Homeಮುಖಪುಟ’RRR’ ಚಿತ್ರ ಪ್ರದರ್ಶಿಸಿದರೆ ಥಿಯೇಟರ್‌ಗೆ ಬೆಂಕಿ ಇಡುತ್ತೇವೆ: BJP ರಾಜ್ಯಾಧ್ಯಕ್ಷನ ಬೆದರಿಕೆ

’RRR’ ಚಿತ್ರ ಪ್ರದರ್ಶಿಸಿದರೆ ಥಿಯೇಟರ್‌ಗೆ ಬೆಂಕಿ ಇಡುತ್ತೇವೆ: BJP ರಾಜ್ಯಾಧ್ಯಕ್ಷನ ಬೆದರಿಕೆ

ಟೀಸರ್‌‌ನಲ್ಲಿ ಜೂನಿಯರ್ ಎನ್‌ಟಿಆರ್ ಬುಡಕಟ್ಟು ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್‌ನ ಒಂದು ಭಾಗದಲ್ಲಿ ಅವರು ಮುಸ್ಲಿಂ ವೇಷಭೂಷಣದಲ್ಲಿ ಕಾಣಿಸಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ.

- Advertisement -
- Advertisement -

ತೆಲುಗು ಚಿತ್ರರಂಗದ ಖ್ಯಾತ ನಟ ಜೂನಿಯರ್ ಎನ್‌‌ಟಿಆರ್‌ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ,‌ ಎಸ್‌‌.ಎಸ್‌. ರಾಜಮೌಳಿ ನಿರ್ದೇಶನದ ರೌದ್ರಂ ರಣಂ ರುಧಿರಂ (RRR) ಚಿತ್ರವು ರಾಜಕೀಯ ವಿವಾದಕ್ಕೆ ಕಾರಣವಾಗಿದ್ದು, ಸಿನಿಮಾ ಪ್ರದರ್ಶನ ಮಾಡುವ ಚಿತ್ರಮಂದಿರಗಳಿಗೆ ಬೆಂಕಿ ಹಚ್ಚುವುದಾಗಿ ತೆಲಂಗಾಣದ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ಬಂಡಿ ಸಂಜಯ ಕುಮಾರ್‌ ಬೆದರಿಕೆ ಹಾಕಿದ್ದಾರೆ.

ಚಿತ್ರದ ಟೀಸರ್‌ ಇತ್ತೀಚೆಗಷ್ಟೇ ಬಿಡುಗಡೆಗೊಂಡಿತ್ತು. ಪ್ರಸ್ತುತ ಟೀಸರ್‌‌ನಲ್ಲಿ ಜೂನಿಯರ್ ಎನ್‌ಟಿಆರ್ ಬುಡಕಟ್ಟು ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್‌ನ ಒಂದು ಭಾಗದಲ್ಲಿ ಅವರು ಮುಸ್ಲಿಂ ವೇಷಭೂಷಣದಲ್ಲಿ ಕಾಣಿಸಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಭುಗಿಲೆದ್ದ ಪ್ರತಿಭಟನೆ; ಪೊಲೀಸ್ ಪ್ರಧಾನ ಕಚೇರಿ ಸೇರಿದಂತೆ 2 ಚರ್ಚುಗಳಿಗೆ ಬೆಂಕಿ!

ರಾಜಮೌಳಿ “ಐತಿಹಾಸಿಕ ಸಂಗತಿಗಳನ್ನು ವಿರೂಪಗೊಳಿಸುತ್ತಾರೆ” ಎಂದು ಆರೋಪಿಸಿದ ಬಿಜೆಪಿ ನಾಯಕ, “ವಿವಾದ ಸೃಷ್ಟಿಸಲು ರಾಜಮೌಳಿ ಕೊಮರಾಮ್ ಭೀಮ್‌ನ ತಲೆಯ ಮೇಲೆ ಟೋಪಿ ಹಾಕಿದರೆ, ನಾವು ಸುಮ್ಮನಿರುತ್ತೇವೆಯೇ? ಅದು ಎಂದಿಗೂ ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಎಸ್.ಎಸ್.ರಾಜಮೌಳಿ ಮೇಲೆ ದೈಹಿಕವಾಗಿಯೂ ಹಲ್ಲೆ ಮಾಡುವುದಾಗಿ ಬೆದರಿಕೆ ಹಾಕಿದ್ದು, “ನೀವು ಕೋಮರಾಮ್ ಭೀಮ್ ಅವರನ್ನು ದುರ್ಬಲಗೊಳಿಸುವ ಮೂಲಕ, ಆದಿವಾಸಿಗಳ ಭಾವನೆಗಳನ್ನು ಹಾಳು ಮಾಡುವ ಮೂಲಕ ಚಿತ್ರ ಮಾಡಲು ಹೊರಟರೆ, ನಿಮ್ಮ ಮೇಲೆ ಹಲ್ಲೆ ನಡೆಸುತ್ತೇವೆ. ಚಿತ್ರವನ್ನು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಿದರೆ, ಚಿತ್ರ ಪ್ರದರ್ಶನ ಮಾಡುವ ಪ್ರತಿಯೊಂದು ಚಿತ್ರಮಂದಿರಕ್ಕೂ ನಾವು ಬೆಂಕಿ ಹಚ್ಚುತ್ತೇವೆ” ಎಂದು ಬಂಡಿ ಸಂಜಯ್ ಕುಮಾರ್ ಎಚ್ಚರಿಸಿದ್ದಾರೆ.

RRR ನಿರ್ಮಾಪಕರು ಇತ್ತೀಚೆಗೆ ಬಿಡುಗಡೆ ಮಾಡಿರುವ ಟೀಸರ್‌ನಲ್ಲಿ ಕೋಮರಾಮ್ ಭೀಮ್ ಪಾತ್ರದಾರಿ ಆಗಿರುವ ಜೂನಿಯರ್‌ ಎನ್‌ಟಿಆರ್‌ ಸುರ್ಮಾ, ತಾಯತ ಮತ್ತು ತಲೆಗೆ ಟೋಪಿ ಧರಿಸಿದ್ದರು. ಇದು ಬಲಪಂಥೀಯ ಗುಂಪುಗಳನ್ನು ಕೆರಳಿಸಿದೆ.

ಆದರೆ ನಿರ್ದೇಶಕ ರಾಜಮೌಳಿ, “ಈ ಚಿತ್ರವು ಕೋಮರಾಮ್ ಭೀಮ್ ಮತ್ತು ಅಲ್ಲೂರಿ ಸೀತಾರಾಮ ರಾಜು ಎಂಬ ಇಬ್ಬರು ಅಪ್ರತಿಮ ಬುಡಕಟ್ಟು ನಾಯಕರನ್ನು ಆಧರಿಸಿ ನಿರ್ಮಿಸುತ್ತಿರುವ ಚಿತ್ರವಾಗಿದ್ದರೂ ಸಹ ಜೀವನಚರಿತ್ರೆಯಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿ: ’ಥೂ… ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ’; ಸಚಿವ ಸುಧಾಕರ್‌ಗೆ ಮಹಿಳಾ ವೈದ್ಯೆ ಛೀಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಟೀಸರನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದವರು ಅದನ್ನು ವಿರೋಧಿಸುತ್ತಿದ್ದಾರೆ ಮತ್ತು ನಿರ್ದೇಶಕ ರಾಜಮೌಳಿಯನ್ನು ವಾಚಾಮಗೋಚರವಾಗಿ ತೆಗಳುತ್ತಿದ್ದಾರೆ.
    ಮೊಟ್ಟಮೊದಲನೆಯದಾಗಿ ಇದು ಸಂಪೂರ್ಣವಾಗಿ ಅಲ್ಲೂರಿ ಸೀತಾರಾಮರಾಜು ಮತ್ತು ಕೊಮರಂ ಭೀಂರವರ ಜೀವನಾಧಾರಿತ ಚಿತ್ರವಲ್ಲ, ಆದರೆ ಅವರ ಜೀವನದ ಕೆಲ ಘಟನೆಗಳನ್ನು ಫ್ಲಾಷ್‌ಬ್ಯಾಕ್‌ನಲ್ಲಿ ತೋರಿಸಲಾಗುತ್ತದೆ. ಇಂದಿನ ಕಾಲಘಟ್ಟದ ಪಾತ್ರಗಳಲ್ಲಿ ಅಲ್ಲೂರಿ ಸೀತಾರಾಮರಾಜು ಪಾತ್ರಧಾರಿಯಾದ ರಾಂಚರಣ್ ಒಬ್ಬ ಪೊಲೀಸ್ ಪಾತ್ರಧಾರಿಯಾಗಿಯೂ, ಕೊಮರಂ ಭೀಂ ಪಾತ್ರಧಾರಿ ಜ್ಯೂ.ಯನ್ ಟಿ ಆರ್ ಮುಸ್ಲಿಂ ಯುವಕನ ಪಾತ್ರಧಾರಿಯಾಗಿಯೂ ನಟಿಸುತ್ತಿದ್ದಾರೆ. ಅದನ್ನರಿಯದೆ ಕೆಲವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇನ್ನು ಇದರ ಕುರಿತಾಗಿ ವಿವರಣೆ ನೀಡಬೇಕಾದ ನಿರ್ದೇಶಕ ರಾಜಮೌಳಿ, ಈ ವಿವಾದಾತ್ಮಕ ಚರ್ಚೆಗಳಿಂದ ಚಲನಚಿತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮತ್ತು ಜನರಲ್ಲಿ ಪ್ರಚಾರ ಸಿಗುತ್ತದೆಂದು ಸುಮ್ಮನಿದ್ದಾರೆ. ಚಲನಚಿತ್ರರಂಗದ ಬಹುತೇಕರು ಬಯಸುವುದು ಇಂತಹದ್ದನ್ನೇ ಅಲ್ಲವೆ?
    ಸಧ್ಯಕ್ಕೆ ನಮ್ಮಲ್ಲಿಯೇ ಮೊದಲು ಎಂದು ಬ್ರೇಕಿಂಗ್ ನ್ಯೂಸ್‌ಗಳ ಯಾವ ಮೀಡಿಯಾಗಳೂ ಬಂದಿಲ್ಲವೆಂಬುದೇ ಸಮಾಧಾನದ ವಿಷಯ….
    ವಿಶ್ವನಾಥ ಎನ್ ಅಮಾಸ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...