Homeಮುಖಪುಟಉಪನ್ಯಾಸಕಿ ವಿರುದ್ದ ದೂರು: ABVP ಗೆ ಖಡಕ್ ಪ್ರತ್ಯುತ್ತರ ನೀಡಿದ ಗೋವಾ ಕಾಲೇಜು

ಉಪನ್ಯಾಸಕಿ ವಿರುದ್ದ ದೂರು: ABVP ಗೆ ಖಡಕ್ ಪ್ರತ್ಯುತ್ತರ ನೀಡಿದ ಗೋವಾ ಕಾಲೇಜು

ಪ್ರೊ. ಶಿಲ್ಪಾ ಸಿಂಗ್ ತನ್ನ ಉಪನ್ಯಾಸದ ಸಮಯದಲ್ಲಿ ಮನುಸ್ಮೃತಿ ಸೇರಿದಂತೆ, ರೋಹಿತ್ ವೆಮುಲಾ, ಎಂ.ಎಂ. ಕಲ್ಬುರ್ಗಿ, ದಾಭೋಲ್ಕರ್ ಮುಂತಾದವರ‌‌ ಕುರಿತು ಮಾತನಾಡುತ್ತಾರೆ ಎಂದು ABVP ತನ್ನ ದೂರಿನಲ್ಲಿ ಉಲ್ಲೇಖಿಸಿತ್ತು.

- Advertisement -
- Advertisement -

ರಾಜಧಾನಿ ಪಣಜಿಯ ವಿ. ಎಂ. ಸಲ್ಗೋಕರ್ ಕಾನೂನು ಕಾಲೇಜ್‌ನ ಉಪನ್ಯಾಸಕಿ ಪ್ರೊ. ಶಿಲ್ಪಾ ಸಿಂಗ್ ನಿರ್ದಿಷ್ಟ ಧರ್ಮದ ಬಗ್ಗೆ ದ್ವೇಷ ಬಿತ್ತುತ್ತಿದ್ದಾರೆ, ಅವರನ್ನು ಹುದ್ದೆಯಿಂದ ಕಿತ್ತುಹಾಕಬೇಕು ಎಂದು ಆಗ್ರಹಿಸಿ ABVP ಸಲ್ಲಿಸಿದ್ದ ದೂರಿಗೆ ಕಾಲೇಜು ಖಡಕ್ ಪ್ರತ್ಯುತ್ತರ ನೀಡಿದ್ದು, “ABVP ಗೆ ಇಂತಹ ಆಕ್ಷೇಪಣೆಗಳನ್ನೆತ್ತಲು ಯಾವುದೇ ಹಕ್ಕಿಲ್ಲ ಹಾಗೂ ಉಪನ್ಯಾಸಕಿಯನ್ನು ಸೇವೆಯಿಂದ ಕಿತ್ತು ಹಾಕುವುದಿಲ್ಲ” ಎಂದು ಹೇಳಿದೆ.

ಕಾಲೇಜಿನ ಆಡಳಿತ ಮಂಡಳಿಯ ಪ್ರತಿಕ್ರಿಯೆಯನ್ನು ABVP ಗೆ ಶನಿವಾರ ರಿಜಿಸ್ಟರ್ಡ್ ಪೋಸ್ಟ್ ಮೂಲಕ ರವಾನಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಶಬೀರ್ ಅಲಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ದಿ ಇಂಡಿಯನ್ ಎಕ್ಸ್‌‌ಪ್ರೆಸ್ ವರದಿ ಮಾಡಿದೆ.

“ಇದು ಕಾನೂನು ಕಾಲೇಜು ಆಗಿದ್ದು, ನಿಯಮಗಳ ಪಾಲನೆಯ ಜವಾಬ್ದಾರಿ ನಮಗಿದೆ. ಕಾನೂನಾತ್ಮಕವಾಗಿಯೂ ಅವರ ಮನವಿಯನ್ನು ಪುರಸ್ಕರಿಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮುಸುಕುಧಾರಿ ಹುಡುಗಿ ಎಬಿವಿಪಿ ಸದಸ್ಯೆ ಕೋಮಲ್‌ ಶರ್ಮಾ ಎಂದು ದೃಢಪಡಿಸಿದ ದೆಹಲಿ ಪೊಲೀಸರು

ಕಳೆದ ತಿಂಗಳು ABVP ಕಾಲೇಜಿನ ಉಪನ್ಯಾಸಕಿ ಪ್ರೊ. ಶಿಲ್ಪಾ ಸಿಂಗ್ ವಿರುದ್ಧ ದೂರು ನೀಡಿ, “ಅವರು ಒಂದು ನಿರ್ದಿಷ್ಟ ಧರ್ಮ, ಸಮುದಾಯ ಹಾಗೂ ಜನರ ಗುಂಪಿನ ವಿರುದ್ಧ ಸಾಮಾಜಿಕವಾಗಿ ದ್ವೇಷ ಬಿತ್ತುತ್ತಿದ್ದಾರೆ” ಎಂದು ಆರೋಪಿಸಿತ್ತು. 24 ಗಂಟೆಗಳೊಳಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಅವರನ್ನು ಸೇವೆಯಿಂದ ಕಿತ್ತುಹಾಕಬೇಕು ಎಂದು ಆಗ್ರಹಿಸಿತ್ತು.

ದೂರಿನ ವಿಚಾರಣೆಯನ್ನು ಕಾಲೇಜಿನ ತ್ರಿಸದಸ್ಯ ಆಂತರಿಕ ಸಮಿತಿ ನಡೆಸಿದ್ದು, “ಉಪನ್ಯಾಸಕಿಯ ವಿರುದ್ಧ ಮಾಡಿರುವ ಆಪಾದನೆಗೆ ಯಾವುದೇ ಸಾಕ್ಷ್ಯವನ್ನು ದೂರುದಾರರು ನೀಡಿಲ್ಲ ಹಾಗೂ ಯಾವುದೇ ಸಾಕ್ಷ್ಯ ಪ್ರಸ್ತುತ ಪಡಿಸದೆ ಇರುವುದರಿಂದ ಕೇವಲ ಆಪಾದನೆಗಳ ಆಧಾರದಲ್ಲಿ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ” ಎಂದು ಪ್ರಾಂಶುಪಾಲರು ಹೇಳಿದ್ದಾರೆ.

ಪ್ರೊ. ಶಿಲ್ಪಾ ಸಿಂಗ್ ಅತ್ಯುತ್ತಮ ಉಪನ್ಯಾಸಕಿಯಾಗಿದ್ದು, ವಿದ್ಯಾರ್ಥಿಗಳು ಅವರು ಪಾಠ ಮಾಡುವ ವಿಧಾನದಿಂದ ಖುಷಿಯಾಗಿದ್ದಾರೆ. ABVP ನೀಡಿದ್ದ ದೂರಿನ ಅರ್ಜಿಯಲ್ಲಿ ಅದರ ಕೊಂಕಣ ಘಟಕದ ಜಂಟಿ ಕಾರ್ಯದರ್ಶಿ ಪ್ರಭಾ ನಾಯ್ಕ್ ಸಹಿ ಹಾಕಿದ್ದು ಅವರು ಕಾಲೇಜಿನ ವಿದ್ಯಾರ್ಥಿನಿಯಲ್ಲ ಎಂದು ಪ್ರಾಂಶುಪಾಲರು ಹೇಳಿದ್ದಾರೆ.

ಪ್ರೊ. ಶಿಲ್ಪಾ ಸಿಂಗ್ ತನ್ನ ಉಪನ್ಯಾಸದ ಸಮಯದಲ್ಲಿ ಮನುಸ್ಮೃತಿ ಸೇರಿದಂತೆ, ರೋಹಿತ್ ವೆಮುಲಾ, ಎಂ.ಎಂ. ಕಲ್ಬುರ್ಗಿ, ದಾಭೋಲ್ಕರ್ ಮುಂತಾದವರ‌‌ ಕುರಿತು ಮಾತನಾಡುತ್ತಾರೆ ಎಂದು ABVP ತನ್ನ ದೂರಿನಲ್ಲಿ ಉಲ್ಲೇಖಿಸಿತ್ತು.

ಇದನ್ನೂ ಓದಿ: ಎಬಿವಿಪಿ ಪಾಪಿಗಳ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...