Homeಕರ್ನಾಟಕ’ಜಿನ್ನಾ’ ಕಲ್ಲಡ್ಕ ಪ್ರಭಾಕರ ಭಟ್ಟರ ಗುರು ಎಂಬ ಸಂಶಯವಿದೆ: ಯು. ಟಿ. ಖಾದರ್‌

’ಜಿನ್ನಾ’ ಕಲ್ಲಡ್ಕ ಪ್ರಭಾಕರ ಭಟ್ಟರ ಗುರು ಎಂಬ ಸಂಶಯವಿದೆ: ಯು. ಟಿ. ಖಾದರ್‌

ತನ್ನ ಹೇಳಿಕೆಗೆ RSS ನಾಯಕ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿದ್ದು, ಅದರ ಕೆಲವು ತುಣುಕು ಇಲ್ಲಿದೆ

- Advertisement -
- Advertisement -

ಮಂಗಳೂರಿನ ಉಳ್ಳಾಲವು ’ಪಾಕಿಸ್ತಾನ’ ಆಗಿದೆ ಎಂದು ವಿವಾದ ಸೃಷ್ಟಿಸಿದ್ದ RSS ನಾಯಕ ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆಯನ್ನು ವಿರೋಧಿಸಿ ಉಳ್ಳಾಲವನ್ನು ಪ್ರತಿನಿಧಿಸುವ ಶಾಸಕ ಯು.ಟಿ. ಖಾದರ್‌ ತಿರುಗೇಟು ನೀಡಿದ್ದು, “ಕಲ್ಲಡ್ಕ ಪ್ರಭಾಕರ ಭಟ್ಟರ ಪಾಕಿಸ್ತಾನ ಪ್ರೇಮವನ್ನು ನೋಡಿದರೆ ಮುಹಮ್ಮದ್ ಅಲಿ ಜಿನ್ನಾ ಅವರ ಗುರು ಇದ್ದಂತಿದೆ” ಎಂದು ಹೇಳಿದ್ದಾರೆ.

“ಅವರ ಪಾಕಿಸ್ತಾನ ಪ್ರೇಮ ಹೊಸತೇನು ಅಲ್ಲ. ಅವರು ಮಾತು ಮಾತಿಗೆ ಪಾಕಿಸ್ಥಾನದ ಜಪ ಮಾಡುವುದನ್ನು ನೋಡಿದರೆ ಮಹಮದ್ ಅಲಿ ಜಿನ್ಹಾ ಅವರ ಗುರು ಇದ್ದಂತಿದೆ. ಅವರು ಭಾರತಕ್ಕಿಂತ ಪಾಕಿಸ್ಥಾನದ ಇತಿಹಾಸ ಹೆಚ್ಚು ಓದಿದಂತಿದೆ” ಎಂದು ಖಾದರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ಸಂಘಪರಿವಾರಕ್ಕೆ ಬೇಡವಾದರೇ ಕಲ್ಲಡ್ಕ ಪ್ರಭಾಕರ ಭಟ್ಟ?!

“ಸಮಾಜದಲ್ಲಿ ವಿಷಕಕ್ಕುವ ಕೆಲ ಸರ್ಪಗಳಿಗೆ ಪಾಕಿಸ್ಥಾನವೆ ಬಂಡವಾಳ. ನನಗೆ ಉಳ್ಳಾಲದ ಕಣ ಕಣದಲ್ಲೂ ಭಾರತದ ಬಹುಸಂಸ್ಕೃತಿ ಕಾಣುತ್ತದೆ. ಪೋರ್ಚುಗೀಸರನ್ನು ಒದ್ದೋಡಿಸಿದ ಅಬ್ಬಕ್ಕನ ಸೈನ್ಯದಲ್ಲಿ ಹಿಂದೂ-ಮುಸ್ಲಿಂ-ಕ್ರಿಶ್ಚಿಯನ್ ಎಲ್ಲರು ಒಟ್ಟಾಗಿಯೆ ಇದ್ದರು. ಅಂದಿನ ಧಾರ್ಮಿಕ ಕೇಂದ್ರಗಳು ಇಂದೂ ಇದೆ. ಅಂದಿನ ಸಂಪ್ರದಾಯಗಳು ಸರ್ವಧರ್ಮಗಳಿಂದ ಇಂದೂ ಕೂಡ ಗೌರವಿಸಲ್ಪಡುತ್ತಿದೆ. ಉಳ್ಳಾಲದ ಸೌಹಾರ್ದ ಸಂಸ್ಕೃತಿ ಬಲಪಡಿಸುವ ಮಾತುಗಳೆ ಸರ್ವರಿಂದ ಬರಲಿ ಎಂಬುದು ನನ್ನ ಅಪೇಕ್ಷೆ” ಎಂದು ಖಾದರ್ ತಿಳಿದ್ದಾರೆ.

ಮಂಗಳೂರಿನ ಕಿನ್ಯದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ್ದ ಪ್ರಭಾಕರ್‌ ಭಟ್, “ಉಳ್ಳಾಲ ಪೇಟೆಗೆ ಹೋದರೆ ಅದು ಪಾಕಿಸ್ತಾನವೇ ಅಲ್ವಾ. ಪಾಕಿಸ್ತಾನ ಯಾಕೆ ಆಯಿತು? ’ನಮ್ಮವರ’ ಸಂಖ್ಯೆ ಕಡಿಮೆ ಇತ್ತು, ’ಅವರ’ ಸಂಖ್ಯೆ ಹೆಚ್ಚಾಗಿತ್ತು. ಹೀಗಾಗಿ ಪಾಕಿಸ್ತಾನ, ಬಾಂಗ್ಲಾದೇಶ ನಿರ್ಮಾಣವಾದವು. ಅದೇ ರೀತಿ ಅಲ್ಲಲ್ಲಿ ಪಾಕಿಸ್ತಾನಗಳು ಜನ್ಮ ತಾಳುತ್ತಿವೆ” ಎಂದು ಧ್ವೇಷ ಬಿತ್ತುವ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಭಾರತದಲ್ಲಿ ಗೋಹತ್ಯೆ ಏಕೆ? ಕಲ್ಲಡ್ಕ ಪ್ರಭಾಕರ್‌ ಭಟ್ಟರು ಕೇಳಿದ್ದು ಯಾರಿಗೆ?

“ಮನೆಯಲ್ಲಿ ಒಂದೇ ಮಗುವಿದ್ದಾಗ ಆ ಮಗುವಿಗೆ ಅಣ್ಣ, ತಮ್ಮ, ಅಕ್ಕ, ತಂಗಿ ಯಾರೂ ಇರಲ್ಲ. ಆಗ ಆ ಮಗು ಸ್ವಾರ್ಥಿಯಾಗುತ್ತದೆ. ಮನೆಯಲ್ಲಿ ಮಕ್ಕಳು ಹೆಚ್ಚಿದಷ್ಟು ಆನಂದ, ಖುಷಿ ಹೆಚ್ಚಾಗಿರುತ್ತದೆ. ಇದೀಗ ಹಿಂದೂ ಸಮಾಜದಲ್ಲಿ ಸಂಖ್ಯೆ ಕಡಿಮೆ ಇದೆ. ಕಿನ್ಯದಲ್ಲಿ ಕೇಳಿ ಸುತ್ತಲೂ ಯಾರಿದ್ದಾರೆ ಅಂತಾ? ಅಲ್ಲದೇ ಉಳ್ಳಾಲದ ಬಗ್ಗೆ ನಾನೇನು ಹೇಳಬೇಕಾಗಿಲ್ಲ. ನಮ್ಮ ಸಂಖ್ಯೆ ಕಡಿಮೆಯಾದರೆ, ಆಗ ನಮ್ಮ ದೇವಸ್ಥಾನ, ದೈವಸ್ಥಾನಗಳನ್ನು ಉಳಿಸುವವರು ಯಾರು? ನಮ್ಮ ಸಂಪ್ರದಾಯ, ಸಂಸ್ಕೃತಿಯನ್ನು ಉಳಿಸುವವರು ಯಾರು” ಎಂದು ಸೇರಿದ್ದ ಜನರನ್ನು ಉದ್ದೇಶಿಸಿ ಪ್ರಶ್ನಿಸಿದ್ದರು.

ಇದನ್ನೂ ಓದಿ: ಕಲ್ಲಡ್ಕ ಶಾಲೆಯ ಬಾಬ್ರೀ ಡ್ರಾಮಾ! ದ್ವೇಷ ಬಿತ್ತನೆಗೊಂಡ ಮನಸ್ಸು ದ್ವೇಷವನ್ನಷ್ಟೇ ಕೊಡಬಲ್ಲದು

ಸಾಮಾಜಿಕ ಜಾಲತಾಣದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಟ್ರೋಲ್!

ಪ್ರಭಾಕರ ಭಟ್ಟರ ವಿವಾದಾತ್ಮಕ ಹೇಳಿಕೆಗೆ ಕರಾವಳಿಗರು ಅಸಮಧಾನ ವ್ಯಕ್ತಪಡಿಸಿದ್ದು, ಕೆಲವರು ಗಂಭೀರವಾಗಿ ಪ್ರತಿಕ್ರಯಿಸಿದ್ದರೆ, ಇನ್ನು ಕೆಲವರು ಹಾಸ್ಯದಿಂದ ಪ್ರತಿಕ್ರಿಯಿಸಿ ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ಉಡುಪಿಯ ಬಿಲ್ಲವ-ಮುಸ್ಲಿಂ ಸ್ನೇಹ ಸಮಾವೇಶಕ್ಕೆ ಸಂಘಪರಿವಾರ ಹೆದರಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...