Homeಮುಖಪುಟಕಂಗನಾ ವಿರುದ್ಧ ವಿಡಿಯೋ ಮಾಡಲು 65 ಲಕ್ಷ ಹಣ ಪಡೆಯಲಾಗಿದೆ: ಧೃವ್ ರಾಠೀ ಕೊಟ್ಟ ಉತ್ತರವೇನು?

ಕಂಗನಾ ವಿರುದ್ಧ ವಿಡಿಯೋ ಮಾಡಲು 65 ಲಕ್ಷ ಹಣ ಪಡೆಯಲಾಗಿದೆ: ಧೃವ್ ರಾಠೀ ಕೊಟ್ಟ ಉತ್ತರವೇನು?

ಈ ಯೂಟ್ಯೂಬರ್ ಯಾವುದೇ ವಿಡಿಯೋಗೆ 30 ರಿಂದ 40 ಲಕ್ಷ ಪಡೆಯುತ್ತಾರೆ. ಆದರೆ, ಕಂಗನಾ ಮತ್ತು ಅರ್ನಾಬ್ ವಿರುದ್ಧದ ವಿಡಿಯೋಗೆ ತಲಾ 35 ಲಕ್ಷ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಒಂದಿಲ್ಲೊಂದು ವಿವಾದದಲ್ಲಿರುವ ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಖ್ಯಾತ ಯೂಟ್ಯೂಬರ್, ಯುವಚಿಂತಕ ಧೃವ್ ರಾಠೀ ನನ್ನ ಚಾರಿತ್ರ್ಯ ಹರಣ ಮಾಡುವ ವಿಡಿಯೋ ಮಾಡಲು 65 ಲಕ್ಷ ಹಣ ಪಡೆದಿದ್ದಾರೆ ಎಂದು ಕಂಗನಾ ಆರೋಪಿಸಿದ್ದಾರೆ.

ಅಸಲಿಗೆ ಈ ಜಟಾಪಟಿ ಆರಂಭವಾದದ್ದೇ ನಿರ್ದೇಶಕ ಎರೆ ಕ್ಯಾಥರ್ ಮಾಡಿದ್ದ ಟ್ವೀಟ್ ಮೂಲಕ. ಅಕ್ಟೋಬರ್ 31 ರಂದು ಟ್ವೀಟ್ ಮೂಲಕ ಯೂಟ್ಯೂಬರ್ ಧೃವ್ ರಾಠೀ ವಿರುದ್ಧ ಅವರ ಹೆಸರನ್ನು ಉಲ್ಲೇಖಿಸದೆ ಆರೋಪ ಮಾಡಿದ್ದ ಎರೆ ಕ್ಯಾಥರ್, “ದಿವಂಗತ ನಟ ಸುಶಾಂತ್ ಸಿಂಗ್ ಸಾವಿನ ಹಿಂದೆ ಆತನ ಕುಟುಂಬಸ್ಥರ ಪಾತ್ರ ಎಂಬ ಹೆಸರಿನಲ್ಲಿ 40 ಲಕ್ಷ ಚಂದಾದಾರರನ್ನು ಹೊಂದಿರುವ ಖ್ಯಾತ ಯೂಟ್ಯೂಬರ್ ಓರ್ವ ವಿಶ್ಲೇಷನಾತ್ಮಕ ವಿಡಿಯೋ ಒಂದನ್ನು ಮಾಡಲು ಮುಂದಾಗಿದ್ದಾರೆ. ಅಲ್ಲದೆ, ಈ ವಿಡಿಯೋ ಮಾಡಲು ಅವರು 65 ಲಕ್ಷ ಹಣ ಸ್ವೀಕರಿಸಿದ್ದಾರೆ. ಇದೇ ಯೂಟ್ಯೂಬರ್ ಈ ಹಿಂದೆ ನಟಿ ಕಂಗನಾ ಮತ್ತು ಅರ್ನಾಬ್ ವಿರುದ್ಧವೂ ವಿಡಿಯೋ ಮಾಡಿದ್ದರು” ಎಂದು ಆರೋಪಿಸಿದ್ದರು.

ಅಲ್ಲದೆ ಎರೆ ಕ್ಯಾಥರ್ ಮತ್ತೊಂದು ಟ್ವೀಟ್‌ನಲ್ಲಿ, “ಈ ಯೂಟ್ಯೂಬರ್ ಯಾವುದೇ ವಿಡಿಯೋಗೆ 30 ರಿಂದ 40 ಲಕ್ಷ ಪಡೆಯುತ್ತಾರೆ. ಆದರೆ, ಕಂಗನಾ ಮತ್ತು ಅರ್ನಾಬ್ ವಿರುದ್ಧದ ವಿಡಿಯೋಗೆ ತಲಾ 35 ಲಕ್ಷ ಪಡೆದಿದ್ದಾರೆ” ಎಂದು ಆರೋಪಿಸಿದ್ದರು.

ನಿರ್ದೇಶಕ ಎರೆ ಕ್ಯಾಥರ್ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಯೂಟ್ಯೂಬರ್ ಧೃವ್ ರಾಠೀ, “ನನ್ನನ್ನು ಹೆಸರಿಸಿ ಈ ಸುಳ್ಳು ಸುದ್ದಿಯನ್ನು ಬರೆಯಲಾಗಿದೆ. ಮೊದಲನೇಯದಾಗಿ ನಟಿ ಕಂಗನಾ ವಿರುದ್ಧ ನಾನು ಮಾಡಿದ್ದ ವಿಡಿಯೋಗೆ ಯಾರಿಂದಲೂ ಹಣ ಪಡೆದಿಲ್ಲ. ಎರಡನೇಯದಾಗಿ ಮೃತ ನಟ ಸುಶಾಂತ್ ಸಿಂಗ್ ಸಾವಿನ ಕುರಿತು ವಿಡಿಯೋ ಮಾಡುವ ಯಾವ ಉದ್ದೇಶವೂ ನನಗಿಲ್ಲ. ಮೂರನೇಯದಾಗಿ ನಾನು ಮಾಡುವ ವಿಡಿಯೋಗಳಿಗೆ 30 ಲಕ್ಷ ಹಣದ ಪ್ರಾಯೋಜತ್ವ ಸಿಗಲಿ ಎಂದು ನಾನು ಆಶಿಸುತ್ತೇನೆ. ಅಷ್ಟು ಹಣ ಸಿಕ್ಕರೆ ನಾನು ಎಷ್ಟು ಶ್ರೀಮಂತ ವ್ಯಕ್ತಿಯಾಗಬಹುದು” ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ: ರಾಜಕೀಯಾರ್ಥಿಕ ವಿಶ್ಲೇಷಕ ಧೃವ್ ರಾಠೀ ಬಗ್ಗೆ ನಿಮಗೆಷ್ಟು ಗೊತ್ತು?

ಈ ನಡುವೆ ಕಂಗನಾ ರಣಾವತ್, “ಎರೆ ಕ್ಯಾಥರ್ ಸರಿಯಾಗಿಯೇ ಹೇಳಿದ್ದಾರೆ. ಈತ ಹಣ ಪಡೆದು ನನ್ನ ವಿರುದ್ಧ ವಿಡಿಯೋಗಳನ್ನು ಮಾಡಿ ಯೂಟ್ಯೂಬ್‌ನಲ್ಲಿ ಹರಿಬಿಟ್ಟಿದ್ದಾನೆ. ಮುಂಬೈ ಮಹಾನಗರ ಪಾಲಿಕೆ ನನ್ನ ಕಚೇರಿಯನ್ನು ಧ್ವಂಸಗೊಳಿಸಿದ್ದ ಪ್ರಕರಣದ ಕುರಿತು ಈತ 60 ಲಕ್ಷ ಹಣ ಪಡೆದು ಸುಳ್ಳು ವಿಡಿಯೋ ಮಾಡಿದ್ದಾನೆ. ಈತನನ್ನು ನಾನು ಕಂಬಿ ಎಣಿಸುವಂತೆ ಮಾಡುತ್ತೇನೆ. ಸರ್ಕಾರ ಮತ್ತು ಹಣದ ಬಲ ಇಲ್ಲದೆ ಓರ್ವ ವ್ಯಕ್ತಿ ಹೀಗೆ ಕಾನೂನಾತ್ಮಕ ವಿಚಾರಗಳ ಬಗ್ಗೆ ಬಹಿರಂಗವಾಗಿ ಸುಳ್ಳು ಹೇಳಲು ಸಾಧ್ಯವೇ?” ಎಂದು ಹೇಳುವ ಮೂಲಕ ನಟಿ ಕಂಗನಾ ಮಹಾರಾಷ್ಟ್ರ ಸರ್ಕಾರದ ವಿರುದ್ಧವೂ ಮತ್ತೊಮ್ಮೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಧೃವ್ ರಾಠೀ “ನೀವು ಈ ವೀಡಿಯೊ ಬಗ್ಗೆ ಮಾತನಾಡುತ್ತಿದ್ದೀರಾ? ಸ್ನೇಹಿತರೆ, ಅವರು ಈ ವೀಡಿಯೊದ ಬಗ್ಗೆ ಮಾತನಾಡುತ್ತಿದ್ದಾರೋ, ಇಲ್ಲವೋ ಎಂದು ತಿಳಿಯಲು ದಯವಿಟ್ಟು ಈ ವೀಡಿಯೊವನ್ನು ವೀಕ್ಷಿಸಿ ಮತ್ತು ಹಂಚಿಕೊಳ್ಳಬಹುದೇ? ಏಕೆಂದರೆ ನಾನು ಯಾವುದೇ ಹಣವನ್ನು ಸ್ವೀಕರಿಸಿಲ್ಲ” ಎಂದು ತಮ್ಮ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ.

ಅಲ್ಲದೇ “ನನ್ನ ಮೇಲೆ ಸುಳ್ಳು ಆರೋಪ ಹೊರಿಸುವ ಮೂಲಕ, ನನ್ನ ಕಂಗನಾ ವಿಡಿಯೋಗೆ ಹೆಚ್ಚಿನ ಪ್ರಚಾರ ನೀಡಿದ ನಂತರ ಇಂದು 1 ಲಕ್ಷಕ್ಕೂ ಹೆಚ್ಚು ಜನರು ಅದನ್ನು ನೋಡಿದ್ದಾರೆ. ಇದನ್ನು ‘ಸ್ಟ್ರೈಸೆಂಡ್ ಎಫೆಕ್ಟ್’ (ಯಾವುದಾದರೂ ಮಾಹಿತಿಯನ್ನು ಮರೆಮಾಚಲು, ತೆಗೆದುಹಾಕಲು ಅಥವಾ ಸೆನ್ಸಾರ್ ಮಾಡಲು ಪ್ರಯತ್ನಿಸಿದಾಗ ಆ ಮಾಹಿತಿಯು ಇಂಟರ್ನೆಟ್‌ನಲ್ಲಿ ಮತ್ತಷ್ಟು ಪ್ರಚಾರ ಪಡೆದು ವೈರಲ್ ಆಗುವುದು) ಎಂದು ಕರೆಯಲಾಗುತ್ತದೆ” ಎಂದು ತಮ್ಮ ವಿಡಿಯೋ ವೀಕ್ಷಣೆಯ ಅನಾಲಿಟಿಕ್ ಗ್ರಾಫ್ ಅನ್ನು ಷೇರ್ ಮಾಡಿದ್ದಾರೆ.

ಕಂಗಾನಾ ಕುರಿತು ಧೃವ್ ರಾಠೀ ಮಾಡಿರುವ ಆ ವಿಡಿಯೋವನ್ನು ಇದುವರೆಗೂ 39 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿದ್ದು, 4.4 ಲಕ್ಷ ಜನ ಲೈಕ್ ಮಾಡಿದ್ದಾರೆ.


ಇದನ್ನೂ ಓದಿ: ಕೆಲವರು ಮುಂಬೈಗೆ ಬಂದು ದ್ರೋಹವೆಸಗುತ್ತಾರೆ: ಕಂಗನಾ ವಿರುದ್ಧ ಉದ್ಧವ್ ಠಾಕ್ರೆ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...