Homeಕರ್ನಾಟಕ5 ಕೋಟಿ ಮೌಲ್ಯದ 34,000 ಸೆಟ್‌ಟಾಪ್ ಬಾಕ್ಸ್‌ ಹಂಚಿದ BJP ಅಭ್ಯರ್ಥಿ ಮುನಿರತ್ನ; ದೂರು ದಾಖಲು

5 ಕೋಟಿ ಮೌಲ್ಯದ 34,000 ಸೆಟ್‌ಟಾಪ್ ಬಾಕ್ಸ್‌ ಹಂಚಿದ BJP ಅಭ್ಯರ್ಥಿ ಮುನಿರತ್ನ; ದೂರು ದಾಖಲು

ಸೆಟ್‌ಟಾಪ್‌ ಬಾಕ್ಸ್‌ ಹಂಚಿರುವುದನ್ನು ಮುನಿರತ್ನ ಬಹಿರಂಗವಾಗಿ ಒಪ್ಪಿಕೊಂಡು, ಇದು ತನ್ನ ವ್ಯವಹಾರದ ಭಾಗ ಎಂದು ಸಮರ್ಥನೆ ನೀಡಿದ್ದರು.

- Advertisement -
- Advertisement -

ಕರ್ನಾಟಕದಲ್ಲಿ ಉಪಚುನಾವಣೆ ಕಾವೇರುತ್ತಿದ್ದು ನಾಳೆ ಎರಡು ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇದರ ನಡುವೆ ಬಿಜೆಪಿ ಪಕ್ಷದ RR ನಗರದ ಅಭ್ಯರ್ಥಿ ಮುನಿರತ್ನ ವಿರುದ್ಧ ದೂರು ದಾಖಲಾಗಿದೆ. “ಕ್ಷೇತ್ರದ ಮತದಾರರಿಗೆ ಉಚಿತವಾಗಿ ಸೆಟ್‌ಟಾಪ್ ಬಾಕ್ಸ್‌ ಹಂಚಿದ್ದಾರೆ” ಎಂದು ಹೋರಾಟಗಾರ ಸಾಕೇತ್ ಗೋಖಲೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಹಿರಿಯ ಪತ್ರಕರ್ತ ಡಿಪಿ ಸತೀಶ್‌, ತಮ್ಮ ಟ್ವಿಟರ್‌ ಖಾತೆಯಲ್ಲಿ, “RR ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಐದು ಕೋಟಿ ಬೆಲೆಬಾಳುವ 34,000 ಸೆಟ್‌ಟಾಪ್‌ ಬಾಕ್ಸ್‌ ಹಂಚಿದ್ದಾರೆ. ಒಂದು ವೇಳೆ ಅವರು ಗೆದ್ದರೂ ಚುನಾವಣಾ ವೆಚ್ಚ ಮಿತಿಯನ್ನು ಮೀರಿದ್ದಕ್ಕೆ ಅವರ ಸ್ಥಾನವನ್ನು ಅನರ್ಹಗೊಳಿಸಬಹುದೆಂದು ಕಾನೂನು ತಜ್ಞರು ಹೇಳುತ್ತಾರೆ” ಎಂದು ಟ್ವೀಟ್‌ ಮಾಡಿದ್ದರು.

ಇದನ್ನೂ ಓದಿ: ಉಪಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ, ಮತದಾನದತ್ತ ಎಲ್ಲರ ಚಿತ್ತ

ಈ ಕುರಿತು ರೀಟ್ವೀಟ್ ಮಾಡಿರುವ ಸಾಕೆತ್‌ ಗೋಖಲೆ, “ಈ ಪ್ರಕರಣದ ಕುರಿತಂತೆ ಆರ್‌ ಆರ್‌ ನಗರದ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದು, ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿರುವುದಕ್ಕೆ RP Act, 1951 ಅಡಿಯಲ್ಲಿ 24 ಗಂಟೆಗಳೊಳಗೆ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

 

ಇದನ್ನೂ ಓದಿ: RR ನಗರ ಉಪಚುನಾವಣೆ: ಮತದಾರರ ಹಾಟ್ ಫೇವರಿಟ್ ಯಾರು ಎಂಬುದು ಇನ್ನೂ ನಿಗೂಢ!

ಕ್ಷೇತ್ರದ ಮತದಾರರಿಗೆ ಮುನಿರತ್ನ ಅಕ್ರಮವಾಗಿ ಸೆಟ್‌ಟಾಪ್‌ ಬಾಕ್ಸ್‌ ಹಂಚಿ ಆಮಿಷ ಒಡ್ಡಿದ್ದಾರೆಂದು ವಿರೋಧ ಪಕ್ಷ ಕಾಂಗ್ರೆಸ್‌ ಕಳೆದ ವಾರ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. 1000 ಬೆಲೆ ಬಾಳುವ ಸುಮಾರು 50 ಸಾವಿರಕ್ಕೂ ಹೆಚ್ಚು ಟಿವಿ ಸೆಟ್‌ಟಾಪ್‌ ಬಾಕ್ಸ್‌ಗಳನ್ನು ಕ್ಷೇತ್ರದ ಮತದಾರರಿಗೆ ಹಂಚಿದ್ದಾರೆ ಎಂದು ಕಾಂಗ್ರೆಸ್‌ ಆರೋಪಿಸಿತ್ತು. ಕಾಂಗ್ರೆಸ್‌ ಆರೋಪವನ್ನು ತಳ್ಳಿ ಹಾಕಿದ್ದರೂ ಸಹ ಸೆಟ್‌ಟಾಪ್‌ ಬಾಕ್ಸ್‌ ಹಂಚಿರುವುದನ್ನು ಮುನಿರತ್ನ ಬಹಿರಂಗವಾಗಿ ಒಪ್ಪಿಕೊಂಡು, ಇದು ತನ್ನ ವ್ಯವಹಾರದ ಭಾಗ ಎಂದು ಸಮರ್ಥನೆ ನೀಡಿದ್ದರು.

ಕಳೆದ ಬಾರಿ ರಾಜ್ಯದ  12 ಕ್ಷೇತ್ರಗಳಲ್ಲಿ ಉಪಚುನಾವಣೆ ನಿಗದಿಯಾಗಿತ್ತು. ಆಗ ಮುನಿರತ್ನ ಅಕ್ರಮವಾಗಿ ಮತದಾರರ ಗುರುತು ಚೀಟಿಯನ್ನು ಅಕ್ರಮವಾಗಿ ಸಂಗ್ರಹಿಸಿದ್ದರೆಂಬ ಕಾರಣಕ್ಕೆ RR ನಗರದ ಉಪಚುನಾವಣೆ ರದ್ದಾಗಿತ್ತು. ಈ ಸಂಬಂಧ ಪ್ರಕರಣ ದಾಖಲಾಗಿತ್ತು. ಈಗ ಇನ್ನೊಂದು ಪ್ರಕರಣದಲ್ಲಿ ಸಿಲುಕಿರುವ ಮುನಿರತ್ನ ಅವರ ವಿರುದ್ಧ ಚುನಾವಣಾ ಆಯೋಗ ಏನು ಕ್ರಮ ಕೈಗೊಳ್ಳುತ್ತದೆ ಎಂದು ಕಾದು ನೋಡಬೇಕಿದೆ.


ಇದನ್ನೂ ಓದಿ: ಉಪಚುನಾವಣೆ: ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ವಿಷಯವಾಗಿದೆ; ಯಾಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...