Homeಮುಖಪುಟಉಪನ್ಯಾಸಕಿ ವಿರುದ್ದ ದೂರು: ABVP ಗೆ ಖಡಕ್ ಪ್ರತ್ಯುತ್ತರ ನೀಡಿದ ಗೋವಾ ಕಾಲೇಜು

ಉಪನ್ಯಾಸಕಿ ವಿರುದ್ದ ದೂರು: ABVP ಗೆ ಖಡಕ್ ಪ್ರತ್ಯುತ್ತರ ನೀಡಿದ ಗೋವಾ ಕಾಲೇಜು

ಪ್ರೊ. ಶಿಲ್ಪಾ ಸಿಂಗ್ ತನ್ನ ಉಪನ್ಯಾಸದ ಸಮಯದಲ್ಲಿ ಮನುಸ್ಮೃತಿ ಸೇರಿದಂತೆ, ರೋಹಿತ್ ವೆಮುಲಾ, ಎಂ.ಎಂ. ಕಲ್ಬುರ್ಗಿ, ದಾಭೋಲ್ಕರ್ ಮುಂತಾದವರ‌‌ ಕುರಿತು ಮಾತನಾಡುತ್ತಾರೆ ಎಂದು ABVP ತನ್ನ ದೂರಿನಲ್ಲಿ ಉಲ್ಲೇಖಿಸಿತ್ತು.

- Advertisement -
- Advertisement -

ರಾಜಧಾನಿ ಪಣಜಿಯ ವಿ. ಎಂ. ಸಲ್ಗೋಕರ್ ಕಾನೂನು ಕಾಲೇಜ್‌ನ ಉಪನ್ಯಾಸಕಿ ಪ್ರೊ. ಶಿಲ್ಪಾ ಸಿಂಗ್ ನಿರ್ದಿಷ್ಟ ಧರ್ಮದ ಬಗ್ಗೆ ದ್ವೇಷ ಬಿತ್ತುತ್ತಿದ್ದಾರೆ, ಅವರನ್ನು ಹುದ್ದೆಯಿಂದ ಕಿತ್ತುಹಾಕಬೇಕು ಎಂದು ಆಗ್ರಹಿಸಿ ABVP ಸಲ್ಲಿಸಿದ್ದ ದೂರಿಗೆ ಕಾಲೇಜು ಖಡಕ್ ಪ್ರತ್ಯುತ್ತರ ನೀಡಿದ್ದು, “ABVP ಗೆ ಇಂತಹ ಆಕ್ಷೇಪಣೆಗಳನ್ನೆತ್ತಲು ಯಾವುದೇ ಹಕ್ಕಿಲ್ಲ ಹಾಗೂ ಉಪನ್ಯಾಸಕಿಯನ್ನು ಸೇವೆಯಿಂದ ಕಿತ್ತು ಹಾಕುವುದಿಲ್ಲ” ಎಂದು ಹೇಳಿದೆ.

ಕಾಲೇಜಿನ ಆಡಳಿತ ಮಂಡಳಿಯ ಪ್ರತಿಕ್ರಿಯೆಯನ್ನು ABVP ಗೆ ಶನಿವಾರ ರಿಜಿಸ್ಟರ್ಡ್ ಪೋಸ್ಟ್ ಮೂಲಕ ರವಾನಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಶಬೀರ್ ಅಲಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ದಿ ಇಂಡಿಯನ್ ಎಕ್ಸ್‌‌ಪ್ರೆಸ್ ವರದಿ ಮಾಡಿದೆ.

“ಇದು ಕಾನೂನು ಕಾಲೇಜು ಆಗಿದ್ದು, ನಿಯಮಗಳ ಪಾಲನೆಯ ಜವಾಬ್ದಾರಿ ನಮಗಿದೆ. ಕಾನೂನಾತ್ಮಕವಾಗಿಯೂ ಅವರ ಮನವಿಯನ್ನು ಪುರಸ್ಕರಿಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮುಸುಕುಧಾರಿ ಹುಡುಗಿ ಎಬಿವಿಪಿ ಸದಸ್ಯೆ ಕೋಮಲ್‌ ಶರ್ಮಾ ಎಂದು ದೃಢಪಡಿಸಿದ ದೆಹಲಿ ಪೊಲೀಸರು

ಕಳೆದ ತಿಂಗಳು ABVP ಕಾಲೇಜಿನ ಉಪನ್ಯಾಸಕಿ ಪ್ರೊ. ಶಿಲ್ಪಾ ಸಿಂಗ್ ವಿರುದ್ಧ ದೂರು ನೀಡಿ, “ಅವರು ಒಂದು ನಿರ್ದಿಷ್ಟ ಧರ್ಮ, ಸಮುದಾಯ ಹಾಗೂ ಜನರ ಗುಂಪಿನ ವಿರುದ್ಧ ಸಾಮಾಜಿಕವಾಗಿ ದ್ವೇಷ ಬಿತ್ತುತ್ತಿದ್ದಾರೆ” ಎಂದು ಆರೋಪಿಸಿತ್ತು. 24 ಗಂಟೆಗಳೊಳಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಅವರನ್ನು ಸೇವೆಯಿಂದ ಕಿತ್ತುಹಾಕಬೇಕು ಎಂದು ಆಗ್ರಹಿಸಿತ್ತು.

ದೂರಿನ ವಿಚಾರಣೆಯನ್ನು ಕಾಲೇಜಿನ ತ್ರಿಸದಸ್ಯ ಆಂತರಿಕ ಸಮಿತಿ ನಡೆಸಿದ್ದು, “ಉಪನ್ಯಾಸಕಿಯ ವಿರುದ್ಧ ಮಾಡಿರುವ ಆಪಾದನೆಗೆ ಯಾವುದೇ ಸಾಕ್ಷ್ಯವನ್ನು ದೂರುದಾರರು ನೀಡಿಲ್ಲ ಹಾಗೂ ಯಾವುದೇ ಸಾಕ್ಷ್ಯ ಪ್ರಸ್ತುತ ಪಡಿಸದೆ ಇರುವುದರಿಂದ ಕೇವಲ ಆಪಾದನೆಗಳ ಆಧಾರದಲ್ಲಿ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ” ಎಂದು ಪ್ರಾಂಶುಪಾಲರು ಹೇಳಿದ್ದಾರೆ.

ಪ್ರೊ. ಶಿಲ್ಪಾ ಸಿಂಗ್ ಅತ್ಯುತ್ತಮ ಉಪನ್ಯಾಸಕಿಯಾಗಿದ್ದು, ವಿದ್ಯಾರ್ಥಿಗಳು ಅವರು ಪಾಠ ಮಾಡುವ ವಿಧಾನದಿಂದ ಖುಷಿಯಾಗಿದ್ದಾರೆ. ABVP ನೀಡಿದ್ದ ದೂರಿನ ಅರ್ಜಿಯಲ್ಲಿ ಅದರ ಕೊಂಕಣ ಘಟಕದ ಜಂಟಿ ಕಾರ್ಯದರ್ಶಿ ಪ್ರಭಾ ನಾಯ್ಕ್ ಸಹಿ ಹಾಕಿದ್ದು ಅವರು ಕಾಲೇಜಿನ ವಿದ್ಯಾರ್ಥಿನಿಯಲ್ಲ ಎಂದು ಪ್ರಾಂಶುಪಾಲರು ಹೇಳಿದ್ದಾರೆ.

ಪ್ರೊ. ಶಿಲ್ಪಾ ಸಿಂಗ್ ತನ್ನ ಉಪನ್ಯಾಸದ ಸಮಯದಲ್ಲಿ ಮನುಸ್ಮೃತಿ ಸೇರಿದಂತೆ, ರೋಹಿತ್ ವೆಮುಲಾ, ಎಂ.ಎಂ. ಕಲ್ಬುರ್ಗಿ, ದಾಭೋಲ್ಕರ್ ಮುಂತಾದವರ‌‌ ಕುರಿತು ಮಾತನಾಡುತ್ತಾರೆ ಎಂದು ABVP ತನ್ನ ದೂರಿನಲ್ಲಿ ಉಲ್ಲೇಖಿಸಿತ್ತು.

ಇದನ್ನೂ ಓದಿ: ಎಬಿವಿಪಿ ಪಾಪಿಗಳ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...