Homeಅಂತರಾಷ್ಟ್ರೀಯಅಮೆರಿಕ ಚುನಾವಣೆ: ಕಮಲಾ ಹ್ಯಾರಿಸ್ ಗೆಲುವಿಗಾಗಿ ತಮಿಳುನಾಡಲ್ಲಿ ವಿಶೇಷ ಪೂಜೆ!

ಅಮೆರಿಕ ಚುನಾವಣೆ: ಕಮಲಾ ಹ್ಯಾರಿಸ್ ಗೆಲುವಿಗಾಗಿ ತಮಿಳುನಾಡಲ್ಲಿ ವಿಶೇಷ ಪೂಜೆ!

ತುಲಸೇಂದ್ರಪುರಂ ದೇವಾಲಯದ ಫಲಕದಲ್ಲಿ ಇತರ ದಾನಿಗಳ ಜೊತೆಯಲ್ಲಿ, 2014 ರಲ್ಲಿ 5,000 ರೂಪಾಯಿ ದಾನ ನೀಡಿದ್ದ ಕಮಲಾ ಹ್ಯಾರಿಸ್ ಅವರ ಹೆಸರನ್ನು ಕೆತ್ತಲಾಗಿದೆ. 

- Advertisement -
- Advertisement -

ಅಮೆರಿಕ ಚುನಾವಣೆ ಆರಂಭವಾಗುತ್ತಿದ್ದಂತೆ ಡೆಮಾಕ್ರಟಿಕ್ ಪಕ್ಷದ ಉಪಾಧ್ಯಕ್ಷ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗಾಗಿ ಅವರ ಪೂರ್ವಜರಿದ್ದ ಹಳ್ಳಿಯಲ್ಲಿ ವಿಶೇಷ ಪೂಜೆ-ಪ್ರಾರ್ಥನೆಗಳು ನಡೆದಿವೆ. ಅವರ ಗೆಲುವಿಗಾಗಿ ಹಾರೈಸಿ ಹಳ್ಳಿಯ ರಸ್ತೆಗಳಲ್ಲಿ ಈ ಹಿಂದೆ ಬ್ಯಾನರ್‌ಗಳನ್ನು ಹಾಕಲಾಗಿತ್ತು. ಇಂದು ವಿಶೇಷ ಪೂಜೆ, ಅನ್ನಸಂತರ್ಪಣೆ ನಡೆದಿದೆ.

ದಕ್ಷಿಣ ಭಾರತದ ತಮಿಳುನಾಡಿನ ತುಲಸೇಂದ್ರಪುರಂ ಗ್ರಾಮಸ್ಥರು ಕಮಲ ಹ್ಯಾರಿಸ್ ಅವರ ಬ್ಯಾನರ್‌ಗಳನ್ನು ಹಾಕಿ, ದೇವಾಲಯಗಳಲ್ಲಿ ಸಾಲುಗಟ್ಟಿ ನಿಂತು ಪೂಜೆ ಮಾಡಿಸಿ ಆಕೆಯ ಗೆಲುವಿಗಾಗಿ ಪ್ರಾರ್ಥಿಸಿದ್ದಾರೆ.

ಚೆನ್ನೈಯಿಂದ ಸುಮಾರು 320 ಕಿ.ಮೀ ದೂರದಲ್ಲಿರುವ ತುಲಸೇಂದ್ರಪುರಂ, ಕಮಲಾ ಹ್ಯಾರಿಸ್ ಅಜ್ಜ ಪಿ.ವಿ. ಗೋಪಾಲನ್ ಶತಮಾನಕ್ಕೂ ಹಿಂದೆ ಜನಿಸಿದ ಊರು. ದಕ್ಷಿಣ ಏಷ್ಯಾದ ಮೊದಲ ಯುಎಸ್ ಸೆನೆಟರ್ ಎನಿಸಿಕೊಂಡಿರುವ ಕಮಲಾ ಹ್ಯಾರಿಸ್‌ ಅವರ ಸಾಧನೆ ಬಗ್ಗೆ ತುಲಸೇಂದ್ರಪುರಂ ನಿವಾಸಿಗಳು ಹೆಮ್ಮೆಯಿಂದ ಮಾತನಾಡುತ್ತಾರೆ. ಚುನಾವಣಾ ಫಲಿತಾಂಶಕ್ಕಾಗಿ ಅಮೆರಿಕನ್ನರಂತೆ ಇಲ್ಲಿನ ಜನರು ಕಾಯುತ್ತಿದ್ದಾರೆ.

ಕಮಲಾ

ತಮ್ಮ ಕುಟುಂಬದೊಂದಿಗೆ ಹಳ್ಳಿಯ ಸಂಬಂಧವನ್ನು ವಿವರಿಸಿದ ಎಂ.ಎಸ್. ಹ್ಯಾರಿಸ್ ಅವರ ಚಿಕ್ಕಮ್ಮ ಡಾ.ಸರಳಾ ಗೋಪಾಲನ್ “ತುಲಸೇಂದ್ರಪುರಂ ಗ್ರಾಮ ದೇವರು ನನ್ನ ತಂದೆಯ ಕುಟುಂಬ ದೇವತೆ. ಕುಟುಂಬದಲ್ಲಿ ಮದುವೆ ಅಥವಾ ವಿಶೇಷ ಸಂದರ್ಭ ಬಂದಾಗಲೆಲ್ಲಾ ನಾವು ದೇವಸ್ಥಾನಕ್ಕೆ ಭೇಟಿ ನೀಡುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿ: ಅಮೆರಿಕ ಚುನಾವಣೆ: ಉಪಾಧ್ಯಕ್ಷ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗೆ ತಮಿಳುನಾಡಿನಿಂದ ಶುಭ ಹಾರೈಕೆ!

ಇಂದು ಗ್ರಾಮದಲ್ಲಿ ನಡೆಯುತ್ತಿರುವ ವಿಶೇಷ ಪೂಜೆ ಪ್ರಾರ್ಥನೆಗಳ ಬಗ್ಗೆ ನನಗೆ ತಿಳಿದಿದೆ ಎಂದು ಡಾ.ಸರಳಾ ಹೇಳಿದರು. “ನಾನು ಪ್ರತಿವರ್ಷ ದೇವಸ್ಥಾನಕ್ಕೆ ಹೋಗಿ ನಮ್ಮ ಕುಟುಂಬದ ಪ್ರತಿಯೊಬ್ಬರಿಗಾಗಿ ಪ್ರಾರ್ಥಿಸುತ್ತೇನೆ. ಈ ವರ್ಷ, ಕೊರೊನಾದಿಂದಾಗಿ ನಾನು ಹೋಗಲು ಸಾಧ್ಯವಾಗಲಿಲ್ಲ” ಎಂದು ತಿಳಿಸಿದರು.

ತುಲಸೇಂದ್ರಪುರಂ ದೇವಾಲಯದ ಫಲಕದಲ್ಲಿ ಇತರ ದಾನಿಗಳ ಜೊತೆಯಲ್ಲಿ, 2014 ರಲ್ಲಿ 5,000 ರೂಪಾಯಿ ದಾನ ನೀಡಿದ್ದ ಕಮಲಾ ಹ್ಯಾರಿಸ್ ಅವರ ಹೆಸರನ್ನು ಕೆತ್ತಲಾಗಿದೆ.

“ಅವರ ಸಾಧನೆಗಳ ಬಗ್ಗೆ ನಮಗೆ ಸಂತೋಷ ಮತ್ತು ಹೆಮ್ಮೆ ಇದೆ. ನಮ್ಮ ಗ್ರಾಮದ ಮೂಲವನ್ನು ಹೊಂದಿರುವ ಕಮಲಾ ಅವರು ಅಮೆರಿಕ ಉಪಾಧ್ಯಕ್ಷರಾಗುವ ಸ್ಪರ್ಧೆಯಲ್ಲಿದ್ದಾರೆ. ಅವರ ಗೆಲುವಿಗಾಗಿ ಪೂಜೆ-ಪ್ರಾರ್ಥನೆ ನಡೆದಿದೆ” ಎಂದು ದೇವಾಲಯದ ಆಡಳಿತಾಧಿಕಾರಿ ರಮಣನ್ ತಿಳಿಸಿದ್ದಾರೆ.

Kamala Harris: Watch: US Vice presidential candidate Kamala Harris' posters pop up in Tamil Nadu - The Economic Times Video | ET Now

ಇತ್ತಿಚೆಗೆ ಕಮಲಾ ಹ್ಯಾರಿಸ್ ತನ್ನ ನೆಚ್ಚಿನ ಭಾರತೀಯ ತಿನಿಸುಗಳ ಬಗ್ಗೆ ಹೇಳುವಾಗ, ಇಡ್ಲಿ, ಒಳ್ಳೆಯ ಸಾಂಬಾರ್” ಮತ್ತು “ಯಾವುದೇ ರೀತಿಯ ಟಿಕ್ಕಾ” ಮೇಲಿನ ತನ್ನ ಪ್ರೀತಿಯನ್ನು ಹಂಚಿಕೊಂಡಿದ್ದರು. ಈ ಬಾರಿ ಜೋ ಬಿಡೆನ್ ಆಯ್ಕೆಯಾದರೆ ಕಮಲಾ ಹ್ಯಾರಿಸ್ ಅಮೆರಿಕದ ಮೊದಲ ಮಹಿಳಾ ಉಪಾಧ್ಯಕ್ಷರಾಗಲಿದ್ದಾರೆ.

ಕಮಲಾ ಹ್ಯಾರಿಸ್ ತಮ್ಮ 5ನೇ ವಯಸ್ಸಿನಲ್ಲಿ ತುಲಸೇಂದ್ರಪುರಂಗೆ ಭೇಟಿ ನೀಡಿದರು ಮತ್ತು ಚೆನ್ನೈನ ಕಡಲತೀರಗಳಲ್ಲಿ ತನ್ನ ಅಜ್ಜನೊಂದಿಗೆ ಓಡಾಡಿದ್ದನ್ನ ಇತ್ತಿಚೆಗೆ ನೆನಪಿಸಿಕೊಂಡಿದ್ದರು. ಗ್ರಾಮದಲ್ಲಿ ಗೋಪಾಲನ್ ಅವರ ಮನೆ ಪಾಳು ಬಿದ್ದು ಹೋಗಿದ್ದು, ಅಸ್ತಿತ್ವದಲ್ಲಿಲ್ಲ.

ಹ್ಯಾರಿಸ್ ಅವರ ಅಜ್ಜ ಪಿ.ವಿ. ಗೋಪಾಲನ್ ಮತ್ತು ಅವರ ಕುಟುಂಬ ಸುಮಾರು 90 ವರ್ಷಗಳ ಹಿಂದೆ ತುಲಸೇಂದ್ರಪುರಂನಿಂದ ಚೆನ್ನೈಗೆ ವಲಸೆ ಹೋಗಿದ್ದರು. ಕಮಲಾ ಹ್ಯಾರಿಸ್‌ ಅವರ ತಾಯಿ ತಮಿಳುನಾಡಿನವರಾದರೇ, ಅವರ ತಂದೆ, ಜಮೈಕಾದವರು. ಈ ಇಬ್ಬರೂ ಅಧ್ಯಯನಕ್ಕಾಗಿ ಅಮೆರಿಕಕ್ಕೆ ವಲಸೆ ಹೋಗಿದ್ದರು.


ಇದನ್ನೂ ಓದಿ: ಜನಾಂಗೀಯ ದಾಳಿಯನ್ನು ಹಿಮ್ಮೆಟ್ಟಿಸುವ ಹೋರಾಟಕ್ಕೆ ಸಿದ್ದಳಾಗಿದ್ದೇನೆ: ಕಮಲಾ ಹ್ಯಾರಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...