Homeಮುಖಪುಟಬಾಬರಿ ಮಸೀದಿ ಧ್ವಂಸ: ತೀರ್ಪು ನೀಡಿದ ನ್ಯಾಯಾಧೀಶರಿಗೆ ಭದ್ರತೆ ನಿರಾಕರಿಸಿದ ಸುಪ್ರೀಂ!

ಬಾಬರಿ ಮಸೀದಿ ಧ್ವಂಸ: ತೀರ್ಪು ನೀಡಿದ ನ್ಯಾಯಾಧೀಶರಿಗೆ ಭದ್ರತೆ ನಿರಾಕರಿಸಿದ ಸುಪ್ರೀಂ!

ಬಿಜೆಪಿ ಮತ್ತು ವಿಶ್ವಹಿಂದೂ ಪರಿಷತ್‌ನ ಸದಸ್ಯರು ದೋಷಮುಕ್ತರು ಎಂದು 32 ಆರೋಪಿಗಳ ಮೆಲಿನ ಪ್ರಕರಣವನ್ನು ಖಲಾಸೆಗೊಳಿಸಿ ಸೆಪ್ಟಂಬರ್ 30 ರಂದು ತೀರ್ಪು ನೀಡಿದ್ದರು

- Advertisement -
- Advertisement -

ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ತೀರ್ಪು ನೀಡಿದ್ದ ಲಖನೌ ವಿಶೇಷ ನ್ಯಾಯಾಲಯದ ಮಾಜಿ ನ್ಯಾಯಾಧೀಶ ಸುರೇಂದ್ರ ಕುಮಾರ್ ಯಾದವ್ ಅವರಿಗೆ ಭದ್ರತೆ ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಧ್ವಂಸ ಪ್ರಕರಣದಲ್ಲಿ ಬಿಜೆಪಿ ಮತ್ತು ವಿಶ್ವಹಿಂದೂ ಪರಿಷತ್‌ನ ಸದಸ್ಯರು ದೋಷಮುಕ್ತರು ಎಂದು 32 ಆರೋಪಿಗಳ ಮೆಲಿನ ಪ್ರಕರಣವನ್ನು ಖಲಾಸೆಗೊಳಿಸಿ ಸೆಪ್ಟಂಬರ್ 30 ರಂದು ತೀರ್ಪು ನೀಡಿದ್ದರು. ಪ್ರಕರಣದ 32 ಆರೋಪಿಗಳೂ ದೋಷಮುಕ್ತರು ಎಂದಿರುವ ನ್ಯಾಯಾಲಯ, “ಈ ದ್ವಂಸ ಪೂರ್ವನಿರ್ಧರಿತವಲ್ಲ” ಎಂದು ತೀರ್ಪು ನೀಡಿತ್ತು.

ಪ್ರಕರಣದ ಸೂಕ್ಷ್ಮತೆಯ ಆಧಾರದ ಮೇಲೆ ಎಸ್‌.ಕೆ.ಯಾದವ್ ತಮ್ಮ ವೈಯಕ್ತಿಕ ಭದ್ರತೆಯನ್ನು ವಿಸ್ತರಿಸಲು ಕೋರಿದ್ದರು. ಇಂದು ಬೆಳಿಗ್ಗೆ ಉನ್ನತ ನ್ಯಾಯಾಲಯವು, “ಸೆಪ್ಟೆಂಬರ್ 30 ರ ಪತ್ರವನ್ನು ಅವಲೋಕಿಸಿದ ನಂತರ, ಭದ್ರತೆ ಮುಂದುವರಿಸುವುದು ಅಗತ್ಯವೆಂದು ನಾವು ಪರಿಗಣಿಸುವುದಿಲ್ಲ” ಎಂದು ಹೇಳಿದೆ.

ಇದನ್ನೂ ಓದಿ: ಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

ವಿಶೇಷ ನ್ಯಾಯಾಲಯವು 2 ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ತೀರ್ಮಾನ ತೆಗೆದುಕೊಂಡಿತ್ತು. ಮೊದಲನೆಯದ್ದು, 197/1992, ಮಸೀದಿಯನ್ನು ಕೆಡವಿದ್ದ ಅನಾಮಧೇಯ ಕರಸೇವಕರ ವಿರುದ್ಧ ಮತ್ತು ಎರಡನೆಯದು, 198/1992, ಮಸೀದಿ ಕೆಡವುವಿಕೆಗೆ ಪ್ರಚೋದನೆ ನೀಡಿದ್ದಕ್ಕಾಗಿ 8 ಜನ ಬಿಜೆಪಿ ಮುಖಂಡರ (ಎಲ್.ಕೆ.ಅಡ್ವಾಣಿ, ಎಂ.ಎಂ.ಜೋಶಿ, ಉಮಾ ಭಾರತಿ, ಕಲ್ಯಾಣ್ ಸಿಂಗ್, ವಿನಯ್ ಕಟಿಯಾರ್, ಸಾಕ್ಷಿ ಮಹಾರಾಜ್, ಲಲ್ಲು ಸಿಂಗ್, ಬಿಬಿ ಶರಣ್ ಸಿಂಗ್) ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಈ ಆರೋಪಿಗಳ ಮೇಲೆ 1992 ರ ಡಿಸೆಂಬರ್‌ನಲ್ಲಿ 15 ನೇ ಶತಮಾನದ ಬಾಬರಿ ಮಸೀದಿಯನ್ನು ಧ್ವಂಸಗೊಳಿಸಲು ಕಾರಣವಾದ ಪಿತೂರಿಯ ಆರೋಪ ಇದೆ. ಈ ಪ್ರಕರಣದಲ್ಲಿ ದೇಶಾದ್ಯಂತ ಗಲಭೆಗಳು ಸಂಭವಿಸಿ ಸುಮಾರು 3,000 ಜನರು ಸಾವನ್ನಪ್ಪಿದ್ದರು.

ಏಪ್ರಿಲ್ 2017 ರಲ್ಲಿ, ಉನ್ನತ ನ್ಯಾಯಾಲಯವು, ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಎರಡು ವರ್ಷಗಳಲ್ಲಿ ಮಸೀದಿ ದ್ವಂಸ ಪ್ರಕರಣದ ವಿಚಾರಣೆಯನ್ನು ನಡೆಸಿ ಪೂರ್ಣಗೊಳಿಸಲು ಕೇಳಿಕೊಂಡಿತ್ತು. ಅದರ ನಂತರ ಹಲವು ಬಾರಿ ಗಡುವು ವಿಸ್ತರಿಸಲಾಗಿತ್ತು. ಮತ್ತೆ ವಿಶೇಷ ನ್ಯಾಯಾಧೀಶ ಎಸ್.ಕೆ. ಯಾದವ್ ಹೆಚ್ಚಿನ ಸಮಯವನ್ನು ಕೇಳಿದಾಗ, ಸೆಪ್ಟೆಂಬರ್ 30 ರೊಳಗೆ ತನ್ನ ತೀರ್ಪನ್ನು ನೀಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಸೆಪ್ಟಂಬರ್ 30ರಂದು ತೀರ್ಪು ಹೊರಬಿದ್ದ ನಂತರ ದೇಶದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.


ಇದನ್ನೂ ಓದಿ: ಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂಬ ತೀರ್ಮಾನಕ್ಕೆ ನ್ಯಾಯಾಧೀಶರು ಕೊಟ್ಟ10 ಕಾರಣಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...