Homeಕರ್ನಾಟಕಕನ್ನಡ ಧ್ವಜ ಹಾರಿಸದಂತೆ ಈ ಬಾರಿ ಯಾರ ಕುಮ್ಮಕ್ಕಿದೆ? - ಸಿದ್ದರಾಮಯ್ಯ ಪ್ರಶ್ನೆ

ಕನ್ನಡ ಧ್ವಜ ಹಾರಿಸದಂತೆ ಈ ಬಾರಿ ಯಾರ ಕುಮ್ಮಕ್ಕಿದೆ? – ಸಿದ್ದರಾಮಯ್ಯ ಪ್ರಶ್ನೆ

ಕಳೆದ ಬಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ನಾಡಧ್ವಜ ಆರೋಹಣವನ್ನು ವಿರೋಧಿಸಿ ಜನಾಕ್ರೋಶಕ್ಕೆ ಕಾರಣವಾಗಿದ್ದನ್ನು ಅವರು ನೆನಪಿಸಿದ್ದಾರೆ.

- Advertisement -
- Advertisement -

ಕನ್ನಡ ರಾಜ್ಯೋತ್ಸವದ ದಿನ ನಾಡಧ್ವಜ ಹಾರಿಸದೆ ಹಲವಾರು ಜಿಲ್ಲಾಡಳಿತಗಳು ಅಗೌರವ ತೋರಿಸಿರುವುದು ಖಂಡನೀಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದು, “ಕಳೆದ ಬಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿಯವರೇ ನಾಡಧ್ವಜ ಆರೋಹಣವನ್ನು ವಿರೋಧಿಸಿದ್ದು ಜನಾಕ್ರೋಶಕ್ಕೆ ಕಾರಣವಾಗಿತ್ತು. ಈ ಬಾರಿ ಯಾರ ಕುಮ್ಮಕ್ಕಿದೆ” ಎಂದು ಅವರು ಪ್ರಶ್ನಿಸಿದ್ದಾರೆ.

ಕನ್ನಡ ರಾಜ್ಯೋತ್ಸವದಂದು ಹಲವು ಜಿಲ್ಲಾಕೇಂದ್ರದಲ್ಲಿ ಕನ್ನಡ ಧ್ವಜ ಹಾರಿಸದೇ ಇರುವುದು ಕನ್ನಡ ಸಂಘಟನೆಗಳು ಸೇರಿದಂತೆ ರಾಜ್ಯದಾದ್ಯಂತ ಕನ್ನಡಿಗರು ರಾಜ್ಯದ ಬಿಜೆಪಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಇದೀಗ ವಿಪಕ್ಷ ನಾಯಕ ಕೂಡಾ ಅವರೊಂದಿಗೆ ಧ್ವನಿ ಸೇರಿಸಿದ್ದಾರೆ.

ಇದನ್ನೂ ಓದಿ: ನಾಡಧ್ವಜ ಹಾರಿಸದೆ ದ್ರೋಹವೆಸಗಿವರಿಗೆ ಕನ್ನಡಿಗರ ಕ್ಷಮೆ ಇಲ್ಲ: ’#ನಮ್ಮಧ್ವಜ_ನಮ್ಮಹೆಮ್ಮೆ’ ಟ್ರೆಂಡ್

ಇಂದು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ‌, “ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸಮಕ್ಷಮದಲ್ಲಿಯೇ ನಾಡಧ್ವಜ ಹಾರಿಸಿರುವಾಗ ಜಿಲ್ಲಾಡಳಿತದ ಉಪೇಕ್ಷೆ ಯಾರ ಕುಮ್ಮಕ್ಕಿನಿಂದ ನಡೆಯಿತು ಎನ್ನುವುದನ್ನು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಬೇಕು” ಎಂದು ಪ್ರಶ್ನಿಸಿದ್ದಾರೆ.

“ಕನ್ನಡ ರಾಜ್ಯೋತ್ಸವದ ದಿನ ಕನ್ನಡ ಧ್ವಜವನ್ನು ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹಾರಿಸುವ ಸಂಪ್ರದಾಯವನ್ನು ಹಿಂದಿನ ಎಲ್ಲ ಸರ್ಕಾರಗಳು ಪಾಲಿಸುತ್ತಾ ಬಂದಿವೆ” ಎಂದು ಅವರು ನೆನಪಿಸಿದ್ದಾರೆ.

“ಕಳೆದ ಬಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿಯವರೇ ನಾಡಧ್ವಜ ಆರೋಹಣವನ್ನು ವಿರೋಧಿಸಿದ್ದು ಜನಾಕ್ರೋಶಕ್ಕೆ ಕಾರಣವಾಗಿತ್ತು. ಈ ಬಾರಿ ಯಾರ ಕುಮ್ಮಕ್ಕು?” ಎಂದು ಅವರು ಮುಖ್ಯಮಂತ್ರಿಯನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ರಾಜ್ಯೋತ್ಸವದಂದು ಕನ್ನಡ ಧ್ವಜ ಹಾರಿಸದ ಸರ್ಕಾರದ ನಡೆಗೆ ಕನ್ನಡಿಗರ ಆಕ್ರೋಶ: ಟ್ವಿಟರ್ ಆಂದೋಲನಕ್ಕೆ ಕರೆ

ನಾನು ಮುಖ್ಯಮಂತ್ರಿಯಾಗಿದ್ದಾಗ ತಜ್ಞರ ಸಮಿತಿಯನ್ನು ಆಧರಿಸಿ ನಾಡಧ್ವಜವನ್ನು ವಿನ್ಯಾಸ ಮಾಡಿ ಅಂಗೀಕಾರಕ್ಕಾಗಿ ಕೇಂದ್ರಸರ್ಕಾರಕ್ಕೆ ಕಳಿಸಿದ್ದೆ. ಎರಡು ವರ್ಷಗಳಾದರೂ ಅದಕ್ಕೆ ಅಂಗೀಕಾರ ನೀಡದೆ ಇರುವುದು ಕರ್ನಾಟಕದ ನಾಡಧ್ವಜದ ಬಗ್ಗೆ ಬಿಜೆಪಿಗೆ ಇರುವ ಪೂರ್ವಗ್ರಹಕ್ಕೆ ಸಾಕ್ಷಿ ಎಂದು ಅವರು ಹೇಳಿದ್ದಾರೆ.

ನಾವೇನು ಪ್ರತ್ಯೇಕ ಧ್ವಜವನ್ನು ಕೇಳುತ್ತಿಲ್ಲ. ರಾಜ್ಯಗಳು ತಮ್ಮದೇ ಆಗಿರುವ ಧ್ವಜ ಹೊಂದಲು ಸಂವಿಧಾನದಲ್ಲಿ ಯಾವ ಅಡ್ಡಿಯೂ ಇಲ್ಲ. ಬಿಜೆಪಿಯ ಕೇಂದ್ರ ನಾಯಕರ ಅಭಿಪ್ರಾಯವೇನೇ ಇರಲಿ, ಆ ಪಕ್ಷದ ಸ್ಥಳೀಯ ನಾಯಕರು ಪ್ರಧಾನ ಮಂತ್ರಿ ಮೇಲೆ ಒತ್ತಡ ಹೇರಿ ಕರ್ನಾಟಕದ ನಾಡಧ್ವಜಕ್ಕೆ ಅಧಿಕೃತ ಮನ್ನಣೆ ಸಿಗುವಂತೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ’ಕನ್ನಡ ಕಂಕಣ ದಿನ’; ಕರ್ನಾಟಕ ರಣಧೀರ ಪಡೆಯಿಂದ ವಿಭಿನ್ನ ರಾಜ್ಯೋತ್ಸವ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...