Homeಅಂತರಾಷ್ಟ್ರೀಯಅಮೆರಿಕ ಚುನಾವಣೆ: ಕಮಲಾ ಹ್ಯಾರಿಸ್ ಗೆಲುವಿಗಾಗಿ ತಮಿಳುನಾಡಲ್ಲಿ ವಿಶೇಷ ಪೂಜೆ!

ಅಮೆರಿಕ ಚುನಾವಣೆ: ಕಮಲಾ ಹ್ಯಾರಿಸ್ ಗೆಲುವಿಗಾಗಿ ತಮಿಳುನಾಡಲ್ಲಿ ವಿಶೇಷ ಪೂಜೆ!

ತುಲಸೇಂದ್ರಪುರಂ ದೇವಾಲಯದ ಫಲಕದಲ್ಲಿ ಇತರ ದಾನಿಗಳ ಜೊತೆಯಲ್ಲಿ, 2014 ರಲ್ಲಿ 5,000 ರೂಪಾಯಿ ದಾನ ನೀಡಿದ್ದ ಕಮಲಾ ಹ್ಯಾರಿಸ್ ಅವರ ಹೆಸರನ್ನು ಕೆತ್ತಲಾಗಿದೆ. 

- Advertisement -
- Advertisement -

ಅಮೆರಿಕ ಚುನಾವಣೆ ಆರಂಭವಾಗುತ್ತಿದ್ದಂತೆ ಡೆಮಾಕ್ರಟಿಕ್ ಪಕ್ಷದ ಉಪಾಧ್ಯಕ್ಷ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗಾಗಿ ಅವರ ಪೂರ್ವಜರಿದ್ದ ಹಳ್ಳಿಯಲ್ಲಿ ವಿಶೇಷ ಪೂಜೆ-ಪ್ರಾರ್ಥನೆಗಳು ನಡೆದಿವೆ. ಅವರ ಗೆಲುವಿಗಾಗಿ ಹಾರೈಸಿ ಹಳ್ಳಿಯ ರಸ್ತೆಗಳಲ್ಲಿ ಈ ಹಿಂದೆ ಬ್ಯಾನರ್‌ಗಳನ್ನು ಹಾಕಲಾಗಿತ್ತು. ಇಂದು ವಿಶೇಷ ಪೂಜೆ, ಅನ್ನಸಂತರ್ಪಣೆ ನಡೆದಿದೆ.

ದಕ್ಷಿಣ ಭಾರತದ ತಮಿಳುನಾಡಿನ ತುಲಸೇಂದ್ರಪುರಂ ಗ್ರಾಮಸ್ಥರು ಕಮಲ ಹ್ಯಾರಿಸ್ ಅವರ ಬ್ಯಾನರ್‌ಗಳನ್ನು ಹಾಕಿ, ದೇವಾಲಯಗಳಲ್ಲಿ ಸಾಲುಗಟ್ಟಿ ನಿಂತು ಪೂಜೆ ಮಾಡಿಸಿ ಆಕೆಯ ಗೆಲುವಿಗಾಗಿ ಪ್ರಾರ್ಥಿಸಿದ್ದಾರೆ.

ಚೆನ್ನೈಯಿಂದ ಸುಮಾರು 320 ಕಿ.ಮೀ ದೂರದಲ್ಲಿರುವ ತುಲಸೇಂದ್ರಪುರಂ, ಕಮಲಾ ಹ್ಯಾರಿಸ್ ಅಜ್ಜ ಪಿ.ವಿ. ಗೋಪಾಲನ್ ಶತಮಾನಕ್ಕೂ ಹಿಂದೆ ಜನಿಸಿದ ಊರು. ದಕ್ಷಿಣ ಏಷ್ಯಾದ ಮೊದಲ ಯುಎಸ್ ಸೆನೆಟರ್ ಎನಿಸಿಕೊಂಡಿರುವ ಕಮಲಾ ಹ್ಯಾರಿಸ್‌ ಅವರ ಸಾಧನೆ ಬಗ್ಗೆ ತುಲಸೇಂದ್ರಪುರಂ ನಿವಾಸಿಗಳು ಹೆಮ್ಮೆಯಿಂದ ಮಾತನಾಡುತ್ತಾರೆ. ಚುನಾವಣಾ ಫಲಿತಾಂಶಕ್ಕಾಗಿ ಅಮೆರಿಕನ್ನರಂತೆ ಇಲ್ಲಿನ ಜನರು ಕಾಯುತ್ತಿದ್ದಾರೆ.

ಕಮಲಾ

ತಮ್ಮ ಕುಟುಂಬದೊಂದಿಗೆ ಹಳ್ಳಿಯ ಸಂಬಂಧವನ್ನು ವಿವರಿಸಿದ ಎಂ.ಎಸ್. ಹ್ಯಾರಿಸ್ ಅವರ ಚಿಕ್ಕಮ್ಮ ಡಾ.ಸರಳಾ ಗೋಪಾಲನ್ “ತುಲಸೇಂದ್ರಪುರಂ ಗ್ರಾಮ ದೇವರು ನನ್ನ ತಂದೆಯ ಕುಟುಂಬ ದೇವತೆ. ಕುಟುಂಬದಲ್ಲಿ ಮದುವೆ ಅಥವಾ ವಿಶೇಷ ಸಂದರ್ಭ ಬಂದಾಗಲೆಲ್ಲಾ ನಾವು ದೇವಸ್ಥಾನಕ್ಕೆ ಭೇಟಿ ನೀಡುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿ: ಅಮೆರಿಕ ಚುನಾವಣೆ: ಉಪಾಧ್ಯಕ್ಷ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗೆ ತಮಿಳುನಾಡಿನಿಂದ ಶುಭ ಹಾರೈಕೆ!

ಇಂದು ಗ್ರಾಮದಲ್ಲಿ ನಡೆಯುತ್ತಿರುವ ವಿಶೇಷ ಪೂಜೆ ಪ್ರಾರ್ಥನೆಗಳ ಬಗ್ಗೆ ನನಗೆ ತಿಳಿದಿದೆ ಎಂದು ಡಾ.ಸರಳಾ ಹೇಳಿದರು. “ನಾನು ಪ್ರತಿವರ್ಷ ದೇವಸ್ಥಾನಕ್ಕೆ ಹೋಗಿ ನಮ್ಮ ಕುಟುಂಬದ ಪ್ರತಿಯೊಬ್ಬರಿಗಾಗಿ ಪ್ರಾರ್ಥಿಸುತ್ತೇನೆ. ಈ ವರ್ಷ, ಕೊರೊನಾದಿಂದಾಗಿ ನಾನು ಹೋಗಲು ಸಾಧ್ಯವಾಗಲಿಲ್ಲ” ಎಂದು ತಿಳಿಸಿದರು.

ತುಲಸೇಂದ್ರಪುರಂ ದೇವಾಲಯದ ಫಲಕದಲ್ಲಿ ಇತರ ದಾನಿಗಳ ಜೊತೆಯಲ್ಲಿ, 2014 ರಲ್ಲಿ 5,000 ರೂಪಾಯಿ ದಾನ ನೀಡಿದ್ದ ಕಮಲಾ ಹ್ಯಾರಿಸ್ ಅವರ ಹೆಸರನ್ನು ಕೆತ್ತಲಾಗಿದೆ.

“ಅವರ ಸಾಧನೆಗಳ ಬಗ್ಗೆ ನಮಗೆ ಸಂತೋಷ ಮತ್ತು ಹೆಮ್ಮೆ ಇದೆ. ನಮ್ಮ ಗ್ರಾಮದ ಮೂಲವನ್ನು ಹೊಂದಿರುವ ಕಮಲಾ ಅವರು ಅಮೆರಿಕ ಉಪಾಧ್ಯಕ್ಷರಾಗುವ ಸ್ಪರ್ಧೆಯಲ್ಲಿದ್ದಾರೆ. ಅವರ ಗೆಲುವಿಗಾಗಿ ಪೂಜೆ-ಪ್ರಾರ್ಥನೆ ನಡೆದಿದೆ” ಎಂದು ದೇವಾಲಯದ ಆಡಳಿತಾಧಿಕಾರಿ ರಮಣನ್ ತಿಳಿಸಿದ್ದಾರೆ.

Kamala Harris: Watch: US Vice presidential candidate Kamala Harris' posters pop up in Tamil Nadu - The Economic Times Video | ET Now

ಇತ್ತಿಚೆಗೆ ಕಮಲಾ ಹ್ಯಾರಿಸ್ ತನ್ನ ನೆಚ್ಚಿನ ಭಾರತೀಯ ತಿನಿಸುಗಳ ಬಗ್ಗೆ ಹೇಳುವಾಗ, ಇಡ್ಲಿ, ಒಳ್ಳೆಯ ಸಾಂಬಾರ್” ಮತ್ತು “ಯಾವುದೇ ರೀತಿಯ ಟಿಕ್ಕಾ” ಮೇಲಿನ ತನ್ನ ಪ್ರೀತಿಯನ್ನು ಹಂಚಿಕೊಂಡಿದ್ದರು. ಈ ಬಾರಿ ಜೋ ಬಿಡೆನ್ ಆಯ್ಕೆಯಾದರೆ ಕಮಲಾ ಹ್ಯಾರಿಸ್ ಅಮೆರಿಕದ ಮೊದಲ ಮಹಿಳಾ ಉಪಾಧ್ಯಕ್ಷರಾಗಲಿದ್ದಾರೆ.

ಕಮಲಾ ಹ್ಯಾರಿಸ್ ತಮ್ಮ 5ನೇ ವಯಸ್ಸಿನಲ್ಲಿ ತುಲಸೇಂದ್ರಪುರಂಗೆ ಭೇಟಿ ನೀಡಿದರು ಮತ್ತು ಚೆನ್ನೈನ ಕಡಲತೀರಗಳಲ್ಲಿ ತನ್ನ ಅಜ್ಜನೊಂದಿಗೆ ಓಡಾಡಿದ್ದನ್ನ ಇತ್ತಿಚೆಗೆ ನೆನಪಿಸಿಕೊಂಡಿದ್ದರು. ಗ್ರಾಮದಲ್ಲಿ ಗೋಪಾಲನ್ ಅವರ ಮನೆ ಪಾಳು ಬಿದ್ದು ಹೋಗಿದ್ದು, ಅಸ್ತಿತ್ವದಲ್ಲಿಲ್ಲ.

ಹ್ಯಾರಿಸ್ ಅವರ ಅಜ್ಜ ಪಿ.ವಿ. ಗೋಪಾಲನ್ ಮತ್ತು ಅವರ ಕುಟುಂಬ ಸುಮಾರು 90 ವರ್ಷಗಳ ಹಿಂದೆ ತುಲಸೇಂದ್ರಪುರಂನಿಂದ ಚೆನ್ನೈಗೆ ವಲಸೆ ಹೋಗಿದ್ದರು. ಕಮಲಾ ಹ್ಯಾರಿಸ್‌ ಅವರ ತಾಯಿ ತಮಿಳುನಾಡಿನವರಾದರೇ, ಅವರ ತಂದೆ, ಜಮೈಕಾದವರು. ಈ ಇಬ್ಬರೂ ಅಧ್ಯಯನಕ್ಕಾಗಿ ಅಮೆರಿಕಕ್ಕೆ ವಲಸೆ ಹೋಗಿದ್ದರು.


ಇದನ್ನೂ ಓದಿ: ಜನಾಂಗೀಯ ದಾಳಿಯನ್ನು ಹಿಮ್ಮೆಟ್ಟಿಸುವ ಹೋರಾಟಕ್ಕೆ ಸಿದ್ದಳಾಗಿದ್ದೇನೆ: ಕಮಲಾ ಹ್ಯಾರಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...