Homeಕರ್ನಾಟಕ’ಜಿನ್ನಾ’ ಕಲ್ಲಡ್ಕ ಪ್ರಭಾಕರ ಭಟ್ಟರ ಗುರು ಎಂಬ ಸಂಶಯವಿದೆ: ಯು. ಟಿ. ಖಾದರ್‌

’ಜಿನ್ನಾ’ ಕಲ್ಲಡ್ಕ ಪ್ರಭಾಕರ ಭಟ್ಟರ ಗುರು ಎಂಬ ಸಂಶಯವಿದೆ: ಯು. ಟಿ. ಖಾದರ್‌

ತನ್ನ ಹೇಳಿಕೆಗೆ RSS ನಾಯಕ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿದ್ದು, ಅದರ ಕೆಲವು ತುಣುಕು ಇಲ್ಲಿದೆ

- Advertisement -
- Advertisement -

ಮಂಗಳೂರಿನ ಉಳ್ಳಾಲವು ’ಪಾಕಿಸ್ತಾನ’ ಆಗಿದೆ ಎಂದು ವಿವಾದ ಸೃಷ್ಟಿಸಿದ್ದ RSS ನಾಯಕ ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆಯನ್ನು ವಿರೋಧಿಸಿ ಉಳ್ಳಾಲವನ್ನು ಪ್ರತಿನಿಧಿಸುವ ಶಾಸಕ ಯು.ಟಿ. ಖಾದರ್‌ ತಿರುಗೇಟು ನೀಡಿದ್ದು, “ಕಲ್ಲಡ್ಕ ಪ್ರಭಾಕರ ಭಟ್ಟರ ಪಾಕಿಸ್ತಾನ ಪ್ರೇಮವನ್ನು ನೋಡಿದರೆ ಮುಹಮ್ಮದ್ ಅಲಿ ಜಿನ್ನಾ ಅವರ ಗುರು ಇದ್ದಂತಿದೆ” ಎಂದು ಹೇಳಿದ್ದಾರೆ.

“ಅವರ ಪಾಕಿಸ್ತಾನ ಪ್ರೇಮ ಹೊಸತೇನು ಅಲ್ಲ. ಅವರು ಮಾತು ಮಾತಿಗೆ ಪಾಕಿಸ್ಥಾನದ ಜಪ ಮಾಡುವುದನ್ನು ನೋಡಿದರೆ ಮಹಮದ್ ಅಲಿ ಜಿನ್ಹಾ ಅವರ ಗುರು ಇದ್ದಂತಿದೆ. ಅವರು ಭಾರತಕ್ಕಿಂತ ಪಾಕಿಸ್ಥಾನದ ಇತಿಹಾಸ ಹೆಚ್ಚು ಓದಿದಂತಿದೆ” ಎಂದು ಖಾದರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ಸಂಘಪರಿವಾರಕ್ಕೆ ಬೇಡವಾದರೇ ಕಲ್ಲಡ್ಕ ಪ್ರಭಾಕರ ಭಟ್ಟ?!

“ಸಮಾಜದಲ್ಲಿ ವಿಷಕಕ್ಕುವ ಕೆಲ ಸರ್ಪಗಳಿಗೆ ಪಾಕಿಸ್ಥಾನವೆ ಬಂಡವಾಳ. ನನಗೆ ಉಳ್ಳಾಲದ ಕಣ ಕಣದಲ್ಲೂ ಭಾರತದ ಬಹುಸಂಸ್ಕೃತಿ ಕಾಣುತ್ತದೆ. ಪೋರ್ಚುಗೀಸರನ್ನು ಒದ್ದೋಡಿಸಿದ ಅಬ್ಬಕ್ಕನ ಸೈನ್ಯದಲ್ಲಿ ಹಿಂದೂ-ಮುಸ್ಲಿಂ-ಕ್ರಿಶ್ಚಿಯನ್ ಎಲ್ಲರು ಒಟ್ಟಾಗಿಯೆ ಇದ್ದರು. ಅಂದಿನ ಧಾರ್ಮಿಕ ಕೇಂದ್ರಗಳು ಇಂದೂ ಇದೆ. ಅಂದಿನ ಸಂಪ್ರದಾಯಗಳು ಸರ್ವಧರ್ಮಗಳಿಂದ ಇಂದೂ ಕೂಡ ಗೌರವಿಸಲ್ಪಡುತ್ತಿದೆ. ಉಳ್ಳಾಲದ ಸೌಹಾರ್ದ ಸಂಸ್ಕೃತಿ ಬಲಪಡಿಸುವ ಮಾತುಗಳೆ ಸರ್ವರಿಂದ ಬರಲಿ ಎಂಬುದು ನನ್ನ ಅಪೇಕ್ಷೆ” ಎಂದು ಖಾದರ್ ತಿಳಿದ್ದಾರೆ.

ಮಂಗಳೂರಿನ ಕಿನ್ಯದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ್ದ ಪ್ರಭಾಕರ್‌ ಭಟ್, “ಉಳ್ಳಾಲ ಪೇಟೆಗೆ ಹೋದರೆ ಅದು ಪಾಕಿಸ್ತಾನವೇ ಅಲ್ವಾ. ಪಾಕಿಸ್ತಾನ ಯಾಕೆ ಆಯಿತು? ’ನಮ್ಮವರ’ ಸಂಖ್ಯೆ ಕಡಿಮೆ ಇತ್ತು, ’ಅವರ’ ಸಂಖ್ಯೆ ಹೆಚ್ಚಾಗಿತ್ತು. ಹೀಗಾಗಿ ಪಾಕಿಸ್ತಾನ, ಬಾಂಗ್ಲಾದೇಶ ನಿರ್ಮಾಣವಾದವು. ಅದೇ ರೀತಿ ಅಲ್ಲಲ್ಲಿ ಪಾಕಿಸ್ತಾನಗಳು ಜನ್ಮ ತಾಳುತ್ತಿವೆ” ಎಂದು ಧ್ವೇಷ ಬಿತ್ತುವ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಭಾರತದಲ್ಲಿ ಗೋಹತ್ಯೆ ಏಕೆ? ಕಲ್ಲಡ್ಕ ಪ್ರಭಾಕರ್‌ ಭಟ್ಟರು ಕೇಳಿದ್ದು ಯಾರಿಗೆ?

“ಮನೆಯಲ್ಲಿ ಒಂದೇ ಮಗುವಿದ್ದಾಗ ಆ ಮಗುವಿಗೆ ಅಣ್ಣ, ತಮ್ಮ, ಅಕ್ಕ, ತಂಗಿ ಯಾರೂ ಇರಲ್ಲ. ಆಗ ಆ ಮಗು ಸ್ವಾರ್ಥಿಯಾಗುತ್ತದೆ. ಮನೆಯಲ್ಲಿ ಮಕ್ಕಳು ಹೆಚ್ಚಿದಷ್ಟು ಆನಂದ, ಖುಷಿ ಹೆಚ್ಚಾಗಿರುತ್ತದೆ. ಇದೀಗ ಹಿಂದೂ ಸಮಾಜದಲ್ಲಿ ಸಂಖ್ಯೆ ಕಡಿಮೆ ಇದೆ. ಕಿನ್ಯದಲ್ಲಿ ಕೇಳಿ ಸುತ್ತಲೂ ಯಾರಿದ್ದಾರೆ ಅಂತಾ? ಅಲ್ಲದೇ ಉಳ್ಳಾಲದ ಬಗ್ಗೆ ನಾನೇನು ಹೇಳಬೇಕಾಗಿಲ್ಲ. ನಮ್ಮ ಸಂಖ್ಯೆ ಕಡಿಮೆಯಾದರೆ, ಆಗ ನಮ್ಮ ದೇವಸ್ಥಾನ, ದೈವಸ್ಥಾನಗಳನ್ನು ಉಳಿಸುವವರು ಯಾರು? ನಮ್ಮ ಸಂಪ್ರದಾಯ, ಸಂಸ್ಕೃತಿಯನ್ನು ಉಳಿಸುವವರು ಯಾರು” ಎಂದು ಸೇರಿದ್ದ ಜನರನ್ನು ಉದ್ದೇಶಿಸಿ ಪ್ರಶ್ನಿಸಿದ್ದರು.

ಇದನ್ನೂ ಓದಿ: ಕಲ್ಲಡ್ಕ ಶಾಲೆಯ ಬಾಬ್ರೀ ಡ್ರಾಮಾ! ದ್ವೇಷ ಬಿತ್ತನೆಗೊಂಡ ಮನಸ್ಸು ದ್ವೇಷವನ್ನಷ್ಟೇ ಕೊಡಬಲ್ಲದು

ಸಾಮಾಜಿಕ ಜಾಲತಾಣದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಟ್ರೋಲ್!

ಪ್ರಭಾಕರ ಭಟ್ಟರ ವಿವಾದಾತ್ಮಕ ಹೇಳಿಕೆಗೆ ಕರಾವಳಿಗರು ಅಸಮಧಾನ ವ್ಯಕ್ತಪಡಿಸಿದ್ದು, ಕೆಲವರು ಗಂಭೀರವಾಗಿ ಪ್ರತಿಕ್ರಯಿಸಿದ್ದರೆ, ಇನ್ನು ಕೆಲವರು ಹಾಸ್ಯದಿಂದ ಪ್ರತಿಕ್ರಿಯಿಸಿ ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ಉಡುಪಿಯ ಬಿಲ್ಲವ-ಮುಸ್ಲಿಂ ಸ್ನೇಹ ಸಮಾವೇಶಕ್ಕೆ ಸಂಘಪರಿವಾರ ಹೆದರಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...