Homeಮುಖಪುಟಕಂಗನಾ ವಿರುದ್ಧ ವಿಡಿಯೋ ಮಾಡಲು 65 ಲಕ್ಷ ಹಣ ಪಡೆಯಲಾಗಿದೆ: ಧೃವ್ ರಾಠೀ ಕೊಟ್ಟ ಉತ್ತರವೇನು?

ಕಂಗನಾ ವಿರುದ್ಧ ವಿಡಿಯೋ ಮಾಡಲು 65 ಲಕ್ಷ ಹಣ ಪಡೆಯಲಾಗಿದೆ: ಧೃವ್ ರಾಠೀ ಕೊಟ್ಟ ಉತ್ತರವೇನು?

ಈ ಯೂಟ್ಯೂಬರ್ ಯಾವುದೇ ವಿಡಿಯೋಗೆ 30 ರಿಂದ 40 ಲಕ್ಷ ಪಡೆಯುತ್ತಾರೆ. ಆದರೆ, ಕಂಗನಾ ಮತ್ತು ಅರ್ನಾಬ್ ವಿರುದ್ಧದ ವಿಡಿಯೋಗೆ ತಲಾ 35 ಲಕ್ಷ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಒಂದಿಲ್ಲೊಂದು ವಿವಾದದಲ್ಲಿರುವ ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಖ್ಯಾತ ಯೂಟ್ಯೂಬರ್, ಯುವಚಿಂತಕ ಧೃವ್ ರಾಠೀ ನನ್ನ ಚಾರಿತ್ರ್ಯ ಹರಣ ಮಾಡುವ ವಿಡಿಯೋ ಮಾಡಲು 65 ಲಕ್ಷ ಹಣ ಪಡೆದಿದ್ದಾರೆ ಎಂದು ಕಂಗನಾ ಆರೋಪಿಸಿದ್ದಾರೆ.

ಅಸಲಿಗೆ ಈ ಜಟಾಪಟಿ ಆರಂಭವಾದದ್ದೇ ನಿರ್ದೇಶಕ ಎರೆ ಕ್ಯಾಥರ್ ಮಾಡಿದ್ದ ಟ್ವೀಟ್ ಮೂಲಕ. ಅಕ್ಟೋಬರ್ 31 ರಂದು ಟ್ವೀಟ್ ಮೂಲಕ ಯೂಟ್ಯೂಬರ್ ಧೃವ್ ರಾಠೀ ವಿರುದ್ಧ ಅವರ ಹೆಸರನ್ನು ಉಲ್ಲೇಖಿಸದೆ ಆರೋಪ ಮಾಡಿದ್ದ ಎರೆ ಕ್ಯಾಥರ್, “ದಿವಂಗತ ನಟ ಸುಶಾಂತ್ ಸಿಂಗ್ ಸಾವಿನ ಹಿಂದೆ ಆತನ ಕುಟುಂಬಸ್ಥರ ಪಾತ್ರ ಎಂಬ ಹೆಸರಿನಲ್ಲಿ 40 ಲಕ್ಷ ಚಂದಾದಾರರನ್ನು ಹೊಂದಿರುವ ಖ್ಯಾತ ಯೂಟ್ಯೂಬರ್ ಓರ್ವ ವಿಶ್ಲೇಷನಾತ್ಮಕ ವಿಡಿಯೋ ಒಂದನ್ನು ಮಾಡಲು ಮುಂದಾಗಿದ್ದಾರೆ. ಅಲ್ಲದೆ, ಈ ವಿಡಿಯೋ ಮಾಡಲು ಅವರು 65 ಲಕ್ಷ ಹಣ ಸ್ವೀಕರಿಸಿದ್ದಾರೆ. ಇದೇ ಯೂಟ್ಯೂಬರ್ ಈ ಹಿಂದೆ ನಟಿ ಕಂಗನಾ ಮತ್ತು ಅರ್ನಾಬ್ ವಿರುದ್ಧವೂ ವಿಡಿಯೋ ಮಾಡಿದ್ದರು” ಎಂದು ಆರೋಪಿಸಿದ್ದರು.

ಅಲ್ಲದೆ ಎರೆ ಕ್ಯಾಥರ್ ಮತ್ತೊಂದು ಟ್ವೀಟ್‌ನಲ್ಲಿ, “ಈ ಯೂಟ್ಯೂಬರ್ ಯಾವುದೇ ವಿಡಿಯೋಗೆ 30 ರಿಂದ 40 ಲಕ್ಷ ಪಡೆಯುತ್ತಾರೆ. ಆದರೆ, ಕಂಗನಾ ಮತ್ತು ಅರ್ನಾಬ್ ವಿರುದ್ಧದ ವಿಡಿಯೋಗೆ ತಲಾ 35 ಲಕ್ಷ ಪಡೆದಿದ್ದಾರೆ” ಎಂದು ಆರೋಪಿಸಿದ್ದರು.

ನಿರ್ದೇಶಕ ಎರೆ ಕ್ಯಾಥರ್ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಯೂಟ್ಯೂಬರ್ ಧೃವ್ ರಾಠೀ, “ನನ್ನನ್ನು ಹೆಸರಿಸಿ ಈ ಸುಳ್ಳು ಸುದ್ದಿಯನ್ನು ಬರೆಯಲಾಗಿದೆ. ಮೊದಲನೇಯದಾಗಿ ನಟಿ ಕಂಗನಾ ವಿರುದ್ಧ ನಾನು ಮಾಡಿದ್ದ ವಿಡಿಯೋಗೆ ಯಾರಿಂದಲೂ ಹಣ ಪಡೆದಿಲ್ಲ. ಎರಡನೇಯದಾಗಿ ಮೃತ ನಟ ಸುಶಾಂತ್ ಸಿಂಗ್ ಸಾವಿನ ಕುರಿತು ವಿಡಿಯೋ ಮಾಡುವ ಯಾವ ಉದ್ದೇಶವೂ ನನಗಿಲ್ಲ. ಮೂರನೇಯದಾಗಿ ನಾನು ಮಾಡುವ ವಿಡಿಯೋಗಳಿಗೆ 30 ಲಕ್ಷ ಹಣದ ಪ್ರಾಯೋಜತ್ವ ಸಿಗಲಿ ಎಂದು ನಾನು ಆಶಿಸುತ್ತೇನೆ. ಅಷ್ಟು ಹಣ ಸಿಕ್ಕರೆ ನಾನು ಎಷ್ಟು ಶ್ರೀಮಂತ ವ್ಯಕ್ತಿಯಾಗಬಹುದು” ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ: ರಾಜಕೀಯಾರ್ಥಿಕ ವಿಶ್ಲೇಷಕ ಧೃವ್ ರಾಠೀ ಬಗ್ಗೆ ನಿಮಗೆಷ್ಟು ಗೊತ್ತು?

ಈ ನಡುವೆ ಕಂಗನಾ ರಣಾವತ್, “ಎರೆ ಕ್ಯಾಥರ್ ಸರಿಯಾಗಿಯೇ ಹೇಳಿದ್ದಾರೆ. ಈತ ಹಣ ಪಡೆದು ನನ್ನ ವಿರುದ್ಧ ವಿಡಿಯೋಗಳನ್ನು ಮಾಡಿ ಯೂಟ್ಯೂಬ್‌ನಲ್ಲಿ ಹರಿಬಿಟ್ಟಿದ್ದಾನೆ. ಮುಂಬೈ ಮಹಾನಗರ ಪಾಲಿಕೆ ನನ್ನ ಕಚೇರಿಯನ್ನು ಧ್ವಂಸಗೊಳಿಸಿದ್ದ ಪ್ರಕರಣದ ಕುರಿತು ಈತ 60 ಲಕ್ಷ ಹಣ ಪಡೆದು ಸುಳ್ಳು ವಿಡಿಯೋ ಮಾಡಿದ್ದಾನೆ. ಈತನನ್ನು ನಾನು ಕಂಬಿ ಎಣಿಸುವಂತೆ ಮಾಡುತ್ತೇನೆ. ಸರ್ಕಾರ ಮತ್ತು ಹಣದ ಬಲ ಇಲ್ಲದೆ ಓರ್ವ ವ್ಯಕ್ತಿ ಹೀಗೆ ಕಾನೂನಾತ್ಮಕ ವಿಚಾರಗಳ ಬಗ್ಗೆ ಬಹಿರಂಗವಾಗಿ ಸುಳ್ಳು ಹೇಳಲು ಸಾಧ್ಯವೇ?” ಎಂದು ಹೇಳುವ ಮೂಲಕ ನಟಿ ಕಂಗನಾ ಮಹಾರಾಷ್ಟ್ರ ಸರ್ಕಾರದ ವಿರುದ್ಧವೂ ಮತ್ತೊಮ್ಮೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಧೃವ್ ರಾಠೀ “ನೀವು ಈ ವೀಡಿಯೊ ಬಗ್ಗೆ ಮಾತನಾಡುತ್ತಿದ್ದೀರಾ? ಸ್ನೇಹಿತರೆ, ಅವರು ಈ ವೀಡಿಯೊದ ಬಗ್ಗೆ ಮಾತನಾಡುತ್ತಿದ್ದಾರೋ, ಇಲ್ಲವೋ ಎಂದು ತಿಳಿಯಲು ದಯವಿಟ್ಟು ಈ ವೀಡಿಯೊವನ್ನು ವೀಕ್ಷಿಸಿ ಮತ್ತು ಹಂಚಿಕೊಳ್ಳಬಹುದೇ? ಏಕೆಂದರೆ ನಾನು ಯಾವುದೇ ಹಣವನ್ನು ಸ್ವೀಕರಿಸಿಲ್ಲ” ಎಂದು ತಮ್ಮ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ.

ಅಲ್ಲದೇ “ನನ್ನ ಮೇಲೆ ಸುಳ್ಳು ಆರೋಪ ಹೊರಿಸುವ ಮೂಲಕ, ನನ್ನ ಕಂಗನಾ ವಿಡಿಯೋಗೆ ಹೆಚ್ಚಿನ ಪ್ರಚಾರ ನೀಡಿದ ನಂತರ ಇಂದು 1 ಲಕ್ಷಕ್ಕೂ ಹೆಚ್ಚು ಜನರು ಅದನ್ನು ನೋಡಿದ್ದಾರೆ. ಇದನ್ನು ‘ಸ್ಟ್ರೈಸೆಂಡ್ ಎಫೆಕ್ಟ್’ (ಯಾವುದಾದರೂ ಮಾಹಿತಿಯನ್ನು ಮರೆಮಾಚಲು, ತೆಗೆದುಹಾಕಲು ಅಥವಾ ಸೆನ್ಸಾರ್ ಮಾಡಲು ಪ್ರಯತ್ನಿಸಿದಾಗ ಆ ಮಾಹಿತಿಯು ಇಂಟರ್ನೆಟ್‌ನಲ್ಲಿ ಮತ್ತಷ್ಟು ಪ್ರಚಾರ ಪಡೆದು ವೈರಲ್ ಆಗುವುದು) ಎಂದು ಕರೆಯಲಾಗುತ್ತದೆ” ಎಂದು ತಮ್ಮ ವಿಡಿಯೋ ವೀಕ್ಷಣೆಯ ಅನಾಲಿಟಿಕ್ ಗ್ರಾಫ್ ಅನ್ನು ಷೇರ್ ಮಾಡಿದ್ದಾರೆ.

ಕಂಗಾನಾ ಕುರಿತು ಧೃವ್ ರಾಠೀ ಮಾಡಿರುವ ಆ ವಿಡಿಯೋವನ್ನು ಇದುವರೆಗೂ 39 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿದ್ದು, 4.4 ಲಕ್ಷ ಜನ ಲೈಕ್ ಮಾಡಿದ್ದಾರೆ.


ಇದನ್ನೂ ಓದಿ: ಕೆಲವರು ಮುಂಬೈಗೆ ಬಂದು ದ್ರೋಹವೆಸಗುತ್ತಾರೆ: ಕಂಗನಾ ವಿರುದ್ಧ ಉದ್ಧವ್ ಠಾಕ್ರೆ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...