Homeಅಂತರಾಷ್ಟ್ರೀಯಪ್ರಜಾಪ್ರಭುತ್ವ ಏರಬಹುದಾದ ಎತ್ತರ ತೋರಿಸಿಕೊಟ್ಟ ನ್ಯೂಜಿಲ್ಯಾಂಡ್ ಪ್ರಧಾನಿ ’ಜಸಿಂಡಾ’

ಪ್ರಜಾಪ್ರಭುತ್ವ ಏರಬಹುದಾದ ಎತ್ತರ ತೋರಿಸಿಕೊಟ್ಟ ನ್ಯೂಜಿಲ್ಯಾಂಡ್ ಪ್ರಧಾನಿ ’ಜಸಿಂಡಾ’

ವೈವಿಧ್ಯತೆಯಿಂದ ಕೂಡಿದ ಪ್ರಧಾನಿ ಜಸಿಂಡಾ ಅವರ ಹೊಸ ಮಂತ್ರಿ ಮಂಡಲದ ಬಗ್ಗೆ ನೀವು ತಿಳಿದುಕೊಳ್ಳಲೇ ಬೇಕಾದ ವಿಷಯಗಳು ಇಲ್ಲಿವೆ

- Advertisement -
- Advertisement -

ನ್ಯೂಜಿಲೆಂಡ್‌ನ ಅತ್ಯಂತ ಕಿರಿಯ ಪ್ರಧಾನ ಮಂತ್ರಿ ಆಗಿದ್ದ ಜಸಿಂಡಾ ಅರ್ಡೆರ್ನ್ ಕಳೆದ ತಿಂಗಳು ಎರಡನೇ ಬಾರಿಗೆ ದೇಶದ ಪ್ರಧಾನಿ ಗದ್ದುಗೆಗೆ ಏರಿದ್ದಾರೆ. ಜಸಿಂಡಾ ಅವರ ಎಡಪಂಥೀಯ ಲೇಬರ್ ಪಕ್ಷವು ಚುನಾವಣೆಯಲ್ಲಿ ಚಲಾವಣೆಯಾದ 87% ದಷ್ಟು ಮತಗಳಲ್ಲಿ 48.9% ಮತವನ್ನು ಪಡೆದು ವಿಜಯಿಯಾಗಿದೆ. ತನ್ನ ಭರ್ಜರಿ ವಿಜಯದ ನಂತರ ಜಸಿಂಡಾ ಮತ್ತೇ ಸುದ್ದಿಯಲ್ಲಿದ್ದು, ದೇಶದ ಮಂತ್ರಿ ಮಂಡಲ ರಚನೆಯಲ್ಲಿ ವೈವಿಧ್ಯತೆಯನ್ನು ತೋರಿದ್ದು ವಿಶ್ವದಾದ್ಯಂತ ಜನರ ಮನಸ್ಸನ್ನು ಗೆದ್ದಿದ್ದಾರೆ.

ಇದನ್ನೂ ಓದಿ: ಕೊರೊನಾ ಸಾಮುದಾಯಿಕ ಸೋಂಕು ಪ್ರಸರಣವಿಲ್ಲದೇ 100 ದಿನ ಪೂರೈಸಿದ ನ್ಯೂಜಿಲ್ಯಾಂಡ್

ಪ್ರಧಾನಿ ಜಸಿಂಡಾ ಅರ್ಡೆರ್ನ್ ಅವರ ಹೊಸ ಮಂತ್ರಿಗಳ ಸಾಲಿನ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ವಿಷಯಗಳು ಇಲ್ಲಿವೆ:

  • ಮಾಜಿ ಹಣಕಾಸು ಸಚಿವ ಗ್ರಾಂಟ್ ರಾಬರ್ಟ್ಸನ್ ಅವರನ್ನು ಉಪ ಪ್ರಧಾನ ಮಂತ್ರಿಯಾಗಿ ನೇಮಿಸಲಾಗಿದೆ. ಪ್ರತಿಷ್ಠಿತ ಸ್ಥಾನವನ್ನು ಅಲಂಕರಿಸಿದ ಮೊದಲ ಸಲಿಂಗ ವಿವಾಹಿತ ವ್ಯಕ್ತಿ ಇವರಾಗಿದ್ದಾರೆ.
ಗ್ರಾಂಟ್ ರಾಬರ್ಟ್ಸನ್ PC: labour.org.nz
  • ದೇಶದ ಹೊಸ ವಿದೇಶಾಂಗ ವ್ಯವಹಾರಗಳ ಸಚಿವೆಯಾಗಿ ನ್ಯಾನಿಯಾ ಮಾಹುತಾ ಅವರನ್ನು ಆಯ್ಕೆ ಮಾಡಲಾಗಿದ್ದು, ಇವರು ಈ ಸ್ಥಾನವನ್ನು ಅಲಂಕರಿಸಿದ ಮೊದಲ ಮೂಲನಿವಾಸಿ ಮಹಿಳೆಯಾಗಿದ್ದಾರೆ. ಮಾವೋರಿ ಜನಾಂಗ ನ್ಯೂಜಿಲ್ಯಾಂಡಿನ ಮೂಲನಿವಾಸಿಗಳಾಗಿದ್ದು, ಯುರೋಪಿಯನ್ನರ ಆಕ್ರಮಣಕ್ಕೆ ಒಳಗಾಗಿ ತಮ್ಮ ಅಸ್ತಿತ್ವವವನ್ನೇ ಕಳೆದುಕೊಂಡಿದ್ದರು. ಈ ಜನಾಂಗದ ಸ್ತ್ರೀಯರು ತಮ್ಮ ಗದ್ದದ ಮೇಲೆ ’ಮೋಕೋ ಕೌಯ’ ಎಂದು ಕರೆಯಲ್ಪಡುವ ಹಚ್ಚೆಯನ್ನು ಹಾಕಿಕೊಳ್ಳುತ್ತಾರೆ.
ನ್ಯಾನಿಯಾ ಮಾಹುತಾ PC: Hagen Hopkins/Getty Images

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ನ್ಯೂಜಿಲ್ಯಾಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಶ್ರೀಕೃಷ್ಟ ಹಾಗೂ ಭಗವದ್ಗೀತೆಯನ್ನು ಹೊಗಳಿದರೆ?

  • ದೇಶದ ಹೊಸ ಸಚಿವ ಸಂಪುಟದಲ್ಲಿ ಮಹಿಳೆಯರು 50% ದಷ್ಟಿದ್ದಾರೆ. ಈ ಅಂಕಿ ಅಂಶವು ಜಾಗತಿಕ ಸರಾಸರಿ ಶೇಕಡಾ 25 ಕ್ಕಿಂತ ಹೆಚ್ಚಾಗಿದೆ.
  • ನ್ಯೂಜಿಲ್ಯಾಂಡ್ ಸದನದಲ್ಲಿ 10% ಸದಸ್ಯರು ತಾವು ಎಲ್ಜಿಬಿಟಿಕ್(LGBTQ) ಸಮುದಾಯಕ್ಕೆ ಸೇರಿದವರು ಎಂದು ಬಹಿರಂಗವಾಗಿ ಘೋಷಿಸಿದವರಾಗಿದ್ದಾರೆ.
  • ಕೇರಳ ಮೂಲದ ಪ್ರಿಯಾಂಕಾ ರಾಧಾಕೃಷ್ಣನ್ ಅವರನ್ನು ನ್ಯೂಜಿಲೆಂಡ್‌ನ ಮೊದಲ ಭಾರತೀಯ ಮೂಲದ ಮಂತ್ರಿಯಾಗಿ ನೇಮಕ ಮಾಡಲಾಗಿದೆ. ಅವರು ಈ ಕೆಳಗಿನ ಖಾತೆಗಳನ್ನು ನಿರ್ವಹಿಸುತ್ತಾರೆ: ವೈವಿಧ್ಯತೆ ಸಚಿವೆ, ಸೇರ್ಪಡೆ ಮತ್ತು ಜನಾಂಗೀಯ ಸಮುದಾಯಗಳ ಸಚಿವೆ, ಸಮುದಾಯ ಮತ್ತು ಸ್ವಯಂಪ್ರೇರಿತ ವಲಯದ ಸಚಿವೆ ಮತ್ತು ಸಾಮಾಜಿಕ ಅಭಿವೃದ್ಧಿ ಮತ್ತು ಉದ್ಯೋಗದ ಸಹಾಯಕ ಸಚಿವೆ.
ಪ್ರಿಯಾಂಕಾ ರಾಧಾಕೃಷ್ಣನ್  PC: Priyanka Radhakrishnan Camp / Facebook

ಇದನ್ನು ಓದಿ: ಹಾಡಬೇಕು ಕರಾಳತೆಯ ಬಗ್ಗೆಯೇ ಹಾಡುಗಳನ್ನು

  • ಸಂಸತ್ತಿನ ಹೊಸ ಸದಸ್ಯೆ ಮತ್ತು ಸಾಂಕ್ರಾಮಿಕ ರೋಗ ವೈದ್ಯರಾದ ಆಯೆಷಾ ವೆರಾಲ್ ಅವರನ್ನು ನೇರವಾಗಿ ಸಚಿವ ಸಂಪುಟಕ್ಕೆ ಕರೆತರಲಾಗಿದೆ. ವಿಶೇಷವಾಗಿ ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ದ ಹೋರಾಡಲು ಪ್ರಧಾನಿಯ ವೈಜ್ಞಾನಿಕ ಸಲಹೆಗಾರಾಗಿ ಅವರು ಸೇವೆ ಸಲ್ಲಿಸಿದ್ದರು.
ಆಯೆಷಾ ವೆರಾಲ್  PC: labour.org.nz
  • ಮಾಜಿ ಆರೋಗ್ಯ ಸಚಿವ ಕ್ರಿಸ್ ಹಿಪ್ಕಿನ್ಸ್ ಅವರು ಹೊಸ ಸಚಿವ ಸಂಪುಟದಲ್ಲಿ ಕೊರೊನಾ ನಿಯಂತ್ರಿಸುವ ಹುದ್ದೆಯ ಸಚಿವ ಸ್ಥಾನವನ್ನು ವಹಿಸಿಕೊಂಡಿದ್ದಾರೆ.
  • ಜಸಿಂಡಾ ಎರಡು ಗ್ರೀನ್ ಪಾರ್ಟಿ ಶಾಸಕರನ್ನು ಸಚಿವ ಸಂಪುಟದ ಹೊರಗಿನ ಸಚಿವಾಲಯಗಳಿಗೆ ನೇಮಕ ಮಾಡಿದ್ದಾರೆ.
  • ಒಟ್ಟು 20 ಸದಸ್ಯರಿಂದ ರಚಿಸಲಾದ ಸಂಪುಟದಲ್ಲಿ ಐದು ಮಾವೋರಿ ಮತ್ತು ಮೂವರು ಪಾಸಿಫಿಕಾ ಸಂಸದರು ಸೇರಿದ್ದಾರೆ.

ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಟ: ಅಲ್ಲಿ ಬಿಲಿಯನ್ ಡಾಲರ್‌, ಇಲ್ಲಿ ಚಪ್ಪಾಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...