Homeಕರ್ನಾಟಕರೈತ ವಿರೋಧಿ ಕಾಯ್ದೆ: ಕರ್ನಾಟಕ ರೈತ ಸಂಘ (AIKKS) ವತಿಯಿಂದ ವಿಚಾರ ಸಂಕಿರಣ; ಜಾಥ

ರೈತ ವಿರೋಧಿ ಕಾಯ್ದೆ: ಕರ್ನಾಟಕ ರೈತ ಸಂಘ (AIKKS) ವತಿಯಿಂದ ವಿಚಾರ ಸಂಕಿರಣ; ಜಾಥ

ವಿವಿದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಂಘದ ರಾಜ್ಯಾಧ್ಯಕ್ಷರಾದ ಡಿ.ಎಚ್‌.ಪೂಜಾರ್ ಹೇಳಿದರು.

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತರಲು ಹೊರಟಿರುವ ಕೃಷಿ ಮತ್ತು ಭೂ ಸುಧಾರಣಾ ಕಾಯ್ದೆಗಳ ಕುರಿತ ವಿಚಾರ ಸಂಕಿರಣವನ್ನು ಕರ್ನಾಟಕ ರೈತ ಸಂಘ (AIKKS), ರಾಯಚೂರು ವತಿಯಿಂದ ನವೆಂಬರ್ 7 ರಂದು ಹಮ್ಮಿಕೊಳ್ಳಲಾಗಿದ್ದು, ನವೆಂಬರ್ 9 ರಂದು ಮಾನ್ವಿ ತಾಲ್ಲೂಕಿನ ತಹಶೀಲ್ದಾರ್ ಕಛೇರಿಗೆ ಕಾಲ್ನಡಿಗೆ- ಚಾಥ ನಡೆಸಲಾಗುತ್ತಿದೆ.

ವಿವಿದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ನಾನು ಗೌರಿ.ಕಾಂ ಜೊತೆ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷರಾದ ಡಿ.ಎಚ್‌.ಪೂಜಾರ್ ಹೇಳಿದರು.

ಇದನ್ನೂ ಓದಿ: ರೈತ ವಿರೋಧಿ ಕಾಯ್ದೆ: SDPI ಪಕ್ಷದಿಂದ ’ಜಾಗೋ ಕಿಸಾನ್’ ಅಭಿಯಾನ ಆರಂಭ

“ಕೇಂದ್ರ ಮತ್ತು ರಾಜ್ಯ ಸರ್ಕಾರ ಅನೇಕ ಕಾಯ್ದೆಗಳಿಗೆ ತಿದ್ದುಪಡಿ ತಂದು ಕೃಷಿ ಕ್ಷೇತ್ರವನ್ನು ಕಾಪೋರೇಟ್ ಕಂಪನಿಗಳಿಗೊಪ್ಪಿಸಿದೆ. ಎಪಿಎಂಸಿ, ಭೂ ಸುಧಾರಣೆ, ಕಾಂಟ್ರಾಕ್ಟ್ ಪಾರ್ಫಿರಿಗ್, ವಿದ್ಯುತ್ ಇತರೆ ಕಾಯ್ದೆಗಳಿಗೆ ತಿದ್ದುಪಡಿ ಮಾಡಿದ್ದರಿಂದ ದೇಶದ ಶೇ 86 ರಷ್ಟು ಸಣ್ಣ ಮಧ್ಯಮ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಇಷ್ಟು ಮಾತ್ರವಲ್ಲ ವಿದೇಶಿ ಕಂಪನಿಗಳು ಆಹಾರ ಕ್ಷೇತ್ರದ ಮೇಲೆ ಏಕಸ್ವಾಮ್ಯತೆ ಸಾಧಿಸಲಿವೆ. ರೈತರು-ಇತರೆ ವರ್ಗದ ಜನರು, ಆಹಾರ ಕ್ಷೇತ್ರದ ಮೇಲಿನ ಸಾರ್ವಭೌಮತ್ವ ಕಳೆದುಕೊಳ್ಳಲಿದ್ದಾರೆ. ಮೆಕ್ಕೆ ಜೋಳ, ಸಜ್ಜೆ ಇತರೆ ಬೆಳೆಗಳಿಗೆ ಕಳೆದ ವರ್ಷಕ್ಕಿಂತ ಅರ್ಧದಷ್ಟು ಬೆಲೆ ಕಡಿಮೆಯಾಗಿದೆ. ಇನ್ನು ಮುಂದೆ ಬೆಂಬಲ ಬೆಲೆ ನಿಗದಿ ಮಾಡುವ ಮತ್ತು ಖರೀದಿ ಕೇಂದ್ರ ತೆರೆಯುವ ಜವಾಬ್ದಾರಿಯಿಂದ ಸರ್ಕಾರ ಹಿಂದೆ ಸರಿಯಲಿದೆ. ಈಗಾಗಲೆ ಒಂದು ತಿಂಗಳಿಂದ ಮೆಕ್ಕೆ ಜೋಳ, ಸಜ್ಜೆ ಇತರೆ ಬೆಳೆ ಕಟಾವು ಮಾಡುತ್ತಿದ್ದರೂ ಖರೀದಿ ಕೇಂದ್ರ ತೆರೆದಿಲ್ಲ. ಹಾಗಾಗಿ, ವೈಜ್ಞಾನಿಕ ಬೆಲೆ, ಸ್ವಾಮಿನಾಥನ್ ಆಯೋಗದ ವರದಿ ಜಾರಿ ಮತ್ತು ರೈತ ವಿರೋಧಿ ಕಾಯ್ದೆಗಳನ್ನು ವಾಪಾಸ್ ಪಡೆಯಲು ಒತ್ತಾಯ 250 ಕ್ಕೂ ಸಂಘಟನೆಗಳು ನಿರಂತರವಾಗಿ ಹೋರಾಡುತ್ತಿವೆ. ನವೆಂಬರ್ 26,27.2020 ರಂದು ರಾಷ್ಟ್ರ ಮಟ್ಟದಲ್ಲಿ ಪುನಃ ಹೋರಾಟ ಹಮ್ಮಿಕೊಳ್ಳಲಾಗಿದೆ. ರೈತರು ಮತ್ತು ಪ್ರಜ್ಞಾವಂತ ಜನರು ಆಯಾ ಕ್ಷೇತ್ರದ ಸಂಸದರು, ಶಾಸಕರ ಮೇಲೆ ಒತ್ತಾಯ ಹೇರಬೇಕಾಗಿದೆ. ಹಾಗಾಗಿ ಇದನ್ನು ಹೋರಾಟದ ಭಾಗವಾಗಿ ಹಮ್ಮಿಕೊಳ್ಳಲಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಆರ್‌ಸಿಇಪಿ ಬಿಜೆಪಿ ಸರ್ಕಾರದ ರೈತ ವಿರೋಧಿ ಒಪ್ಪಂದ, ರೈತರಿಗೆ ಮರಣಶಾಸನ: ಸಿದ್ದರಾಮಯ್ಯ

ನಮ್ಮ ಹಕ್ಕೊತ್ತಾಯಗಳು:

  1. ಹೂವಿನಬಾವಿ ಗ್ರಾಮದ ಸ.ನಂ.32,43 ಒಟ್ಟು 605 ಎಕರೆ ಭೂಮಿಯ ಪೈಕಿ 300 ಎಕರೆ ಭೂಮಿಯನ್ನು ಕುರಿ, ಮೇಕೆ, ದನಕರುಗಳನ್ನು ಮೇಯಿಸಲು ಮೀಸಲಿಡಬೇಕು. ಈ ಭೂಮಿಯಲ್ಲಿ ಕಳೆದ 50 ವರ್ಷಗಳಿಂದ ಸಾಗುವಳಿ ಮಾಡುವ ಭೂ ರಹಿತ ಬಡವರಿಗೆ ಪಟ್ಟಾ ಕೊಡಬೇಕು.
  2. ಮದಕಿನಾಳ ಗ್ರಾಮದಲ್ಲಿ ಅನಧಿಕೃತ ಕಲ್ಲು ಗಣಿಗಾರಿಕೆ ನಡೆಸಿರುವ ಸಪ್ತಗಿರಿ ಸ್ಟೋನ್ ಕ್ರಷರ್ ಮಾಲಿಕರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ಮತ್ತು ಗಣಿಗಾರಿಕೆಯನ್ನು ನಿಷೇಧಿಸಬೇಕು.
  3. ಕೃಷ್ಣ 5 ಎ ಮತ್ತು ಬಿ. ಸ್ಕೀಂ ಯೋಜನೆ ಅಡಿಯಲ್ಲಿ ಮಸ್ಕಿ ತಾಲೂಕಿನ ಎಲ್ಲಾ ಹಳ್ಳಿಗಳನ್ನು ಸಂಪೂರ್ಣ ನೀರಾವರಿಗೊಳಪಡಿಸಬೇಕು. ಕನಕನಾಲ ಜಲಾಶಯದ ಆಳು ತೆಗೆದು 14 ಹಳ್ಳಿಗಳ ಭೂಮಿಗೆ ನೀರಾವರಿ ಕಲ್ಪಿಸಬೇಕು.
  4. ತೀವ್ರ ಮಳೆಯಿಂದ ಸೂರ್ಯಕಾಂತಿ, ತೊಗರೆ, ಸಜ್ಜೆ, ಜೋಳ, ಭತ್ತ, ಈರುಳ್ಳಿ ಸೇರಿದಂತೆ ಇತರೆ ಬೆಳೆಗಳು ನಷ್ಟವಾಗಿವೆ: ರೈತರ ಪ್ರತಿ ಎಕರೆ ಭೂಮಿಗೆ 30-50 ಸಾವಿರ ಪರಿಹಾರ ಒದಗಿಸಬೇಕು. ಕುಸಿದು ಬಿದ್ದಿರುವ ಮನೆಗಳನ್ನು ತೀವ್ರಗತಿಯಲ್ಲಿ ಪುನರ್ ನಿರ್ಮಾಣ ಮಾಡಬೇಕು.
  5. ಬಹುಗ್ರಾಮ ಯೋಜನೆ ಅಡಿಯಲ್ಲಿ ತಾಲೂಕಿನ ಎಲ್ಲಾ ಗ್ರಾಮಗಳಿಗೆ ಶುದ್ಧವಾದ ಕುಡಿಯುವ ನೀರು ಒದಗಿಸಬೇಕು.
  6. ಹಲವು ಗ್ರಾಮಗಳಲ್ಲಿ ನಿರ್ಮಾಣಗೊಂಡಿರುವ ಶುದ್ದೀಕರಣ ಘಟಕಗಳು ಅನುಪಯುಕ್ತವಾಗಿವೆ. ಕಳಪೆ ಕಾಮಗಾರಿ ಮತ್ತು ತುಕ್ಕು ಹಿಡಿದಿರುವ ಯಂತ್ರಗಳ ಕುರಿತು ತನಿಖೆ ನಡೆಸಬೇಕು.
  7. ಮಸ್ಕಿ ತಾಲೂಕಿನ ಪಾಮನಕೆಲೂರ, ಕೋಟೆಕಲ್, ಹಾಲಪುರ, ರಾಮಲದಿನ್ನಿ, ಬೋಗಪುರ, ರತ್ನಾಪುರ ಹಟ್ಟಿ, ಗಂಟೆರ ಹಟ್ಟಿ, ವಿರಾಮರ ಇತರೆ ಗ್ರಾಮಗಳಲ್ಲಿ ಸರ್ಕಾರಿ ಭೂಮಿ ಸಾಗುವಳಿ ಮಾಡುವ ರೈತರಿಗೆ ಪಟ್ಟಾ ಒದಗಿಸಬೇಕು. ತಾಲೂಕಿನ ಗ್ರಾಮಗಳಲ್ಲಿರುವ ಸ್ಮಶಾನದ ಸಮಸ್ಯೆಯನ್ನು ಪರಿಹರಿಸಬೇಕು.

ಈ ಮೇಲಿನ ಸಮಸ್ಯೆಗಳ ಪರಿಹರಿಸುವಿಕೆ ಸೇರಿದಂತೆ ಇನ್ನೂ ಹತ್ತಾರು ಸಮಸ್ಯೆಗಳ ಬಗ್ಗೆ ವಿಚಾರ ಸಂಕಿರಣ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಅವುಗಳ ಆಧಾರದ ಮೇಲೆ ಕಾಲ್ನಡಿಗೆ ಜಾತವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಹೇಳಿದರು.


ಇದನ್ನೂ ಓದಿ: ಕೃಷಿ ಮಸೂದೆ ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದ ನಟಿ ಕಂಗನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...