Homeಮುಖಪುಟ’RRR’ ಚಿತ್ರ ಪ್ರದರ್ಶಿಸಿದರೆ ಥಿಯೇಟರ್‌ಗೆ ಬೆಂಕಿ ಇಡುತ್ತೇವೆ: BJP ರಾಜ್ಯಾಧ್ಯಕ್ಷನ ಬೆದರಿಕೆ

’RRR’ ಚಿತ್ರ ಪ್ರದರ್ಶಿಸಿದರೆ ಥಿಯೇಟರ್‌ಗೆ ಬೆಂಕಿ ಇಡುತ್ತೇವೆ: BJP ರಾಜ್ಯಾಧ್ಯಕ್ಷನ ಬೆದರಿಕೆ

ಟೀಸರ್‌‌ನಲ್ಲಿ ಜೂನಿಯರ್ ಎನ್‌ಟಿಆರ್ ಬುಡಕಟ್ಟು ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್‌ನ ಒಂದು ಭಾಗದಲ್ಲಿ ಅವರು ಮುಸ್ಲಿಂ ವೇಷಭೂಷಣದಲ್ಲಿ ಕಾಣಿಸಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ.

- Advertisement -
- Advertisement -

ತೆಲುಗು ಚಿತ್ರರಂಗದ ಖ್ಯಾತ ನಟ ಜೂನಿಯರ್ ಎನ್‌‌ಟಿಆರ್‌ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ,‌ ಎಸ್‌‌.ಎಸ್‌. ರಾಜಮೌಳಿ ನಿರ್ದೇಶನದ ರೌದ್ರಂ ರಣಂ ರುಧಿರಂ (RRR) ಚಿತ್ರವು ರಾಜಕೀಯ ವಿವಾದಕ್ಕೆ ಕಾರಣವಾಗಿದ್ದು, ಸಿನಿಮಾ ಪ್ರದರ್ಶನ ಮಾಡುವ ಚಿತ್ರಮಂದಿರಗಳಿಗೆ ಬೆಂಕಿ ಹಚ್ಚುವುದಾಗಿ ತೆಲಂಗಾಣದ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ಬಂಡಿ ಸಂಜಯ ಕುಮಾರ್‌ ಬೆದರಿಕೆ ಹಾಕಿದ್ದಾರೆ.

ಚಿತ್ರದ ಟೀಸರ್‌ ಇತ್ತೀಚೆಗಷ್ಟೇ ಬಿಡುಗಡೆಗೊಂಡಿತ್ತು. ಪ್ರಸ್ತುತ ಟೀಸರ್‌‌ನಲ್ಲಿ ಜೂನಿಯರ್ ಎನ್‌ಟಿಆರ್ ಬುಡಕಟ್ಟು ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್‌ನ ಒಂದು ಭಾಗದಲ್ಲಿ ಅವರು ಮುಸ್ಲಿಂ ವೇಷಭೂಷಣದಲ್ಲಿ ಕಾಣಿಸಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಭುಗಿಲೆದ್ದ ಪ್ರತಿಭಟನೆ; ಪೊಲೀಸ್ ಪ್ರಧಾನ ಕಚೇರಿ ಸೇರಿದಂತೆ 2 ಚರ್ಚುಗಳಿಗೆ ಬೆಂಕಿ!

ರಾಜಮೌಳಿ “ಐತಿಹಾಸಿಕ ಸಂಗತಿಗಳನ್ನು ವಿರೂಪಗೊಳಿಸುತ್ತಾರೆ” ಎಂದು ಆರೋಪಿಸಿದ ಬಿಜೆಪಿ ನಾಯಕ, “ವಿವಾದ ಸೃಷ್ಟಿಸಲು ರಾಜಮೌಳಿ ಕೊಮರಾಮ್ ಭೀಮ್‌ನ ತಲೆಯ ಮೇಲೆ ಟೋಪಿ ಹಾಕಿದರೆ, ನಾವು ಸುಮ್ಮನಿರುತ್ತೇವೆಯೇ? ಅದು ಎಂದಿಗೂ ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಎಸ್.ಎಸ್.ರಾಜಮೌಳಿ ಮೇಲೆ ದೈಹಿಕವಾಗಿಯೂ ಹಲ್ಲೆ ಮಾಡುವುದಾಗಿ ಬೆದರಿಕೆ ಹಾಕಿದ್ದು, “ನೀವು ಕೋಮರಾಮ್ ಭೀಮ್ ಅವರನ್ನು ದುರ್ಬಲಗೊಳಿಸುವ ಮೂಲಕ, ಆದಿವಾಸಿಗಳ ಭಾವನೆಗಳನ್ನು ಹಾಳು ಮಾಡುವ ಮೂಲಕ ಚಿತ್ರ ಮಾಡಲು ಹೊರಟರೆ, ನಿಮ್ಮ ಮೇಲೆ ಹಲ್ಲೆ ನಡೆಸುತ್ತೇವೆ. ಚಿತ್ರವನ್ನು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಿದರೆ, ಚಿತ್ರ ಪ್ರದರ್ಶನ ಮಾಡುವ ಪ್ರತಿಯೊಂದು ಚಿತ್ರಮಂದಿರಕ್ಕೂ ನಾವು ಬೆಂಕಿ ಹಚ್ಚುತ್ತೇವೆ” ಎಂದು ಬಂಡಿ ಸಂಜಯ್ ಕುಮಾರ್ ಎಚ್ಚರಿಸಿದ್ದಾರೆ.

RRR ನಿರ್ಮಾಪಕರು ಇತ್ತೀಚೆಗೆ ಬಿಡುಗಡೆ ಮಾಡಿರುವ ಟೀಸರ್‌ನಲ್ಲಿ ಕೋಮರಾಮ್ ಭೀಮ್ ಪಾತ್ರದಾರಿ ಆಗಿರುವ ಜೂನಿಯರ್‌ ಎನ್‌ಟಿಆರ್‌ ಸುರ್ಮಾ, ತಾಯತ ಮತ್ತು ತಲೆಗೆ ಟೋಪಿ ಧರಿಸಿದ್ದರು. ಇದು ಬಲಪಂಥೀಯ ಗುಂಪುಗಳನ್ನು ಕೆರಳಿಸಿದೆ.

ಆದರೆ ನಿರ್ದೇಶಕ ರಾಜಮೌಳಿ, “ಈ ಚಿತ್ರವು ಕೋಮರಾಮ್ ಭೀಮ್ ಮತ್ತು ಅಲ್ಲೂರಿ ಸೀತಾರಾಮ ರಾಜು ಎಂಬ ಇಬ್ಬರು ಅಪ್ರತಿಮ ಬುಡಕಟ್ಟು ನಾಯಕರನ್ನು ಆಧರಿಸಿ ನಿರ್ಮಿಸುತ್ತಿರುವ ಚಿತ್ರವಾಗಿದ್ದರೂ ಸಹ ಜೀವನಚರಿತ್ರೆಯಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿ: ’ಥೂ… ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ’; ಸಚಿವ ಸುಧಾಕರ್‌ಗೆ ಮಹಿಳಾ ವೈದ್ಯೆ ಛೀಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಟೀಸರನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದವರು ಅದನ್ನು ವಿರೋಧಿಸುತ್ತಿದ್ದಾರೆ ಮತ್ತು ನಿರ್ದೇಶಕ ರಾಜಮೌಳಿಯನ್ನು ವಾಚಾಮಗೋಚರವಾಗಿ ತೆಗಳುತ್ತಿದ್ದಾರೆ.
    ಮೊಟ್ಟಮೊದಲನೆಯದಾಗಿ ಇದು ಸಂಪೂರ್ಣವಾಗಿ ಅಲ್ಲೂರಿ ಸೀತಾರಾಮರಾಜು ಮತ್ತು ಕೊಮರಂ ಭೀಂರವರ ಜೀವನಾಧಾರಿತ ಚಿತ್ರವಲ್ಲ, ಆದರೆ ಅವರ ಜೀವನದ ಕೆಲ ಘಟನೆಗಳನ್ನು ಫ್ಲಾಷ್‌ಬ್ಯಾಕ್‌ನಲ್ಲಿ ತೋರಿಸಲಾಗುತ್ತದೆ. ಇಂದಿನ ಕಾಲಘಟ್ಟದ ಪಾತ್ರಗಳಲ್ಲಿ ಅಲ್ಲೂರಿ ಸೀತಾರಾಮರಾಜು ಪಾತ್ರಧಾರಿಯಾದ ರಾಂಚರಣ್ ಒಬ್ಬ ಪೊಲೀಸ್ ಪಾತ್ರಧಾರಿಯಾಗಿಯೂ, ಕೊಮರಂ ಭೀಂ ಪಾತ್ರಧಾರಿ ಜ್ಯೂ.ಯನ್ ಟಿ ಆರ್ ಮುಸ್ಲಿಂ ಯುವಕನ ಪಾತ್ರಧಾರಿಯಾಗಿಯೂ ನಟಿಸುತ್ತಿದ್ದಾರೆ. ಅದನ್ನರಿಯದೆ ಕೆಲವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇನ್ನು ಇದರ ಕುರಿತಾಗಿ ವಿವರಣೆ ನೀಡಬೇಕಾದ ನಿರ್ದೇಶಕ ರಾಜಮೌಳಿ, ಈ ವಿವಾದಾತ್ಮಕ ಚರ್ಚೆಗಳಿಂದ ಚಲನಚಿತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮತ್ತು ಜನರಲ್ಲಿ ಪ್ರಚಾರ ಸಿಗುತ್ತದೆಂದು ಸುಮ್ಮನಿದ್ದಾರೆ. ಚಲನಚಿತ್ರರಂಗದ ಬಹುತೇಕರು ಬಯಸುವುದು ಇಂತಹದ್ದನ್ನೇ ಅಲ್ಲವೆ?
    ಸಧ್ಯಕ್ಕೆ ನಮ್ಮಲ್ಲಿಯೇ ಮೊದಲು ಎಂದು ಬ್ರೇಕಿಂಗ್ ನ್ಯೂಸ್‌ಗಳ ಯಾವ ಮೀಡಿಯಾಗಳೂ ಬಂದಿಲ್ಲವೆಂಬುದೇ ಸಮಾಧಾನದ ವಿಷಯ….
    ವಿಶ್ವನಾಥ ಎನ್ ಅಮಾಸ

LEAVE A REPLY

Please enter your comment!
Please enter your name here

- Advertisment -

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...