Homeಮುಖಪುಟಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

ಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

ಡಾ.ಬಿ.ಆರ್ ಅಂಬೇಡ್ಕರ್‌ರವರು ಜಾತಿ ಬೇಧಭಾವ ಮತ್ತು ಅಸ್ಫೃಶ್ಯತೆಯನ್ನು ವೈಚಾರಿಕವಾಗಿ ವಿರೋಧಿಸುವ ಸಲುವಾಗಿ ಪ್ರಾಚೀನ ಹಿಂದೂ ಗ್ರಂಥ ಮನುಸ್ಮೃತಿಯನ್ನು ಸುಟ್ಟು ಹಾಕಿ ಪ್ರತಿಭಟಿಸಿದ್ದರು.

- Advertisement -
- Advertisement -

ಜನಪ್ರಿಯ ಹಿಂದಿ ಕಾರ್ಯಕ್ರಮ ‘ಕೌನ್ ಬನೇಗ ಕರೋಡ್‌ಪತಿ’ ನಿರೂಪಕ ಅಮಿತಾಬ್ ಬಚ್ಚನ್ ಮತ್ತು ಸೋನಿ ಟಿವಿ ಕಾರ್ಯಕ್ರಮ ತಯಾರಕರ ವಿರುದ್ಧ ಲಕ್ನೋ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ‘1927ರ ಡಿಸೆಂಬರ್ 25 ರಂದು ಡಾ.ಬಿ.ಆರ್ ಅಂಬೇಡ್ಕರ್‌ರವರು ಯಾವ ಧರ್ಮಗ್ರಂಥವನ್ನು ಸುಟ್ಟರು’ ಎಂಬ ಪ್ರಶ್ನೆ ಆಧಾರದಲ್ಲಿ ದೂರು ದಾಖಲಾಗಿತ್ತು.

ನಡೆದುದ್ದೇನು?

ಶುಕ್ರವಾರ ನಡೆದ ಕೌನ್ ಬನೇಗ ಕರೋಡ್‌ಪತಿ ಕಾರ್ಯಕ್ರಮದ ‘ಕರಮ್‌​ವೀರ್’ ಎಂಬ ವಿಶೇಷ ಸಂಚಿಕೆಯಲ್ಲಿ ಅತಿಥಿಗಳಾಗಿ ನಟ ಅನುಪ್ ಸೋನಿ ಮತ್ತು ಸಾಮಾಜಿಕ ಕಾರ್ಯಕರ್ತ ಬೆಜವಾಡ ವಿಲ್ಸನ್ ಹಾಟ್​ ಸೀಟ್​ನಲ್ಲಿ ಕುಳಿತಿದ್ದರು. ಅಮಿತಾಭ್ ಬಚ್ಚನ್ 6,40,000 ರೂಪಾಯಿಯ ನಗದು ಬಹುಮಾನಕ್ಕಾಗಿ ಪ್ರಶ್ನೆಯೊಂದನ್ನು ಕೇಳಿದರು. ಆ ಪ್ರಶ್ನೆ ಈಗಿದೆ.

1927ರ ಡಿಸೆಂಬರ್ 25ರಂದು ಡಾ.ಬಿ.ಆರ್.ಅಂಬೇಡ್ಕರ್​ ಹಾಗೂ ಅವರ ಅನುಯಾಯಿಗಳು ಯಾವ ಗ್ರಂಥದ ಪ್ರತಿಗಳನ್ನು ಸುಟ್ಟು ಹಾಕಿದರು?

ಆಯ್ಕೆಗಳು ಹೀಗಿವೆ:

ಎ. ವಿಷ್ಣುಪುರಾಣ

ಬಿ. ಭಗವದ್ಗೀತೆ

ಸಿ. ಋಗ್ವೇದ

ಡಿ. ಮನುಸ್ಮೃತಿ

ಈ ಪ್ರಶ್ನೆಗೆ ಬೆಜವಾಡ ವಿಲ್ಸನ್ ಮತ್ತು ಅನೂಪ್ ಸೋನಿ ಮನುಸ್ಮೃತಿ ಎಂದು ಉತ್ತರ ನೀಡಿದರು. ಸರಿ ಉತ್ತರವೆಂದು ಘೋಷಿಸಿದ ಅಮಿತಾಬ್ ಬಚ್ಚನ್, “1927ರ ಡಿಸೆಂಬರ್ 25 ರಂದು ಡಾ.ಬಿ.ಆರ್ ಅಂಬೇಡ್ಕರ್‌ರವರು ಜಾತಿ ಬೇಧಭಾವ ಮತ್ತು ಅಸ್ಫೃಶ್ಯತೆಯನ್ನು ವೈಚಾರಿಕವಾಗಿ ವಿರೋಧಿಸುವ ಸಲುವಾಗಿ ಪ್ರಾಚೀನ ಹಿಂದೂ ಗ್ರಂಥ ಮನುಸ್ಮೃತಿಯನ್ನು ಸುಟ್ಟು ಹಾಕಿ ಪ್ರತಿಭಟಿಸಿದರು” ಎಂದು ವಿವರಣೆ ನೀಡಿದರು.

ಎಫ್‌ಐಆರ್ ಏಕೆ?

ಇತಿಹಾಸದಲ್ಲಿ ದಾಖಲಾಗಿರುವ ಈ ಘಟನೆಯ ಪ್ರಶ್ನೆ ಮತ್ತು ಅಮಿತಾಬ್ ಬಚ್ಚನ್‌ರವರ ವಿವರಣೆ ಕೆಲ ಸಾಮಾಜಿಕ ಮಾಧ್ಯಮ ಬಳಕೆದಾರರನ್ನು ಕೆರಳಿಸಿದೆ. ಈ ಪ್ರಶ್ನೆಯು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ, ಹಾಗಾಗಿ ಕೌನ್ ಬನೇಗ ಕರೋಡ್‌ಪತಿ ಕಾರ್ಯಕ್ರಮವನ್ನು ಬಹಿಷ್ಕರಿಸಲು ಕರೆ ನೀಡಿದ್ದಾರೆ. ಅಲ್ಲದೇ ಲಕ್ನೋ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.


ಇದನ್ನೂ ಓದಿ: ಡಾ.ಬಿ.ಆರ್.ಅಂಬೇಡ್ಕರ್, ಸಂವಿಧಾನ ಮತ್ತು RSSನ ಮನಪರಿವರ್ತನೆ! : ಅಂಬೇಡ್ಕರ್‌ ಹೊಗಳಿದ ಬಿ.ಎಲ್‌ ಸಂತೋಷ್‌ಗೆ 9 ಪ್ರಶ್ನೆಗಳು


ಸಿನಿಮಾ ನಿರ್ಮಾಪಕ ವಿವೇಕ್​ ಅಗ್ನಿಹೋತ್ರಿ “ಕೆಬಿಸಿಯನ್ನು (ಕೌನ್ ಬನೇಗ ಕರೋಡ್‌ಪತಿ) ಕಮ್ಮಿಸ್‌ಗಳು ಅಪಹರಿಸಿದ್ದಾರೆ. ಇದರಿಂದ ಸಂಸ್ಕೃತಿ ಯುದ್ಧಗಳು ಹೇಗೆ ಗೆಲ್ಲುತ್ತವೆ ಎಂಬುದನ್ನು ಮುಗ್ಧ ಮಕ್ಕಳು ಕಲಿಯುತ್ತಾರೆ. ಇದನ್ನು ಕೋಡಿಂಗ್ ಎಂದು ಕರೆಯಲಾಗುತ್ತದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತ್ತೊಬ್ಬರು “ಕೆಬಿಸಿ ತನ್ನ ಕಾರ್ಯಕ್ರಮವನ್ನು ‘ಕೌನ್ ಬನೇಗ ಕಮ್ಯುನಿಷ್ಟ್’ ಎಂದು ಬದಲಿಸಿಕೊಳ್ಳಬೇಕು. ನಾವು ಇದನ್ನು ಬಹಿಷ್ಕರಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

ಇದು ನಿಜಕ್ಕೂ ವಿವಾದವೇ?

ಅಂಬೇಡ್ಕರ್‌ರವರು ಮನುಸ್ಮೃತಿಯನ್ನು ವಿರೋಧಿಸಿದ್ದುದು, ಅದನ್ನು ಸುಟ್ಟು ಹಾಕಿ ಪ್ರತಿಭಟಿಸಿರುವುದು ಅವರ ಬರಹಗಳಲ್ಲಿ ಮಾತ್ರವಲ್ಲದೇ ನಮ್ಮ ಇತಿಹಾಸದಲ್ಲಿ ದಾಖಲಾಗಿದೆ. ಅದು ನಮಗೆ ಒಪ್ಪಿಗೆ ಇರಬಹುದು ಅಥವಾ ಇಲ್ಲದಿರಬಹುದು. ಆದರೆ ಅದನ್ನು ಅಳಿಸಲು ಅಥವಾ ಬದಲಿಸಲು ಸಾಧ್ಯವಿಲ್ಲ. ಹಾಗಿರುವಾಗ ಇದರಲ್ಲಿ ವಿವಾದ ಎಲ್ಲಿದೆ? ಎಂದು ಕೆಲವರು ಪ್ರಶ್ನಿಸಿದ್ದಾರೆ.

ಕೆಲವರು ಕೆಬಿಸಿಯ ಆ ಪ್ರಶ್ನೆಯನ್ನು ಸಮರ್ಥಿಸಿಕೊಂಡಿದ್ದಾರೆ. “ಆ ಪ್ರಶ್ನೆಯಲ್ಲಿ ಯಾವುದೇ ತಪ್ಪಿಲ್ಲ, ಮೊದಲನೆಯದಾಗಿ ಇದು ಕೇವಲ ಸರಳ ಸಾಮಾನ್ಯ ಜ್ಞಾನದ ಪ್ರಶ್ನೆಯಾಗಿದೆ. ಭಾರತದಲ್ಲಿ ನಡೆಯುತ್ತಿರುವ ವರ್ಣಭೇದದ ಇಂದಿನ ಯುಗದಲ್ಲಿ ಅನೇಕ ಭಾರತೀಯರಿಗೆ ಮನುಸ್ಮೃತಿಯ ಅಪಾಯಗಳ ಬಗ್ಗೆ ತಿಳಿದಿಲ್ಲದಿರುವುದರಿಂದ ಪ್ರಶ್ನೆ ಕೇಳಿರುವುದು ಸರಿಯಾಗಿದೆ. ಮನುಸ್ಮೃತಿಯನ್ನು ಸುಡುವುದು ನಿಜಕ್ಕೂ ಒಂದು ಅದ್ಭುತ ಕ್ರಾಂತಿಕಾರಿ ಕ್ರಿಯೆ. ಜಾತಿವಾದವು ಬೇಗನೆ ಕಣ್ಮರೆಯಾದರೆ ಉತ್ತಮ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಮತ್ತೊಬ್ಬರು “ಮನುಸ್ಮೃತಿಯು ತಾರತಮ್ಯದ ದಾರಿದೀಪವಾಗಿದೆ ಮತ್ತು ಅದರಿಂದ ಇಂದಿಗೂ ದಲಿತರಿಗೆ ಕಿರುಕುಳ ನೀಡಲಾಗುತ್ತಿದೆ!! ಈ ವಿಷಯದ ಬಗ್ಗೆ ಜಾಗೃತಿ ಮೂಡಿಸಿದ್ದಕ್ಕಾಗಿ ಕೆಬಿಸಿಗೆ ಧನ್ಯವಾದಗಳು. ನಾನು ಕೆಬಿಸಿಯನ್ನು ಬೆಂಬಲಿಸುತ್ತೇನೆ. ಕೆಬಿಸಿಯನ್ನು ಬಾಯ್ಕಾಟ್ ಮಾಡಬೇಕು ಎನ್ನುತ್ತಿರುವವರು ಮೊದಲು ಮನುಸ್ಮೃತಿಯನ್ನು ಓದಿ ನಂತರ ಪ್ರತಿಕ್ರಿಯಿಸಲಿ” ಎಂದು ಸವಾಲು ಹಾಕಿದ್ದಾರೆ.

ಒಟ್ಟಿನಲ್ಲಿ ಇಂದು ಭಾರತದಲ್ಲಿ ತಮಗೆ ರುಚಿಸದ ಎಲ್ಲಾ ವಿಷಯಗಳನ್ನು ಬಾಯ್ಕಾಟ್ ಮಾಡಬೇಕೆಂದು ಆಗ್ರಹಿಸುವುದು ಸಾಮಾನ್ಯವಾಗಿಬಿಟ್ಟಿದೆ. ಅದು ತಮಗೆ ಏಕೆ ಸರಿಯೆನಿಸುತ್ತಿಲ್ಲ, ಅದರಿಂದಾಗುವ ಅಪಾಯಗಳೇನು ಎಂದು ವಿವರವಾಗಿ ಚರ್ಚಿಸುವ ಬದಲು ಬಾಯ್ಕಾಟ್ ಎಂದು ಟ್ರೆಂಡ್ ಮಾಡಲಾಗುತ್ತಿದೆ. ಆ ಪಟ್ಟಿಗೆ ಈ ಪ್ರಕರಣ ಹೊಸ ಸೇರ್ಪಡೆಯಾಗಿದೆ.


ಇದನ್ನೂ ಓದಿ: ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇದೆಲ್ಲವೂ ನಾಟಕವಷ್ಟೇ.
    ಅಮಿತಾಬ್‌ಗೇ ಆಗಲಿ ಅಥವ ಸೋನಿ ವಾಹಿನಿ ಯವರಿಗೇ ಆಗಲಿ ಬಾಬಾಸಾಹೇಬರ ಕುರಿತಾಗಿ ಯಾವುದೇ ರೀತಿಯ ಪ್ರೀತ್ಯಾದರ ಅಥವ ಗೌರವಗಳಾಗಲೀ ಇಲ್ಲ. ಇಂಥಹ ಪ್ರಶ್ನೆಗಳನ್ನು ಕೇಳಿದಾಗ ನಮ್ಮ ದೇಶದಲ್ಲಿ ಸಹಜವಾಗಿಯೇ ವಾಕ್ಸಮರ ಮತ್ತು ತಿಕ್ಕಾಟಗಳಾಗುತ್ತವೆ, ಜಾಲವಾಹಿನಿಯಲ್ಲಿ ಚರ್ಚೆಗಳಾಗುತ್ತವೆ, ತತ್ಕಾರಣದಿಂದ ಬಹುಜನರ ಗಮನ ಕಾರ್ಯಕ್ರಮದತ್ತ ಹರಿದು, ಕಾರ್ಯಕ್ರಮದ ಕುರಿತಾದ ಟಿ ಆರ್ ಪಿ ಹೆಚ್ಚುತ್ತದೆ ಎಂಬ ದುರಾಲೋಚನೆಯಿಂದ ಈ ಪ್ರಶ್ನೆ ಕೇಳಿರುತ್ತಾರೆ. ಇಷ್ಟು ವರ್ಷಗಳಿಂದ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಕೇಳದ ಪ್ರಶ್ನೆ, ಬೆಜವಾಡ ವಿಲ್ಸನ್ ಹಾಟ್‌ಸೀಟ್‌ನಲ್ಲಿ ಕುಳಿತಾಗಲೇ ಕೇಳಿದ್ದಾರೆಂದರೆ, ಅದರ ಅಂತರಾರ್ಥ ತಿಳಿಯುತ್ತದೆ. ಈಗ ಬೆಜವಾಡ ವಿಲ್ಸನ್‌ರವರ ಕುರಿತು ತಿಳಿದಿರುವವರೂ ಇದರ ಕಡೆ ಗಮನವೀಯುತ್ತಾರೆ. ಬಹುಜನರನ್ನು ಬುಟ್ಟಿಗೆ ಹಾಕಿಕೊಳ್ಳುವ ಕಾರ್ಪೊರೇಟ್ ಕುತಂತ್ರವಿದಷ್ಟೇ….
    ವಿಶ್ವನಾಥ ಎನ್ ಅಮಾಸ

  2. ಇದೆಲ್ಲವೂ ನಾಟಕವಷ್ಟೇ.
    ಅಮಿತಾಬ್‌ಗೇ ಆಗಲಿ ಅಥವ ಸೋನಿ ವಾಹಿನಿ ಯವರಿಗೇ ಆಗಲಿ ಬಾಬಾಸಾಹೇಬರ ಕುರಿತಾಗಿ ಯಾವುದೇ ರೀತಿಯ ಪ್ರೀತ್ಯಾದರ ಅಥವ ಗೌರವಗಳಾಗಲೀ ಇಲ್ಲ. ಇಂಥಹ ಪ್ರಶ್ನೆಗಳನ್ನು ಕೇಳಿದಾಗ ನಮ್ಮ ದೇಶದಲ್ಲಿ ಸಹಜವಾಗಿಯೇ ವಾಕ್ಸಮರ ಮತ್ತು ತಿಕ್ಕಾಟಗಳಾಗುತ್ತವೆ, ಜಾಲವಾಹಿನಿಯಲ್ಲಿ ಚರ್ಚೆಗಳಾಗುತ್ತವೆ, ತತ್ಕಾರಣದಿಂದ ಬಹುಜನರ ಗಮನ ಕಾರ್ಯಕ್ರಮದತ್ತ ಹರಿದು, ಕಾರ್ಯಕ್ರಮದ ಕುರಿತಾದ ಟಿ ಆರ್ ಪಿ ಹೆಚ್ಚುತ್ತದೆ ಎಂಬ ದುರಾಲೋಚನೆಯಿಂದ ಈ ಪ್ರಶ್ನೆ ಕೇಳಿರುತ್ತಾರೆ. ಇಷ್ಟು ವರ್ಷಗಳಿಂದ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಕೇಳದ ಪ್ರಶ್ನೆ, ಬೆಜವಾಡ ವಿಲ್ಸನ್ ಹಾಟ್‌ಸೀಟ್‌ನಲ್ಲಿ ಕುಳಿತಾಗಲೇ ಕೇಳಿದ್ದಾರೆಂದರೆ, ಅದರ ಅಂತರಾರ್ಥ ತಿಳಿಯುತ್ತದೆ. ಈಗ ಬೆಜವಾಡ ವಿಲ್ಸನ್‌ರವರ ಕುರಿತು ತಿಳಿದಿರುವವರೂ ಇದರ ಕಡೆ ಗಮನವೀಯುತ್ತಾರೆ. ಬಹುಜನರನ್ನು ಬುಟ್ಟಿಗೆ ಹಾಕಿಕೊಳ್ಳುವ ಕಾರ್ಪೊರೇಟ್ ಕುತಂತ್ರವಿದಷ್ಟೇ….
    ವಿಶ್ವನಾಥ ಎನ್ ಅಮಾಸ
    K V Nayaka

  3. ಅಮಿತಾಬ್ ಜೀ ರವರು ಕೇಳಿದ ಪ್ರಶ್ನೆ ಕರೆಕ್ಟ್..ಅದಕ್ಕೆ ನೀಡಿದ ಉತ್ತರ ಸರಿ ಇದೆ…… ನಮ್ಮ ಬಾರತದ ಎಸ್ಟೋ ಜನರಿಗೆ ಬಾಬ ಸಾಬ್ ಅಂಬೇಡ್ಕರ್ ರವರು ಮನುಸ್ಮೃತಿ ಯನ್ನು ಸುಟ್ಟೀಧೂ ಗೊತ್ತಿಲ್ಲ ….ಇದ್ದರಿಂದ ಅದನ್ನು ಏಕೆ ಏತಕ್ಕಾಗಿ ಯಾವ ಜನರಿಗೆ ಅನ್ಯಾಯ ಆಗಿದೆ…ಅದರಲ್ಲಿ ಹಿಂದುಗಳು ಬಡ ಹಿಂದು ಜನರನ್ನು ಹೀಗೆ ಹಲವಾರು ಬಾರಿ ದೇಶದ ನಾನಾ ಭಾಗಗಳಲ್ಲಿ.. ಅಂದರೆ ಕನ್ಯಾಕುಮಾರಿ ಯಿಂದ….ಕಾಶ್ಮೀರದ ವರೆಗೆ…ಈ ಬಡ ಹಿಂದುಗಳಿಗೆ ಶಾಲೆಗೆ….ಕುಡಿಯುವ ನೀರಿಗೆ…ದೇವಸ್ಥಾನ ಪ್ರವೇಶ…ಇನ್ನು ಎಷ್ಟೆಷ್ಟೋ….ಕಾನೂನು ಮಾಡಿ ಬಡ ಜನರಿಗೆ ಬದುಕಲು ಕಷ್ಟ ಆಗಿದೆ……ದಯವಿಟ್ಟು ಮನುಸ್ಮೃತಿ ಜನರು ಓದಿ ಆಗ ನೀವು ಸಹ ಅದನ್ನು ಸುಡಲು ಮನಸ್ಸು ಬರುತ್ತೆ….ಈ ಪ್ರಶ್ನೆ ಕೇಳಿದ್ದು ತಪ್ಪಲ್ಲ…ಕೆಲವು ಬ್ರಾಹ್ಮಣ ಮಂಧಿಗಳು ಮಾತ್ರ ಜನರಿಗೆ ಇದು ಗೊತ್ತಿರಲಿಲ್ಲ…ಮತ್ತೇ ಜನರಿಗೆ ಗೊತ್ತು ಮಾಡಿ ನಮ್ಮ ಮರ್ಯಾದೆ ಹಾಳು ಮಾಡ್ತಾರೆ ಅಂಥಾ ..ಕೋರ್ಟ್ನಲ್ಲಿ ಕೇಸ್ ಹಾಕುತ್ತಾರೆ….ಅಮಿತಾಬ್ ರವರರಿಗೆ ಏನು ಆಗಲ್ಲ…ಜೈ ಅಮಿತಾಬ್ ಜಿ….

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...