Homeಅಂತರಾಷ್ಟ್ರೀಯಪ್ರಜಾಪ್ರಭುತ್ವ ಏರಬಹುದಾದ ಎತ್ತರ ತೋರಿಸಿಕೊಟ್ಟ ನ್ಯೂಜಿಲ್ಯಾಂಡ್ ಪ್ರಧಾನಿ ’ಜಸಿಂಡಾ’

ಪ್ರಜಾಪ್ರಭುತ್ವ ಏರಬಹುದಾದ ಎತ್ತರ ತೋರಿಸಿಕೊಟ್ಟ ನ್ಯೂಜಿಲ್ಯಾಂಡ್ ಪ್ರಧಾನಿ ’ಜಸಿಂಡಾ’

ವೈವಿಧ್ಯತೆಯಿಂದ ಕೂಡಿದ ಪ್ರಧಾನಿ ಜಸಿಂಡಾ ಅವರ ಹೊಸ ಮಂತ್ರಿ ಮಂಡಲದ ಬಗ್ಗೆ ನೀವು ತಿಳಿದುಕೊಳ್ಳಲೇ ಬೇಕಾದ ವಿಷಯಗಳು ಇಲ್ಲಿವೆ

- Advertisement -
- Advertisement -

ನ್ಯೂಜಿಲೆಂಡ್‌ನ ಅತ್ಯಂತ ಕಿರಿಯ ಪ್ರಧಾನ ಮಂತ್ರಿ ಆಗಿದ್ದ ಜಸಿಂಡಾ ಅರ್ಡೆರ್ನ್ ಕಳೆದ ತಿಂಗಳು ಎರಡನೇ ಬಾರಿಗೆ ದೇಶದ ಪ್ರಧಾನಿ ಗದ್ದುಗೆಗೆ ಏರಿದ್ದಾರೆ. ಜಸಿಂಡಾ ಅವರ ಎಡಪಂಥೀಯ ಲೇಬರ್ ಪಕ್ಷವು ಚುನಾವಣೆಯಲ್ಲಿ ಚಲಾವಣೆಯಾದ 87% ದಷ್ಟು ಮತಗಳಲ್ಲಿ 48.9% ಮತವನ್ನು ಪಡೆದು ವಿಜಯಿಯಾಗಿದೆ. ತನ್ನ ಭರ್ಜರಿ ವಿಜಯದ ನಂತರ ಜಸಿಂಡಾ ಮತ್ತೇ ಸುದ್ದಿಯಲ್ಲಿದ್ದು, ದೇಶದ ಮಂತ್ರಿ ಮಂಡಲ ರಚನೆಯಲ್ಲಿ ವೈವಿಧ್ಯತೆಯನ್ನು ತೋರಿದ್ದು ವಿಶ್ವದಾದ್ಯಂತ ಜನರ ಮನಸ್ಸನ್ನು ಗೆದ್ದಿದ್ದಾರೆ.

ಇದನ್ನೂ ಓದಿ: ಕೊರೊನಾ ಸಾಮುದಾಯಿಕ ಸೋಂಕು ಪ್ರಸರಣವಿಲ್ಲದೇ 100 ದಿನ ಪೂರೈಸಿದ ನ್ಯೂಜಿಲ್ಯಾಂಡ್

ಪ್ರಧಾನಿ ಜಸಿಂಡಾ ಅರ್ಡೆರ್ನ್ ಅವರ ಹೊಸ ಮಂತ್ರಿಗಳ ಸಾಲಿನ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ವಿಷಯಗಳು ಇಲ್ಲಿವೆ:

  • ಮಾಜಿ ಹಣಕಾಸು ಸಚಿವ ಗ್ರಾಂಟ್ ರಾಬರ್ಟ್ಸನ್ ಅವರನ್ನು ಉಪ ಪ್ರಧಾನ ಮಂತ್ರಿಯಾಗಿ ನೇಮಿಸಲಾಗಿದೆ. ಪ್ರತಿಷ್ಠಿತ ಸ್ಥಾನವನ್ನು ಅಲಂಕರಿಸಿದ ಮೊದಲ ಸಲಿಂಗ ವಿವಾಹಿತ ವ್ಯಕ್ತಿ ಇವರಾಗಿದ್ದಾರೆ.
ಗ್ರಾಂಟ್ ರಾಬರ್ಟ್ಸನ್ PC: labour.org.nz
  • ದೇಶದ ಹೊಸ ವಿದೇಶಾಂಗ ವ್ಯವಹಾರಗಳ ಸಚಿವೆಯಾಗಿ ನ್ಯಾನಿಯಾ ಮಾಹುತಾ ಅವರನ್ನು ಆಯ್ಕೆ ಮಾಡಲಾಗಿದ್ದು, ಇವರು ಈ ಸ್ಥಾನವನ್ನು ಅಲಂಕರಿಸಿದ ಮೊದಲ ಮೂಲನಿವಾಸಿ ಮಹಿಳೆಯಾಗಿದ್ದಾರೆ. ಮಾವೋರಿ ಜನಾಂಗ ನ್ಯೂಜಿಲ್ಯಾಂಡಿನ ಮೂಲನಿವಾಸಿಗಳಾಗಿದ್ದು, ಯುರೋಪಿಯನ್ನರ ಆಕ್ರಮಣಕ್ಕೆ ಒಳಗಾಗಿ ತಮ್ಮ ಅಸ್ತಿತ್ವವವನ್ನೇ ಕಳೆದುಕೊಂಡಿದ್ದರು. ಈ ಜನಾಂಗದ ಸ್ತ್ರೀಯರು ತಮ್ಮ ಗದ್ದದ ಮೇಲೆ ’ಮೋಕೋ ಕೌಯ’ ಎಂದು ಕರೆಯಲ್ಪಡುವ ಹಚ್ಚೆಯನ್ನು ಹಾಕಿಕೊಳ್ಳುತ್ತಾರೆ.
ನ್ಯಾನಿಯಾ ಮಾಹುತಾ PC: Hagen Hopkins/Getty Images

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ನ್ಯೂಜಿಲ್ಯಾಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಶ್ರೀಕೃಷ್ಟ ಹಾಗೂ ಭಗವದ್ಗೀತೆಯನ್ನು ಹೊಗಳಿದರೆ?

  • ದೇಶದ ಹೊಸ ಸಚಿವ ಸಂಪುಟದಲ್ಲಿ ಮಹಿಳೆಯರು 50% ದಷ್ಟಿದ್ದಾರೆ. ಈ ಅಂಕಿ ಅಂಶವು ಜಾಗತಿಕ ಸರಾಸರಿ ಶೇಕಡಾ 25 ಕ್ಕಿಂತ ಹೆಚ್ಚಾಗಿದೆ.
  • ನ್ಯೂಜಿಲ್ಯಾಂಡ್ ಸದನದಲ್ಲಿ 10% ಸದಸ್ಯರು ತಾವು ಎಲ್ಜಿಬಿಟಿಕ್(LGBTQ) ಸಮುದಾಯಕ್ಕೆ ಸೇರಿದವರು ಎಂದು ಬಹಿರಂಗವಾಗಿ ಘೋಷಿಸಿದವರಾಗಿದ್ದಾರೆ.
  • ಕೇರಳ ಮೂಲದ ಪ್ರಿಯಾಂಕಾ ರಾಧಾಕೃಷ್ಣನ್ ಅವರನ್ನು ನ್ಯೂಜಿಲೆಂಡ್‌ನ ಮೊದಲ ಭಾರತೀಯ ಮೂಲದ ಮಂತ್ರಿಯಾಗಿ ನೇಮಕ ಮಾಡಲಾಗಿದೆ. ಅವರು ಈ ಕೆಳಗಿನ ಖಾತೆಗಳನ್ನು ನಿರ್ವಹಿಸುತ್ತಾರೆ: ವೈವಿಧ್ಯತೆ ಸಚಿವೆ, ಸೇರ್ಪಡೆ ಮತ್ತು ಜನಾಂಗೀಯ ಸಮುದಾಯಗಳ ಸಚಿವೆ, ಸಮುದಾಯ ಮತ್ತು ಸ್ವಯಂಪ್ರೇರಿತ ವಲಯದ ಸಚಿವೆ ಮತ್ತು ಸಾಮಾಜಿಕ ಅಭಿವೃದ್ಧಿ ಮತ್ತು ಉದ್ಯೋಗದ ಸಹಾಯಕ ಸಚಿವೆ.
ಪ್ರಿಯಾಂಕಾ ರಾಧಾಕೃಷ್ಣನ್  PC: Priyanka Radhakrishnan Camp / Facebook

ಇದನ್ನು ಓದಿ: ಹಾಡಬೇಕು ಕರಾಳತೆಯ ಬಗ್ಗೆಯೇ ಹಾಡುಗಳನ್ನು

  • ಸಂಸತ್ತಿನ ಹೊಸ ಸದಸ್ಯೆ ಮತ್ತು ಸಾಂಕ್ರಾಮಿಕ ರೋಗ ವೈದ್ಯರಾದ ಆಯೆಷಾ ವೆರಾಲ್ ಅವರನ್ನು ನೇರವಾಗಿ ಸಚಿವ ಸಂಪುಟಕ್ಕೆ ಕರೆತರಲಾಗಿದೆ. ವಿಶೇಷವಾಗಿ ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ದ ಹೋರಾಡಲು ಪ್ರಧಾನಿಯ ವೈಜ್ಞಾನಿಕ ಸಲಹೆಗಾರಾಗಿ ಅವರು ಸೇವೆ ಸಲ್ಲಿಸಿದ್ದರು.
ಆಯೆಷಾ ವೆರಾಲ್  PC: labour.org.nz
  • ಮಾಜಿ ಆರೋಗ್ಯ ಸಚಿವ ಕ್ರಿಸ್ ಹಿಪ್ಕಿನ್ಸ್ ಅವರು ಹೊಸ ಸಚಿವ ಸಂಪುಟದಲ್ಲಿ ಕೊರೊನಾ ನಿಯಂತ್ರಿಸುವ ಹುದ್ದೆಯ ಸಚಿವ ಸ್ಥಾನವನ್ನು ವಹಿಸಿಕೊಂಡಿದ್ದಾರೆ.
  • ಜಸಿಂಡಾ ಎರಡು ಗ್ರೀನ್ ಪಾರ್ಟಿ ಶಾಸಕರನ್ನು ಸಚಿವ ಸಂಪುಟದ ಹೊರಗಿನ ಸಚಿವಾಲಯಗಳಿಗೆ ನೇಮಕ ಮಾಡಿದ್ದಾರೆ.
  • ಒಟ್ಟು 20 ಸದಸ್ಯರಿಂದ ರಚಿಸಲಾದ ಸಂಪುಟದಲ್ಲಿ ಐದು ಮಾವೋರಿ ಮತ್ತು ಮೂವರು ಪಾಸಿಫಿಕಾ ಸಂಸದರು ಸೇರಿದ್ದಾರೆ.

ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಟ: ಅಲ್ಲಿ ಬಿಲಿಯನ್ ಡಾಲರ್‌, ಇಲ್ಲಿ ಚಪ್ಪಾಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...