Homeಮುಖಪುಟಕರ್ನಾಟಕ, ಮಧ್ಯಪ್ರದೇಶದಲ್ಲಿ ವಿವಾಹಕ್ಕಾಗಿ ಮತಾಂತರ ನಿಷೇಧ ಕಾನೂನು!

ಕರ್ನಾಟಕ, ಮಧ್ಯಪ್ರದೇಶದಲ್ಲಿ ವಿವಾಹಕ್ಕಾಗಿ ಮತಾಂತರ ನಿಷೇಧ ಕಾನೂನು!

 ನನ್ನ ಸರ್ಕಾರ ಮತಾಂಧತೆಯನ್ನು ಅನುಮತಿಸುವುದಿಲ್ಲ. ಯಾರೇ ಹಾಗೆ ಮಾಡಿದರೂ ಅದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ

- Advertisement -
- Advertisement -

ಕೇವಲ ಮದುವೆ ಆಗುವ ಉದ್ದೇಶದಿಂದಲೇ ಆಗುವ ಧಾರ್ಮಿಕ ಮತಾಂತರ ನಿಷೇಧಿಸುವ ಕಾನೂನು ಶೀಘ್ರವೇ ರಾಜ್ಯದಲ್ಲಿ ಜಾರಿಗೆ ಬರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಇತ್ತ ‘ಲವ್ ಜಿಹಾದ್’ ತಡೆಯುವ ಕಾನೂನು ಜಾರಿಗೆ ತರಲು ತಮ್ಮ ಸರ್ಕಾರ ಚಿಂತಿಸುತ್ತಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕೂಡ ತಿಳಿಸಿದ್ದಾರೆ.

ಇತ್ತಿಚೆಗೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕರ್ನಾಟಕ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, “ಅಲಹಾಬಾದ್ ಹೈಕೋರ್ಟ್ ಆದೇಶದ ಪ್ರಕಾರ, ಕರ್ನಾಟಕವು ವಿವಾಹದ ಸಲುವಾಗಿ ಧಾರ್ಮಿಕ ಮತಾಂತರ ನಿಷೇಧಿಸುವ ಕಾನೂನನ್ನು ಜಾರಿಗೆ ತರುತ್ತದೆ” ಎಂದಿದ್ದಾರೆ.

“ಜಿಹಾದಿಗಳು ನಮ್ಮ ಸಹೋದರಿಯರ ಘನತೆಯನ್ನು ಕಿತ್ತು ಹಾಕುತ್ತಿರುವಾಗ ನಾವು ಮೌನವಾಗಿರುವುದಿಲ್ಲ. ಯಾರೇ ಇರಲಿ ಇಂತಹ ಕೃತ್ಯದಲ್ಲಿ ಭಾಗಿಯಾದರೆ ಕಠಿಣ ಶಿಕ್ಷೆಗೆ ಗುರಿಯಗಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿ ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಲವ್ ಜಿಹಾದ್ ಪದ ಬಳಕೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ರಾಜೀನಾಮೆಗೆ ಒತ್ತಾಯ

ಇನ್ನು ಮಧ್ಯಪ್ರದೇಶದ ಮುಖ್ಯಮಂತ್ರಿ ಅಂತರ್​ಧರ್ಮೀಯ ವಿವಾಹಗಳನ್ನು ತಡೆಯಲು ಸೂಕ್ತ ಕಾನೂನನ್ನು ಜಾರಿಗೆ ತರಲು ಮುಂದಾಗಿದ್ದಾರೆ. ಪ್ರೀತಿಯ ಹೆಸರಲ್ಲಿ ಯಾರೂ ಜಿಹಾದ್​ ಮಾಡುವಂತಿಲ್ಲ. ಯಾರಾದರೂ ಇಂತಹ ಕೆಲಸ ಮಾಡುತ್ತಿದ್ದರೆ, ಯಾರಾದರೂ ಧೈರ್ಯ ಮಾಡಿದರೆ ಅಂತವರಿಗೆ ತಕ್ಕ ಪಾಠ ಕಲಿಸಲಾಗುತ್ತದೆ. ಈ ದೃಷ್ಟಿಯಿಂದ ಕಾನೂನು ಜಾರಿಗೆ ತರಲಿದ್ದೇವೆ ಎಂದು ಹೇಳಿದ್ದಾರೆ.

“ನನ್ನ ಸರ್ಕಾರ ಮತಾಂಧತೆಯನ್ನು ಅನುಮತಿಸುವುದಿಲ್ಲ. ಯಾರೇ ಹಾಗೆ ಮಾಡಿದರೂ ಅದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ”ಎಂದು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಎಚ್ಚರಿಸಿದ್ದಾರೆ.

MP CM Shivraj Singh Chouhan Tests Positive For Covid-19
PC: Otv

ಕಳೆದ ಮೂರು ದಿನಗಳ ಹಿಂದೆ, ಬಿಜೆಪಿಯ ಭೋಪಾಲ್ ಸಂಸದೆ ಪ್ರಜ್ಞಾ ಠಾಕೂರ್ ಅವರು “ಹಿಂದೂ ಹುಡುಗಿಯರನ್ನು ಲವ್ ಜಿಹಾದ್ ನಿಂದ ರಕ್ಷಿಸಲು” ಕಾನೂನು ಬೇಕು ಎಂದು ಕೋರಿದ್ದರು. ಇದಕ್ಕಾಗಿ ಫರಿದಾಬಾದ್‌ನಲ್ಲಿ ಇತ್ತೀಚೆಗೆ ನಡೆದ  21 ವರ್ಷದ ಕಾಲೇಜು ಯುವತಿಯ ಹತ್ಯೆಯನ್ನು ಉಲ್ಲೇಖಿಸಿದ್ದರು.

ಹರಿಯಾಣ ಮತ್ತು ಉತ್ತರ ಪ್ರದೇಶ ಕೂಡ ಲವ್ ಜಿಹಾದ್ ವಿರುದ್ಧದ ಕಾನೂನನ್ನು ಪರಿಗಣಿಸುತ್ತಿವೆ. ನಾವು ಅದಕ್ಕೆ ಕಾನೂನು ರೂಪವನ್ನೂ ನೀಡುತ್ತೇವೆ ಎಂದು ಅವರು ಹೇಳಿದ್ದಾರೆ.

ಒಂದು ಮತಾಂತರವು ಧರ್ಮದ ಭಾವನೆಯಿಂದ ಪ್ರೇರಿತವಾಗದಿದ್ದರೆ ಮತ್ತು ತನ್ನದೇ ಆದ ಉದ್ದೇಶಕ್ಕೆ ಒಳಗಾಗಿದ್ದರೆ ಅದು ಮತಾಂತರವಲ್ಲ. ಕೇವಲ ವಿವಾಹದ ಉದ್ದೇಶದಿಂದ ಆದ ಮತಾಂತರ ಮಾನ್ಯವಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ನವೆಂಬರ್‌ 1 ರಂದು ತೀರ್ಪು ನೀಡಿತ್ತು. ಧಾರ್ಮಿಕ ಮತಾಂತರ ಆಗುವ ಸಂದರ್ಭದಲ್ಲಿ ಮೂಲ ಧರ್ಮದ ಸಿದ್ಧಾಂತಗಳ ಬದಲಾಗಿ ಹೊಸ ಧರ್ಮದ ಸಿದ್ಧಾಂತಗಳಲ್ಲಿ ಪ್ರಾಮಾಣಿಕ ನಂಬಿಕೆ ಇರಬೇಕು” ಎಂದು ನ್ಯಾಯಾಲಯ ಹೇಳಿತ್ತು.


ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...