Homeಕರ್ನಾಟಕನಾಡಧ್ವಜ ಹಾರಿಸದೆ ದ್ರೋಹವೆಸಗಿವರಿಗೆ ಕನ್ನಡಿಗರ ಕ್ಷಮೆ ಇಲ್ಲ: ’#ನಮ್ಮಧ್ವಜ_ನಮ್ಮಹೆಮ್ಮೆ’ ಟ್ರೆಂಡ್

ನಾಡಧ್ವಜ ಹಾರಿಸದೆ ದ್ರೋಹವೆಸಗಿವರಿಗೆ ಕನ್ನಡಿಗರ ಕ್ಷಮೆ ಇಲ್ಲ: ’#ನಮ್ಮಧ್ವಜ_ನಮ್ಮಹೆಮ್ಮೆ’ ಟ್ರೆಂಡ್

ನಿಮ್ಮ ಅಸ್ಮಿತೆಯನ್ನು ಕಳೆದುಕೊಳ್ಳದೆ ದೇಶವನ್ನು ಪ್ರೀತಿಸಬಹುದು, ನೋಡ್ರೀ ಹುಸಿ ದೇಶ ಭಕ್ತರೆ" ಎಂದು ಅಮೆರಿಕ ಸಂಯುಕ್ತ ಸಂಸ್ಥಾನದ ರಾಜ್ಯಗಳು ಪ್ರತ್ಯೇಕ ಧ್ವಜ ಹೊಂದಿರುವ ಚಿತ್ರವನ್ನು ರೀಟ್ವೀಟ್ ಮಾಡಲಾಗಿದೆ.

- Advertisement -
- Advertisement -

ಕನ್ನಡ ರಾಜ್ಯೋತ್ಸವದಂದು ಜಿಲ್ಲಾ ಕೇಂದ್ರಗಳಲ್ಲಿ ಕನ್ನಡ ಧ್ವಜ ಹಾರಿಸದೇ ಕೇವಲ ರಾಷ್ಟ್ರಧ್ವಜ ಮಾತ್ರ ಹಾರಿಸಿದ ರಾಜ್ಯ ಸರ್ಕಾರದ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿರುವ ಕನ್ನಡಿಗರು, ಟ್ವಿಟರ್‌‌ನಲ್ಲಿ ಬಿಜೆಪಿ ಸರ್ಕಾರದ ವಿರುದ್ದ “#ನಮ್ಮಧ್ವಜ_ನಮ್ಮಹೆಮ್ಮೆ” ಹ್ಯಾಶ್‌ಟ್ಯಾಗ್‌ ಮೂಲಕ ಟ್ರೆಂಡ್ ಮಾಡಿದ್ದಾರೆ.

ಕರವೇ ಕರೆ ನೀಡಿದ್ದ ಟ್ವಿಟರ್ ಅಭಿಯಾನಕ್ಕೆ ಸಾವಿರಾರು ಕನ್ನಡಿಗರು ದನಿಗೂಡಿಸಿದ್ದು, ಕರ್ನಾಟಕ ಟ್ರೆಂಡಿಂಗ್‌ನಲ್ಲಿ #ನಮ್ಮಧ್ವಜ_ನಮ್ಮಹೆಮ್ಮೆ ಹ್ಯಾಷ್‌ಟ್ಯಾಗ್ ನಂಬರ್ ಒನ್ ಸ್ಥಾನದಲ್ಲಿದ್ದು, ಆಲ್ ಇಂಡಿಯಾ ಮಟ್ಟದಲ್ಲಿ 29ನೇ ಸ್ಥಾನ ಪಡೆದಿದೆ. ಒಂದು ಗಂಟೆಯ ಅವಧಿಯಲ್ಲಿಯೇ 5,000 ಹೆಚ್ಚು ಟ್ವೀಟ್‌ಗಳು ದಾಖಲಾಗಿವೆ.

ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ನಾರಾಯಣ ಗೌಡ್ರು, “ಕನ್ನಡ ಧ್ವಜಾರೋಹಣ ಮಾಡದ ಕರ್ನಾಟಕ‌ ಸರ್ಕಾರದ ಮಂತ್ರಿಗಳಿಗೆ ಧಿಕ್ಕಾರ. ಕನ್ನಡವೆಂಬುದು ನಮ್ಮ ಗುರುತು, ನಮ್ಮ ಜೀವ, ನಮ್ಮ ಉಸಿರು, ನಮ್ಮ ಬದುಕು. ಕನ್ನಡ ಬೇಡ‌ ಎನ್ನುವವರು ಕರ್ನಾಟಕಕ್ಕೂ ಬೇಡ. ಕನ್ನಡ ಧ್ವಜಕ್ಕೆ ಅಪಮಾನಿಸಿದವರು ಕನ್ನಡ ದ್ರೋಹಿಗಳು. ಈ ಪ್ರಮಾದಕ್ಕೆ ಕಾರಣರಾದ ಸರ್ಕಾರದ‌ ಮುಖ್ಯ ಕಾರ್ಯದರ್ಶಿ ವಜಾಗೊಳಿಸಿ” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರಾಜ್ಯೋತ್ಸವದಂದು ಕನ್ನಡ ಧ್ವಜ ಹಾರಿಸದ ಸರ್ಕಾರದ ನಡೆಗೆ ಕನ್ನಡಿಗರ ಆಕ್ರೋಶ: ಟ್ವಿಟರ್ ಆಂದೋಲನಕ್ಕೆ ಕರೆ

ಕರ್ನಾಟಕ ರಕ್ಷಣಾ ವೇದಿಕೆ ಸರಣಿ ಟ್ವೀಟ್ ಮಾಡಿದ್ದು, ಸರ್ಕಾರದ ವಿರುದ್ದ ತೀವ್ರ ಅಸಮಧಾನ ವ್ಯಕ್ತಪಡಿದೆ. “ಕನ್ನಡ ಬಾವುಟ ನಮ್ಮೆಲ್ಲರ ಸ್ವಾಭಿಮಾನದ ಪ್ರತೀಕ. ಅದನ್ನು ನಾಡಜನರೆಲ್ಲರೂ ಅಭಿಮಾನಪೂರ್ವಕವಾಗಿ ಒಪ್ಪಿಕೊಂಡು ಆದರಿಸಿದ್ದಾರೆ. ಕರ್ನಾಟಕವನ್ನು ಆಳಿದ ಎಲ್ಲ ಸರ್ಕಾರಗಳೂ ಕನ್ನಡ ಧ್ವಜಾರೋಹಣ ನಡೆಸುತ್ತ ಕನ್ನಡಿಗರ ಭಾವನೆಗಳ‌ನ್ನು ಗೌರವಿಸಿದೆ. ಬಿಜೆಪಿ ಸರ್ಕಾರದ ಮಂತ್ರಿಗಳು ಈ ಪರಂಪರೆಯ‌ನ್ನು ನಾಶಪಡಿಸಲು ಯತ್ನಿಸುತ್ತಿದ್ದಾರೆ” ಎಂದು ಕಿಡಿಕಾರಿದೆ.

ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಕೂಡಾ ಸರಣಿ ಟ್ವೀಟ್ ಮಾಡಿದ್ದಾರೆ. “ಹಿಂದಿ ಹೇರಿಕೆ ತಡೆಯಿರಿ ಅಂದ್ರೆ ಅದಕ್ಕೆ ತಾಕತ್ ಇಲ್ಲಾ. ಬ್ಯಾಂಕ್ ಪರೀಕ್ಷೆಗಳನ್ನು ಕನ್ನಡದಲ್ಲಿ ತನ್ನಿ ಅಂದ್ರೆ ಅದಕ್ಕೆ ತಾಕತ್ ಇಲ್ಲಾ. ಕನ್ನಡ ವಿರೋಧಿ ನೀತಿ ಅನುಸರಿಸುವ ಎಂಇಎಸ್ ವಿರುದ್ಧ ಕ್ರಮ ತಗೊಂಡಿಲ್ಲ. ಕನ್ನಡಿಗರಿಗೆ ಉದ್ಯೋಗ ಕಾನೂನು ಮಾಡಲು ಶಕ್ತಿ ಇಲ್ಲ. ಆದ್ರೆ ನಾಡ ಧ್ವಜ ಹಾರಿಸದೆ ದ್ರೋಹ ಎಸಗಿದ ನಿಮಗೆ ಕನ್ನಡಿಗರ ಕ್ಷಮೆ ಇಲ್ಲ” ಎಂದು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ಇದನ್ನೂ ಓದಿ: ’ಕನ್ನಡ ಕಂಕಣ ದಿನ’; ಕರ್ನಾಟಕ ರಣಧೀರ ಪಡೆಯಿಂದ ವಿಭಿನ್ನ ರಾಜ್ಯೋತ್ಸವ!

ಜಯತೀರ್ಥ ನಾಡಗೌಡ ಅವರು, “ಜರ್ಮನಿಯಲ್ಲಿ 88 ಲಕ್ಷ ಜನಸಂಖ್ಯೆಯಿದೆ. ಅಲ್ಲಿನ ರಾಜ್ಯಗಳಿಗೆ ತನ್ನದೆ ಆದ ಧ್ವಜವಿದ್ದ ಹೊರತೂ ಅಲ್ಲಿ ಯಾವುದೇ ಸಮಸ್ಯೆಯಿಲ್ಲ. ಆದರೆ ಕರ್ನಾಟಕ ಸರ್ಕಾರಕ್ಕೆ ಮಾತ್ರ ಯಾಕೆ ಸಮಸ್ಯೆ” ಎಂದು ಪ್ರಶ್ನಿಸಿದ್ದಾರೆ.

ಭರತ್. ಪಿ ಅವರು, “ಸಿ.ಟಿ. ರವಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಅವಮಾನ, ಮುಖ್ಯಮಂತ್ರಿಗಳೇ ಈ ವ್ಯಕ್ತಿಯನ್ನು ಮೊದಲು ಕಿತ್ತುಹಾಕಿ” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕನ್ನಡ ಏಕೀಕರಣದಿಂದಲೂ ಕನ್ನಡ ಭಾಷೆಯ ಏಳ್ಗೆಗಾಗಿ, ಬಸವ ತತ್ವಕ್ಕಾಗಿ ಶ್ರಮಿಸುತ್ತಿರುವ ಭಾಲ್ಕಿ ಮಠ

ಮಂಜು ಎನ್ನುವವರು, “ನಿಮ್ಮ ಅಸ್ಮಿತೆಯನ್ನು ಕಳೆದುಕೊಳ್ಳದೆ ದೇಶವನ್ನು ಪ್ರೀತಿಸಬಹುದು, ನೋಡ್ರೀ ಹುಸಿ ದೇಶ ಭಕ್ತರೆ” ಎಂದು ಅಮೆರಿಕ ಸಂಯುಕ್ತ ಸಂಸ್ಥಾನದ ರಾಜ್ಯಗಳು ಪ್ರತ್ಯೇಕ ಧ್ವಜ ಹೊಂದಿರುವ ಚಿತ್ರವನ್ನು ರೀಟ್ವೀಟ್ ಮಾಡಿ ಉದಾಹರಣೆ ಸಮೇತ ಪೋಸ್ಟ್ ಮಾಡಿದ್ದಾರೆ.

ವಿಷ್ಣು, ಕನ್ನಡ ರಾಜ್ಯೋತ್ಸವದ ದಿನ ಕನ್ನಡ ಧ್ವಜವನ್ನು ಆರೋಹಣ ಮಾಡದವರಿಗೆ ನಾಚಿಕೆಯಾಗಬೇಕು ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಕನ್ನಡಕ್ಕೆ ಕನ್ನಡದ್ದೆ ಊಟ ಉಂಟಾ? ಡಾ. ಕೆ.ಸಿ ರಘು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...