Homeಅಂತರಾಷ್ಟ್ರೀಯಅಮೆರಿಕ ಚುನಾವಣೆ: ಕಮಲಾ ಹ್ಯಾರಿಸ್ ಗೆಲುವಿಗಾಗಿ ತಮಿಳುನಾಡಲ್ಲಿ ವಿಶೇಷ ಪೂಜೆ!

ಅಮೆರಿಕ ಚುನಾವಣೆ: ಕಮಲಾ ಹ್ಯಾರಿಸ್ ಗೆಲುವಿಗಾಗಿ ತಮಿಳುನಾಡಲ್ಲಿ ವಿಶೇಷ ಪೂಜೆ!

ತುಲಸೇಂದ್ರಪುರಂ ದೇವಾಲಯದ ಫಲಕದಲ್ಲಿ ಇತರ ದಾನಿಗಳ ಜೊತೆಯಲ್ಲಿ, 2014 ರಲ್ಲಿ 5,000 ರೂಪಾಯಿ ದಾನ ನೀಡಿದ್ದ ಕಮಲಾ ಹ್ಯಾರಿಸ್ ಅವರ ಹೆಸರನ್ನು ಕೆತ್ತಲಾಗಿದೆ. 

- Advertisement -
- Advertisement -

ಅಮೆರಿಕ ಚುನಾವಣೆ ಆರಂಭವಾಗುತ್ತಿದ್ದಂತೆ ಡೆಮಾಕ್ರಟಿಕ್ ಪಕ್ಷದ ಉಪಾಧ್ಯಕ್ಷ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗಾಗಿ ಅವರ ಪೂರ್ವಜರಿದ್ದ ಹಳ್ಳಿಯಲ್ಲಿ ವಿಶೇಷ ಪೂಜೆ-ಪ್ರಾರ್ಥನೆಗಳು ನಡೆದಿವೆ. ಅವರ ಗೆಲುವಿಗಾಗಿ ಹಾರೈಸಿ ಹಳ್ಳಿಯ ರಸ್ತೆಗಳಲ್ಲಿ ಈ ಹಿಂದೆ ಬ್ಯಾನರ್‌ಗಳನ್ನು ಹಾಕಲಾಗಿತ್ತು. ಇಂದು ವಿಶೇಷ ಪೂಜೆ, ಅನ್ನಸಂತರ್ಪಣೆ ನಡೆದಿದೆ.

ದಕ್ಷಿಣ ಭಾರತದ ತಮಿಳುನಾಡಿನ ತುಲಸೇಂದ್ರಪುರಂ ಗ್ರಾಮಸ್ಥರು ಕಮಲ ಹ್ಯಾರಿಸ್ ಅವರ ಬ್ಯಾನರ್‌ಗಳನ್ನು ಹಾಕಿ, ದೇವಾಲಯಗಳಲ್ಲಿ ಸಾಲುಗಟ್ಟಿ ನಿಂತು ಪೂಜೆ ಮಾಡಿಸಿ ಆಕೆಯ ಗೆಲುವಿಗಾಗಿ ಪ್ರಾರ್ಥಿಸಿದ್ದಾರೆ.

ಚೆನ್ನೈಯಿಂದ ಸುಮಾರು 320 ಕಿ.ಮೀ ದೂರದಲ್ಲಿರುವ ತುಲಸೇಂದ್ರಪುರಂ, ಕಮಲಾ ಹ್ಯಾರಿಸ್ ಅಜ್ಜ ಪಿ.ವಿ. ಗೋಪಾಲನ್ ಶತಮಾನಕ್ಕೂ ಹಿಂದೆ ಜನಿಸಿದ ಊರು. ದಕ್ಷಿಣ ಏಷ್ಯಾದ ಮೊದಲ ಯುಎಸ್ ಸೆನೆಟರ್ ಎನಿಸಿಕೊಂಡಿರುವ ಕಮಲಾ ಹ್ಯಾರಿಸ್‌ ಅವರ ಸಾಧನೆ ಬಗ್ಗೆ ತುಲಸೇಂದ್ರಪುರಂ ನಿವಾಸಿಗಳು ಹೆಮ್ಮೆಯಿಂದ ಮಾತನಾಡುತ್ತಾರೆ. ಚುನಾವಣಾ ಫಲಿತಾಂಶಕ್ಕಾಗಿ ಅಮೆರಿಕನ್ನರಂತೆ ಇಲ್ಲಿನ ಜನರು ಕಾಯುತ್ತಿದ್ದಾರೆ.

ಕಮಲಾ

ತಮ್ಮ ಕುಟುಂಬದೊಂದಿಗೆ ಹಳ್ಳಿಯ ಸಂಬಂಧವನ್ನು ವಿವರಿಸಿದ ಎಂ.ಎಸ್. ಹ್ಯಾರಿಸ್ ಅವರ ಚಿಕ್ಕಮ್ಮ ಡಾ.ಸರಳಾ ಗೋಪಾಲನ್ “ತುಲಸೇಂದ್ರಪುರಂ ಗ್ರಾಮ ದೇವರು ನನ್ನ ತಂದೆಯ ಕುಟುಂಬ ದೇವತೆ. ಕುಟುಂಬದಲ್ಲಿ ಮದುವೆ ಅಥವಾ ವಿಶೇಷ ಸಂದರ್ಭ ಬಂದಾಗಲೆಲ್ಲಾ ನಾವು ದೇವಸ್ಥಾನಕ್ಕೆ ಭೇಟಿ ನೀಡುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿ: ಅಮೆರಿಕ ಚುನಾವಣೆ: ಉಪಾಧ್ಯಕ್ಷ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗೆ ತಮಿಳುನಾಡಿನಿಂದ ಶುಭ ಹಾರೈಕೆ!

ಇಂದು ಗ್ರಾಮದಲ್ಲಿ ನಡೆಯುತ್ತಿರುವ ವಿಶೇಷ ಪೂಜೆ ಪ್ರಾರ್ಥನೆಗಳ ಬಗ್ಗೆ ನನಗೆ ತಿಳಿದಿದೆ ಎಂದು ಡಾ.ಸರಳಾ ಹೇಳಿದರು. “ನಾನು ಪ್ರತಿವರ್ಷ ದೇವಸ್ಥಾನಕ್ಕೆ ಹೋಗಿ ನಮ್ಮ ಕುಟುಂಬದ ಪ್ರತಿಯೊಬ್ಬರಿಗಾಗಿ ಪ್ರಾರ್ಥಿಸುತ್ತೇನೆ. ಈ ವರ್ಷ, ಕೊರೊನಾದಿಂದಾಗಿ ನಾನು ಹೋಗಲು ಸಾಧ್ಯವಾಗಲಿಲ್ಲ” ಎಂದು ತಿಳಿಸಿದರು.

ತುಲಸೇಂದ್ರಪುರಂ ದೇವಾಲಯದ ಫಲಕದಲ್ಲಿ ಇತರ ದಾನಿಗಳ ಜೊತೆಯಲ್ಲಿ, 2014 ರಲ್ಲಿ 5,000 ರೂಪಾಯಿ ದಾನ ನೀಡಿದ್ದ ಕಮಲಾ ಹ್ಯಾರಿಸ್ ಅವರ ಹೆಸರನ್ನು ಕೆತ್ತಲಾಗಿದೆ.

“ಅವರ ಸಾಧನೆಗಳ ಬಗ್ಗೆ ನಮಗೆ ಸಂತೋಷ ಮತ್ತು ಹೆಮ್ಮೆ ಇದೆ. ನಮ್ಮ ಗ್ರಾಮದ ಮೂಲವನ್ನು ಹೊಂದಿರುವ ಕಮಲಾ ಅವರು ಅಮೆರಿಕ ಉಪಾಧ್ಯಕ್ಷರಾಗುವ ಸ್ಪರ್ಧೆಯಲ್ಲಿದ್ದಾರೆ. ಅವರ ಗೆಲುವಿಗಾಗಿ ಪೂಜೆ-ಪ್ರಾರ್ಥನೆ ನಡೆದಿದೆ” ಎಂದು ದೇವಾಲಯದ ಆಡಳಿತಾಧಿಕಾರಿ ರಮಣನ್ ತಿಳಿಸಿದ್ದಾರೆ.

Kamala Harris: Watch: US Vice presidential candidate Kamala Harris' posters pop up in Tamil Nadu - The Economic Times Video | ET Now

ಇತ್ತಿಚೆಗೆ ಕಮಲಾ ಹ್ಯಾರಿಸ್ ತನ್ನ ನೆಚ್ಚಿನ ಭಾರತೀಯ ತಿನಿಸುಗಳ ಬಗ್ಗೆ ಹೇಳುವಾಗ, ಇಡ್ಲಿ, ಒಳ್ಳೆಯ ಸಾಂಬಾರ್” ಮತ್ತು “ಯಾವುದೇ ರೀತಿಯ ಟಿಕ್ಕಾ” ಮೇಲಿನ ತನ್ನ ಪ್ರೀತಿಯನ್ನು ಹಂಚಿಕೊಂಡಿದ್ದರು. ಈ ಬಾರಿ ಜೋ ಬಿಡೆನ್ ಆಯ್ಕೆಯಾದರೆ ಕಮಲಾ ಹ್ಯಾರಿಸ್ ಅಮೆರಿಕದ ಮೊದಲ ಮಹಿಳಾ ಉಪಾಧ್ಯಕ್ಷರಾಗಲಿದ್ದಾರೆ.

ಕಮಲಾ ಹ್ಯಾರಿಸ್ ತಮ್ಮ 5ನೇ ವಯಸ್ಸಿನಲ್ಲಿ ತುಲಸೇಂದ್ರಪುರಂಗೆ ಭೇಟಿ ನೀಡಿದರು ಮತ್ತು ಚೆನ್ನೈನ ಕಡಲತೀರಗಳಲ್ಲಿ ತನ್ನ ಅಜ್ಜನೊಂದಿಗೆ ಓಡಾಡಿದ್ದನ್ನ ಇತ್ತಿಚೆಗೆ ನೆನಪಿಸಿಕೊಂಡಿದ್ದರು. ಗ್ರಾಮದಲ್ಲಿ ಗೋಪಾಲನ್ ಅವರ ಮನೆ ಪಾಳು ಬಿದ್ದು ಹೋಗಿದ್ದು, ಅಸ್ತಿತ್ವದಲ್ಲಿಲ್ಲ.

ಹ್ಯಾರಿಸ್ ಅವರ ಅಜ್ಜ ಪಿ.ವಿ. ಗೋಪಾಲನ್ ಮತ್ತು ಅವರ ಕುಟುಂಬ ಸುಮಾರು 90 ವರ್ಷಗಳ ಹಿಂದೆ ತುಲಸೇಂದ್ರಪುರಂನಿಂದ ಚೆನ್ನೈಗೆ ವಲಸೆ ಹೋಗಿದ್ದರು. ಕಮಲಾ ಹ್ಯಾರಿಸ್‌ ಅವರ ತಾಯಿ ತಮಿಳುನಾಡಿನವರಾದರೇ, ಅವರ ತಂದೆ, ಜಮೈಕಾದವರು. ಈ ಇಬ್ಬರೂ ಅಧ್ಯಯನಕ್ಕಾಗಿ ಅಮೆರಿಕಕ್ಕೆ ವಲಸೆ ಹೋಗಿದ್ದರು.


ಇದನ್ನೂ ಓದಿ: ಜನಾಂಗೀಯ ದಾಳಿಯನ್ನು ಹಿಮ್ಮೆಟ್ಟಿಸುವ ಹೋರಾಟಕ್ಕೆ ಸಿದ್ದಳಾಗಿದ್ದೇನೆ: ಕಮಲಾ ಹ್ಯಾರಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...