Homeಮುಖಪುಟಕೋಮು ದ್ವೇಷ ಹರಡಿದ ಆರೋಪ: ನಟಿ ಕಂಗನಾ ಮತ್ತು ಸಹೋದರಿಗೆ ಮತ್ತೆ ನೋಟಿಸ್

ಕೋಮು ದ್ವೇಷ ಹರಡಿದ ಆರೋಪ: ನಟಿ ಕಂಗನಾ ಮತ್ತು ಸಹೋದರಿಗೆ ಮತ್ತೆ ನೋಟಿಸ್

ಮೊದಲ ನೋಟಿಸ್‌ಗೆ ನಟಿ ಕಂಗನಾ ಮದುವೆ ಇದೆ ಎಂಬ ನೆಪ ನೀಡಿ ವಿಚಾರಣೆ ತಪ್ಪಿಸಿಕೊಂಡಿದ್ದರು. ಈ ತಿಂಗಳ 10 ಮತ್ತು 11ರಂದು ವಿಚಾರಣೆಗೆ ಹಾಜರಾಗಲು ಮತ್ತೊಂದು ನೋಟಿಸ್ ನೀಡಲಾಗಿದೆ.

- Advertisement -
- Advertisement -

ನಟಿ ಕಂಗನಾ ರಣಾವತ್ ಮತ್ತು ಅವರ ಸಹೋದರಿ ರಂಗೋಲಿ ಚಾಂಡೆಲ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಮುಂಬೈ ಪೊಲೀಸರು ಮತ್ತೆ ನೋಟಿಸ್ ಕಳುಹಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ದಾಖಲಾದ ಪ್ರಕರಣ ಸಂಬಂಧ ನೋಟಿಸ್ ನೀಡಲಾಗಿದೆ.

ಇಬ್ಬರು ಸಹೋದರಿಯರು ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ಹೇಳಿಕೆಗಳನ್ನು ಪೋಸ್ಟ್ ಮಾಡಿದ್ದರು. ಕಳೆದ ತಿಂಗಳು ಕೂಡ ವಿಚಾರಣೆಗಾಗಿ ಪೊಲೀಸರು ಕಂಗನಾ ರಣಾವತ್ ಮತ್ತು ರಂಗೋಲಿ ಅವರಿಗೆ ನೋಟಿಸ್ ನೀಡಿದ್ದರು.

ಇತ್ತೀಚೆಗೆ, ಬಾಂದ್ರಾ ಪೊಲೀಸರು ನಟಿ ಕಂಗನಾ ಮತ್ತು ಅವರ ಸಹೋದರಿ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಕಂಗನಾ ರಣಾವತ್ ವಿರುದ್ಧ ಬಾಂದ್ರಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಎಫ್ಐಆರ್ ದಾಖಲಿಸಲು ಆದೇಶಿಸಿತ್ತು.

ಇದನ್ನೂ ಓದಿ: ಕೋಮು ದ್ವೇಷ ಹರಡಿದ ಆರೋಪ: ವಿಚಾರಣೆಗೆ ಹಾಜರಾಗುವಂತೆ ಕಂಗನಾ ರಣಾವತ್‌ಗೆ ನೋಟಿಸ್!

ಮೊದಲ ನೋಟಿಸ್‌ನಲ್ಲಿ, ನಟಿ ಕಂಗನಾ ಮದುವೆ ಇದೆ ಎಂಬ ನೆಪ ನೀಡಿ ವಿಚಾರಣೆಗೆ ಬರುವುದನ್ನು ತಪ್ಪಿಸಿಕೊಂಡಿದ್ದರು. ಈ ಹಿನ್ನೆಲೆ ಎರಡನೇ ಬಾರಿ ನೋಟಿಸ್ ನೀಡಲಾಗಿದ್ದು, ನವೆಂಬರ್ 10 ಮತ್ತು 11 ನೇ ದಿನಾಂಕದಂದು ವಿಚಾರಣೆಗೆ ಹಾಜರಾಗಲು ತಿಳಿಸಿದ್ದಾರೆ.

ಬಾಲಿವುಡ್ ಕಾಸ್ಟಿಂಗ್ ನಿರ್ದೇಶಕ ಮತ್ತು ಫಿಟ್ನೆಸ್ ತರಬೇತುದಾರ ಮುನಾವರ್ ಅಲಿ ಸಯ್ಯದ್ ಅವರು ಸಲ್ಲಿಸಿದ ದೂರಿನ ಬಗ್ಗೆ ತನಿಖೆ ನಡೆಸುವಂತೆ ಬಾಂದ್ರಾ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಕಂಗನಾ ರಣಾವತ್ ಮತ್ತು ಆಕೆಯ ಸಹೋದರಿಯ ಟ್ವೀಟ್ ಮತ್ತು ಇತರ ಹೇಳಿಕೆಗಳನ್ನು ಉಲ್ಲೇಖಿಸಿ ಪೊಲೀಸರಿಗೆ ಆದೇಶಿಸಿತ್ತು.

ನಟಿ ಮತ್ತು ಆಕೆಯ ಸಹೋದರಿ ಹೆಚ್ಚು ಆಕ್ಷೇಪಾರ್ಹ ಹೇಳಿಕೆ‌ಗಳನ್ನು ಟ್ವೀಟ್ ಮಾಡಿದ್ದಾರೆ. ಇದು ದೂರುದಾರರ ಧಾರ್ಮಿಕ ಭಾವನೆಗಳನ್ನು ಮಾತ್ರವಲ್ಲದೆ ಅನೇಕ ಕಲಾವಿದರ ಭಾವನೆಗಳನ್ನು ಸಹ ನೋಯಿಸುತ್ತದೆ. ಅವರು ಕಲಾವಿದರನ್ನು ಕೋಮುವಾದಿ ವರ್ಗಗಳಾಗಿ ವಿಂಗಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ನ್ಯಾಯಾಲಯದ ನಿರ್ದೇಶನದ ಮೇರೆಗೆ, ಬಾಂದ್ರಾ ಪೊಲೀಸರು ರಣಾವತ್ ಮತ್ತು ಆಕೆಯ ಸಹೋದರಿಯ ವಿರುದ್ಧ ಐಪಿಸಿ ಸೆಕ್ಷನ್ 153 ಎ (ಧರ್ಮ, ಜನಾಂಗ, ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295 ಎ (ಧಾರ್ಮಿಕ ಭಾವನೆಗಳನ್ನು ನೋಯಿಸುವ ಉದ್ದೇಶಪೂರ್ವಕ ಕೃತ್ಯಗಳು) ಮತ್ತು 124 (ದೇಶದ್ರೋಹ), ಮತ್ತೆ 34ರ (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.


ಇದನ್ನೂ ಓದಿ: ಕೆಲವರು ಮುಂಬೈಗೆ ಬಂದು ದ್ರೋಹವೆಸಗುತ್ತಾರೆ: ಕಂಗನಾ ವಿರುದ್ಧ ಉದ್ಧವ್ ಠಾಕ್ರೆ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...