Homeಮುಖಪುಟಕಂಗನಾ ವಿರುದ್ಧ ವಿಡಿಯೋ ಮಾಡಲು 65 ಲಕ್ಷ ಹಣ ಪಡೆಯಲಾಗಿದೆ: ಧೃವ್ ರಾಠೀ ಕೊಟ್ಟ ಉತ್ತರವೇನು?

ಕಂಗನಾ ವಿರುದ್ಧ ವಿಡಿಯೋ ಮಾಡಲು 65 ಲಕ್ಷ ಹಣ ಪಡೆಯಲಾಗಿದೆ: ಧೃವ್ ರಾಠೀ ಕೊಟ್ಟ ಉತ್ತರವೇನು?

ಈ ಯೂಟ್ಯೂಬರ್ ಯಾವುದೇ ವಿಡಿಯೋಗೆ 30 ರಿಂದ 40 ಲಕ್ಷ ಪಡೆಯುತ್ತಾರೆ. ಆದರೆ, ಕಂಗನಾ ಮತ್ತು ಅರ್ನಾಬ್ ವಿರುದ್ಧದ ವಿಡಿಯೋಗೆ ತಲಾ 35 ಲಕ್ಷ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಒಂದಿಲ್ಲೊಂದು ವಿವಾದದಲ್ಲಿರುವ ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಖ್ಯಾತ ಯೂಟ್ಯೂಬರ್, ಯುವಚಿಂತಕ ಧೃವ್ ರಾಠೀ ನನ್ನ ಚಾರಿತ್ರ್ಯ ಹರಣ ಮಾಡುವ ವಿಡಿಯೋ ಮಾಡಲು 65 ಲಕ್ಷ ಹಣ ಪಡೆದಿದ್ದಾರೆ ಎಂದು ಕಂಗನಾ ಆರೋಪಿಸಿದ್ದಾರೆ.

ಅಸಲಿಗೆ ಈ ಜಟಾಪಟಿ ಆರಂಭವಾದದ್ದೇ ನಿರ್ದೇಶಕ ಎರೆ ಕ್ಯಾಥರ್ ಮಾಡಿದ್ದ ಟ್ವೀಟ್ ಮೂಲಕ. ಅಕ್ಟೋಬರ್ 31 ರಂದು ಟ್ವೀಟ್ ಮೂಲಕ ಯೂಟ್ಯೂಬರ್ ಧೃವ್ ರಾಠೀ ವಿರುದ್ಧ ಅವರ ಹೆಸರನ್ನು ಉಲ್ಲೇಖಿಸದೆ ಆರೋಪ ಮಾಡಿದ್ದ ಎರೆ ಕ್ಯಾಥರ್, “ದಿವಂಗತ ನಟ ಸುಶಾಂತ್ ಸಿಂಗ್ ಸಾವಿನ ಹಿಂದೆ ಆತನ ಕುಟುಂಬಸ್ಥರ ಪಾತ್ರ ಎಂಬ ಹೆಸರಿನಲ್ಲಿ 40 ಲಕ್ಷ ಚಂದಾದಾರರನ್ನು ಹೊಂದಿರುವ ಖ್ಯಾತ ಯೂಟ್ಯೂಬರ್ ಓರ್ವ ವಿಶ್ಲೇಷನಾತ್ಮಕ ವಿಡಿಯೋ ಒಂದನ್ನು ಮಾಡಲು ಮುಂದಾಗಿದ್ದಾರೆ. ಅಲ್ಲದೆ, ಈ ವಿಡಿಯೋ ಮಾಡಲು ಅವರು 65 ಲಕ್ಷ ಹಣ ಸ್ವೀಕರಿಸಿದ್ದಾರೆ. ಇದೇ ಯೂಟ್ಯೂಬರ್ ಈ ಹಿಂದೆ ನಟಿ ಕಂಗನಾ ಮತ್ತು ಅರ್ನಾಬ್ ವಿರುದ್ಧವೂ ವಿಡಿಯೋ ಮಾಡಿದ್ದರು” ಎಂದು ಆರೋಪಿಸಿದ್ದರು.

ಅಲ್ಲದೆ ಎರೆ ಕ್ಯಾಥರ್ ಮತ್ತೊಂದು ಟ್ವೀಟ್‌ನಲ್ಲಿ, “ಈ ಯೂಟ್ಯೂಬರ್ ಯಾವುದೇ ವಿಡಿಯೋಗೆ 30 ರಿಂದ 40 ಲಕ್ಷ ಪಡೆಯುತ್ತಾರೆ. ಆದರೆ, ಕಂಗನಾ ಮತ್ತು ಅರ್ನಾಬ್ ವಿರುದ್ಧದ ವಿಡಿಯೋಗೆ ತಲಾ 35 ಲಕ್ಷ ಪಡೆದಿದ್ದಾರೆ” ಎಂದು ಆರೋಪಿಸಿದ್ದರು.

ನಿರ್ದೇಶಕ ಎರೆ ಕ್ಯಾಥರ್ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಯೂಟ್ಯೂಬರ್ ಧೃವ್ ರಾಠೀ, “ನನ್ನನ್ನು ಹೆಸರಿಸಿ ಈ ಸುಳ್ಳು ಸುದ್ದಿಯನ್ನು ಬರೆಯಲಾಗಿದೆ. ಮೊದಲನೇಯದಾಗಿ ನಟಿ ಕಂಗನಾ ವಿರುದ್ಧ ನಾನು ಮಾಡಿದ್ದ ವಿಡಿಯೋಗೆ ಯಾರಿಂದಲೂ ಹಣ ಪಡೆದಿಲ್ಲ. ಎರಡನೇಯದಾಗಿ ಮೃತ ನಟ ಸುಶಾಂತ್ ಸಿಂಗ್ ಸಾವಿನ ಕುರಿತು ವಿಡಿಯೋ ಮಾಡುವ ಯಾವ ಉದ್ದೇಶವೂ ನನಗಿಲ್ಲ. ಮೂರನೇಯದಾಗಿ ನಾನು ಮಾಡುವ ವಿಡಿಯೋಗಳಿಗೆ 30 ಲಕ್ಷ ಹಣದ ಪ್ರಾಯೋಜತ್ವ ಸಿಗಲಿ ಎಂದು ನಾನು ಆಶಿಸುತ್ತೇನೆ. ಅಷ್ಟು ಹಣ ಸಿಕ್ಕರೆ ನಾನು ಎಷ್ಟು ಶ್ರೀಮಂತ ವ್ಯಕ್ತಿಯಾಗಬಹುದು” ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ: ರಾಜಕೀಯಾರ್ಥಿಕ ವಿಶ್ಲೇಷಕ ಧೃವ್ ರಾಠೀ ಬಗ್ಗೆ ನಿಮಗೆಷ್ಟು ಗೊತ್ತು?

ಈ ನಡುವೆ ಕಂಗನಾ ರಣಾವತ್, “ಎರೆ ಕ್ಯಾಥರ್ ಸರಿಯಾಗಿಯೇ ಹೇಳಿದ್ದಾರೆ. ಈತ ಹಣ ಪಡೆದು ನನ್ನ ವಿರುದ್ಧ ವಿಡಿಯೋಗಳನ್ನು ಮಾಡಿ ಯೂಟ್ಯೂಬ್‌ನಲ್ಲಿ ಹರಿಬಿಟ್ಟಿದ್ದಾನೆ. ಮುಂಬೈ ಮಹಾನಗರ ಪಾಲಿಕೆ ನನ್ನ ಕಚೇರಿಯನ್ನು ಧ್ವಂಸಗೊಳಿಸಿದ್ದ ಪ್ರಕರಣದ ಕುರಿತು ಈತ 60 ಲಕ್ಷ ಹಣ ಪಡೆದು ಸುಳ್ಳು ವಿಡಿಯೋ ಮಾಡಿದ್ದಾನೆ. ಈತನನ್ನು ನಾನು ಕಂಬಿ ಎಣಿಸುವಂತೆ ಮಾಡುತ್ತೇನೆ. ಸರ್ಕಾರ ಮತ್ತು ಹಣದ ಬಲ ಇಲ್ಲದೆ ಓರ್ವ ವ್ಯಕ್ತಿ ಹೀಗೆ ಕಾನೂನಾತ್ಮಕ ವಿಚಾರಗಳ ಬಗ್ಗೆ ಬಹಿರಂಗವಾಗಿ ಸುಳ್ಳು ಹೇಳಲು ಸಾಧ್ಯವೇ?” ಎಂದು ಹೇಳುವ ಮೂಲಕ ನಟಿ ಕಂಗನಾ ಮಹಾರಾಷ್ಟ್ರ ಸರ್ಕಾರದ ವಿರುದ್ಧವೂ ಮತ್ತೊಮ್ಮೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಧೃವ್ ರಾಠೀ “ನೀವು ಈ ವೀಡಿಯೊ ಬಗ್ಗೆ ಮಾತನಾಡುತ್ತಿದ್ದೀರಾ? ಸ್ನೇಹಿತರೆ, ಅವರು ಈ ವೀಡಿಯೊದ ಬಗ್ಗೆ ಮಾತನಾಡುತ್ತಿದ್ದಾರೋ, ಇಲ್ಲವೋ ಎಂದು ತಿಳಿಯಲು ದಯವಿಟ್ಟು ಈ ವೀಡಿಯೊವನ್ನು ವೀಕ್ಷಿಸಿ ಮತ್ತು ಹಂಚಿಕೊಳ್ಳಬಹುದೇ? ಏಕೆಂದರೆ ನಾನು ಯಾವುದೇ ಹಣವನ್ನು ಸ್ವೀಕರಿಸಿಲ್ಲ” ಎಂದು ತಮ್ಮ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ.

ಅಲ್ಲದೇ “ನನ್ನ ಮೇಲೆ ಸುಳ್ಳು ಆರೋಪ ಹೊರಿಸುವ ಮೂಲಕ, ನನ್ನ ಕಂಗನಾ ವಿಡಿಯೋಗೆ ಹೆಚ್ಚಿನ ಪ್ರಚಾರ ನೀಡಿದ ನಂತರ ಇಂದು 1 ಲಕ್ಷಕ್ಕೂ ಹೆಚ್ಚು ಜನರು ಅದನ್ನು ನೋಡಿದ್ದಾರೆ. ಇದನ್ನು ‘ಸ್ಟ್ರೈಸೆಂಡ್ ಎಫೆಕ್ಟ್’ (ಯಾವುದಾದರೂ ಮಾಹಿತಿಯನ್ನು ಮರೆಮಾಚಲು, ತೆಗೆದುಹಾಕಲು ಅಥವಾ ಸೆನ್ಸಾರ್ ಮಾಡಲು ಪ್ರಯತ್ನಿಸಿದಾಗ ಆ ಮಾಹಿತಿಯು ಇಂಟರ್ನೆಟ್‌ನಲ್ಲಿ ಮತ್ತಷ್ಟು ಪ್ರಚಾರ ಪಡೆದು ವೈರಲ್ ಆಗುವುದು) ಎಂದು ಕರೆಯಲಾಗುತ್ತದೆ” ಎಂದು ತಮ್ಮ ವಿಡಿಯೋ ವೀಕ್ಷಣೆಯ ಅನಾಲಿಟಿಕ್ ಗ್ರಾಫ್ ಅನ್ನು ಷೇರ್ ಮಾಡಿದ್ದಾರೆ.

ಕಂಗಾನಾ ಕುರಿತು ಧೃವ್ ರಾಠೀ ಮಾಡಿರುವ ಆ ವಿಡಿಯೋವನ್ನು ಇದುವರೆಗೂ 39 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿದ್ದು, 4.4 ಲಕ್ಷ ಜನ ಲೈಕ್ ಮಾಡಿದ್ದಾರೆ.


ಇದನ್ನೂ ಓದಿ: ಕೆಲವರು ಮುಂಬೈಗೆ ಬಂದು ದ್ರೋಹವೆಸಗುತ್ತಾರೆ: ಕಂಗನಾ ವಿರುದ್ಧ ಉದ್ಧವ್ ಠಾಕ್ರೆ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...