈಮನಸ್ಸು ಬೆಳೆಯುವಂತೆ ನೋಡಿಕೊಂಡಿತಲ್ಲದೆ , ಪದಾಧಿಕಾರಿಗಳ ವಿರುದ್ಧವೆ ಸಿಬ್ಬಂದಿಗಳ ಮೂಲಕ ಜಾತಿ ನಿಂದನೆ ದೂರು ದಾಖಲಿಸುವ ಷಡ್ಯಂತ್ರ ವೂ ನಡೆದು ಜಾತ್ಯಾತೀತವಾಗಿ ಸಾಹಿತ್ಯಿಕ ಕಾರ್ಯಕ್ರಮ ರೂಪಿಸುತ್ತಿದ್ದ ಸಂಸ್ಥೆಯೊಳಗೆ ಜಾತಿಯ ವಿಷ ಬೀಜ ಬಿತ್ತಲಾಯಿತು. ಅಷ್ಟೇ ಅಲ್ಲ, ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿಯೋರ್ವರ ಬಗ್ಗೆ ಕೂಡಾ ಅನಗತ್ಯವಾಗಿ ನಿಂದನೆಯ ಪ್ರಸ್ತಾಪ ಮಾಡಲಾಗಿತ್ತು. ಆ ಸಿಬ್ಬಂದಿಯನ್ನು ಸಂಬಂಧ ಇಲ್ಲದಿದ್ದರೂ ಸಹ ಪ್ರಸ್ತಾಪಿಸಲಾಗಿತ್ತು. ಜೊತೆಗೆ ಹಿರಿಯ ಸಿಬ್ಬಂದಿಗಳ ಬಗ್ಗೆ ಅವಾಚ್ಯವಾಗಿ ಬರೆಯಲಾಗಿತ್ತು. ಈ ಎಲ್ಲಾ ಸಂಗತಿಗಳನ್ನು ಸಹ ಪೂರ್ವಾಗ್ರಹ ಪೀಡಿತವಾಗಿಯೇ ಬರೆದಿದ್ದು, ಇದಕ್ಕೆ ಸಂಘದ ಪದಾಧಿಕಾರಿಯೋರ್ವರ ಚಿತಾವಣೆ ಕೂಡಾ ಇದೆ ಎಂದೇ ಹೇಳಲಾಗಿದೆ.

ಕರ್ನಾಟಕ ಸಂಘದ ಯಾವ ಚಟುವಟಿಕೆಯಲ್ಲೂ ಭಾಗವಹಿಸದ, ನವೀಕರಣ ಸಂದರ್ಭದಲ್ಲೂ ಮೌನವಾಗಿದ್ದ ಸಂಘದ ಉಪಾಧ್ಯಕ್ಷ ಉದಯಶಂಕರ ಶಾಸ್ತ್ರಿ ಏಕಾಏಕಿ ಸಕ್ರಿಯರಾಗಿದ್ದು, ತಮ್ಮ ಪೂರ್ವಿಕರಾದ ಹಸೊಡಿ ವೆಂಕಟಶಾಸ್ತ್ರಿ ಅವರು ಕರ್ನಾಟಕ ಸಂಘ ಭವನ ನಿರ‍್ಮಾಣಕ್ಕೆ ಕಾರಣ ಕರ್ತರು ಎಂಬುದನ್ನೆ ಮುಂದಿಟ್ಟುಕೊಂಡು ಸಂಘದ ಆಡಳಿತದಲ್ಲಿ ಸರ್ವಾಧಿಕಾರಿಧೋರಣೆ ಮೆರೆಯುವ ಆ ಮೂಲಕ ಸಂಘವನ್ನು ತಮ್ಮದೇ ಗುಂಪಿನ ಹಿಡಿತದಲ್ಲಿಟ್ಟುಕೊಳ್ಳುವ ಪ್ರಯತ್ನಗಳು ಮುಂದುವರೆದಿವೆ ಎಂಬ ಆರೋಪಗಳು ಸಾಹಿತ್ಯ ವಲಯದಲ್ಲೇ ಕೇಳಿ ಬರುತ್ತಿದೆ.

ಕಾರ್ಯಕಾರಿ ಸಮಿತಿ ಸಭೆಯಲ್ಲಿ ಉಪಾಧ್ಯಕ್ಷರಾಗಿರುವ ಉದಯಶಂಕರ ಶಾಸ್ತ್ರಿ ಅವರ ಸರ್ವಾಧಿಕಾರಿ ಧೋರಣೆ ಪ್ರಶ್ನಿಸಿದ್ದರಿಂದಲೇ ಸಂಘದ ಗೌರವ ಕಾರ್ಯದರ್ಶಿ ಡಾ. ಹೆಚ್. ಎಸ್ ನಾಗಭೂಷಣ. ಖಜಾಂಚಿ ಕೆ.ಜಿ ವೆಂಕಟೇಶ್ ಹಾಗೂ ಮೂವರು ಸಿಬ್ಬಂದಿಗಳ ರಾಜೀನಾಮೆಯೊಂದಿಗೆ ಒಂದು ಹಂತ ತಲುಪಿದ್ದು, ಇದನ್ನೆ ಬಯಸಿದ್ದ ಸಾಹಿತ್ಯ, ಸಂಸ್ಕೃತಿಯ ಗಂಧಗಾಳಿ ಗೊತ್ತಿಲ್ಲದ ಉದಯಶಂಕರಶಾಸ್ತ್ರಿ ತಾವೇ ಸಂಘದ ಅಧ್ಯಕ್ಷರೆಂಬುದನ್ನು ಸ್ವಯಂ ಘೋಷಿಸಿಕೊಂಡು ಕಾರ್ಯಕಾರಿ ಸಮಿತಿಯನ್ನು ಪುನರ್ ರಚಿಸಿಕೊಳ್ಳುವ ಮೂಲಕ ಸಂಘವನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ನಾಡಿನ ಸಾಹಿತ್ಯ, ಸಾಂಸ್ಕೃತಿಕ ಹೆಗ್ಗುರುತಾಗಿ ಹಿರಿಮೆ ಹೊಂದಿದ್ದ ಶಿವಮೊಗ್ಗ ಕರ್ನಾಟಕ ಸಂಘದ ಮಾನ ಹಾದಿ ಬೀದಿಯಲ್ಲಿ ಹರಾಜಾಗುತ್ತಿದೆ.

“ಕರ್ನಾಟಕ ಸಂಘದ ಈಗಿನ ಸ್ಥಿತಿಯಲ್ಲಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವುದು ಇಷ್ಟವಿರಲಿಲ್ಲ. ಅಲ್ಲಿನ ವ್ಯವಸ್ಥೆಯಲ್ಲಿ ಮುಕ್ತವಾಗಿ ಕೆಲಸ ಮಾಡಲಾರದ ಸ್ಥಿತಿಯಿದೆ. ಅದೇ ಸಮಯಕ್ಕೆ ನನಗೆ ಆರೋಗ್ಯ ಸಮಸ್ಯೆಯೂ ಇರುವುದಿಂದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ.” -ಪ್ರೊ.ಕೆ.ಓಂಕಾರಪ್ಪ, ಸಾಹಿತಿ.
—–

“ಕರ್ನಾಟಕ ಸಂಘದ ನವೀಕರಣ ಸಂದರ್ಭದಲ್ಲಿ ನಮ್ಮ ವಿರುದ್ಧ ಪಿತೂರಿ ಹೆಚ್ಚಾಯಿತು. ಕಳೆದ ಎರಡು ವರ್ಷಗಳಿಂದ ಎಲ್ಲವನ್ನೂ ಸಂಯಮದಿಂದ ನಿಭಾಯಿಸಿದ್ದೇನೆ. ಆದರೆ ಇನ್ನು ಪಿತೂರಿಯನ್ನು ಸಹಿಸುವುದು ಸಾದ್ಯವಿಲ್ಲ. ನಡೆಯುತ್ತಿರುವುದನ್ನು ನೋಡಿಕೊಂಡು ಸುಮ್ಮನಿರಲು ಸಾದ್ಯವಿಲ್ಲ ಎಂಬ ಕಾರಣಕ್ಕೆ ರಾಜೀನಾಮೆ ನೀಡಿದ್ದೇನೆ.” -ಪ್ರೊ.ಎಚ್.ಎಸ್.ನಾಗಭೂಷಣ.

                                                              —-

  • ವರದಿ: ಎನ್.ರವಿಕುಮಾರ್ ಟೆಲೆಕ್ಸ್

ಇದನ್ನೂ ಓದಿ: ರಾಜ್ಯೋತ್ಸವದಂದು ಕನ್ನಡ ಧ್ವಜ ಹಾರಿಸದ ಸರ್ಕಾರದ ನಡೆಗೆ ಕನ್ನಡಿಗರ ಆಕ್ರೋಶ: ಟ್ವಿಟರ್ ಆಂದೋಲನಕ್ಕೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...