Homeಕರ್ನಾಟಕಉಪಚುನಾವಣೆ: ಬೆಳಿಗ್ಗೆ ನಿಧಾನಗತಿಯಲ್ಲಿ ಆರಂಭವಾದ ಮತದಾನ ಪ್ರಕ್ರಿಯೆ ಈಗ ಚುರುಕಾಗಿದೆ!

ಉಪಚುನಾವಣೆ: ಬೆಳಿಗ್ಗೆ ನಿಧಾನಗತಿಯಲ್ಲಿ ಆರಂಭವಾದ ಮತದಾನ ಪ್ರಕ್ರಿಯೆ ಈಗ ಚುರುಕಾಗಿದೆ!

ನಾಗರಬಾವಿಯ ಮತಗಟ್ಟೆಸಂಖ್ಯೆ 290ರಲ್ಲಿ ಬಿಜೆಪಿ ಕಾರ್ಯಕರ್ತರು ಕೇಸರಿ ಬಟ್ಟೆ ಧರಿಸಿಕೊಂಡು ಮತದಾನ ಮಾಡಲು ಬಂದಿದ್ದರಿಂದ, ಕಾಂಗ್ರೆಸ್ ಮತ್ತು ನಿಜೆಪಿ ನಾಯಕರ ನಡುವೆ ವಾಗ್ವಾದಕ್ಕೆ ಕಾರಣವಾಯಿತು

- Advertisement -
- Advertisement -

ಇಂದು ಕರ್ನಾಟಕದ 2 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದು, ಶಿರಾ ಮತ್ತು ಆರ್‌ಆರ್‌ ನಗರದಲ್ಲಿ 9 ಗಂಟೆಯ ವರದಿಯ ಪ್ರಕಾರ ಅತ್ಯಂತ ಕಡಿಮೆ ಮತದಾನ ನಡೆದಿದೆ ಎಂದು ವರದಿಯಾಗಿದೆ. ಆರ್‌ಆರ್‌ ನಗರದಲ್ಲಿ ಶೇ .6.27, ಸಿರಾದಲ್ಲಿ ಶೇ .8.25 ಮತದಾನ ದಾಖಲಾಗಿದೆ.

ಆದರೆ ಆರ್‌ಆರ್‌ ನಗರ ವಿಧಾನಸಭಾ ಕ್ಷೇತ್ರದ ಕೆಲವು ಮತಗಟ್ಟೆಗಳಲ್ಲಿ ಮಧ್ಯಾಹ್ನ 12 ಗಂಟೆ ವೇಳೆಗೆ ಮತದಾನ ಚುರುಕುಗೊಂಡಿದೆ. ಮತದಾರರು ತಮ್ಮ ಹಕ್ಕು ಚಲಾಯಿಸಲು ಸರದಿಯಲ್ಲಿ ನಿಂತ ದೃಶ್ಯ ಕಂಡುಬಂದಿದೆ. ಮಧ್ಯಾಹ್ನದ ಬಳಿಕ ಮತ್ತುಷ್ಟು ಚುರುಕುಗೊಳ್ಳುವ ಸಾಧ್ಯತೆ ಇದೆ.

ಪ್ರತೀ ಮತಗಟ್ಟೆಯಲ್ಲೂ ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೊರೊನಾ ಸಾಂಕ್ರಾಮಿಕ ರೋಗದ ನಡುವೆ ಈ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಮತಗಟ್ಟೆಯಲ್ಲಿ  ಬೂತ್‌ಗಳನ್ನು ಸ್ವಚ್ಚಗೊಳಿಸುವುದು, ತಾಪಮಾನವನ್ನು ಪರಿಶೀಲಿಸುವುದು, ಮತದಾರರಿಗೆ ಕೈಗವಸುಗಳನ್ನು ಒದಗಿಸುವುದು, ಸ್ಯಾನಿಟೈಸರ್‌ಗಳನ್ನು ನೀಡುವುದು ಸೇರಿದಂತೆ ಹಲವು ವ್ಯವಸ್ಥೆಗಳನ್ನು ಮಾಡಲಾಗಿದೆ.

ಕೇತ್ರದಲ್ಲಿ ಒಟ್ಟು 678 ಮತಗಟ್ಟೆಗಳಿದ್ದು, ಅದರಲ್ಲಿ 82 ಮತಗಟ್ಟೆಗಳು ಅತಿ ಸೂಕ್ಷ್ಮ ಎಂದು ಗುರುತಿಸಲಾಗಿದೆ. ಮತದಾನ ಪ್ರಕ್ರಿಯೆ ಸುಸೂತ್ರವಾಗಿ ನಡೆಸಲು ಎಲ್ಲ ಸಿದ್ದತೆ ಮಾಡಿಕೊಳ್ಳಲಾಗಿದೆ.

112 ಮೊಬೈಲ್ ಸ್ಕ್ವಾಡ್ ನಿಯೋಜಿಸಲಾಗಿದ್ದು ಈ ತಂಡವು ಪ್ರತಿ ಮತಗಟ್ಟೆಗೆ ತೆರಳಿ ಬಂದೋಬಸ್ತ್ ಹಾಗೂ ಸ್ಥಿತಿಗತಿ ಬಗ್ಗೆ ನಿಗಾ ಇಡಲಿದೆ. ಪೊಲೀಸರ ಗಸ್ತು ಹೆಚ್ಚಿಸಲು 32 ಹೊಯ್ಸಳ ವಾಹನ ಮತ್ತು 91 ಚೀತಾಗಳನ್ನು ಯೋಜಿಸಲಾಗಿದೆ. ಆರ್ ಆರ್ ನಗರ ಅತಿ ಸೂಕ್ಷ್ಮ ಕ್ಷೇತ್ರವಾಗಿದ್ದು ಮತದಾನದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಸಲುವಾಗಿ 2563 ಪೊಲೀಸರನ್ನು ನಿಯೋಜಿಸಲಾಗಿದೆ.

ಕ್ಷೇತ್ರದಲ್ಲಿ ಮೂವರು ಡಿಸಿಪಿಗಳು, 8 ಎಸಿಪಿ, 30 ಇನ್ಸ್‌ಪೆಕ್ಟರ್, 94 ಪಿಎಸ್ಐ, 185 ಎಎಸ್ಐ, 1547 ಕಾನ್‌ಸ್ಟೆಬಲ್ ಗಳು, 699 ಗೃಹ ರಕ್ಷಕ ಸಿಬ್ಬಂದಿ, 19 ಕೆಎಸ್ಆರ್ ಪಿ, 20 ಸಿಎಆರ್ ತುಕಡಿ, 3 ಸಿಎಪಿಎಫ್ ಪ್ಯಾರಾ ಮಿಲಿಟರಿ ತುಕಡಿ ನಿಯೋಜಿಸಲಾಗಿದೆ.

ಇಲ್ಲಿಯವರೆಗೆ ಎರಡೂ ಕ್ಷೇತ್ರಗಳಲ್ಲಿ ಮತದಾನ ಶಾಂತಿಯುತವಾಗಿಯೇ ನಡೆದಿದೆ. ಇದೀಗ ಬಂದ ವರದಿಯ ಪ್ರಕಾರ ನಾಗರಬಾವಿಯ ಮತಗಟ್ಟೆಸಂಖ್ಯೆ 290ರಲ್ಲಿ ಬಿಜೆಪಿ ಕಾರ್ಯಕರ್ತರು ಕೇಸರಿ ಬಟ್ಟೆ ಧರಿಸಿಕೊಂಡು ಮತದಾನ ಮಾಡಲು ಬಂದಿದ್ದರಿಂದ, ಕಾಂಗ್ರೆಸ್ ಮತ್ತು ನಿಜೆಪಿ ನಾಯಕರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ನಂತರ ಪೊಲೀಸರು ಬಂದು ಇದನ್ನು ತಿಳಿಗೊಳಿಸಿದರು.

ಇದನ್ನೂ ಓದಿ: ಪಕ್ಷಾಂತರದಿಂದ ಆರ್‌ಆರ್ ನಗರ ಉಪಚುನಾವಣೆ: ರಾಜಕೀಯ ದಿಕ್ಕು ಬದಲಿಸುತ್ತಾ?

ಆರ್.ಆರ್.ನಗರದಲ್ಲಿ, 1,200 ಕ್ಕೂ ಹೆಚ್ಚು ಮತದಾರರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಚುನಾವಣಾ ಸಿಬ್ಬಂದಿ ಅವರನ್ನು ಪ್ರತ್ಯೇಕವಾಗಿ ಸಂಪರ್ಕಿಸುತ್ತಿದ್ದು, ಅವರು ಅಂಚೆ ಮತಪತ್ರದ ಮೂಲಕ ಮತ ಚಲಾಯಿಸಿದ್ದಾರೆಯೇ ಎಂದು ಪರಿಶೀಲಿಸುತ್ತಿದ್ದಾರೆ. ಸಂಜೆ 5 ಗಂಟೆ ನಂತರ ಸೋಂಕಿತರಿಗೆ ಮತದಾನ ಮಾಡಲು ಸಹ ವ್ಯವಸ್ಥೆ ಮಾಡಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ತಮ್ಮ ಟ್ವೀಟ್‌ನಲ್ಲಿ ಮತದಾರರು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಬೇಕು ಎಂದು ಕೋರಿದ್ದಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಸಿರಾದಲ್ಲಿ ಡಾ.ರಾಜೇಶ್ ಗೌಡರನ್ನು ಬಿಜೆಪಿ ಕಣಕ್ಕಿಳಿಸಿದ್ದು, ಕಾಂಗ್ರೆಸ್ ಪಕ್ಷವು ತನ್ನ ಹಿರಿಯ ನಾಯಕ ಮತ್ತು ಮಾಜಿ ಸಚಿವ ಟಿ ಬಿ ಜಯಚಂದ್ರ ಅವರನ್ನು ಕಣಕ್ಕಿಳಿಸಿದೆ. ಸಹಾನುಭೂತಿಯ ಅಲೆಯನ್ನು ಸದುಪಯೋಗಪಡಿಸಿಕೊಳ್ಳುವ ಪ್ರಯತ್ನದಲ್ಲಿ ಜೆಡಿಎಸ್ ಮಾಜಿ ಶಾಸಕ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಅವರನ್ನು ಕಣಕ್ಕಿಳಿಸಿದೆ.

ಆರ್‌.ಆರ್.ನಗರದಲ್ಲಿ ಜೆಡಿಎಸ್‌ನಿಂದ ವಿ.ಕೃಷ್ಣಮೂರ್ತಿ ಸ್ಪರ್ಧಿಸುತ್ತಿದ್ದು, ಕಾಂಗ್ರೆಸ್‌ನಿಂದ ಬಿಜೆಪಿಗೆ ಪಕ್ಷಾಂತರವಾಗಿದ್ದ ಮುನಿರತ್ನ ಈ ಭಾರಿ ಬಿಜೆಪಿಯ ಅಭ್ಯರ್ಥಿಯಾಗಿದ್ದಾರೆ. ಇನ್ನು ಕಾಂಗ್ರೆಸ್‌ನಿಂದ ಐಎಎಸ್ ಅಧಿಕಾರಿ ದಿವಂಗತ ಡಿ.ಕೆ.ರವಿ ಅವರ ಪತ್ನಿ ಕುಸುಮಾ ಕಣದಲ್ಲಿದ್ದಾರೆ.

ಆರ್‌ಆರ್‌ ನಗರದಲ್ಲಿ ಮತಚಲಾವಣೆ ಮಾಡಿದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ, “ಎಲ್ಲರೂ ಹೊರಗೆ ಬಂದು ಮತಚಲಾವಣೆ ಹಾಕುವುದರ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು. ಚುನಾವಣಾ ಆಯೋಗವು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ” ಎಂದು ಹೇಳಿದರು.

ಆರ್.ಆರ್.ನಗರದಲ್ಲಿ 4.6 ಲಕ್ಷಕ್ಕೂ ಹೆಚ್ಚು ಮತದಾರರು ಮತ್ತು ಸಿರಾದಲ್ಲಿ 2.3 ಲಕ್ಷ ಮತದಾರರಿದ್ದಾರೆ. ಮತದಾನ ಎಣಿಕೆ ಮತ್ತು ಫಲಿತಾಂಶ ನವೆಂಬರ್ 10 ಕ್ಕೆ ಹೊರಬೀಳಲಿದೆ.


ಇದನ್ನೂ ಓದಿ: ಉಪಚುನಾವಣೆ: ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ವಿಷಯವಾಗಿದೆ; ಯಾಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...