Homeಅಂತರಾಷ್ಟ್ರೀಯಅಮೆರಿಕ ಚುನಾವಣೆ: ಕಮಲಾ ಹ್ಯಾರಿಸ್ ಗೆಲುವಿಗಾಗಿ ತಮಿಳುನಾಡಲ್ಲಿ ವಿಶೇಷ ಪೂಜೆ!

ಅಮೆರಿಕ ಚುನಾವಣೆ: ಕಮಲಾ ಹ್ಯಾರಿಸ್ ಗೆಲುವಿಗಾಗಿ ತಮಿಳುನಾಡಲ್ಲಿ ವಿಶೇಷ ಪೂಜೆ!

ತುಲಸೇಂದ್ರಪುರಂ ದೇವಾಲಯದ ಫಲಕದಲ್ಲಿ ಇತರ ದಾನಿಗಳ ಜೊತೆಯಲ್ಲಿ, 2014 ರಲ್ಲಿ 5,000 ರೂಪಾಯಿ ದಾನ ನೀಡಿದ್ದ ಕಮಲಾ ಹ್ಯಾರಿಸ್ ಅವರ ಹೆಸರನ್ನು ಕೆತ್ತಲಾಗಿದೆ. 

- Advertisement -
- Advertisement -

ಅಮೆರಿಕ ಚುನಾವಣೆ ಆರಂಭವಾಗುತ್ತಿದ್ದಂತೆ ಡೆಮಾಕ್ರಟಿಕ್ ಪಕ್ಷದ ಉಪಾಧ್ಯಕ್ಷ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗಾಗಿ ಅವರ ಪೂರ್ವಜರಿದ್ದ ಹಳ್ಳಿಯಲ್ಲಿ ವಿಶೇಷ ಪೂಜೆ-ಪ್ರಾರ್ಥನೆಗಳು ನಡೆದಿವೆ. ಅವರ ಗೆಲುವಿಗಾಗಿ ಹಾರೈಸಿ ಹಳ್ಳಿಯ ರಸ್ತೆಗಳಲ್ಲಿ ಈ ಹಿಂದೆ ಬ್ಯಾನರ್‌ಗಳನ್ನು ಹಾಕಲಾಗಿತ್ತು. ಇಂದು ವಿಶೇಷ ಪೂಜೆ, ಅನ್ನಸಂತರ್ಪಣೆ ನಡೆದಿದೆ.

ದಕ್ಷಿಣ ಭಾರತದ ತಮಿಳುನಾಡಿನ ತುಲಸೇಂದ್ರಪುರಂ ಗ್ರಾಮಸ್ಥರು ಕಮಲ ಹ್ಯಾರಿಸ್ ಅವರ ಬ್ಯಾನರ್‌ಗಳನ್ನು ಹಾಕಿ, ದೇವಾಲಯಗಳಲ್ಲಿ ಸಾಲುಗಟ್ಟಿ ನಿಂತು ಪೂಜೆ ಮಾಡಿಸಿ ಆಕೆಯ ಗೆಲುವಿಗಾಗಿ ಪ್ರಾರ್ಥಿಸಿದ್ದಾರೆ.

ಚೆನ್ನೈಯಿಂದ ಸುಮಾರು 320 ಕಿ.ಮೀ ದೂರದಲ್ಲಿರುವ ತುಲಸೇಂದ್ರಪುರಂ, ಕಮಲಾ ಹ್ಯಾರಿಸ್ ಅಜ್ಜ ಪಿ.ವಿ. ಗೋಪಾಲನ್ ಶತಮಾನಕ್ಕೂ ಹಿಂದೆ ಜನಿಸಿದ ಊರು. ದಕ್ಷಿಣ ಏಷ್ಯಾದ ಮೊದಲ ಯುಎಸ್ ಸೆನೆಟರ್ ಎನಿಸಿಕೊಂಡಿರುವ ಕಮಲಾ ಹ್ಯಾರಿಸ್‌ ಅವರ ಸಾಧನೆ ಬಗ್ಗೆ ತುಲಸೇಂದ್ರಪುರಂ ನಿವಾಸಿಗಳು ಹೆಮ್ಮೆಯಿಂದ ಮಾತನಾಡುತ್ತಾರೆ. ಚುನಾವಣಾ ಫಲಿತಾಂಶಕ್ಕಾಗಿ ಅಮೆರಿಕನ್ನರಂತೆ ಇಲ್ಲಿನ ಜನರು ಕಾಯುತ್ತಿದ್ದಾರೆ.

ಕಮಲಾ

ತಮ್ಮ ಕುಟುಂಬದೊಂದಿಗೆ ಹಳ್ಳಿಯ ಸಂಬಂಧವನ್ನು ವಿವರಿಸಿದ ಎಂ.ಎಸ್. ಹ್ಯಾರಿಸ್ ಅವರ ಚಿಕ್ಕಮ್ಮ ಡಾ.ಸರಳಾ ಗೋಪಾಲನ್ “ತುಲಸೇಂದ್ರಪುರಂ ಗ್ರಾಮ ದೇವರು ನನ್ನ ತಂದೆಯ ಕುಟುಂಬ ದೇವತೆ. ಕುಟುಂಬದಲ್ಲಿ ಮದುವೆ ಅಥವಾ ವಿಶೇಷ ಸಂದರ್ಭ ಬಂದಾಗಲೆಲ್ಲಾ ನಾವು ದೇವಸ್ಥಾನಕ್ಕೆ ಭೇಟಿ ನೀಡುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿ: ಅಮೆರಿಕ ಚುನಾವಣೆ: ಉಪಾಧ್ಯಕ್ಷ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗೆ ತಮಿಳುನಾಡಿನಿಂದ ಶುಭ ಹಾರೈಕೆ!

ಇಂದು ಗ್ರಾಮದಲ್ಲಿ ನಡೆಯುತ್ತಿರುವ ವಿಶೇಷ ಪೂಜೆ ಪ್ರಾರ್ಥನೆಗಳ ಬಗ್ಗೆ ನನಗೆ ತಿಳಿದಿದೆ ಎಂದು ಡಾ.ಸರಳಾ ಹೇಳಿದರು. “ನಾನು ಪ್ರತಿವರ್ಷ ದೇವಸ್ಥಾನಕ್ಕೆ ಹೋಗಿ ನಮ್ಮ ಕುಟುಂಬದ ಪ್ರತಿಯೊಬ್ಬರಿಗಾಗಿ ಪ್ರಾರ್ಥಿಸುತ್ತೇನೆ. ಈ ವರ್ಷ, ಕೊರೊನಾದಿಂದಾಗಿ ನಾನು ಹೋಗಲು ಸಾಧ್ಯವಾಗಲಿಲ್ಲ” ಎಂದು ತಿಳಿಸಿದರು.

ತುಲಸೇಂದ್ರಪುರಂ ದೇವಾಲಯದ ಫಲಕದಲ್ಲಿ ಇತರ ದಾನಿಗಳ ಜೊತೆಯಲ್ಲಿ, 2014 ರಲ್ಲಿ 5,000 ರೂಪಾಯಿ ದಾನ ನೀಡಿದ್ದ ಕಮಲಾ ಹ್ಯಾರಿಸ್ ಅವರ ಹೆಸರನ್ನು ಕೆತ್ತಲಾಗಿದೆ.

“ಅವರ ಸಾಧನೆಗಳ ಬಗ್ಗೆ ನಮಗೆ ಸಂತೋಷ ಮತ್ತು ಹೆಮ್ಮೆ ಇದೆ. ನಮ್ಮ ಗ್ರಾಮದ ಮೂಲವನ್ನು ಹೊಂದಿರುವ ಕಮಲಾ ಅವರು ಅಮೆರಿಕ ಉಪಾಧ್ಯಕ್ಷರಾಗುವ ಸ್ಪರ್ಧೆಯಲ್ಲಿದ್ದಾರೆ. ಅವರ ಗೆಲುವಿಗಾಗಿ ಪೂಜೆ-ಪ್ರಾರ್ಥನೆ ನಡೆದಿದೆ” ಎಂದು ದೇವಾಲಯದ ಆಡಳಿತಾಧಿಕಾರಿ ರಮಣನ್ ತಿಳಿಸಿದ್ದಾರೆ.

Kamala Harris: Watch: US Vice presidential candidate Kamala Harris' posters pop up in Tamil Nadu - The Economic Times Video | ET Now

ಇತ್ತಿಚೆಗೆ ಕಮಲಾ ಹ್ಯಾರಿಸ್ ತನ್ನ ನೆಚ್ಚಿನ ಭಾರತೀಯ ತಿನಿಸುಗಳ ಬಗ್ಗೆ ಹೇಳುವಾಗ, ಇಡ್ಲಿ, ಒಳ್ಳೆಯ ಸಾಂಬಾರ್” ಮತ್ತು “ಯಾವುದೇ ರೀತಿಯ ಟಿಕ್ಕಾ” ಮೇಲಿನ ತನ್ನ ಪ್ರೀತಿಯನ್ನು ಹಂಚಿಕೊಂಡಿದ್ದರು. ಈ ಬಾರಿ ಜೋ ಬಿಡೆನ್ ಆಯ್ಕೆಯಾದರೆ ಕಮಲಾ ಹ್ಯಾರಿಸ್ ಅಮೆರಿಕದ ಮೊದಲ ಮಹಿಳಾ ಉಪಾಧ್ಯಕ್ಷರಾಗಲಿದ್ದಾರೆ.

ಕಮಲಾ ಹ್ಯಾರಿಸ್ ತಮ್ಮ 5ನೇ ವಯಸ್ಸಿನಲ್ಲಿ ತುಲಸೇಂದ್ರಪುರಂಗೆ ಭೇಟಿ ನೀಡಿದರು ಮತ್ತು ಚೆನ್ನೈನ ಕಡಲತೀರಗಳಲ್ಲಿ ತನ್ನ ಅಜ್ಜನೊಂದಿಗೆ ಓಡಾಡಿದ್ದನ್ನ ಇತ್ತಿಚೆಗೆ ನೆನಪಿಸಿಕೊಂಡಿದ್ದರು. ಗ್ರಾಮದಲ್ಲಿ ಗೋಪಾಲನ್ ಅವರ ಮನೆ ಪಾಳು ಬಿದ್ದು ಹೋಗಿದ್ದು, ಅಸ್ತಿತ್ವದಲ್ಲಿಲ್ಲ.

ಹ್ಯಾರಿಸ್ ಅವರ ಅಜ್ಜ ಪಿ.ವಿ. ಗೋಪಾಲನ್ ಮತ್ತು ಅವರ ಕುಟುಂಬ ಸುಮಾರು 90 ವರ್ಷಗಳ ಹಿಂದೆ ತುಲಸೇಂದ್ರಪುರಂನಿಂದ ಚೆನ್ನೈಗೆ ವಲಸೆ ಹೋಗಿದ್ದರು. ಕಮಲಾ ಹ್ಯಾರಿಸ್‌ ಅವರ ತಾಯಿ ತಮಿಳುನಾಡಿನವರಾದರೇ, ಅವರ ತಂದೆ, ಜಮೈಕಾದವರು. ಈ ಇಬ್ಬರೂ ಅಧ್ಯಯನಕ್ಕಾಗಿ ಅಮೆರಿಕಕ್ಕೆ ವಲಸೆ ಹೋಗಿದ್ದರು.


ಇದನ್ನೂ ಓದಿ: ಜನಾಂಗೀಯ ದಾಳಿಯನ್ನು ಹಿಮ್ಮೆಟ್ಟಿಸುವ ಹೋರಾಟಕ್ಕೆ ಸಿದ್ದಳಾಗಿದ್ದೇನೆ: ಕಮಲಾ ಹ್ಯಾರಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...