Homeಕರ್ನಾಟಕಉಪಚುನಾವಣೆ: ಬೆಳಿಗ್ಗೆ ನಿಧಾನಗತಿಯಲ್ಲಿ ಆರಂಭವಾದ ಮತದಾನ ಪ್ರಕ್ರಿಯೆ ಈಗ ಚುರುಕಾಗಿದೆ!

ಉಪಚುನಾವಣೆ: ಬೆಳಿಗ್ಗೆ ನಿಧಾನಗತಿಯಲ್ಲಿ ಆರಂಭವಾದ ಮತದಾನ ಪ್ರಕ್ರಿಯೆ ಈಗ ಚುರುಕಾಗಿದೆ!

ನಾಗರಬಾವಿಯ ಮತಗಟ್ಟೆಸಂಖ್ಯೆ 290ರಲ್ಲಿ ಬಿಜೆಪಿ ಕಾರ್ಯಕರ್ತರು ಕೇಸರಿ ಬಟ್ಟೆ ಧರಿಸಿಕೊಂಡು ಮತದಾನ ಮಾಡಲು ಬಂದಿದ್ದರಿಂದ, ಕಾಂಗ್ರೆಸ್ ಮತ್ತು ನಿಜೆಪಿ ನಾಯಕರ ನಡುವೆ ವಾಗ್ವಾದಕ್ಕೆ ಕಾರಣವಾಯಿತು

- Advertisement -
- Advertisement -

ಇಂದು ಕರ್ನಾಟಕದ 2 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದು, ಶಿರಾ ಮತ್ತು ಆರ್‌ಆರ್‌ ನಗರದಲ್ಲಿ 9 ಗಂಟೆಯ ವರದಿಯ ಪ್ರಕಾರ ಅತ್ಯಂತ ಕಡಿಮೆ ಮತದಾನ ನಡೆದಿದೆ ಎಂದು ವರದಿಯಾಗಿದೆ. ಆರ್‌ಆರ್‌ ನಗರದಲ್ಲಿ ಶೇ .6.27, ಸಿರಾದಲ್ಲಿ ಶೇ .8.25 ಮತದಾನ ದಾಖಲಾಗಿದೆ.

ಆದರೆ ಆರ್‌ಆರ್‌ ನಗರ ವಿಧಾನಸಭಾ ಕ್ಷೇತ್ರದ ಕೆಲವು ಮತಗಟ್ಟೆಗಳಲ್ಲಿ ಮಧ್ಯಾಹ್ನ 12 ಗಂಟೆ ವೇಳೆಗೆ ಮತದಾನ ಚುರುಕುಗೊಂಡಿದೆ. ಮತದಾರರು ತಮ್ಮ ಹಕ್ಕು ಚಲಾಯಿಸಲು ಸರದಿಯಲ್ಲಿ ನಿಂತ ದೃಶ್ಯ ಕಂಡುಬಂದಿದೆ. ಮಧ್ಯಾಹ್ನದ ಬಳಿಕ ಮತ್ತುಷ್ಟು ಚುರುಕುಗೊಳ್ಳುವ ಸಾಧ್ಯತೆ ಇದೆ.

ಪ್ರತೀ ಮತಗಟ್ಟೆಯಲ್ಲೂ ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೊರೊನಾ ಸಾಂಕ್ರಾಮಿಕ ರೋಗದ ನಡುವೆ ಈ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಮತಗಟ್ಟೆಯಲ್ಲಿ  ಬೂತ್‌ಗಳನ್ನು ಸ್ವಚ್ಚಗೊಳಿಸುವುದು, ತಾಪಮಾನವನ್ನು ಪರಿಶೀಲಿಸುವುದು, ಮತದಾರರಿಗೆ ಕೈಗವಸುಗಳನ್ನು ಒದಗಿಸುವುದು, ಸ್ಯಾನಿಟೈಸರ್‌ಗಳನ್ನು ನೀಡುವುದು ಸೇರಿದಂತೆ ಹಲವು ವ್ಯವಸ್ಥೆಗಳನ್ನು ಮಾಡಲಾಗಿದೆ.

ಕೇತ್ರದಲ್ಲಿ ಒಟ್ಟು 678 ಮತಗಟ್ಟೆಗಳಿದ್ದು, ಅದರಲ್ಲಿ 82 ಮತಗಟ್ಟೆಗಳು ಅತಿ ಸೂಕ್ಷ್ಮ ಎಂದು ಗುರುತಿಸಲಾಗಿದೆ. ಮತದಾನ ಪ್ರಕ್ರಿಯೆ ಸುಸೂತ್ರವಾಗಿ ನಡೆಸಲು ಎಲ್ಲ ಸಿದ್ದತೆ ಮಾಡಿಕೊಳ್ಳಲಾಗಿದೆ.

112 ಮೊಬೈಲ್ ಸ್ಕ್ವಾಡ್ ನಿಯೋಜಿಸಲಾಗಿದ್ದು ಈ ತಂಡವು ಪ್ರತಿ ಮತಗಟ್ಟೆಗೆ ತೆರಳಿ ಬಂದೋಬಸ್ತ್ ಹಾಗೂ ಸ್ಥಿತಿಗತಿ ಬಗ್ಗೆ ನಿಗಾ ಇಡಲಿದೆ. ಪೊಲೀಸರ ಗಸ್ತು ಹೆಚ್ಚಿಸಲು 32 ಹೊಯ್ಸಳ ವಾಹನ ಮತ್ತು 91 ಚೀತಾಗಳನ್ನು ಯೋಜಿಸಲಾಗಿದೆ. ಆರ್ ಆರ್ ನಗರ ಅತಿ ಸೂಕ್ಷ್ಮ ಕ್ಷೇತ್ರವಾಗಿದ್ದು ಮತದಾನದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಸಲುವಾಗಿ 2563 ಪೊಲೀಸರನ್ನು ನಿಯೋಜಿಸಲಾಗಿದೆ.

ಕ್ಷೇತ್ರದಲ್ಲಿ ಮೂವರು ಡಿಸಿಪಿಗಳು, 8 ಎಸಿಪಿ, 30 ಇನ್ಸ್‌ಪೆಕ್ಟರ್, 94 ಪಿಎಸ್ಐ, 185 ಎಎಸ್ಐ, 1547 ಕಾನ್‌ಸ್ಟೆಬಲ್ ಗಳು, 699 ಗೃಹ ರಕ್ಷಕ ಸಿಬ್ಬಂದಿ, 19 ಕೆಎಸ್ಆರ್ ಪಿ, 20 ಸಿಎಆರ್ ತುಕಡಿ, 3 ಸಿಎಪಿಎಫ್ ಪ್ಯಾರಾ ಮಿಲಿಟರಿ ತುಕಡಿ ನಿಯೋಜಿಸಲಾಗಿದೆ.

ಇಲ್ಲಿಯವರೆಗೆ ಎರಡೂ ಕ್ಷೇತ್ರಗಳಲ್ಲಿ ಮತದಾನ ಶಾಂತಿಯುತವಾಗಿಯೇ ನಡೆದಿದೆ. ಇದೀಗ ಬಂದ ವರದಿಯ ಪ್ರಕಾರ ನಾಗರಬಾವಿಯ ಮತಗಟ್ಟೆಸಂಖ್ಯೆ 290ರಲ್ಲಿ ಬಿಜೆಪಿ ಕಾರ್ಯಕರ್ತರು ಕೇಸರಿ ಬಟ್ಟೆ ಧರಿಸಿಕೊಂಡು ಮತದಾನ ಮಾಡಲು ಬಂದಿದ್ದರಿಂದ, ಕಾಂಗ್ರೆಸ್ ಮತ್ತು ನಿಜೆಪಿ ನಾಯಕರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ನಂತರ ಪೊಲೀಸರು ಬಂದು ಇದನ್ನು ತಿಳಿಗೊಳಿಸಿದರು.

ಇದನ್ನೂ ಓದಿ: ಪಕ್ಷಾಂತರದಿಂದ ಆರ್‌ಆರ್ ನಗರ ಉಪಚುನಾವಣೆ: ರಾಜಕೀಯ ದಿಕ್ಕು ಬದಲಿಸುತ್ತಾ?

ಆರ್.ಆರ್.ನಗರದಲ್ಲಿ, 1,200 ಕ್ಕೂ ಹೆಚ್ಚು ಮತದಾರರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಚುನಾವಣಾ ಸಿಬ್ಬಂದಿ ಅವರನ್ನು ಪ್ರತ್ಯೇಕವಾಗಿ ಸಂಪರ್ಕಿಸುತ್ತಿದ್ದು, ಅವರು ಅಂಚೆ ಮತಪತ್ರದ ಮೂಲಕ ಮತ ಚಲಾಯಿಸಿದ್ದಾರೆಯೇ ಎಂದು ಪರಿಶೀಲಿಸುತ್ತಿದ್ದಾರೆ. ಸಂಜೆ 5 ಗಂಟೆ ನಂತರ ಸೋಂಕಿತರಿಗೆ ಮತದಾನ ಮಾಡಲು ಸಹ ವ್ಯವಸ್ಥೆ ಮಾಡಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ತಮ್ಮ ಟ್ವೀಟ್‌ನಲ್ಲಿ ಮತದಾರರು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಬೇಕು ಎಂದು ಕೋರಿದ್ದಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಸಿರಾದಲ್ಲಿ ಡಾ.ರಾಜೇಶ್ ಗೌಡರನ್ನು ಬಿಜೆಪಿ ಕಣಕ್ಕಿಳಿಸಿದ್ದು, ಕಾಂಗ್ರೆಸ್ ಪಕ್ಷವು ತನ್ನ ಹಿರಿಯ ನಾಯಕ ಮತ್ತು ಮಾಜಿ ಸಚಿವ ಟಿ ಬಿ ಜಯಚಂದ್ರ ಅವರನ್ನು ಕಣಕ್ಕಿಳಿಸಿದೆ. ಸಹಾನುಭೂತಿಯ ಅಲೆಯನ್ನು ಸದುಪಯೋಗಪಡಿಸಿಕೊಳ್ಳುವ ಪ್ರಯತ್ನದಲ್ಲಿ ಜೆಡಿಎಸ್ ಮಾಜಿ ಶಾಸಕ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಅವರನ್ನು ಕಣಕ್ಕಿಳಿಸಿದೆ.

ಆರ್‌.ಆರ್.ನಗರದಲ್ಲಿ ಜೆಡಿಎಸ್‌ನಿಂದ ವಿ.ಕೃಷ್ಣಮೂರ್ತಿ ಸ್ಪರ್ಧಿಸುತ್ತಿದ್ದು, ಕಾಂಗ್ರೆಸ್‌ನಿಂದ ಬಿಜೆಪಿಗೆ ಪಕ್ಷಾಂತರವಾಗಿದ್ದ ಮುನಿರತ್ನ ಈ ಭಾರಿ ಬಿಜೆಪಿಯ ಅಭ್ಯರ್ಥಿಯಾಗಿದ್ದಾರೆ. ಇನ್ನು ಕಾಂಗ್ರೆಸ್‌ನಿಂದ ಐಎಎಸ್ ಅಧಿಕಾರಿ ದಿವಂಗತ ಡಿ.ಕೆ.ರವಿ ಅವರ ಪತ್ನಿ ಕುಸುಮಾ ಕಣದಲ್ಲಿದ್ದಾರೆ.

ಆರ್‌ಆರ್‌ ನಗರದಲ್ಲಿ ಮತಚಲಾವಣೆ ಮಾಡಿದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ, “ಎಲ್ಲರೂ ಹೊರಗೆ ಬಂದು ಮತಚಲಾವಣೆ ಹಾಕುವುದರ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು. ಚುನಾವಣಾ ಆಯೋಗವು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ” ಎಂದು ಹೇಳಿದರು.

ಆರ್.ಆರ್.ನಗರದಲ್ಲಿ 4.6 ಲಕ್ಷಕ್ಕೂ ಹೆಚ್ಚು ಮತದಾರರು ಮತ್ತು ಸಿರಾದಲ್ಲಿ 2.3 ಲಕ್ಷ ಮತದಾರರಿದ್ದಾರೆ. ಮತದಾನ ಎಣಿಕೆ ಮತ್ತು ಫಲಿತಾಂಶ ನವೆಂಬರ್ 10 ಕ್ಕೆ ಹೊರಬೀಳಲಿದೆ.


ಇದನ್ನೂ ಓದಿ: ಉಪಚುನಾವಣೆ: ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ವಿಷಯವಾಗಿದೆ; ಯಾಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...